Homeಕ್ರೀಡೆಒಲಂಪಿಕ್ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

ಒಲಿಂಪಿಕ್ಸ್‌ ಕ್ರೀಂಡಾಗಣದಲ್ಲಿ 13 ವರ್ಷಗಳ ನಂತರ ಭಾರತದ ರಾಷ್ಟ್ರಗೀತೆ, ಅದರರಲ್ಲೂ ಒಲಿಂಪಿಕ್ಸ್‌‌ನ ಅಥ್ಲೆಟಿಕ್ ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ ನುಡಿಸಲಾಗಿದೆ.

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪುರುಷರ ಜಾವಲಿನ್ ಥ್ರೋ ಸ್ಪರ್ಧೆಯಲ್ಲಿ ಈಟಿಯನ್ನು ಬರೋಬ್ಬರಿ 87.65 ಮೀ ದೂರ ಎಸೆಯುವ ಮೂಲಕ ನೀರಜ್ ಚೋಪ್ರಾ ಭಾರತಕ್ಕೆ ಮೊದಲ ಚಿನ್ನ ತಂದು ಕೊಟ್ಟು ಇತಿಹಾಸ ನಿರ್ಮಿಸಿದ್ದಾರೆ.

ಈ ಮೂಲಕ ಒಲಿಂಪಿಕ್ಸ್‌ ಕ್ರೀಂಡಾಗಣದಲ್ಲಿ ಭಾರತದ ರಾಷ್ಟ್ರಗೀತೆಯನ್ನು 13 ವರ್ಷಗಳ ನಂತರ ಹಾಡಿಸುವಂತೆ ಮಾಡಿದರು. ಜೊತೆಗೆ ಭಾರತೀಯ ರಾಷ್ಟ್ರಗೀತೆಯು ಒಲಿಂಪಿಕ್ಸ್‌‌ನ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ ನುಡಿಸಿದ ಕೀರ್ತಿ ನೀರಜ್‌ ಚೋಪ್ರಾ ಅವರ ಪಾಲಿಗೆ ದಕ್ಕಿದೆ. ಇಷ್ಟೇ ಅಲ್ಲದೆ ಸುಮಾರು 121 ವರ್ಷಗಳ ನಂತರ ಭಾರತಕ್ಕೆ ಒಲಿಂಪಿಕ್ಸ್‌ನಲ್ಲಿ ಮೊದಲ ಭಾರಿಗೆ ಟ್ರ್ಯಾಕ್ ಮತ್ತು ಫೀಲ್ಡ್‌ನಲ್ಲಿ ಪದಕ ಲಭಿಸಿದೆ. ಟ್ರ್ಯಾಕ್ ಮತ್ತು ಫೀಲ್ಡ್‌ನಲ್ಲಿ 1900 ರಲ್ಲಿ ನಾರ್ಮನ್ ಪ್ರಿಚಾರ್ಡ್ ಅವರು ಪಡೆದ ಪದಕವೆ ಭಾರತಕ್ಕೆ ಕೊನೆಯದ್ದಾಗಿತ್ತು.

ಆಟದ ಮೊದಲ ಪ್ರಯತ್ನದಲ್ಲಿಯೇ 87.03 ಮೀಟರ್ ಎಸೆದ ಅವರು, ಎರಡನೇ ಪ್ರಯತ್ನದಲ್ಲಿ 87.65 ಮೀ ದೂರ ಎಸೆದು ದಾಖಲೆ ನಿರ್ಮಿಸಿದರು. ಚೆಕ್ ರಿಪಬ್ಲಿಕ್‌ನ ವಿ.ವೆಸ್ಲಿ 86.67 ಮೀಟರ್ ದೂರ ಎಸೆದು ಬೆಳ್ಳಿ ಗೆದ್ದರೆ, ಜರ್ಮನಿಯ ಜೆ.ವೆಬರ್ 85.30 ಎಸೆದು ಕಂಚು ತನ್ನದಾಗಿಸಿಕೊಂಡರು.

ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್: ಭಾರತಕ್ಕೆ ಮೊದಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ!

2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ 10ಮೀ ಏರ್ ರೈಫಲ್ ವಿಭಾಗದಲ್ಲಿ ಭಾರತದ ಅಭಿನವ್ ಬಿಂದ್ರಾ ಅವರು ಚಿನ್ನ ಗೆದ್ದದ್ದೆ ಭಾರತಕ್ಕೆ ಕಡೆಯ ಚಿನ್ನವಾಗಿತ್ತು. ಒಂದೇ ಒಲಿಂಪಿಕ್ಸ್‌ನಲ್ಲಿ ಅತಿ ಹೆಚ್ಚು ಪದಕ ಗೆದ್ದಿದ್ದು 2012 ರ ಲಂಡನ್‌ನಲ್ಲಾಗಿತ್ತು. ಆಗ ಭಾರತ 6 ಪದಕಗಳನ್ನು ತನ್ನದಾಗಿಸಿಕೊಂಡಿತ್ತು. ಆಗ ಎರಡು ಬೆಳ್ಳಿ ಮತ್ತು ನಾಲ್ಕು ಕಂಚು ಭಾರತದ ಪಾಲಿಗಿತ್ತು. ಆದರೆ ಟೋಲಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಮೊದಲ ಬಾರಿಗೆ 7 ಪದಕ ಗೆದ್ದಿದೆ. ಒಂದು ಚಿನ್ನ, ಎರಡು ಬೆಳ್ಳಿ, ನಾಲ್ಕು ಕಂಚು ತನ್ನದಾಗಿಸಿ ದಾಖಲೆ ನಿರ್ಮಿಸಿದೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತವು ಇದುವೆರೆಗೂ ಏಳು ಪದಕಗಳನ್ನು ಪಡೆದಿದ್ದು, ಒಂದು ಚಿನ್ನ, ಎರಡು ಬೆಳ್ಳಿ ಮತ್ತು ನಾಲ್ಕು ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದೆ.

ಚಿನ್ನ ಗೆದ್ದ ಚೋಪ್ರಾ ಅವರ ಸಾಧನೆಯ ಹಾದಿ ಹೀಗಿದೆ

24 ವರ್ಷದ ನೀರಜ್‌ ಚೋಪ್ರಾ ಅವರು ಮೂಲತಃ ಹರ್ಯಾಣದ ಪಾಣಿಪತ್ ಜಿಲ್ಲೆಯ ಖಂದ್ರಾ ಎಂಬ ಹಳ್ಳಿಯವರು. ಇವರು 2016ರಲ್ಲಿ ಮೊದಲ ಬಾರಿಗೆ ಭಾರತವನ್ನು ಪ್ರತಿನಿಧಿಸಿ, ಐಎಎಎಫ್‌ (ಇಂಟರ್ ನ್ಯಾಷನಲ್ ಅಸೋಸಿಯೇಶನ್ ಆಫ್ ಅತ್ಲೆಟಿಕ್ಸ್ ಫೆಡರೇಶನ್) ಕಿರಿಯರ ವಿಶ್ವ ಕ್ರೀಡಾಕೂಟದಲ್ಲಿ ಗೆದ್ದು ಚಾಂಪಿಯನ್‌ ಆಗಿ ಮಿಂಚಿದ್ದರು.

ನೀರಜ್ ಅವರ ಗ್ರಾಮವಾದ ಖಾಂಡ್ರಾದ ಅವರ ಮನೆಯಲ್ಲಿ ಸಂಭ್ರಮ

ನಂತರ, 2018ರ ಏಷ್ಯನ್ ಗೇಮ್ಸ್‌ ಮತ್ತು ಕಾಮನ್‌ವೆಲ್ತ್‌ನಲ್ಲಿ ಭಾಗವಹಿಸಿದ್ದ ಇವರು ಎರಡೂ ಕ್ರೀಡಾ ಕೂಟದಲ್ಲಿಯೂ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಅಲ್ಲದೆ,ಏಷ್ಯನ್ ಗೇಮ್ಸ್‌ನಲ್ಲಿ 88.06 ಮೀ ದೂರ ಜಾವೆಲಿನ್ ಎಸೆದು ರಾಷ್ಟ್ರೀಯ ದಾಖಲೆ ಬರೆದಿದ್ದಾರೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಫ್ರೀಸ್ಟೈಲ್ ಕುಸ್ತಿಯಲ್ಲಿ ಕಂಚು ಗೆದ್ದ ಬಜರಂಗ್ ಪೂನಿಯಾ

2018ರ ಏಷ್ಯನ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಬಾವುಟ ಹಿಡಿದು ಭಾರತದ ಕ್ರೀಡಾಳುಗಳನ್ನು ಪ್ರತಿನಿಧಿಸುವ ಅವಕಾಶವೂ ಇವರಿಗೆ ದಕ್ಕಿದ್ದು, ಇವರಿಗೆ ಮತ್ತೊಂದು ಹಿರಿಮೆಯನ್ನು ತಂದುಕೊಟ್ಟಿತ್ತು.

2017ರ ಏಷ್ಯನ್ ಅತ್ಲೆಟಿಕ್ ಚಾಂಪಿಯನ್ ಶಿಪ್ಸ್ ನಲ್ಲಿ ನೀರಜ್ 85.23 ಮೀ. ಜಾವೆಲಿನ್ ಎಸೆದು ಸ್ವರ್ಣ ಪದಕ ಪಡೆದಿದ್ದಾರೆ. 2018ರ ಮೇ ತಿಂಗಳಲ್ಲಿ ನಡೆದ ದೋಹ ಡೈಮಂಡ್ ಲೀಗ್ ಪಂದ್ಯದಲ್ಲಿ ಭಾಗವಹಿಸಿ 87.43 ಮೀ. ಜಾವೆಲಿನ್ ಎಸೆಯುವುದರೊಂದಿಗೆ ಹಳೆಯ ರಾಷ್ಟ್ರೀಯ ದಾಖಲೆಯನ್ನು ಮುರಿದಿದ್ದಾರೆ. ಫಿನ್ ಲ್ಯಾಂಡಿನ ಲ್ಯಾಪಿನ್ಲಾಟಿಯಲ್ಲಿ ನಡೆದ ‘ಸಾವೋ ಗೇಮ್ಸ್‌’ನಲ್ಲಿ ನೀರಜ್‌ ಸ್ವರ್ಣ ಪದಕ ಪಡೆದಿದ್ದಾರೆ.

6 ಚಿನ್ನದ ಪದಕಗಳನ್ನು ಗೆದ್ದಿರುವ ಚೋಪ್ರಾ

  • 2016ರ ಸೌತ್‌ ಎಷ್ಯನ್‌ ಕ್ರೀಡಾ ಕೂಟ
  • 2016ರ ವಿಶ್ವ ಜೂನಿಯರ್ ಚಾಂಪಿಯನ್‌ ಶಿಪ್‌
  • 2017ರ ಏಷ್ಯನ್‌ ಚಾಂಪಿಯನ್‌ ಶಿಪ್‌
  • 2018ರ ಕಾಮನ್‌ವೆಲ್ತ್‌ ಕ್ರೀಡಾಕೂಟ
  • 2018ರ ಏಷ್ಯನ್ ಕ್ರೀಡಾಕೂಟ
  • 2021ರ ಟೋಕಿಯೋ ಒಲಿಂಪಿಕ್ಸ್‌

ಇದನ್ನೂ ಓದಿ: ‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...