Homeಕರ್ನಾಟಕಸೂಜಿ ತಯಾರಿಕಾ ಕಂಪೆನಿ ’ಸ್ಮಿಟ್ಝ್’ ಲಾಕೌಟ್: ನೂರಾರು ಕಾರ್ಮಿಕರು ಬೀದಿಗೆ

ಸೂಜಿ ತಯಾರಿಕಾ ಕಂಪೆನಿ ’ಸ್ಮಿಟ್ಝ್’ ಲಾಕೌಟ್: ನೂರಾರು ಕಾರ್ಮಿಕರು ಬೀದಿಗೆ

ಕಂಪೆನಿಯು ನಷ್ಟದಲ್ಲಿ ಇದೆ ಎಂಬ ಸುಳ್ಳು ಹೇಳಿ, ಕಾರ್ಮಿಕರಿಗೆ ಯಾವುದೇ ನೋಟಿಸು ನೀಡದೆ ಲಾಕ್‌ಔಟ್ ಘೋಷಿಸಿದೆ.ಆದರೆ ಕಂಪೆನಿ ಲಾಭದಲ್ಲಿ ನಡೆಯುತ್ತಿದೆ ಎಂಬ ದಾಖಲೆಗಳು ನಮ್ಮಲ್ಲಿದೆ ಎಂದು ಕಾರ್ಮಿಕರು ವಿವರಿಸುತ್ತಾರೆ.

- Advertisement -
- Advertisement -

ಬೆಂಗಳೂರಿನ ಕುಂಬಳಗೋಡಿನಲ್ಲಿ ಕಾರ್ಯಚರಿಸುತ್ತಿರುವ ಜರ್ಮನ್ ಮೂಲದ ಸೂಜಿ ತಯಾರಿಕ ಕಂಪೆನಿ  ”ಸ್ಮಿಟ್ಝ್” ಮಂಗಳವಾರದಿಂದ ಲಾಕ್‌ಔಟ್‌ ಘೋಷಿಸಿದ್ದು, ನೂರಾರು ಕಾರ್ಮಿಕರು ಬೀದಿಗೆ ಬಂದಿದ್ದಾರೆ. ಕಾರ್ಮಿಕರು ಕಂಪೆನಿಯಲ್ಲಿ ಸೋಮವಾರದಂದು ತಮ್ಮ ಕರ್ತವ್ಯ ನಿರ್ವಹಿಸಿದ್ದರು. ಮಂಗಳವಾರದಂದು ನಷ್ಟದಲ್ಲಿದೆ ಎಂದು ಹೇಳಿರುವ ಕಂಪೆನಿಯು, ಕಾರ್ಮಿಕರಿಗೆ ಯಾವುದೆ ನೋಟಿಸ್ ನೀಡದೆ ಲಾಕ್‌ಔಟ್ ಘೋಷಿಸಿದೆ.

ಇದೀಗ ಮಹಿಳೆಯರು ಸೇರಿದಂತೆ ನೂರಾರು ಕಾರ್ಮಿಕರು ಮೂರು ದಿನದಿಂದ ಬೀದಿಯಲ್ಲಿದ್ದು ಪ್ರತಿಭಟನೆ ಮಾಡುತ್ತಿದ್ದಾರೆ. 1851 ರಲ್ಲಿ ಪ್ರಾರಂಭವಾಗಿರುವ ಕಂಪೆನಿಯು ಬೆಂಗಳೂರು ಸೇರಿದಂತೆ, ಭಾರತದ ಇತರ ರಾಜ್ಯಗಳಲ್ಲೂ ಕಾರ್ಯನಿರ್ವಹಿಸುತ್ತಿದೆ.

ಇದನ್ನೂ ಓದಿ: ಕಾರ್ಮಿಕರ ಹೋರಾಟವನ್ನು ಹತ್ತಿಕ್ಕಿದ ಶ್ರೀರಂಗಪಟ್ಟಣದ ಗಾರ್ಮೆಂಟ್ಸ್‌: ಅಧ್ಯಯನ ವರದಿ

ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ, ಸ್ಮಿಟ್ಝ್ ಕಾರ್ಮಿಕ ಸಂಘಟನೆಯ ಉಪಾಧ್ಯಕ್ಷ ಮಹೇಶ್, “ಕಂಪೆನಿಯು ನಷ್ಟದಲ್ಲಿ ಇದೆ ಎಂಬ ಸುಳ್ಳು ಹೇಳಿ, ಕಾರ್ಮಿಕರಿಗೆ ಯಾವುದೇ ನೋಟಿಸು ನೀಡದೆ ಲಾಕ್‌ಔಟ್ ಘೋಷಿಸಿದೆ. ಆದರೆ ಕಂಪೆನಿ ಲಾಭದಲ್ಲಿ ನಡೆಯುತ್ತಿದೆ ಎಂಬ ದಾಖಲೆಗಳು ನಮ್ಮಲ್ಲಿದೆ. ಅವುಗಳನ್ನು ನಾವು ಆರ್‌ಟಿಐ ಮುಖಾಂತರ ಪಡೆದಿದ್ದೇವೆ. ಅಲ್ಲದೆ ಇದೇ ಕಂಪೆನಿಯ ಇನ್ನೊಂದು ಘಟಕ ಗುರಾತ್‌ನಲ್ಲಿದ್ದು, ಅಲ್ಲಿ 400 ರಷ್ಟು ಕಾರ್ಮಿಕರು ಇನ್ನೂ ಕೆಲಸ ನಿರ್ವಹಿಸುತ್ತಿದ್ದಾರೆ, ಕಂಪೆನಿಯು ಇಲ್ಲಿ ಮಾತ್ರ ನಮಗೆ ಸುಳ್ಳು ಹೇಳಿ ಲಾಕ್‌ಔಟ್ ಘೋಷಿಸಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಂಪೆನಿಯ ಲಾಕೌಟ್‌ ವಿರೋಧಿಸಿ ಶುಕ್ರವಾರ ಕಾರ್ಮಿಕ ಇಲಾಖೆಯ ಕಚೇರಿಗೆ ತೆರಳಲಿದ್ದೇವೆ ಎಂದು ಮಹೇಶ್ ಹೇಳಿದ್ದಾರೆ. ನಿರಂತರ ಮೂರು ದಿನದಿಂದ ಕಾರ್ಮಿಕರು ಕಂಪೆನಿಯ ಗೇಟ್ ಮುಂದೆ ಪ್ರತಿಭಟನೆ ನಡೆಸುತಿದ್ದಾರೆ. ಪ್ರತಿಭಟನಾ ಸ್ಥಳದಲ್ಲೇ ತಮ್ಮ ಊಟಗಳನ್ನೂ ತಯಾರಿಸಿ ಯಾವುದೇ ಕಾರಣಕ್ಕೂ ಅನ್ಯಾಯಕ್ಕೆ ತಲೆಬಾಗುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ:3 ನೇ ತಿಂಗಳಿಗೆ ಕಾಲಿಟ್ಟ ಟೊಯೊಟಾ ಕಾರ್ಮಿಕರ ಹೋರಾಟ: ದೌರ್ಜನ್ಯಕ್ಕೆ ತಲೆಬಾಗುವುದಿಲ್ಲ ಎಂದ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...