Homeಕರ್ನಾಟಕನಿಮ್ಮ ಇಷ್ಟದ ಸೈಕಲಿಂಗ್ ಲೇನ್ ಬೇಕೇ? ನಿಮ್ಮ ಐಡಿಯಾಗಳನ್ನು ಸರ್ಕಾರಕ್ಕೆ ಹೇಳಿ..!

ನಿಮ್ಮ ಇಷ್ಟದ ಸೈಕಲಿಂಗ್ ಲೇನ್ ಬೇಕೇ? ನಿಮ್ಮ ಐಡಿಯಾಗಳನ್ನು ಸರ್ಕಾರಕ್ಕೆ ಹೇಳಿ..!

ನಿಮ್ಮ ಮನಸ್ಸಿನಲ್ಲಿ ಸೈಕಲಿಂಗ್‌ ಮಾರ್ಗದ ಬಗ್ಗೆ ಐಡಿಯಾಗಳು ಇದ್ದರೆ ಅದನ್ನು ಸಾಕಾರಗೊಳಿಸುವಲ್ಲಿ ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ಹೊರಟಿದೆ.

- Advertisement -
- Advertisement -

ನೀವು ಸೈಕ್ಲಿಂಗ್ ಪ್ರಿಯರಾಗಿದ್ದು, ನಿಮ್ಮ ಮನಸ್ಸಿನಲ್ಲಿ ಸೈಕಲಿಂಗ್‌ ಮಾರ್ಗದ ಬಗ್ಗೆ ಐಡಿಯಾಗಳು ಇದ್ದರೆ ಅದನ್ನು ಸಾಕಾರಗೊಳಿಸಲು ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ಹೊರಟಿದೆ. ಈ ಪ್ರಕ್ರಿಯೆಯಲ್ಲಿ ಬೈಸಿಕಲ್ ಲೈನ್‌ಗಾಗಿ ಐಡಿಯಾಗಳನ್ನು ಜನರಿಂದಲೇ ಕ್ರೌಡ್‌ಸೋರ್ಸ್ ಆಗಿ ಪಡೆಯಲು DULT ಮುಂದಾಗಿದೆ.

ಕೇಂದ್ರ ಸರ್ಕಾರದ ಸೈಕಲ್ ಫಾರ್ ಚೇಂಜ್ ಅಭಿಯಾನದ ಭಾಗವಾಗಿ, ಈಗಾಗಲೆ ಬೆಂಗಳೂರಿನ ಹೊರ ವರ್ತುಲ ರಿಂಗ್ ರಸ್ತೆ (ಔಟರ್‌ ರಿಂಗ್‌ ರೋಡ್)ಯ ಸರ್ವಿಸ್ ರಸ್ತೆಯಲ್ಲಿ ಬೈಸಿಕಲ್ ಲೇನ್ ನಿರ್ಮಿಸಲು ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯೊಂದಿಗೆ ಕೆಲಸ ಮಾಡಲು ಪ್ರಾರಂಭಿಸಿದೆ.

“ನಾವು ಸೈಕ್ಲಿಂಗ್ ಲೇನ್‌ ನಿರ್ಮಿಸಲು ತಾತ್ಕಾಲಿಕವಾಗಿ ಒಆರ್‌ಆರ್‌ ಮತ್ತು ಓಲ್ಡ್ ಮದ್ರಾಸ್ ರಸ್ತೆಯನ್ನು ಕೈಗೆತ್ತಿಕೊಂಡಿದ್ದೇವೆ. ಸೈಕ್ಲಿಸ್ಟ್‌ಗಳು ವಿಭಿನ್ನ ಬೇಡಿಕೆಗಳನ್ನು ಹೊಂದಿರಬಹುದು ಮತ್ತು ಮುಖ್ಯ ರಸ್ತೆಗಳನ್ನು ಹೊರತುಪಡಿಸಿ ವಿಭಿನ್ನ ಮಾರ್ಗಗಳನ್ನು ಬಯಸುತ್ತಾರೆ. ಆದ್ದರಿಂದ ನಾವು ಅವರ ಅಭಿಪ್ರಾಯ ಮತ್ತು ಅವರು ಎದುರಿಸುತ್ತಿರುವ ಸವಾಲುಗಳನ್ನು ಅರ್ಥಮಾಡಿಕೊಳ್ಳಲು ಅವರಿಂದಲೇ ವಿಚಾರವನ್ನು ಪಡೆಯಲು ನಿರ್ಧರಿಸಿದ್ದೇವೆ” ಎಂದು DULT ನಿರ್ದೇಶಕಿ ವಿ. ಮಂಜುಳಾ ಹೇಳಿದ್ದಾರೆ.

ಸೈಕ್ಲಿಂಗ್ ಉತ್ಸಾಹಿಗಳು ಅವರು ಪ್ರಯಾಣಿಸುವ ನಿರ್ದಿಷ್ಟ ಮಾರ್ಗವನ್ನು DULT ವೆಬ್‌ಸೈಟ್‌ನಲ್ಲಿ ಜಿಪಿಎಸ್ ದೃಶ್ಯೀಕರಣ ಸಾಧನದಲ್ಲಿ ತಿಳಿಸಬಹುದು. Google ಫಾರ್ಮ್‌ ಮೂಲಕ ಬಳಕೆದಾರರು ಹೆಚ್ಚುವರಿ ಮಾಹಿತಿಯನ್ನು ಒದಗಿಸಬಹುದಾಗಿದೆ.

DULT ಅವರ ಆಹ್ವಾನಕ್ಕೆ ಪ್ರತಿಕ್ರಿಯಿಸುವವರು ತಮ್ಮ ಆದ್ಯತೆಗಳನ್ನು ORR ಅಥವಾ ಪೂರ್ವ ಬೆಂಗಳೂರು ರಸ್ತೆಗೆ ಸೀಮಿತವಾಗಿ ಅಭಿಪ್ರಾಯ ನೀಡಬೇಕಾಗಿಲ್ಲ. ಅವರು ಬೆಂಗಳೂರಿನ ಪೂರ್ತಿ ತಮಗೆ ಬೇಕಾದ ಸೈಕಲಿಂಗ್ ಲೇನ್‌ಗಳ ಬಗ್ಗೆ ಐಡಿಯಾಗಳನ್ನು ನೀಡಬಹುದು. ತಮ್ಮ ಅಭಿಪ್ರಾಯಗಳನ್ನು ನೀಡಲು ಆಗಸ್ಟ್ 14 ರವರೆಗೆ ಸಮಯವಿದೆ. ಭವಿಷ್ಯದ ಯೋಜನೆಗಳು ಸಾರ್ವಜನಿಕ ಬೇಡಿಕೆಯೊಂದಿಗೆ ಸಮನ್ವಯವಾಗಿವೆಯೇ ಎಂದು ಖಚಿತಪಡಿಸಿಕೊಳ್ಳಲು, ನಗರದಾದ್ಯಂತ ಸೈಕ್ಲಿಂಗ್ ಲೇನ್‌ಗಳ ಆದ್ಯತೆಗಳನ್ನು ಅರ್ಥಮಾಡಿಕೊಳ್ಳಲು ಇಲಾಖೆ ಈ ಕ್ರಮ ಕೈಗೊಂಡಿದೆ.

“ಇದು ವ್ಯಾಪಕವಾದ ನೆಟ್‌ವರ್ಕ್‌ಗಳನ್ನು ನಿರ್ಮಿಸುವ ಯೋಜನೆಗಳನ್ನು ಹೆಚ್ಚಿಸಲು ನಮಗೆ ಸಹಾಯ ಮಾಡುತ್ತದೆ. ಯಶಸ್ವಿ ಮಾದರಿಯಿಂದ ಸೈಕ್ಲಿಂಗ್ ಮಾಡಲು ಅನೇಕರನ್ನು ಪ್ರೋತ್ಸಾಹಿಸುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಮಂಜುಳಾರವರು ಹೇಳಿದ್ದಾರೆ.


ಓದಿ: ವಿದೇಶದಲ್ಲಿ ತೊಗಲುಗೊಂಬೆಯಾಟ ಪ್ರದರ್ಶಿಸಿ ಮೆಚ್ಚುಗೆ ಗಳಿಸಿದ ಕಿಳ್ಯೇಕ್ಯಾತರ ಭೀಮವ್ವ! 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...