Homeಕ್ರೀಡೆಒಲಂಪಿಕ್ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

ಒಲಿಂಪಿಕ್ಸ್‌ ಕ್ರೀಂಡಾಗಣದಲ್ಲಿ 13 ವರ್ಷಗಳ ನಂತರ ಭಾರತದ ರಾಷ್ಟ್ರಗೀತೆ, ಅದರರಲ್ಲೂ ಒಲಿಂಪಿಕ್ಸ್‌‌ನ ಅಥ್ಲೆಟಿಕ್ ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ ನುಡಿಸಲಾಗಿದೆ.

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪುರುಷರ ಜಾವಲಿನ್ ಥ್ರೋ ಸ್ಪರ್ಧೆಯಲ್ಲಿ ಈಟಿಯನ್ನು ಬರೋಬ್ಬರಿ 87.65 ಮೀ ದೂರ ಎಸೆಯುವ ಮೂಲಕ ನೀರಜ್ ಚೋಪ್ರಾ ಭಾರತಕ್ಕೆ ಮೊದಲ ಚಿನ್ನ ತಂದು ಕೊಟ್ಟು ಇತಿಹಾಸ ನಿರ್ಮಿಸಿದ್ದಾರೆ.

ಈ ಮೂಲಕ ಒಲಿಂಪಿಕ್ಸ್‌ ಕ್ರೀಂಡಾಗಣದಲ್ಲಿ ಭಾರತದ ರಾಷ್ಟ್ರಗೀತೆಯನ್ನು 13 ವರ್ಷಗಳ ನಂತರ ಹಾಡಿಸುವಂತೆ ಮಾಡಿದರು. ಜೊತೆಗೆ ಭಾರತೀಯ ರಾಷ್ಟ್ರಗೀತೆಯು ಒಲಿಂಪಿಕ್ಸ್‌‌ನ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ ನುಡಿಸಿದ ಕೀರ್ತಿ ನೀರಜ್‌ ಚೋಪ್ರಾ ಅವರ ಪಾಲಿಗೆ ದಕ್ಕಿದೆ. ಇಷ್ಟೇ ಅಲ್ಲದೆ ಸುಮಾರು 121 ವರ್ಷಗಳ ನಂತರ ಭಾರತಕ್ಕೆ ಒಲಿಂಪಿಕ್ಸ್‌ನಲ್ಲಿ ಮೊದಲ ಭಾರಿಗೆ ಟ್ರ್ಯಾಕ್ ಮತ್ತು ಫೀಲ್ಡ್‌ನಲ್ಲಿ ಪದಕ ಲಭಿಸಿದೆ. ಟ್ರ್ಯಾಕ್ ಮತ್ತು ಫೀಲ್ಡ್‌ನಲ್ಲಿ 1900 ರಲ್ಲಿ ನಾರ್ಮನ್ ಪ್ರಿಚಾರ್ಡ್ ಅವರು ಪಡೆದ ಪದಕವೆ ಭಾರತಕ್ಕೆ ಕೊನೆಯದ್ದಾಗಿತ್ತು.

ಆಟದ ಮೊದಲ ಪ್ರಯತ್ನದಲ್ಲಿಯೇ 87.03 ಮೀಟರ್ ಎಸೆದ ಅವರು, ಎರಡನೇ ಪ್ರಯತ್ನದಲ್ಲಿ 87.65 ಮೀ ದೂರ ಎಸೆದು ದಾಖಲೆ ನಿರ್ಮಿಸಿದರು. ಚೆಕ್ ರಿಪಬ್ಲಿಕ್‌ನ ವಿ.ವೆಸ್ಲಿ 86.67 ಮೀಟರ್ ದೂರ ಎಸೆದು ಬೆಳ್ಳಿ ಗೆದ್ದರೆ, ಜರ್ಮನಿಯ ಜೆ.ವೆಬರ್ 85.30 ಎಸೆದು ಕಂಚು ತನ್ನದಾಗಿಸಿಕೊಂಡರು.

ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್: ಭಾರತಕ್ಕೆ ಮೊದಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ!

2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ 10ಮೀ ಏರ್ ರೈಫಲ್ ವಿಭಾಗದಲ್ಲಿ ಭಾರತದ ಅಭಿನವ್ ಬಿಂದ್ರಾ ಅವರು ಚಿನ್ನ ಗೆದ್ದದ್ದೆ ಭಾರತಕ್ಕೆ ಕಡೆಯ ಚಿನ್ನವಾಗಿತ್ತು. ಒಂದೇ ಒಲಿಂಪಿಕ್ಸ್‌ನಲ್ಲಿ ಅತಿ ಹೆಚ್ಚು ಪದಕ ಗೆದ್ದಿದ್ದು 2012 ರ ಲಂಡನ್‌ನಲ್ಲಾಗಿತ್ತು. ಆಗ ಭಾರತ 6 ಪದಕಗಳನ್ನು ತನ್ನದಾಗಿಸಿಕೊಂಡಿತ್ತು. ಆಗ ಎರಡು ಬೆಳ್ಳಿ ಮತ್ತು ನಾಲ್ಕು ಕಂಚು ಭಾರತದ ಪಾಲಿಗಿತ್ತು. ಆದರೆ ಟೋಲಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಮೊದಲ ಬಾರಿಗೆ 7 ಪದಕ ಗೆದ್ದಿದೆ. ಒಂದು ಚಿನ್ನ, ಎರಡು ಬೆಳ್ಳಿ, ನಾಲ್ಕು ಕಂಚು ತನ್ನದಾಗಿಸಿ ದಾಖಲೆ ನಿರ್ಮಿಸಿದೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತವು ಇದುವೆರೆಗೂ ಏಳು ಪದಕಗಳನ್ನು ಪಡೆದಿದ್ದು, ಒಂದು ಚಿನ್ನ, ಎರಡು ಬೆಳ್ಳಿ ಮತ್ತು ನಾಲ್ಕು ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದೆ.

ಚಿನ್ನ ಗೆದ್ದ ಚೋಪ್ರಾ ಅವರ ಸಾಧನೆಯ ಹಾದಿ ಹೀಗಿದೆ

24 ವರ್ಷದ ನೀರಜ್‌ ಚೋಪ್ರಾ ಅವರು ಮೂಲತಃ ಹರ್ಯಾಣದ ಪಾಣಿಪತ್ ಜಿಲ್ಲೆಯ ಖಂದ್ರಾ ಎಂಬ ಹಳ್ಳಿಯವರು. ಇವರು 2016ರಲ್ಲಿ ಮೊದಲ ಬಾರಿಗೆ ಭಾರತವನ್ನು ಪ್ರತಿನಿಧಿಸಿ, ಐಎಎಎಫ್‌ (ಇಂಟರ್ ನ್ಯಾಷನಲ್ ಅಸೋಸಿಯೇಶನ್ ಆಫ್ ಅತ್ಲೆಟಿಕ್ಸ್ ಫೆಡರೇಶನ್) ಕಿರಿಯರ ವಿಶ್ವ ಕ್ರೀಡಾಕೂಟದಲ್ಲಿ ಗೆದ್ದು ಚಾಂಪಿಯನ್‌ ಆಗಿ ಮಿಂಚಿದ್ದರು.

ನೀರಜ್ ಅವರ ಗ್ರಾಮವಾದ ಖಾಂಡ್ರಾದ ಅವರ ಮನೆಯಲ್ಲಿ ಸಂಭ್ರಮ

ನಂತರ, 2018ರ ಏಷ್ಯನ್ ಗೇಮ್ಸ್‌ ಮತ್ತು ಕಾಮನ್‌ವೆಲ್ತ್‌ನಲ್ಲಿ ಭಾಗವಹಿಸಿದ್ದ ಇವರು ಎರಡೂ ಕ್ರೀಡಾ ಕೂಟದಲ್ಲಿಯೂ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಅಲ್ಲದೆ,ಏಷ್ಯನ್ ಗೇಮ್ಸ್‌ನಲ್ಲಿ 88.06 ಮೀ ದೂರ ಜಾವೆಲಿನ್ ಎಸೆದು ರಾಷ್ಟ್ರೀಯ ದಾಖಲೆ ಬರೆದಿದ್ದಾರೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಫ್ರೀಸ್ಟೈಲ್ ಕುಸ್ತಿಯಲ್ಲಿ ಕಂಚು ಗೆದ್ದ ಬಜರಂಗ್ ಪೂನಿಯಾ

2018ರ ಏಷ್ಯನ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಬಾವುಟ ಹಿಡಿದು ಭಾರತದ ಕ್ರೀಡಾಳುಗಳನ್ನು ಪ್ರತಿನಿಧಿಸುವ ಅವಕಾಶವೂ ಇವರಿಗೆ ದಕ್ಕಿದ್ದು, ಇವರಿಗೆ ಮತ್ತೊಂದು ಹಿರಿಮೆಯನ್ನು ತಂದುಕೊಟ್ಟಿತ್ತು.

2017ರ ಏಷ್ಯನ್ ಅತ್ಲೆಟಿಕ್ ಚಾಂಪಿಯನ್ ಶಿಪ್ಸ್ ನಲ್ಲಿ ನೀರಜ್ 85.23 ಮೀ. ಜಾವೆಲಿನ್ ಎಸೆದು ಸ್ವರ್ಣ ಪದಕ ಪಡೆದಿದ್ದಾರೆ. 2018ರ ಮೇ ತಿಂಗಳಲ್ಲಿ ನಡೆದ ದೋಹ ಡೈಮಂಡ್ ಲೀಗ್ ಪಂದ್ಯದಲ್ಲಿ ಭಾಗವಹಿಸಿ 87.43 ಮೀ. ಜಾವೆಲಿನ್ ಎಸೆಯುವುದರೊಂದಿಗೆ ಹಳೆಯ ರಾಷ್ಟ್ರೀಯ ದಾಖಲೆಯನ್ನು ಮುರಿದಿದ್ದಾರೆ. ಫಿನ್ ಲ್ಯಾಂಡಿನ ಲ್ಯಾಪಿನ್ಲಾಟಿಯಲ್ಲಿ ನಡೆದ ‘ಸಾವೋ ಗೇಮ್ಸ್‌’ನಲ್ಲಿ ನೀರಜ್‌ ಸ್ವರ್ಣ ಪದಕ ಪಡೆದಿದ್ದಾರೆ.

6 ಚಿನ್ನದ ಪದಕಗಳನ್ನು ಗೆದ್ದಿರುವ ಚೋಪ್ರಾ

  • 2016ರ ಸೌತ್‌ ಎಷ್ಯನ್‌ ಕ್ರೀಡಾ ಕೂಟ
  • 2016ರ ವಿಶ್ವ ಜೂನಿಯರ್ ಚಾಂಪಿಯನ್‌ ಶಿಪ್‌
  • 2017ರ ಏಷ್ಯನ್‌ ಚಾಂಪಿಯನ್‌ ಶಿಪ್‌
  • 2018ರ ಕಾಮನ್‌ವೆಲ್ತ್‌ ಕ್ರೀಡಾಕೂಟ
  • 2018ರ ಏಷ್ಯನ್ ಕ್ರೀಡಾಕೂಟ
  • 2021ರ ಟೋಕಿಯೋ ಒಲಿಂಪಿಕ್ಸ್‌

ಇದನ್ನೂ ಓದಿ: ‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...