Homeಕ್ರೀಡೆಒಲಂಪಿಕ್ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

ಒಲಿಂಪಿಕ್ಸ್‌ ಕ್ರೀಂಡಾಗಣದಲ್ಲಿ 13 ವರ್ಷಗಳ ನಂತರ ಭಾರತದ ರಾಷ್ಟ್ರಗೀತೆ, ಅದರರಲ್ಲೂ ಒಲಿಂಪಿಕ್ಸ್‌‌ನ ಅಥ್ಲೆಟಿಕ್ ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ ನುಡಿಸಲಾಗಿದೆ.

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪುರುಷರ ಜಾವಲಿನ್ ಥ್ರೋ ಸ್ಪರ್ಧೆಯಲ್ಲಿ ಈಟಿಯನ್ನು ಬರೋಬ್ಬರಿ 87.65 ಮೀ ದೂರ ಎಸೆಯುವ ಮೂಲಕ ನೀರಜ್ ಚೋಪ್ರಾ ಭಾರತಕ್ಕೆ ಮೊದಲ ಚಿನ್ನ ತಂದು ಕೊಟ್ಟು ಇತಿಹಾಸ ನಿರ್ಮಿಸಿದ್ದಾರೆ.

ಈ ಮೂಲಕ ಒಲಿಂಪಿಕ್ಸ್‌ ಕ್ರೀಂಡಾಗಣದಲ್ಲಿ ಭಾರತದ ರಾಷ್ಟ್ರಗೀತೆಯನ್ನು 13 ವರ್ಷಗಳ ನಂತರ ಹಾಡಿಸುವಂತೆ ಮಾಡಿದರು. ಜೊತೆಗೆ ಭಾರತೀಯ ರಾಷ್ಟ್ರಗೀತೆಯು ಒಲಿಂಪಿಕ್ಸ್‌‌ನ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ ನುಡಿಸಿದ ಕೀರ್ತಿ ನೀರಜ್‌ ಚೋಪ್ರಾ ಅವರ ಪಾಲಿಗೆ ದಕ್ಕಿದೆ. ಇಷ್ಟೇ ಅಲ್ಲದೆ ಸುಮಾರು 121 ವರ್ಷಗಳ ನಂತರ ಭಾರತಕ್ಕೆ ಒಲಿಂಪಿಕ್ಸ್‌ನಲ್ಲಿ ಮೊದಲ ಭಾರಿಗೆ ಟ್ರ್ಯಾಕ್ ಮತ್ತು ಫೀಲ್ಡ್‌ನಲ್ಲಿ ಪದಕ ಲಭಿಸಿದೆ. ಟ್ರ್ಯಾಕ್ ಮತ್ತು ಫೀಲ್ಡ್‌ನಲ್ಲಿ 1900 ರಲ್ಲಿ ನಾರ್ಮನ್ ಪ್ರಿಚಾರ್ಡ್ ಅವರು ಪಡೆದ ಪದಕವೆ ಭಾರತಕ್ಕೆ ಕೊನೆಯದ್ದಾಗಿತ್ತು.

ಆಟದ ಮೊದಲ ಪ್ರಯತ್ನದಲ್ಲಿಯೇ 87.03 ಮೀಟರ್ ಎಸೆದ ಅವರು, ಎರಡನೇ ಪ್ರಯತ್ನದಲ್ಲಿ 87.65 ಮೀ ದೂರ ಎಸೆದು ದಾಖಲೆ ನಿರ್ಮಿಸಿದರು. ಚೆಕ್ ರಿಪಬ್ಲಿಕ್‌ನ ವಿ.ವೆಸ್ಲಿ 86.67 ಮೀಟರ್ ದೂರ ಎಸೆದು ಬೆಳ್ಳಿ ಗೆದ್ದರೆ, ಜರ್ಮನಿಯ ಜೆ.ವೆಬರ್ 85.30 ಎಸೆದು ಕಂಚು ತನ್ನದಾಗಿಸಿಕೊಂಡರು.

ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್: ಭಾರತಕ್ಕೆ ಮೊದಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ!

2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ 10ಮೀ ಏರ್ ರೈಫಲ್ ವಿಭಾಗದಲ್ಲಿ ಭಾರತದ ಅಭಿನವ್ ಬಿಂದ್ರಾ ಅವರು ಚಿನ್ನ ಗೆದ್ದದ್ದೆ ಭಾರತಕ್ಕೆ ಕಡೆಯ ಚಿನ್ನವಾಗಿತ್ತು. ಒಂದೇ ಒಲಿಂಪಿಕ್ಸ್‌ನಲ್ಲಿ ಅತಿ ಹೆಚ್ಚು ಪದಕ ಗೆದ್ದಿದ್ದು 2012 ರ ಲಂಡನ್‌ನಲ್ಲಾಗಿತ್ತು. ಆಗ ಭಾರತ 6 ಪದಕಗಳನ್ನು ತನ್ನದಾಗಿಸಿಕೊಂಡಿತ್ತು. ಆಗ ಎರಡು ಬೆಳ್ಳಿ ಮತ್ತು ನಾಲ್ಕು ಕಂಚು ಭಾರತದ ಪಾಲಿಗಿತ್ತು. ಆದರೆ ಟೋಲಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಮೊದಲ ಬಾರಿಗೆ 7 ಪದಕ ಗೆದ್ದಿದೆ. ಒಂದು ಚಿನ್ನ, ಎರಡು ಬೆಳ್ಳಿ, ನಾಲ್ಕು ಕಂಚು ತನ್ನದಾಗಿಸಿ ದಾಖಲೆ ನಿರ್ಮಿಸಿದೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತವು ಇದುವೆರೆಗೂ ಏಳು ಪದಕಗಳನ್ನು ಪಡೆದಿದ್ದು, ಒಂದು ಚಿನ್ನ, ಎರಡು ಬೆಳ್ಳಿ ಮತ್ತು ನಾಲ್ಕು ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದೆ.

ಚಿನ್ನ ಗೆದ್ದ ಚೋಪ್ರಾ ಅವರ ಸಾಧನೆಯ ಹಾದಿ ಹೀಗಿದೆ

24 ವರ್ಷದ ನೀರಜ್‌ ಚೋಪ್ರಾ ಅವರು ಮೂಲತಃ ಹರ್ಯಾಣದ ಪಾಣಿಪತ್ ಜಿಲ್ಲೆಯ ಖಂದ್ರಾ ಎಂಬ ಹಳ್ಳಿಯವರು. ಇವರು 2016ರಲ್ಲಿ ಮೊದಲ ಬಾರಿಗೆ ಭಾರತವನ್ನು ಪ್ರತಿನಿಧಿಸಿ, ಐಎಎಎಫ್‌ (ಇಂಟರ್ ನ್ಯಾಷನಲ್ ಅಸೋಸಿಯೇಶನ್ ಆಫ್ ಅತ್ಲೆಟಿಕ್ಸ್ ಫೆಡರೇಶನ್) ಕಿರಿಯರ ವಿಶ್ವ ಕ್ರೀಡಾಕೂಟದಲ್ಲಿ ಗೆದ್ದು ಚಾಂಪಿಯನ್‌ ಆಗಿ ಮಿಂಚಿದ್ದರು.

ನೀರಜ್ ಅವರ ಗ್ರಾಮವಾದ ಖಾಂಡ್ರಾದ ಅವರ ಮನೆಯಲ್ಲಿ ಸಂಭ್ರಮ

ನಂತರ, 2018ರ ಏಷ್ಯನ್ ಗೇಮ್ಸ್‌ ಮತ್ತು ಕಾಮನ್‌ವೆಲ್ತ್‌ನಲ್ಲಿ ಭಾಗವಹಿಸಿದ್ದ ಇವರು ಎರಡೂ ಕ್ರೀಡಾ ಕೂಟದಲ್ಲಿಯೂ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಅಲ್ಲದೆ,ಏಷ್ಯನ್ ಗೇಮ್ಸ್‌ನಲ್ಲಿ 88.06 ಮೀ ದೂರ ಜಾವೆಲಿನ್ ಎಸೆದು ರಾಷ್ಟ್ರೀಯ ದಾಖಲೆ ಬರೆದಿದ್ದಾರೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಫ್ರೀಸ್ಟೈಲ್ ಕುಸ್ತಿಯಲ್ಲಿ ಕಂಚು ಗೆದ್ದ ಬಜರಂಗ್ ಪೂನಿಯಾ

2018ರ ಏಷ್ಯನ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಬಾವುಟ ಹಿಡಿದು ಭಾರತದ ಕ್ರೀಡಾಳುಗಳನ್ನು ಪ್ರತಿನಿಧಿಸುವ ಅವಕಾಶವೂ ಇವರಿಗೆ ದಕ್ಕಿದ್ದು, ಇವರಿಗೆ ಮತ್ತೊಂದು ಹಿರಿಮೆಯನ್ನು ತಂದುಕೊಟ್ಟಿತ್ತು.

2017ರ ಏಷ್ಯನ್ ಅತ್ಲೆಟಿಕ್ ಚಾಂಪಿಯನ್ ಶಿಪ್ಸ್ ನಲ್ಲಿ ನೀರಜ್ 85.23 ಮೀ. ಜಾವೆಲಿನ್ ಎಸೆದು ಸ್ವರ್ಣ ಪದಕ ಪಡೆದಿದ್ದಾರೆ. 2018ರ ಮೇ ತಿಂಗಳಲ್ಲಿ ನಡೆದ ದೋಹ ಡೈಮಂಡ್ ಲೀಗ್ ಪಂದ್ಯದಲ್ಲಿ ಭಾಗವಹಿಸಿ 87.43 ಮೀ. ಜಾವೆಲಿನ್ ಎಸೆಯುವುದರೊಂದಿಗೆ ಹಳೆಯ ರಾಷ್ಟ್ರೀಯ ದಾಖಲೆಯನ್ನು ಮುರಿದಿದ್ದಾರೆ. ಫಿನ್ ಲ್ಯಾಂಡಿನ ಲ್ಯಾಪಿನ್ಲಾಟಿಯಲ್ಲಿ ನಡೆದ ‘ಸಾವೋ ಗೇಮ್ಸ್‌’ನಲ್ಲಿ ನೀರಜ್‌ ಸ್ವರ್ಣ ಪದಕ ಪಡೆದಿದ್ದಾರೆ.

6 ಚಿನ್ನದ ಪದಕಗಳನ್ನು ಗೆದ್ದಿರುವ ಚೋಪ್ರಾ

  • 2016ರ ಸೌತ್‌ ಎಷ್ಯನ್‌ ಕ್ರೀಡಾ ಕೂಟ
  • 2016ರ ವಿಶ್ವ ಜೂನಿಯರ್ ಚಾಂಪಿಯನ್‌ ಶಿಪ್‌
  • 2017ರ ಏಷ್ಯನ್‌ ಚಾಂಪಿಯನ್‌ ಶಿಪ್‌
  • 2018ರ ಕಾಮನ್‌ವೆಲ್ತ್‌ ಕ್ರೀಡಾಕೂಟ
  • 2018ರ ಏಷ್ಯನ್ ಕ್ರೀಡಾಕೂಟ
  • 2021ರ ಟೋಕಿಯೋ ಒಲಿಂಪಿಕ್ಸ್‌

ಇದನ್ನೂ ಓದಿ: ‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣ : ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರಿಗೆ ನ್ಯಾಯಾಲಯ ಸೋಮವಾರ (ಮಾ.9) 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಸಹೋದರನ...

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...