Homeಮುಖಪುಟಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ಕೆಲವರು ಸತ್ಯಾಸತ್ಯತೆ ಪರಿಶೀಲಿಸದೆ, ಅಥ್ಲೆಟಿಕ್ಸ್ ಅಧ್ಯಕ್ಷರ ಹೇಳಿಕೆ ಇಟ್ಟುಕೊಂಡು ಕಾಶಿನಾಥ್ ನಾಯ್ಕ್‌ರನ್ನು ಟೀಕಿಸಿದ್ದರು. ಅದಕ್ಕೆ ಸ್ವತಃ ನೀರಜ್ ಚೋಪ್ರಾ ಸ್ಪಷ್ಟ ಉತ್ತರ ಕೊಟ್ಟಿದ್ದಾರೆ.

- Advertisement -
- Advertisement -

ಒಲಿಂಪಿಕ್ಸ್‌ನಲ್ಲಿ ಚಿನ್ನಗೆದ್ದ ನೀರಜ್ ಚೋಪ್ರಾಗೆ ಕಾಶೀನಾಥ್ ನಾಯ್ಕ್‌ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶೀನಾಥ್ ನಾಯ್ಕ್‌ ಯಾರು ಎಂಬುದೇ ನಮಗೆ ಗೊತ್ತಿಲ್ಲ ಎಂಬ ಅಥ್ಲೆಟಿಕ್ಸ್ ಫೆಡರೇಷನ್ ಅಧ್ಯಕ್ಷ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆ ಮೂಲಕ ಎರಡು ವರ್ಷಗಳ ಕಾಲ ನೀರಜ್‌ ಚೋಪ್ರಾಗೆ ಕೋಚ್ ಆಗಿ ತರಬೇತಿ ನೀಡಿದ್ದ ಕನ್ನಡಿಗ ಕಾಶೀನಾಥ್‌ರನ್ನು ಅವಮಾನಿಸಲಾಗಿತ್ತು. ಈಗ ಕಾಶಿನಾಥ್ ಮನೆಗೆ ಚಿನ್ನದ ಹುಡುಗ ನೀರಜ್ ಚೋಪ್ರಾ ಭೇಟಿ ನೀಡುವ ಮೂಲಕ ವಿವಾದಗಳಿಗೆ ತೆರೆ ಎಳೆದಿದ್ದಾರೆ ಮತ್ತು ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.

ಅತ್ತ ಟೋಕಿಯೋದಲ್ಲಿ ಜಾವಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಚಿನ್ನ ಗೆಲ್ಲುತ್ತಿದ್ದಂತೆ ಇತ್ತ ಅವರಿಗೆ ಕೋಚ್ ಆಗಿ ಕೆಲಸ ಮಾಡಿದ್ದ ಎಲ್ಲರನ್ನು ಶ್ಲಾಘಿಸಲಾಗಿತ್ತು. 2015 ರಿಂದ 2017ರವರೆಗೆ ನೀರಜ್‌ಗೆ ಕೋಚ್ ಆಗಿದ್ದ ಕನ್ನಡಿಗ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಬೆಂಗಳೆ ಗ್ರಾಮದ ಕಾಶೀನಾಥ್ ನಾಯ್ಕ್‌ರವರನ್ನು ಸ್ಮರಿಸಲಾಗಿತ್ತು. ಅವರ ಸಾಧನೆ ಗುರುತಿಸಿ ಅವರಿಗೆ ರಾಜ್ಯದ ಕ್ರೀಡಾ ಸಚಿವರು 10 ಲಕ್ಷ ರೂ ಗಳ ಬಹುಮಾನ ಘೋಷಿಸಿದ್ದರು.

ಆದರೆ ಅವರ ವಿರುದ್ದ ಅಪಪ್ರಚಾರ ಸಹ ಅದೇ ಸಮಯದಲ್ಲಿ ಶುರುವಾಗಿತ್ತು. ಅವರಿಗೆ 10 ಲಕ್ಷ ಬಹುಮಾನ ಘೋಷಿಸಿದ್ದಕ್ಕೆ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷ ಅದಿಲ್ಲೆ ಸುಮರಿವಾಲಾ ಆಕ್ಷೇಪ ವ್ಯಕ್ತಪಡಿಸಿದ್ದರು. “ನೀರಜ್ ಚೋಪ್ರಾಗೆ ಕಾಶೀನಾಥ್ ನಾಯ್ಕ್‌ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶೀನಾಥ್ ಯಾರು ಎಂಬುದೇ ನಮಗೆ ಗೊತ್ತಿಲ್ಲ. ಅವರಿಗೆ ಕರ್ನಾಟಕ ಸರ್ಕಾರ 10 ರೂ ಲಕ್ಷ ರೂ ಬಹುಮಾನ ಘೋಷಿಸಿರುವುದು ತಿಳಿದುಬಂದಿದೆ. ಅಧಿಕೃತ ಪತ್ರ ತಲುಪಿದಾಗ ಅದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತೇವೆ” ಎಂದು  ಸುಮರಿವಾಲಾ ಹೇಳಿಕೆ ನೀಡಿದ್ದರು.

ಈ ಹೇಳಿಕೆ ಹೊರಬೀಳುತ್ತಿದ್ದಂತೆ ಕನ್ನಡದ ಬಹುತೇಕ ಮಾಧ್ಯಮಗಳು ಕಾಶೀನಾಥ್ ನಾಯ್ಕ್‌ ವಿರುದ್ಧ ಕಿಡಿಕಾರಿದ್ದವು. ಪತ್ರಕರ್ತರು ಸೇರಿದಂತೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಕಾಶಿನಾಥ್‌ರನ್ನು ಟೀಕಿಸಿದ್ದರು. ಆ ಸಂದರ್ಭದಲ್ಲಿ ನಾನುಗೌರಿ.ಕಾಂ ಕಾಶೀನಾಥ್ ನಾಯ್ಕ್‌ ರವರನ್ನು ಸಂಪರ್ಕಿಸಿ ಅವರ ಕ್ರೀಡಾಸಾಧನೆ, ಕೋಚ್ ಆಗಿ ಕೆಲಸ ಮಾಡಿದ್ದರ ಕುರಿತು ವಿವರವಾದ ವರದಿ ಪ್ರಕಟಿಸಿತ್ತು. ಅದನ್ನು ಇಲ್ಲಿ ಓದಬಹುದು.

2000 ದಲ್ಲಿ ದೇಶ ಸೇವೆಗೆ ಸೈನಿಕರಾಗಿ ಸೇರಿದ್ದ ಕಾಶಿನಾಥ್‌ ನಾಯ್ಕರವರು 2010ರಲ್ಲಿ ನವದೆಹಲಿಯಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಜಾವೆಲಿನ್ ಎಸೆತದಲ್ಲಿ ಕಂಚಿನ ಪದಕ ಪಡೆದು ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಇವರಿಗೆ ರಾಜ್ಯೋತ್ಸವ ಪ್ರಶಸ್ತಿ, ಏಕಲವ್ಯ ಪ್ರಶಸ್ತಿ ಸಂದಿವೆ. 2015 ರಿಂದ 2017ರವರೆಗೆ ನೀರಜ್ ಚೋಪ್ರಾಗೆ ಸಹಾಯಕ ಕೋಚ್ ಆಗಿ ಕೆಲಸ ಮಾಡಿದ್ದಾರೆ.

“ನಾನು ಯಾರು ಅಂತ ಗೊತ್ತಿಲ್ಲವೆಂದು ಅದಿಲ್ಲೆ ಸುಮರಿವಾಲಾ ಹೇಳಿದ್ದಾರೆ. ಹಾಗಾದರೆ ನಾನು ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆದ್ದಿದ್ದು ಸುಳ್ಳೇ? 2015 ರಿಂದ 2017ರ ವರೆಗೆ ಪಟಿಯಾಲದಲ್ಲಿ ನಾನು ಚೋಪ್ರಾಗೆ ಸಹಾಯಕ ಕೋಚ್ ಆಗಿ ಕೆಲಸ ಮಾಡಿದ್ದೇನೆ. ಈ ಮಧ್ಯೆ 2016ರಲ್ಲಿ ವಿದೇಶಿ ಕೋಚ್ ಗ್ಯಾರಿ ಕ್ಯಾಲ್ವರ್ಟ್ ನೇಮಕವಾದರು. ಆಗ ನಾವೆಲ್ಲರೂ ಪೋಲಾಂಡ್‌ಗೆ ತೆರಳಿ 20 ವರ್ಷದೊಳಗಿನ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ್ದಾಗ ನೀರಜ್ ಚಿನ್ನ ಗೆದ್ದಿದ್ದರು” ಎಂದು ಕಾಶಿನಾಥ್ ಹೇಳಿದ್ದರು.

ಇಂತಹ ಅಪ್ರತಿಮ ಸಾಧನೆಗೈದ ಕಾಶಿನಾಥ್‌ರವರ ಪುಣೆಯಲ್ಲಿನ ಮನೆಗೆ ನೀರಜ್ ಚೋಪ್ರಾ ಭೇಟಿ ನೀಡಿ ಗುರುಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಕಾಶಿನಾಥ್‌ರವರ ಮಕ್ಕಳನ್ನು ಎತ್ತಿಕೊಂಡು ಮುದ್ದಿಸಿದ್ದಾರೆ. ಕಾಶಿನಾಥ್ ಕುಟುಂಬದ ಜೊತೆ ಫೋಟೊ ತೆಗೆದುಕೊಂಡಿದ್ದಾರೆ. ಯಾವುದೇ ಅಹಂಭಾವವಿಲ್ಲದೇ ಗುರುಗಳ ಜೊತೆ ಪ್ರೀತಿಯಿಂದ ಬೆರೆತಿದ್ದಾರೆ. ಈ ಎಲ್ಲಾ ಫೋಟೊಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅಲ್ಲದೇ ಕಾಶಿನಾಥ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದವರ ಬಾಯಿ ಮುಚ್ಚಿಸಿವೆ.

ಆಗಸ್ಟ್ 24ರ ಮಧ್ಯಾಹ್ನ ನೀರಜ್ ಚೋಪ್ರಾ ಕಾಶೀನಾಥ್ ನಾಯ್ಕ್‌ರವರ ಮನೆಗೆ ಭೇಟಿ ನೀಡಿದಾಗ ಕಾಶಿನಾಥ್‌ರವರ ಪತ್ನಿ ಚೈತ್ರಾ ಆರತಿ ಬೆಳಗಿ, ಹಣೆಗೆ ತಿಲಕವಿಟ್ಟು ಸ್ವಾಗತಿಸಿದ್ದಾರೆ. ನೀರಜ್ ಅಂತೂ ಮನೆಯೊಳಗೆ ಬಂದ ಕೂಡಲೇ ಮನೆಯೊಳಗಿದ್ದ ಲ್ಯಾಬ್ರೊಡರ್ ನಾಯಿಯ ತಲೆ ಸವರಿ ಮುದ್ದು ಮಾಡಿದ್ದಾರೆ. ನಂತರ ಮಕ್ಕಳನ್ನು ಎತ್ತುಕೊಂಡಿದ್ದಾರೆ.

ಒಟ್ಟಿನಲ್ಲಿ ಕೆಲವರು ಸತ್ಯಾಸತ್ಯತೆ ಪರಿಶೀಲಿಸದೆ, ಅಥ್ಲೆಟಿಕ್ಸ್ ಅಧ್ಯಕ್ಷರ ಹೇಳಿಕೆ ಇಟ್ಟುಕೊಂಡು ಕಾಶಿನಾಥ್ ನಾಯ್ಕ್‌ರನ್ನು ಟೀಕಿಸಿದ್ದರು. ಅದಕ್ಕೆ ಸ್ವತಃ ನೀರಜ್ ಚೋಪ್ರಾ ಸ್ಪಷ್ಟ ಉತ್ತರ ಕೊಟ್ಟಿದ್ದಾರೆ. ಆ ಮೂಲಕ ಗುರುಗಳ ಗೌರವ ಹೆಚ್ಚಿಸಿದ್ದಾರೆ.


ಇದನ್ನೂ ಓದಿ: ನಾನು ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆದ್ದಿದ್ದು ಸುಳ್ಳೇ? ನೀರಜ್ ಚೋಪ್ರಾ ಮಾಜಿ ಕೋಚ್ ಕನ್ನಡಿಗ ಕಾಶಿನಾಥ್ ನಾಯ್ಕ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....