Homeಕ್ರೀಡೆಒಲಂಪಿಕ್ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

ಒಲಿಂಪಿಕ್ಸ್‌ ಕ್ರೀಂಡಾಗಣದಲ್ಲಿ 13 ವರ್ಷಗಳ ನಂತರ ಭಾರತದ ರಾಷ್ಟ್ರಗೀತೆ, ಅದರರಲ್ಲೂ ಒಲಿಂಪಿಕ್ಸ್‌‌ನ ಅಥ್ಲೆಟಿಕ್ ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ ನುಡಿಸಲಾಗಿದೆ.

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪುರುಷರ ಜಾವಲಿನ್ ಥ್ರೋ ಸ್ಪರ್ಧೆಯಲ್ಲಿ ಈಟಿಯನ್ನು ಬರೋಬ್ಬರಿ 87.65 ಮೀ ದೂರ ಎಸೆಯುವ ಮೂಲಕ ನೀರಜ್ ಚೋಪ್ರಾ ಭಾರತಕ್ಕೆ ಮೊದಲ ಚಿನ್ನ ತಂದು ಕೊಟ್ಟು ಇತಿಹಾಸ ನಿರ್ಮಿಸಿದ್ದಾರೆ.

ಈ ಮೂಲಕ ಒಲಿಂಪಿಕ್ಸ್‌ ಕ್ರೀಂಡಾಗಣದಲ್ಲಿ ಭಾರತದ ರಾಷ್ಟ್ರಗೀತೆಯನ್ನು 13 ವರ್ಷಗಳ ನಂತರ ಹಾಡಿಸುವಂತೆ ಮಾಡಿದರು. ಜೊತೆಗೆ ಭಾರತೀಯ ರಾಷ್ಟ್ರಗೀತೆಯು ಒಲಿಂಪಿಕ್ಸ್‌‌ನ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ ನುಡಿಸಿದ ಕೀರ್ತಿ ನೀರಜ್‌ ಚೋಪ್ರಾ ಅವರ ಪಾಲಿಗೆ ದಕ್ಕಿದೆ. ಇಷ್ಟೇ ಅಲ್ಲದೆ ಸುಮಾರು 121 ವರ್ಷಗಳ ನಂತರ ಭಾರತಕ್ಕೆ ಒಲಿಂಪಿಕ್ಸ್‌ನಲ್ಲಿ ಮೊದಲ ಭಾರಿಗೆ ಟ್ರ್ಯಾಕ್ ಮತ್ತು ಫೀಲ್ಡ್‌ನಲ್ಲಿ ಪದಕ ಲಭಿಸಿದೆ. ಟ್ರ್ಯಾಕ್ ಮತ್ತು ಫೀಲ್ಡ್‌ನಲ್ಲಿ 1900 ರಲ್ಲಿ ನಾರ್ಮನ್ ಪ್ರಿಚಾರ್ಡ್ ಅವರು ಪಡೆದ ಪದಕವೆ ಭಾರತಕ್ಕೆ ಕೊನೆಯದ್ದಾಗಿತ್ತು.

ಆಟದ ಮೊದಲ ಪ್ರಯತ್ನದಲ್ಲಿಯೇ 87.03 ಮೀಟರ್ ಎಸೆದ ಅವರು, ಎರಡನೇ ಪ್ರಯತ್ನದಲ್ಲಿ 87.65 ಮೀ ದೂರ ಎಸೆದು ದಾಖಲೆ ನಿರ್ಮಿಸಿದರು. ಚೆಕ್ ರಿಪಬ್ಲಿಕ್‌ನ ವಿ.ವೆಸ್ಲಿ 86.67 ಮೀಟರ್ ದೂರ ಎಸೆದು ಬೆಳ್ಳಿ ಗೆದ್ದರೆ, ಜರ್ಮನಿಯ ಜೆ.ವೆಬರ್ 85.30 ಎಸೆದು ಕಂಚು ತನ್ನದಾಗಿಸಿಕೊಂಡರು.

ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್: ಭಾರತಕ್ಕೆ ಮೊದಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ!

2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ 10ಮೀ ಏರ್ ರೈಫಲ್ ವಿಭಾಗದಲ್ಲಿ ಭಾರತದ ಅಭಿನವ್ ಬಿಂದ್ರಾ ಅವರು ಚಿನ್ನ ಗೆದ್ದದ್ದೆ ಭಾರತಕ್ಕೆ ಕಡೆಯ ಚಿನ್ನವಾಗಿತ್ತು. ಒಂದೇ ಒಲಿಂಪಿಕ್ಸ್‌ನಲ್ಲಿ ಅತಿ ಹೆಚ್ಚು ಪದಕ ಗೆದ್ದಿದ್ದು 2012 ರ ಲಂಡನ್‌ನಲ್ಲಾಗಿತ್ತು. ಆಗ ಭಾರತ 6 ಪದಕಗಳನ್ನು ತನ್ನದಾಗಿಸಿಕೊಂಡಿತ್ತು. ಆಗ ಎರಡು ಬೆಳ್ಳಿ ಮತ್ತು ನಾಲ್ಕು ಕಂಚು ಭಾರತದ ಪಾಲಿಗಿತ್ತು. ಆದರೆ ಟೋಲಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಮೊದಲ ಬಾರಿಗೆ 7 ಪದಕ ಗೆದ್ದಿದೆ. ಒಂದು ಚಿನ್ನ, ಎರಡು ಬೆಳ್ಳಿ, ನಾಲ್ಕು ಕಂಚು ತನ್ನದಾಗಿಸಿ ದಾಖಲೆ ನಿರ್ಮಿಸಿದೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತವು ಇದುವೆರೆಗೂ ಏಳು ಪದಕಗಳನ್ನು ಪಡೆದಿದ್ದು, ಒಂದು ಚಿನ್ನ, ಎರಡು ಬೆಳ್ಳಿ ಮತ್ತು ನಾಲ್ಕು ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದೆ.

ಚಿನ್ನ ಗೆದ್ದ ಚೋಪ್ರಾ ಅವರ ಸಾಧನೆಯ ಹಾದಿ ಹೀಗಿದೆ

24 ವರ್ಷದ ನೀರಜ್‌ ಚೋಪ್ರಾ ಅವರು ಮೂಲತಃ ಹರ್ಯಾಣದ ಪಾಣಿಪತ್ ಜಿಲ್ಲೆಯ ಖಂದ್ರಾ ಎಂಬ ಹಳ್ಳಿಯವರು. ಇವರು 2016ರಲ್ಲಿ ಮೊದಲ ಬಾರಿಗೆ ಭಾರತವನ್ನು ಪ್ರತಿನಿಧಿಸಿ, ಐಎಎಎಫ್‌ (ಇಂಟರ್ ನ್ಯಾಷನಲ್ ಅಸೋಸಿಯೇಶನ್ ಆಫ್ ಅತ್ಲೆಟಿಕ್ಸ್ ಫೆಡರೇಶನ್) ಕಿರಿಯರ ವಿಶ್ವ ಕ್ರೀಡಾಕೂಟದಲ್ಲಿ ಗೆದ್ದು ಚಾಂಪಿಯನ್‌ ಆಗಿ ಮಿಂಚಿದ್ದರು.

ನೀರಜ್ ಅವರ ಗ್ರಾಮವಾದ ಖಾಂಡ್ರಾದ ಅವರ ಮನೆಯಲ್ಲಿ ಸಂಭ್ರಮ

ನಂತರ, 2018ರ ಏಷ್ಯನ್ ಗೇಮ್ಸ್‌ ಮತ್ತು ಕಾಮನ್‌ವೆಲ್ತ್‌ನಲ್ಲಿ ಭಾಗವಹಿಸಿದ್ದ ಇವರು ಎರಡೂ ಕ್ರೀಡಾ ಕೂಟದಲ್ಲಿಯೂ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಅಲ್ಲದೆ,ಏಷ್ಯನ್ ಗೇಮ್ಸ್‌ನಲ್ಲಿ 88.06 ಮೀ ದೂರ ಜಾವೆಲಿನ್ ಎಸೆದು ರಾಷ್ಟ್ರೀಯ ದಾಖಲೆ ಬರೆದಿದ್ದಾರೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಫ್ರೀಸ್ಟೈಲ್ ಕುಸ್ತಿಯಲ್ಲಿ ಕಂಚು ಗೆದ್ದ ಬಜರಂಗ್ ಪೂನಿಯಾ

2018ರ ಏಷ್ಯನ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಬಾವುಟ ಹಿಡಿದು ಭಾರತದ ಕ್ರೀಡಾಳುಗಳನ್ನು ಪ್ರತಿನಿಧಿಸುವ ಅವಕಾಶವೂ ಇವರಿಗೆ ದಕ್ಕಿದ್ದು, ಇವರಿಗೆ ಮತ್ತೊಂದು ಹಿರಿಮೆಯನ್ನು ತಂದುಕೊಟ್ಟಿತ್ತು.

2017ರ ಏಷ್ಯನ್ ಅತ್ಲೆಟಿಕ್ ಚಾಂಪಿಯನ್ ಶಿಪ್ಸ್ ನಲ್ಲಿ ನೀರಜ್ 85.23 ಮೀ. ಜಾವೆಲಿನ್ ಎಸೆದು ಸ್ವರ್ಣ ಪದಕ ಪಡೆದಿದ್ದಾರೆ. 2018ರ ಮೇ ತಿಂಗಳಲ್ಲಿ ನಡೆದ ದೋಹ ಡೈಮಂಡ್ ಲೀಗ್ ಪಂದ್ಯದಲ್ಲಿ ಭಾಗವಹಿಸಿ 87.43 ಮೀ. ಜಾವೆಲಿನ್ ಎಸೆಯುವುದರೊಂದಿಗೆ ಹಳೆಯ ರಾಷ್ಟ್ರೀಯ ದಾಖಲೆಯನ್ನು ಮುರಿದಿದ್ದಾರೆ. ಫಿನ್ ಲ್ಯಾಂಡಿನ ಲ್ಯಾಪಿನ್ಲಾಟಿಯಲ್ಲಿ ನಡೆದ ‘ಸಾವೋ ಗೇಮ್ಸ್‌’ನಲ್ಲಿ ನೀರಜ್‌ ಸ್ವರ್ಣ ಪದಕ ಪಡೆದಿದ್ದಾರೆ.

6 ಚಿನ್ನದ ಪದಕಗಳನ್ನು ಗೆದ್ದಿರುವ ಚೋಪ್ರಾ

  • 2016ರ ಸೌತ್‌ ಎಷ್ಯನ್‌ ಕ್ರೀಡಾ ಕೂಟ
  • 2016ರ ವಿಶ್ವ ಜೂನಿಯರ್ ಚಾಂಪಿಯನ್‌ ಶಿಪ್‌
  • 2017ರ ಏಷ್ಯನ್‌ ಚಾಂಪಿಯನ್‌ ಶಿಪ್‌
  • 2018ರ ಕಾಮನ್‌ವೆಲ್ತ್‌ ಕ್ರೀಡಾಕೂಟ
  • 2018ರ ಏಷ್ಯನ್ ಕ್ರೀಡಾಕೂಟ
  • 2021ರ ಟೋಕಿಯೋ ಒಲಿಂಪಿಕ್ಸ್‌

ಇದನ್ನೂ ಓದಿ: ‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...