Homeಕರ್ನಾಟಕಸೂಜಿ ತಯಾರಿಕಾ ಕಂಪೆನಿ ’ಸ್ಮಿಟ್ಝ್’ ಲಾಕೌಟ್: ನೂರಾರು ಕಾರ್ಮಿಕರು ಬೀದಿಗೆ

ಸೂಜಿ ತಯಾರಿಕಾ ಕಂಪೆನಿ ’ಸ್ಮಿಟ್ಝ್’ ಲಾಕೌಟ್: ನೂರಾರು ಕಾರ್ಮಿಕರು ಬೀದಿಗೆ

ಕಂಪೆನಿಯು ನಷ್ಟದಲ್ಲಿ ಇದೆ ಎಂಬ ಸುಳ್ಳು ಹೇಳಿ, ಕಾರ್ಮಿಕರಿಗೆ ಯಾವುದೇ ನೋಟಿಸು ನೀಡದೆ ಲಾಕ್‌ಔಟ್ ಘೋಷಿಸಿದೆ.ಆದರೆ ಕಂಪೆನಿ ಲಾಭದಲ್ಲಿ ನಡೆಯುತ್ತಿದೆ ಎಂಬ ದಾಖಲೆಗಳು ನಮ್ಮಲ್ಲಿದೆ ಎಂದು ಕಾರ್ಮಿಕರು ವಿವರಿಸುತ್ತಾರೆ.

- Advertisement -
- Advertisement -

ಬೆಂಗಳೂರಿನ ಕುಂಬಳಗೋಡಿನಲ್ಲಿ ಕಾರ್ಯಚರಿಸುತ್ತಿರುವ ಜರ್ಮನ್ ಮೂಲದ ಸೂಜಿ ತಯಾರಿಕ ಕಂಪೆನಿ  ”ಸ್ಮಿಟ್ಝ್” ಮಂಗಳವಾರದಿಂದ ಲಾಕ್‌ಔಟ್‌ ಘೋಷಿಸಿದ್ದು, ನೂರಾರು ಕಾರ್ಮಿಕರು ಬೀದಿಗೆ ಬಂದಿದ್ದಾರೆ. ಕಾರ್ಮಿಕರು ಕಂಪೆನಿಯಲ್ಲಿ ಸೋಮವಾರದಂದು ತಮ್ಮ ಕರ್ತವ್ಯ ನಿರ್ವಹಿಸಿದ್ದರು. ಮಂಗಳವಾರದಂದು ನಷ್ಟದಲ್ಲಿದೆ ಎಂದು ಹೇಳಿರುವ ಕಂಪೆನಿಯು, ಕಾರ್ಮಿಕರಿಗೆ ಯಾವುದೆ ನೋಟಿಸ್ ನೀಡದೆ ಲಾಕ್‌ಔಟ್ ಘೋಷಿಸಿದೆ.

ಇದೀಗ ಮಹಿಳೆಯರು ಸೇರಿದಂತೆ ನೂರಾರು ಕಾರ್ಮಿಕರು ಮೂರು ದಿನದಿಂದ ಬೀದಿಯಲ್ಲಿದ್ದು ಪ್ರತಿಭಟನೆ ಮಾಡುತ್ತಿದ್ದಾರೆ. 1851 ರಲ್ಲಿ ಪ್ರಾರಂಭವಾಗಿರುವ ಕಂಪೆನಿಯು ಬೆಂಗಳೂರು ಸೇರಿದಂತೆ, ಭಾರತದ ಇತರ ರಾಜ್ಯಗಳಲ್ಲೂ ಕಾರ್ಯನಿರ್ವಹಿಸುತ್ತಿದೆ.

ಇದನ್ನೂ ಓದಿ: ಕಾರ್ಮಿಕರ ಹೋರಾಟವನ್ನು ಹತ್ತಿಕ್ಕಿದ ಶ್ರೀರಂಗಪಟ್ಟಣದ ಗಾರ್ಮೆಂಟ್ಸ್‌: ಅಧ್ಯಯನ ವರದಿ

ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ, ಸ್ಮಿಟ್ಝ್ ಕಾರ್ಮಿಕ ಸಂಘಟನೆಯ ಉಪಾಧ್ಯಕ್ಷ ಮಹೇಶ್, “ಕಂಪೆನಿಯು ನಷ್ಟದಲ್ಲಿ ಇದೆ ಎಂಬ ಸುಳ್ಳು ಹೇಳಿ, ಕಾರ್ಮಿಕರಿಗೆ ಯಾವುದೇ ನೋಟಿಸು ನೀಡದೆ ಲಾಕ್‌ಔಟ್ ಘೋಷಿಸಿದೆ. ಆದರೆ ಕಂಪೆನಿ ಲಾಭದಲ್ಲಿ ನಡೆಯುತ್ತಿದೆ ಎಂಬ ದಾಖಲೆಗಳು ನಮ್ಮಲ್ಲಿದೆ. ಅವುಗಳನ್ನು ನಾವು ಆರ್‌ಟಿಐ ಮುಖಾಂತರ ಪಡೆದಿದ್ದೇವೆ. ಅಲ್ಲದೆ ಇದೇ ಕಂಪೆನಿಯ ಇನ್ನೊಂದು ಘಟಕ ಗುರಾತ್‌ನಲ್ಲಿದ್ದು, ಅಲ್ಲಿ 400 ರಷ್ಟು ಕಾರ್ಮಿಕರು ಇನ್ನೂ ಕೆಲಸ ನಿರ್ವಹಿಸುತ್ತಿದ್ದಾರೆ, ಕಂಪೆನಿಯು ಇಲ್ಲಿ ಮಾತ್ರ ನಮಗೆ ಸುಳ್ಳು ಹೇಳಿ ಲಾಕ್‌ಔಟ್ ಘೋಷಿಸಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಂಪೆನಿಯ ಲಾಕೌಟ್‌ ವಿರೋಧಿಸಿ ಶುಕ್ರವಾರ ಕಾರ್ಮಿಕ ಇಲಾಖೆಯ ಕಚೇರಿಗೆ ತೆರಳಲಿದ್ದೇವೆ ಎಂದು ಮಹೇಶ್ ಹೇಳಿದ್ದಾರೆ. ನಿರಂತರ ಮೂರು ದಿನದಿಂದ ಕಾರ್ಮಿಕರು ಕಂಪೆನಿಯ ಗೇಟ್ ಮುಂದೆ ಪ್ರತಿಭಟನೆ ನಡೆಸುತಿದ್ದಾರೆ. ಪ್ರತಿಭಟನಾ ಸ್ಥಳದಲ್ಲೇ ತಮ್ಮ ಊಟಗಳನ್ನೂ ತಯಾರಿಸಿ ಯಾವುದೇ ಕಾರಣಕ್ಕೂ ಅನ್ಯಾಯಕ್ಕೆ ತಲೆಬಾಗುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ:3 ನೇ ತಿಂಗಳಿಗೆ ಕಾಲಿಟ್ಟ ಟೊಯೊಟಾ ಕಾರ್ಮಿಕರ ಹೋರಾಟ: ದೌರ್ಜನ್ಯಕ್ಕೆ ತಲೆಬಾಗುವುದಿಲ್ಲ ಎಂದ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...