Homeಮುಖಪುಟಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ಕೆಲವರು ಸತ್ಯಾಸತ್ಯತೆ ಪರಿಶೀಲಿಸದೆ, ಅಥ್ಲೆಟಿಕ್ಸ್ ಅಧ್ಯಕ್ಷರ ಹೇಳಿಕೆ ಇಟ್ಟುಕೊಂಡು ಕಾಶಿನಾಥ್ ನಾಯ್ಕ್‌ರನ್ನು ಟೀಕಿಸಿದ್ದರು. ಅದಕ್ಕೆ ಸ್ವತಃ ನೀರಜ್ ಚೋಪ್ರಾ ಸ್ಪಷ್ಟ ಉತ್ತರ ಕೊಟ್ಟಿದ್ದಾರೆ.

- Advertisement -
- Advertisement -

ಒಲಿಂಪಿಕ್ಸ್‌ನಲ್ಲಿ ಚಿನ್ನಗೆದ್ದ ನೀರಜ್ ಚೋಪ್ರಾಗೆ ಕಾಶೀನಾಥ್ ನಾಯ್ಕ್‌ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶೀನಾಥ್ ನಾಯ್ಕ್‌ ಯಾರು ಎಂಬುದೇ ನಮಗೆ ಗೊತ್ತಿಲ್ಲ ಎಂಬ ಅಥ್ಲೆಟಿಕ್ಸ್ ಫೆಡರೇಷನ್ ಅಧ್ಯಕ್ಷ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆ ಮೂಲಕ ಎರಡು ವರ್ಷಗಳ ಕಾಲ ನೀರಜ್‌ ಚೋಪ್ರಾಗೆ ಕೋಚ್ ಆಗಿ ತರಬೇತಿ ನೀಡಿದ್ದ ಕನ್ನಡಿಗ ಕಾಶೀನಾಥ್‌ರನ್ನು ಅವಮಾನಿಸಲಾಗಿತ್ತು. ಈಗ ಕಾಶಿನಾಥ್ ಮನೆಗೆ ಚಿನ್ನದ ಹುಡುಗ ನೀರಜ್ ಚೋಪ್ರಾ ಭೇಟಿ ನೀಡುವ ಮೂಲಕ ವಿವಾದಗಳಿಗೆ ತೆರೆ ಎಳೆದಿದ್ದಾರೆ ಮತ್ತು ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.

ಅತ್ತ ಟೋಕಿಯೋದಲ್ಲಿ ಜಾವಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಚಿನ್ನ ಗೆಲ್ಲುತ್ತಿದ್ದಂತೆ ಇತ್ತ ಅವರಿಗೆ ಕೋಚ್ ಆಗಿ ಕೆಲಸ ಮಾಡಿದ್ದ ಎಲ್ಲರನ್ನು ಶ್ಲಾಘಿಸಲಾಗಿತ್ತು. 2015 ರಿಂದ 2017ರವರೆಗೆ ನೀರಜ್‌ಗೆ ಕೋಚ್ ಆಗಿದ್ದ ಕನ್ನಡಿಗ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಬೆಂಗಳೆ ಗ್ರಾಮದ ಕಾಶೀನಾಥ್ ನಾಯ್ಕ್‌ರವರನ್ನು ಸ್ಮರಿಸಲಾಗಿತ್ತು. ಅವರ ಸಾಧನೆ ಗುರುತಿಸಿ ಅವರಿಗೆ ರಾಜ್ಯದ ಕ್ರೀಡಾ ಸಚಿವರು 10 ಲಕ್ಷ ರೂ ಗಳ ಬಹುಮಾನ ಘೋಷಿಸಿದ್ದರು.

ಆದರೆ ಅವರ ವಿರುದ್ದ ಅಪಪ್ರಚಾರ ಸಹ ಅದೇ ಸಮಯದಲ್ಲಿ ಶುರುವಾಗಿತ್ತು. ಅವರಿಗೆ 10 ಲಕ್ಷ ಬಹುಮಾನ ಘೋಷಿಸಿದ್ದಕ್ಕೆ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷ ಅದಿಲ್ಲೆ ಸುಮರಿವಾಲಾ ಆಕ್ಷೇಪ ವ್ಯಕ್ತಪಡಿಸಿದ್ದರು. “ನೀರಜ್ ಚೋಪ್ರಾಗೆ ಕಾಶೀನಾಥ್ ನಾಯ್ಕ್‌ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶೀನಾಥ್ ಯಾರು ಎಂಬುದೇ ನಮಗೆ ಗೊತ್ತಿಲ್ಲ. ಅವರಿಗೆ ಕರ್ನಾಟಕ ಸರ್ಕಾರ 10 ರೂ ಲಕ್ಷ ರೂ ಬಹುಮಾನ ಘೋಷಿಸಿರುವುದು ತಿಳಿದುಬಂದಿದೆ. ಅಧಿಕೃತ ಪತ್ರ ತಲುಪಿದಾಗ ಅದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತೇವೆ” ಎಂದು  ಸುಮರಿವಾಲಾ ಹೇಳಿಕೆ ನೀಡಿದ್ದರು.

ಈ ಹೇಳಿಕೆ ಹೊರಬೀಳುತ್ತಿದ್ದಂತೆ ಕನ್ನಡದ ಬಹುತೇಕ ಮಾಧ್ಯಮಗಳು ಕಾಶೀನಾಥ್ ನಾಯ್ಕ್‌ ವಿರುದ್ಧ ಕಿಡಿಕಾರಿದ್ದವು. ಪತ್ರಕರ್ತರು ಸೇರಿದಂತೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಕಾಶಿನಾಥ್‌ರನ್ನು ಟೀಕಿಸಿದ್ದರು. ಆ ಸಂದರ್ಭದಲ್ಲಿ ನಾನುಗೌರಿ.ಕಾಂ ಕಾಶೀನಾಥ್ ನಾಯ್ಕ್‌ ರವರನ್ನು ಸಂಪರ್ಕಿಸಿ ಅವರ ಕ್ರೀಡಾಸಾಧನೆ, ಕೋಚ್ ಆಗಿ ಕೆಲಸ ಮಾಡಿದ್ದರ ಕುರಿತು ವಿವರವಾದ ವರದಿ ಪ್ರಕಟಿಸಿತ್ತು. ಅದನ್ನು ಇಲ್ಲಿ ಓದಬಹುದು.

2000 ದಲ್ಲಿ ದೇಶ ಸೇವೆಗೆ ಸೈನಿಕರಾಗಿ ಸೇರಿದ್ದ ಕಾಶಿನಾಥ್‌ ನಾಯ್ಕರವರು 2010ರಲ್ಲಿ ನವದೆಹಲಿಯಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಜಾವೆಲಿನ್ ಎಸೆತದಲ್ಲಿ ಕಂಚಿನ ಪದಕ ಪಡೆದು ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಇವರಿಗೆ ರಾಜ್ಯೋತ್ಸವ ಪ್ರಶಸ್ತಿ, ಏಕಲವ್ಯ ಪ್ರಶಸ್ತಿ ಸಂದಿವೆ. 2015 ರಿಂದ 2017ರವರೆಗೆ ನೀರಜ್ ಚೋಪ್ರಾಗೆ ಸಹಾಯಕ ಕೋಚ್ ಆಗಿ ಕೆಲಸ ಮಾಡಿದ್ದಾರೆ.

“ನಾನು ಯಾರು ಅಂತ ಗೊತ್ತಿಲ್ಲವೆಂದು ಅದಿಲ್ಲೆ ಸುಮರಿವಾಲಾ ಹೇಳಿದ್ದಾರೆ. ಹಾಗಾದರೆ ನಾನು ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆದ್ದಿದ್ದು ಸುಳ್ಳೇ? 2015 ರಿಂದ 2017ರ ವರೆಗೆ ಪಟಿಯಾಲದಲ್ಲಿ ನಾನು ಚೋಪ್ರಾಗೆ ಸಹಾಯಕ ಕೋಚ್ ಆಗಿ ಕೆಲಸ ಮಾಡಿದ್ದೇನೆ. ಈ ಮಧ್ಯೆ 2016ರಲ್ಲಿ ವಿದೇಶಿ ಕೋಚ್ ಗ್ಯಾರಿ ಕ್ಯಾಲ್ವರ್ಟ್ ನೇಮಕವಾದರು. ಆಗ ನಾವೆಲ್ಲರೂ ಪೋಲಾಂಡ್‌ಗೆ ತೆರಳಿ 20 ವರ್ಷದೊಳಗಿನ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ್ದಾಗ ನೀರಜ್ ಚಿನ್ನ ಗೆದ್ದಿದ್ದರು” ಎಂದು ಕಾಶಿನಾಥ್ ಹೇಳಿದ್ದರು.

ಇಂತಹ ಅಪ್ರತಿಮ ಸಾಧನೆಗೈದ ಕಾಶಿನಾಥ್‌ರವರ ಪುಣೆಯಲ್ಲಿನ ಮನೆಗೆ ನೀರಜ್ ಚೋಪ್ರಾ ಭೇಟಿ ನೀಡಿ ಗುರುಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಕಾಶಿನಾಥ್‌ರವರ ಮಕ್ಕಳನ್ನು ಎತ್ತಿಕೊಂಡು ಮುದ್ದಿಸಿದ್ದಾರೆ. ಕಾಶಿನಾಥ್ ಕುಟುಂಬದ ಜೊತೆ ಫೋಟೊ ತೆಗೆದುಕೊಂಡಿದ್ದಾರೆ. ಯಾವುದೇ ಅಹಂಭಾವವಿಲ್ಲದೇ ಗುರುಗಳ ಜೊತೆ ಪ್ರೀತಿಯಿಂದ ಬೆರೆತಿದ್ದಾರೆ. ಈ ಎಲ್ಲಾ ಫೋಟೊಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅಲ್ಲದೇ ಕಾಶಿನಾಥ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದವರ ಬಾಯಿ ಮುಚ್ಚಿಸಿವೆ.

ಆಗಸ್ಟ್ 24ರ ಮಧ್ಯಾಹ್ನ ನೀರಜ್ ಚೋಪ್ರಾ ಕಾಶೀನಾಥ್ ನಾಯ್ಕ್‌ರವರ ಮನೆಗೆ ಭೇಟಿ ನೀಡಿದಾಗ ಕಾಶಿನಾಥ್‌ರವರ ಪತ್ನಿ ಚೈತ್ರಾ ಆರತಿ ಬೆಳಗಿ, ಹಣೆಗೆ ತಿಲಕವಿಟ್ಟು ಸ್ವಾಗತಿಸಿದ್ದಾರೆ. ನೀರಜ್ ಅಂತೂ ಮನೆಯೊಳಗೆ ಬಂದ ಕೂಡಲೇ ಮನೆಯೊಳಗಿದ್ದ ಲ್ಯಾಬ್ರೊಡರ್ ನಾಯಿಯ ತಲೆ ಸವರಿ ಮುದ್ದು ಮಾಡಿದ್ದಾರೆ. ನಂತರ ಮಕ್ಕಳನ್ನು ಎತ್ತುಕೊಂಡಿದ್ದಾರೆ.

ಒಟ್ಟಿನಲ್ಲಿ ಕೆಲವರು ಸತ್ಯಾಸತ್ಯತೆ ಪರಿಶೀಲಿಸದೆ, ಅಥ್ಲೆಟಿಕ್ಸ್ ಅಧ್ಯಕ್ಷರ ಹೇಳಿಕೆ ಇಟ್ಟುಕೊಂಡು ಕಾಶಿನಾಥ್ ನಾಯ್ಕ್‌ರನ್ನು ಟೀಕಿಸಿದ್ದರು. ಅದಕ್ಕೆ ಸ್ವತಃ ನೀರಜ್ ಚೋಪ್ರಾ ಸ್ಪಷ್ಟ ಉತ್ತರ ಕೊಟ್ಟಿದ್ದಾರೆ. ಆ ಮೂಲಕ ಗುರುಗಳ ಗೌರವ ಹೆಚ್ಚಿಸಿದ್ದಾರೆ.


ಇದನ್ನೂ ಓದಿ: ನಾನು ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆದ್ದಿದ್ದು ಸುಳ್ಳೇ? ನೀರಜ್ ಚೋಪ್ರಾ ಮಾಜಿ ಕೋಚ್ ಕನ್ನಡಿಗ ಕಾಶಿನಾಥ್ ನಾಯ್ಕ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...