Homeಕ್ರೀಡೆಒಲಂಪಿಕ್ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

ಒಲಿಂಪಿಕ್ಸ್‌ ಕ್ರೀಂಡಾಗಣದಲ್ಲಿ 13 ವರ್ಷಗಳ ನಂತರ ಭಾರತದ ರಾಷ್ಟ್ರಗೀತೆ, ಅದರರಲ್ಲೂ ಒಲಿಂಪಿಕ್ಸ್‌‌ನ ಅಥ್ಲೆಟಿಕ್ ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ ನುಡಿಸಲಾಗಿದೆ.

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪುರುಷರ ಜಾವಲಿನ್ ಥ್ರೋ ಸ್ಪರ್ಧೆಯಲ್ಲಿ ಈಟಿಯನ್ನು ಬರೋಬ್ಬರಿ 87.65 ಮೀ ದೂರ ಎಸೆಯುವ ಮೂಲಕ ನೀರಜ್ ಚೋಪ್ರಾ ಭಾರತಕ್ಕೆ ಮೊದಲ ಚಿನ್ನ ತಂದು ಕೊಟ್ಟು ಇತಿಹಾಸ ನಿರ್ಮಿಸಿದ್ದಾರೆ.

ಈ ಮೂಲಕ ಒಲಿಂಪಿಕ್ಸ್‌ ಕ್ರೀಂಡಾಗಣದಲ್ಲಿ ಭಾರತದ ರಾಷ್ಟ್ರಗೀತೆಯನ್ನು 13 ವರ್ಷಗಳ ನಂತರ ಹಾಡಿಸುವಂತೆ ಮಾಡಿದರು. ಜೊತೆಗೆ ಭಾರತೀಯ ರಾಷ್ಟ್ರಗೀತೆಯು ಒಲಿಂಪಿಕ್ಸ್‌‌ನ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ ನುಡಿಸಿದ ಕೀರ್ತಿ ನೀರಜ್‌ ಚೋಪ್ರಾ ಅವರ ಪಾಲಿಗೆ ದಕ್ಕಿದೆ. ಇಷ್ಟೇ ಅಲ್ಲದೆ ಸುಮಾರು 121 ವರ್ಷಗಳ ನಂತರ ಭಾರತಕ್ಕೆ ಒಲಿಂಪಿಕ್ಸ್‌ನಲ್ಲಿ ಮೊದಲ ಭಾರಿಗೆ ಟ್ರ್ಯಾಕ್ ಮತ್ತು ಫೀಲ್ಡ್‌ನಲ್ಲಿ ಪದಕ ಲಭಿಸಿದೆ. ಟ್ರ್ಯಾಕ್ ಮತ್ತು ಫೀಲ್ಡ್‌ನಲ್ಲಿ 1900 ರಲ್ಲಿ ನಾರ್ಮನ್ ಪ್ರಿಚಾರ್ಡ್ ಅವರು ಪಡೆದ ಪದಕವೆ ಭಾರತಕ್ಕೆ ಕೊನೆಯದ್ದಾಗಿತ್ತು.

ಆಟದ ಮೊದಲ ಪ್ರಯತ್ನದಲ್ಲಿಯೇ 87.03 ಮೀಟರ್ ಎಸೆದ ಅವರು, ಎರಡನೇ ಪ್ರಯತ್ನದಲ್ಲಿ 87.65 ಮೀ ದೂರ ಎಸೆದು ದಾಖಲೆ ನಿರ್ಮಿಸಿದರು. ಚೆಕ್ ರಿಪಬ್ಲಿಕ್‌ನ ವಿ.ವೆಸ್ಲಿ 86.67 ಮೀಟರ್ ದೂರ ಎಸೆದು ಬೆಳ್ಳಿ ಗೆದ್ದರೆ, ಜರ್ಮನಿಯ ಜೆ.ವೆಬರ್ 85.30 ಎಸೆದು ಕಂಚು ತನ್ನದಾಗಿಸಿಕೊಂಡರು.

ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್: ಭಾರತಕ್ಕೆ ಮೊದಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ!

2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ 10ಮೀ ಏರ್ ರೈಫಲ್ ವಿಭಾಗದಲ್ಲಿ ಭಾರತದ ಅಭಿನವ್ ಬಿಂದ್ರಾ ಅವರು ಚಿನ್ನ ಗೆದ್ದದ್ದೆ ಭಾರತಕ್ಕೆ ಕಡೆಯ ಚಿನ್ನವಾಗಿತ್ತು. ಒಂದೇ ಒಲಿಂಪಿಕ್ಸ್‌ನಲ್ಲಿ ಅತಿ ಹೆಚ್ಚು ಪದಕ ಗೆದ್ದಿದ್ದು 2012 ರ ಲಂಡನ್‌ನಲ್ಲಾಗಿತ್ತು. ಆಗ ಭಾರತ 6 ಪದಕಗಳನ್ನು ತನ್ನದಾಗಿಸಿಕೊಂಡಿತ್ತು. ಆಗ ಎರಡು ಬೆಳ್ಳಿ ಮತ್ತು ನಾಲ್ಕು ಕಂಚು ಭಾರತದ ಪಾಲಿಗಿತ್ತು. ಆದರೆ ಟೋಲಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಮೊದಲ ಬಾರಿಗೆ 7 ಪದಕ ಗೆದ್ದಿದೆ. ಒಂದು ಚಿನ್ನ, ಎರಡು ಬೆಳ್ಳಿ, ನಾಲ್ಕು ಕಂಚು ತನ್ನದಾಗಿಸಿ ದಾಖಲೆ ನಿರ್ಮಿಸಿದೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತವು ಇದುವೆರೆಗೂ ಏಳು ಪದಕಗಳನ್ನು ಪಡೆದಿದ್ದು, ಒಂದು ಚಿನ್ನ, ಎರಡು ಬೆಳ್ಳಿ ಮತ್ತು ನಾಲ್ಕು ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದೆ.

ಚಿನ್ನ ಗೆದ್ದ ಚೋಪ್ರಾ ಅವರ ಸಾಧನೆಯ ಹಾದಿ ಹೀಗಿದೆ

24 ವರ್ಷದ ನೀರಜ್‌ ಚೋಪ್ರಾ ಅವರು ಮೂಲತಃ ಹರ್ಯಾಣದ ಪಾಣಿಪತ್ ಜಿಲ್ಲೆಯ ಖಂದ್ರಾ ಎಂಬ ಹಳ್ಳಿಯವರು. ಇವರು 2016ರಲ್ಲಿ ಮೊದಲ ಬಾರಿಗೆ ಭಾರತವನ್ನು ಪ್ರತಿನಿಧಿಸಿ, ಐಎಎಎಫ್‌ (ಇಂಟರ್ ನ್ಯಾಷನಲ್ ಅಸೋಸಿಯೇಶನ್ ಆಫ್ ಅತ್ಲೆಟಿಕ್ಸ್ ಫೆಡರೇಶನ್) ಕಿರಿಯರ ವಿಶ್ವ ಕ್ರೀಡಾಕೂಟದಲ್ಲಿ ಗೆದ್ದು ಚಾಂಪಿಯನ್‌ ಆಗಿ ಮಿಂಚಿದ್ದರು.

ನೀರಜ್ ಅವರ ಗ್ರಾಮವಾದ ಖಾಂಡ್ರಾದ ಅವರ ಮನೆಯಲ್ಲಿ ಸಂಭ್ರಮ

ನಂತರ, 2018ರ ಏಷ್ಯನ್ ಗೇಮ್ಸ್‌ ಮತ್ತು ಕಾಮನ್‌ವೆಲ್ತ್‌ನಲ್ಲಿ ಭಾಗವಹಿಸಿದ್ದ ಇವರು ಎರಡೂ ಕ್ರೀಡಾ ಕೂಟದಲ್ಲಿಯೂ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಅಲ್ಲದೆ,ಏಷ್ಯನ್ ಗೇಮ್ಸ್‌ನಲ್ಲಿ 88.06 ಮೀ ದೂರ ಜಾವೆಲಿನ್ ಎಸೆದು ರಾಷ್ಟ್ರೀಯ ದಾಖಲೆ ಬರೆದಿದ್ದಾರೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಫ್ರೀಸ್ಟೈಲ್ ಕುಸ್ತಿಯಲ್ಲಿ ಕಂಚು ಗೆದ್ದ ಬಜರಂಗ್ ಪೂನಿಯಾ

2018ರ ಏಷ್ಯನ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಬಾವುಟ ಹಿಡಿದು ಭಾರತದ ಕ್ರೀಡಾಳುಗಳನ್ನು ಪ್ರತಿನಿಧಿಸುವ ಅವಕಾಶವೂ ಇವರಿಗೆ ದಕ್ಕಿದ್ದು, ಇವರಿಗೆ ಮತ್ತೊಂದು ಹಿರಿಮೆಯನ್ನು ತಂದುಕೊಟ್ಟಿತ್ತು.

2017ರ ಏಷ್ಯನ್ ಅತ್ಲೆಟಿಕ್ ಚಾಂಪಿಯನ್ ಶಿಪ್ಸ್ ನಲ್ಲಿ ನೀರಜ್ 85.23 ಮೀ. ಜಾವೆಲಿನ್ ಎಸೆದು ಸ್ವರ್ಣ ಪದಕ ಪಡೆದಿದ್ದಾರೆ. 2018ರ ಮೇ ತಿಂಗಳಲ್ಲಿ ನಡೆದ ದೋಹ ಡೈಮಂಡ್ ಲೀಗ್ ಪಂದ್ಯದಲ್ಲಿ ಭಾಗವಹಿಸಿ 87.43 ಮೀ. ಜಾವೆಲಿನ್ ಎಸೆಯುವುದರೊಂದಿಗೆ ಹಳೆಯ ರಾಷ್ಟ್ರೀಯ ದಾಖಲೆಯನ್ನು ಮುರಿದಿದ್ದಾರೆ. ಫಿನ್ ಲ್ಯಾಂಡಿನ ಲ್ಯಾಪಿನ್ಲಾಟಿಯಲ್ಲಿ ನಡೆದ ‘ಸಾವೋ ಗೇಮ್ಸ್‌’ನಲ್ಲಿ ನೀರಜ್‌ ಸ್ವರ್ಣ ಪದಕ ಪಡೆದಿದ್ದಾರೆ.

6 ಚಿನ್ನದ ಪದಕಗಳನ್ನು ಗೆದ್ದಿರುವ ಚೋಪ್ರಾ

  • 2016ರ ಸೌತ್‌ ಎಷ್ಯನ್‌ ಕ್ರೀಡಾ ಕೂಟ
  • 2016ರ ವಿಶ್ವ ಜೂನಿಯರ್ ಚಾಂಪಿಯನ್‌ ಶಿಪ್‌
  • 2017ರ ಏಷ್ಯನ್‌ ಚಾಂಪಿಯನ್‌ ಶಿಪ್‌
  • 2018ರ ಕಾಮನ್‌ವೆಲ್ತ್‌ ಕ್ರೀಡಾಕೂಟ
  • 2018ರ ಏಷ್ಯನ್ ಕ್ರೀಡಾಕೂಟ
  • 2021ರ ಟೋಕಿಯೋ ಒಲಿಂಪಿಕ್ಸ್‌

ಇದನ್ನೂ ಓದಿ: ‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...