Homeಮುಖಪುಟಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ಕೆಲವರು ಸತ್ಯಾಸತ್ಯತೆ ಪರಿಶೀಲಿಸದೆ, ಅಥ್ಲೆಟಿಕ್ಸ್ ಅಧ್ಯಕ್ಷರ ಹೇಳಿಕೆ ಇಟ್ಟುಕೊಂಡು ಕಾಶಿನಾಥ್ ನಾಯ್ಕ್‌ರನ್ನು ಟೀಕಿಸಿದ್ದರು. ಅದಕ್ಕೆ ಸ್ವತಃ ನೀರಜ್ ಚೋಪ್ರಾ ಸ್ಪಷ್ಟ ಉತ್ತರ ಕೊಟ್ಟಿದ್ದಾರೆ.

- Advertisement -
- Advertisement -

ಒಲಿಂಪಿಕ್ಸ್‌ನಲ್ಲಿ ಚಿನ್ನಗೆದ್ದ ನೀರಜ್ ಚೋಪ್ರಾಗೆ ಕಾಶೀನಾಥ್ ನಾಯ್ಕ್‌ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶೀನಾಥ್ ನಾಯ್ಕ್‌ ಯಾರು ಎಂಬುದೇ ನಮಗೆ ಗೊತ್ತಿಲ್ಲ ಎಂಬ ಅಥ್ಲೆಟಿಕ್ಸ್ ಫೆಡರೇಷನ್ ಅಧ್ಯಕ್ಷ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆ ಮೂಲಕ ಎರಡು ವರ್ಷಗಳ ಕಾಲ ನೀರಜ್‌ ಚೋಪ್ರಾಗೆ ಕೋಚ್ ಆಗಿ ತರಬೇತಿ ನೀಡಿದ್ದ ಕನ್ನಡಿಗ ಕಾಶೀನಾಥ್‌ರನ್ನು ಅವಮಾನಿಸಲಾಗಿತ್ತು. ಈಗ ಕಾಶಿನಾಥ್ ಮನೆಗೆ ಚಿನ್ನದ ಹುಡುಗ ನೀರಜ್ ಚೋಪ್ರಾ ಭೇಟಿ ನೀಡುವ ಮೂಲಕ ವಿವಾದಗಳಿಗೆ ತೆರೆ ಎಳೆದಿದ್ದಾರೆ ಮತ್ತು ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.

ಅತ್ತ ಟೋಕಿಯೋದಲ್ಲಿ ಜಾವಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಚಿನ್ನ ಗೆಲ್ಲುತ್ತಿದ್ದಂತೆ ಇತ್ತ ಅವರಿಗೆ ಕೋಚ್ ಆಗಿ ಕೆಲಸ ಮಾಡಿದ್ದ ಎಲ್ಲರನ್ನು ಶ್ಲಾಘಿಸಲಾಗಿತ್ತು. 2015 ರಿಂದ 2017ರವರೆಗೆ ನೀರಜ್‌ಗೆ ಕೋಚ್ ಆಗಿದ್ದ ಕನ್ನಡಿಗ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಬೆಂಗಳೆ ಗ್ರಾಮದ ಕಾಶೀನಾಥ್ ನಾಯ್ಕ್‌ರವರನ್ನು ಸ್ಮರಿಸಲಾಗಿತ್ತು. ಅವರ ಸಾಧನೆ ಗುರುತಿಸಿ ಅವರಿಗೆ ರಾಜ್ಯದ ಕ್ರೀಡಾ ಸಚಿವರು 10 ಲಕ್ಷ ರೂ ಗಳ ಬಹುಮಾನ ಘೋಷಿಸಿದ್ದರು.

ಆದರೆ ಅವರ ವಿರುದ್ದ ಅಪಪ್ರಚಾರ ಸಹ ಅದೇ ಸಮಯದಲ್ಲಿ ಶುರುವಾಗಿತ್ತು. ಅವರಿಗೆ 10 ಲಕ್ಷ ಬಹುಮಾನ ಘೋಷಿಸಿದ್ದಕ್ಕೆ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷ ಅದಿಲ್ಲೆ ಸುಮರಿವಾಲಾ ಆಕ್ಷೇಪ ವ್ಯಕ್ತಪಡಿಸಿದ್ದರು. “ನೀರಜ್ ಚೋಪ್ರಾಗೆ ಕಾಶೀನಾಥ್ ನಾಯ್ಕ್‌ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶೀನಾಥ್ ಯಾರು ಎಂಬುದೇ ನಮಗೆ ಗೊತ್ತಿಲ್ಲ. ಅವರಿಗೆ ಕರ್ನಾಟಕ ಸರ್ಕಾರ 10 ರೂ ಲಕ್ಷ ರೂ ಬಹುಮಾನ ಘೋಷಿಸಿರುವುದು ತಿಳಿದುಬಂದಿದೆ. ಅಧಿಕೃತ ಪತ್ರ ತಲುಪಿದಾಗ ಅದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತೇವೆ” ಎಂದು  ಸುಮರಿವಾಲಾ ಹೇಳಿಕೆ ನೀಡಿದ್ದರು.

ಈ ಹೇಳಿಕೆ ಹೊರಬೀಳುತ್ತಿದ್ದಂತೆ ಕನ್ನಡದ ಬಹುತೇಕ ಮಾಧ್ಯಮಗಳು ಕಾಶೀನಾಥ್ ನಾಯ್ಕ್‌ ವಿರುದ್ಧ ಕಿಡಿಕಾರಿದ್ದವು. ಪತ್ರಕರ್ತರು ಸೇರಿದಂತೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಕಾಶಿನಾಥ್‌ರನ್ನು ಟೀಕಿಸಿದ್ದರು. ಆ ಸಂದರ್ಭದಲ್ಲಿ ನಾನುಗೌರಿ.ಕಾಂ ಕಾಶೀನಾಥ್ ನಾಯ್ಕ್‌ ರವರನ್ನು ಸಂಪರ್ಕಿಸಿ ಅವರ ಕ್ರೀಡಾಸಾಧನೆ, ಕೋಚ್ ಆಗಿ ಕೆಲಸ ಮಾಡಿದ್ದರ ಕುರಿತು ವಿವರವಾದ ವರದಿ ಪ್ರಕಟಿಸಿತ್ತು. ಅದನ್ನು ಇಲ್ಲಿ ಓದಬಹುದು.

2000 ದಲ್ಲಿ ದೇಶ ಸೇವೆಗೆ ಸೈನಿಕರಾಗಿ ಸೇರಿದ್ದ ಕಾಶಿನಾಥ್‌ ನಾಯ್ಕರವರು 2010ರಲ್ಲಿ ನವದೆಹಲಿಯಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಜಾವೆಲಿನ್ ಎಸೆತದಲ್ಲಿ ಕಂಚಿನ ಪದಕ ಪಡೆದು ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಇವರಿಗೆ ರಾಜ್ಯೋತ್ಸವ ಪ್ರಶಸ್ತಿ, ಏಕಲವ್ಯ ಪ್ರಶಸ್ತಿ ಸಂದಿವೆ. 2015 ರಿಂದ 2017ರವರೆಗೆ ನೀರಜ್ ಚೋಪ್ರಾಗೆ ಸಹಾಯಕ ಕೋಚ್ ಆಗಿ ಕೆಲಸ ಮಾಡಿದ್ದಾರೆ.

“ನಾನು ಯಾರು ಅಂತ ಗೊತ್ತಿಲ್ಲವೆಂದು ಅದಿಲ್ಲೆ ಸುಮರಿವಾಲಾ ಹೇಳಿದ್ದಾರೆ. ಹಾಗಾದರೆ ನಾನು ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆದ್ದಿದ್ದು ಸುಳ್ಳೇ? 2015 ರಿಂದ 2017ರ ವರೆಗೆ ಪಟಿಯಾಲದಲ್ಲಿ ನಾನು ಚೋಪ್ರಾಗೆ ಸಹಾಯಕ ಕೋಚ್ ಆಗಿ ಕೆಲಸ ಮಾಡಿದ್ದೇನೆ. ಈ ಮಧ್ಯೆ 2016ರಲ್ಲಿ ವಿದೇಶಿ ಕೋಚ್ ಗ್ಯಾರಿ ಕ್ಯಾಲ್ವರ್ಟ್ ನೇಮಕವಾದರು. ಆಗ ನಾವೆಲ್ಲರೂ ಪೋಲಾಂಡ್‌ಗೆ ತೆರಳಿ 20 ವರ್ಷದೊಳಗಿನ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ್ದಾಗ ನೀರಜ್ ಚಿನ್ನ ಗೆದ್ದಿದ್ದರು” ಎಂದು ಕಾಶಿನಾಥ್ ಹೇಳಿದ್ದರು.

ಇಂತಹ ಅಪ್ರತಿಮ ಸಾಧನೆಗೈದ ಕಾಶಿನಾಥ್‌ರವರ ಪುಣೆಯಲ್ಲಿನ ಮನೆಗೆ ನೀರಜ್ ಚೋಪ್ರಾ ಭೇಟಿ ನೀಡಿ ಗುರುಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಕಾಶಿನಾಥ್‌ರವರ ಮಕ್ಕಳನ್ನು ಎತ್ತಿಕೊಂಡು ಮುದ್ದಿಸಿದ್ದಾರೆ. ಕಾಶಿನಾಥ್ ಕುಟುಂಬದ ಜೊತೆ ಫೋಟೊ ತೆಗೆದುಕೊಂಡಿದ್ದಾರೆ. ಯಾವುದೇ ಅಹಂಭಾವವಿಲ್ಲದೇ ಗುರುಗಳ ಜೊತೆ ಪ್ರೀತಿಯಿಂದ ಬೆರೆತಿದ್ದಾರೆ. ಈ ಎಲ್ಲಾ ಫೋಟೊಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅಲ್ಲದೇ ಕಾಶಿನಾಥ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದವರ ಬಾಯಿ ಮುಚ್ಚಿಸಿವೆ.

ಆಗಸ್ಟ್ 24ರ ಮಧ್ಯಾಹ್ನ ನೀರಜ್ ಚೋಪ್ರಾ ಕಾಶೀನಾಥ್ ನಾಯ್ಕ್‌ರವರ ಮನೆಗೆ ಭೇಟಿ ನೀಡಿದಾಗ ಕಾಶಿನಾಥ್‌ರವರ ಪತ್ನಿ ಚೈತ್ರಾ ಆರತಿ ಬೆಳಗಿ, ಹಣೆಗೆ ತಿಲಕವಿಟ್ಟು ಸ್ವಾಗತಿಸಿದ್ದಾರೆ. ನೀರಜ್ ಅಂತೂ ಮನೆಯೊಳಗೆ ಬಂದ ಕೂಡಲೇ ಮನೆಯೊಳಗಿದ್ದ ಲ್ಯಾಬ್ರೊಡರ್ ನಾಯಿಯ ತಲೆ ಸವರಿ ಮುದ್ದು ಮಾಡಿದ್ದಾರೆ. ನಂತರ ಮಕ್ಕಳನ್ನು ಎತ್ತುಕೊಂಡಿದ್ದಾರೆ.

ಒಟ್ಟಿನಲ್ಲಿ ಕೆಲವರು ಸತ್ಯಾಸತ್ಯತೆ ಪರಿಶೀಲಿಸದೆ, ಅಥ್ಲೆಟಿಕ್ಸ್ ಅಧ್ಯಕ್ಷರ ಹೇಳಿಕೆ ಇಟ್ಟುಕೊಂಡು ಕಾಶಿನಾಥ್ ನಾಯ್ಕ್‌ರನ್ನು ಟೀಕಿಸಿದ್ದರು. ಅದಕ್ಕೆ ಸ್ವತಃ ನೀರಜ್ ಚೋಪ್ರಾ ಸ್ಪಷ್ಟ ಉತ್ತರ ಕೊಟ್ಟಿದ್ದಾರೆ. ಆ ಮೂಲಕ ಗುರುಗಳ ಗೌರವ ಹೆಚ್ಚಿಸಿದ್ದಾರೆ.


ಇದನ್ನೂ ಓದಿ: ನಾನು ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆದ್ದಿದ್ದು ಸುಳ್ಳೇ? ನೀರಜ್ ಚೋಪ್ರಾ ಮಾಜಿ ಕೋಚ್ ಕನ್ನಡಿಗ ಕಾಶಿನಾಥ್ ನಾಯ್ಕ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...