Homeಮುಖಪುಟಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ಕೆಲವರು ಸತ್ಯಾಸತ್ಯತೆ ಪರಿಶೀಲಿಸದೆ, ಅಥ್ಲೆಟಿಕ್ಸ್ ಅಧ್ಯಕ್ಷರ ಹೇಳಿಕೆ ಇಟ್ಟುಕೊಂಡು ಕಾಶಿನಾಥ್ ನಾಯ್ಕ್‌ರನ್ನು ಟೀಕಿಸಿದ್ದರು. ಅದಕ್ಕೆ ಸ್ವತಃ ನೀರಜ್ ಚೋಪ್ರಾ ಸ್ಪಷ್ಟ ಉತ್ತರ ಕೊಟ್ಟಿದ್ದಾರೆ.

- Advertisement -
- Advertisement -

ಒಲಿಂಪಿಕ್ಸ್‌ನಲ್ಲಿ ಚಿನ್ನಗೆದ್ದ ನೀರಜ್ ಚೋಪ್ರಾಗೆ ಕಾಶೀನಾಥ್ ನಾಯ್ಕ್‌ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶೀನಾಥ್ ನಾಯ್ಕ್‌ ಯಾರು ಎಂಬುದೇ ನಮಗೆ ಗೊತ್ತಿಲ್ಲ ಎಂಬ ಅಥ್ಲೆಟಿಕ್ಸ್ ಫೆಡರೇಷನ್ ಅಧ್ಯಕ್ಷ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆ ಮೂಲಕ ಎರಡು ವರ್ಷಗಳ ಕಾಲ ನೀರಜ್‌ ಚೋಪ್ರಾಗೆ ಕೋಚ್ ಆಗಿ ತರಬೇತಿ ನೀಡಿದ್ದ ಕನ್ನಡಿಗ ಕಾಶೀನಾಥ್‌ರನ್ನು ಅವಮಾನಿಸಲಾಗಿತ್ತು. ಈಗ ಕಾಶಿನಾಥ್ ಮನೆಗೆ ಚಿನ್ನದ ಹುಡುಗ ನೀರಜ್ ಚೋಪ್ರಾ ಭೇಟಿ ನೀಡುವ ಮೂಲಕ ವಿವಾದಗಳಿಗೆ ತೆರೆ ಎಳೆದಿದ್ದಾರೆ ಮತ್ತು ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.

ಅತ್ತ ಟೋಕಿಯೋದಲ್ಲಿ ಜಾವಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಚಿನ್ನ ಗೆಲ್ಲುತ್ತಿದ್ದಂತೆ ಇತ್ತ ಅವರಿಗೆ ಕೋಚ್ ಆಗಿ ಕೆಲಸ ಮಾಡಿದ್ದ ಎಲ್ಲರನ್ನು ಶ್ಲಾಘಿಸಲಾಗಿತ್ತು. 2015 ರಿಂದ 2017ರವರೆಗೆ ನೀರಜ್‌ಗೆ ಕೋಚ್ ಆಗಿದ್ದ ಕನ್ನಡಿಗ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಬೆಂಗಳೆ ಗ್ರಾಮದ ಕಾಶೀನಾಥ್ ನಾಯ್ಕ್‌ರವರನ್ನು ಸ್ಮರಿಸಲಾಗಿತ್ತು. ಅವರ ಸಾಧನೆ ಗುರುತಿಸಿ ಅವರಿಗೆ ರಾಜ್ಯದ ಕ್ರೀಡಾ ಸಚಿವರು 10 ಲಕ್ಷ ರೂ ಗಳ ಬಹುಮಾನ ಘೋಷಿಸಿದ್ದರು.

ಆದರೆ ಅವರ ವಿರುದ್ದ ಅಪಪ್ರಚಾರ ಸಹ ಅದೇ ಸಮಯದಲ್ಲಿ ಶುರುವಾಗಿತ್ತು. ಅವರಿಗೆ 10 ಲಕ್ಷ ಬಹುಮಾನ ಘೋಷಿಸಿದ್ದಕ್ಕೆ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷ ಅದಿಲ್ಲೆ ಸುಮರಿವಾಲಾ ಆಕ್ಷೇಪ ವ್ಯಕ್ತಪಡಿಸಿದ್ದರು. “ನೀರಜ್ ಚೋಪ್ರಾಗೆ ಕಾಶೀನಾಥ್ ನಾಯ್ಕ್‌ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶೀನಾಥ್ ಯಾರು ಎಂಬುದೇ ನಮಗೆ ಗೊತ್ತಿಲ್ಲ. ಅವರಿಗೆ ಕರ್ನಾಟಕ ಸರ್ಕಾರ 10 ರೂ ಲಕ್ಷ ರೂ ಬಹುಮಾನ ಘೋಷಿಸಿರುವುದು ತಿಳಿದುಬಂದಿದೆ. ಅಧಿಕೃತ ಪತ್ರ ತಲುಪಿದಾಗ ಅದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತೇವೆ” ಎಂದು  ಸುಮರಿವಾಲಾ ಹೇಳಿಕೆ ನೀಡಿದ್ದರು.

ಈ ಹೇಳಿಕೆ ಹೊರಬೀಳುತ್ತಿದ್ದಂತೆ ಕನ್ನಡದ ಬಹುತೇಕ ಮಾಧ್ಯಮಗಳು ಕಾಶೀನಾಥ್ ನಾಯ್ಕ್‌ ವಿರುದ್ಧ ಕಿಡಿಕಾರಿದ್ದವು. ಪತ್ರಕರ್ತರು ಸೇರಿದಂತೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಕಾಶಿನಾಥ್‌ರನ್ನು ಟೀಕಿಸಿದ್ದರು. ಆ ಸಂದರ್ಭದಲ್ಲಿ ನಾನುಗೌರಿ.ಕಾಂ ಕಾಶೀನಾಥ್ ನಾಯ್ಕ್‌ ರವರನ್ನು ಸಂಪರ್ಕಿಸಿ ಅವರ ಕ್ರೀಡಾಸಾಧನೆ, ಕೋಚ್ ಆಗಿ ಕೆಲಸ ಮಾಡಿದ್ದರ ಕುರಿತು ವಿವರವಾದ ವರದಿ ಪ್ರಕಟಿಸಿತ್ತು. ಅದನ್ನು ಇಲ್ಲಿ ಓದಬಹುದು.

2000 ದಲ್ಲಿ ದೇಶ ಸೇವೆಗೆ ಸೈನಿಕರಾಗಿ ಸೇರಿದ್ದ ಕಾಶಿನಾಥ್‌ ನಾಯ್ಕರವರು 2010ರಲ್ಲಿ ನವದೆಹಲಿಯಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಜಾವೆಲಿನ್ ಎಸೆತದಲ್ಲಿ ಕಂಚಿನ ಪದಕ ಪಡೆದು ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಇವರಿಗೆ ರಾಜ್ಯೋತ್ಸವ ಪ್ರಶಸ್ತಿ, ಏಕಲವ್ಯ ಪ್ರಶಸ್ತಿ ಸಂದಿವೆ. 2015 ರಿಂದ 2017ರವರೆಗೆ ನೀರಜ್ ಚೋಪ್ರಾಗೆ ಸಹಾಯಕ ಕೋಚ್ ಆಗಿ ಕೆಲಸ ಮಾಡಿದ್ದಾರೆ.

“ನಾನು ಯಾರು ಅಂತ ಗೊತ್ತಿಲ್ಲವೆಂದು ಅದಿಲ್ಲೆ ಸುಮರಿವಾಲಾ ಹೇಳಿದ್ದಾರೆ. ಹಾಗಾದರೆ ನಾನು ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆದ್ದಿದ್ದು ಸುಳ್ಳೇ? 2015 ರಿಂದ 2017ರ ವರೆಗೆ ಪಟಿಯಾಲದಲ್ಲಿ ನಾನು ಚೋಪ್ರಾಗೆ ಸಹಾಯಕ ಕೋಚ್ ಆಗಿ ಕೆಲಸ ಮಾಡಿದ್ದೇನೆ. ಈ ಮಧ್ಯೆ 2016ರಲ್ಲಿ ವಿದೇಶಿ ಕೋಚ್ ಗ್ಯಾರಿ ಕ್ಯಾಲ್ವರ್ಟ್ ನೇಮಕವಾದರು. ಆಗ ನಾವೆಲ್ಲರೂ ಪೋಲಾಂಡ್‌ಗೆ ತೆರಳಿ 20 ವರ್ಷದೊಳಗಿನ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ್ದಾಗ ನೀರಜ್ ಚಿನ್ನ ಗೆದ್ದಿದ್ದರು” ಎಂದು ಕಾಶಿನಾಥ್ ಹೇಳಿದ್ದರು.

ಇಂತಹ ಅಪ್ರತಿಮ ಸಾಧನೆಗೈದ ಕಾಶಿನಾಥ್‌ರವರ ಪುಣೆಯಲ್ಲಿನ ಮನೆಗೆ ನೀರಜ್ ಚೋಪ್ರಾ ಭೇಟಿ ನೀಡಿ ಗುರುಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಕಾಶಿನಾಥ್‌ರವರ ಮಕ್ಕಳನ್ನು ಎತ್ತಿಕೊಂಡು ಮುದ್ದಿಸಿದ್ದಾರೆ. ಕಾಶಿನಾಥ್ ಕುಟುಂಬದ ಜೊತೆ ಫೋಟೊ ತೆಗೆದುಕೊಂಡಿದ್ದಾರೆ. ಯಾವುದೇ ಅಹಂಭಾವವಿಲ್ಲದೇ ಗುರುಗಳ ಜೊತೆ ಪ್ರೀತಿಯಿಂದ ಬೆರೆತಿದ್ದಾರೆ. ಈ ಎಲ್ಲಾ ಫೋಟೊಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅಲ್ಲದೇ ಕಾಶಿನಾಥ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದವರ ಬಾಯಿ ಮುಚ್ಚಿಸಿವೆ.

ಆಗಸ್ಟ್ 24ರ ಮಧ್ಯಾಹ್ನ ನೀರಜ್ ಚೋಪ್ರಾ ಕಾಶೀನಾಥ್ ನಾಯ್ಕ್‌ರವರ ಮನೆಗೆ ಭೇಟಿ ನೀಡಿದಾಗ ಕಾಶಿನಾಥ್‌ರವರ ಪತ್ನಿ ಚೈತ್ರಾ ಆರತಿ ಬೆಳಗಿ, ಹಣೆಗೆ ತಿಲಕವಿಟ್ಟು ಸ್ವಾಗತಿಸಿದ್ದಾರೆ. ನೀರಜ್ ಅಂತೂ ಮನೆಯೊಳಗೆ ಬಂದ ಕೂಡಲೇ ಮನೆಯೊಳಗಿದ್ದ ಲ್ಯಾಬ್ರೊಡರ್ ನಾಯಿಯ ತಲೆ ಸವರಿ ಮುದ್ದು ಮಾಡಿದ್ದಾರೆ. ನಂತರ ಮಕ್ಕಳನ್ನು ಎತ್ತುಕೊಂಡಿದ್ದಾರೆ.

ಒಟ್ಟಿನಲ್ಲಿ ಕೆಲವರು ಸತ್ಯಾಸತ್ಯತೆ ಪರಿಶೀಲಿಸದೆ, ಅಥ್ಲೆಟಿಕ್ಸ್ ಅಧ್ಯಕ್ಷರ ಹೇಳಿಕೆ ಇಟ್ಟುಕೊಂಡು ಕಾಶಿನಾಥ್ ನಾಯ್ಕ್‌ರನ್ನು ಟೀಕಿಸಿದ್ದರು. ಅದಕ್ಕೆ ಸ್ವತಃ ನೀರಜ್ ಚೋಪ್ರಾ ಸ್ಪಷ್ಟ ಉತ್ತರ ಕೊಟ್ಟಿದ್ದಾರೆ. ಆ ಮೂಲಕ ಗುರುಗಳ ಗೌರವ ಹೆಚ್ಚಿಸಿದ್ದಾರೆ.


ಇದನ್ನೂ ಓದಿ: ನಾನು ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆದ್ದಿದ್ದು ಸುಳ್ಳೇ? ನೀರಜ್ ಚೋಪ್ರಾ ಮಾಜಿ ಕೋಚ್ ಕನ್ನಡಿಗ ಕಾಶಿನಾಥ್ ನಾಯ್ಕ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...