Homeಮುಖಪುಟಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ಕೆಲವರು ಸತ್ಯಾಸತ್ಯತೆ ಪರಿಶೀಲಿಸದೆ, ಅಥ್ಲೆಟಿಕ್ಸ್ ಅಧ್ಯಕ್ಷರ ಹೇಳಿಕೆ ಇಟ್ಟುಕೊಂಡು ಕಾಶಿನಾಥ್ ನಾಯ್ಕ್‌ರನ್ನು ಟೀಕಿಸಿದ್ದರು. ಅದಕ್ಕೆ ಸ್ವತಃ ನೀರಜ್ ಚೋಪ್ರಾ ಸ್ಪಷ್ಟ ಉತ್ತರ ಕೊಟ್ಟಿದ್ದಾರೆ.

- Advertisement -
- Advertisement -

ಒಲಿಂಪಿಕ್ಸ್‌ನಲ್ಲಿ ಚಿನ್ನಗೆದ್ದ ನೀರಜ್ ಚೋಪ್ರಾಗೆ ಕಾಶೀನಾಥ್ ನಾಯ್ಕ್‌ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶೀನಾಥ್ ನಾಯ್ಕ್‌ ಯಾರು ಎಂಬುದೇ ನಮಗೆ ಗೊತ್ತಿಲ್ಲ ಎಂಬ ಅಥ್ಲೆಟಿಕ್ಸ್ ಫೆಡರೇಷನ್ ಅಧ್ಯಕ್ಷ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆ ಮೂಲಕ ಎರಡು ವರ್ಷಗಳ ಕಾಲ ನೀರಜ್‌ ಚೋಪ್ರಾಗೆ ಕೋಚ್ ಆಗಿ ತರಬೇತಿ ನೀಡಿದ್ದ ಕನ್ನಡಿಗ ಕಾಶೀನಾಥ್‌ರನ್ನು ಅವಮಾನಿಸಲಾಗಿತ್ತು. ಈಗ ಕಾಶಿನಾಥ್ ಮನೆಗೆ ಚಿನ್ನದ ಹುಡುಗ ನೀರಜ್ ಚೋಪ್ರಾ ಭೇಟಿ ನೀಡುವ ಮೂಲಕ ವಿವಾದಗಳಿಗೆ ತೆರೆ ಎಳೆದಿದ್ದಾರೆ ಮತ್ತು ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.

ಅತ್ತ ಟೋಕಿಯೋದಲ್ಲಿ ಜಾವಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಚಿನ್ನ ಗೆಲ್ಲುತ್ತಿದ್ದಂತೆ ಇತ್ತ ಅವರಿಗೆ ಕೋಚ್ ಆಗಿ ಕೆಲಸ ಮಾಡಿದ್ದ ಎಲ್ಲರನ್ನು ಶ್ಲಾಘಿಸಲಾಗಿತ್ತು. 2015 ರಿಂದ 2017ರವರೆಗೆ ನೀರಜ್‌ಗೆ ಕೋಚ್ ಆಗಿದ್ದ ಕನ್ನಡಿಗ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಬೆಂಗಳೆ ಗ್ರಾಮದ ಕಾಶೀನಾಥ್ ನಾಯ್ಕ್‌ರವರನ್ನು ಸ್ಮರಿಸಲಾಗಿತ್ತು. ಅವರ ಸಾಧನೆ ಗುರುತಿಸಿ ಅವರಿಗೆ ರಾಜ್ಯದ ಕ್ರೀಡಾ ಸಚಿವರು 10 ಲಕ್ಷ ರೂ ಗಳ ಬಹುಮಾನ ಘೋಷಿಸಿದ್ದರು.

ಆದರೆ ಅವರ ವಿರುದ್ದ ಅಪಪ್ರಚಾರ ಸಹ ಅದೇ ಸಮಯದಲ್ಲಿ ಶುರುವಾಗಿತ್ತು. ಅವರಿಗೆ 10 ಲಕ್ಷ ಬಹುಮಾನ ಘೋಷಿಸಿದ್ದಕ್ಕೆ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷ ಅದಿಲ್ಲೆ ಸುಮರಿವಾಲಾ ಆಕ್ಷೇಪ ವ್ಯಕ್ತಪಡಿಸಿದ್ದರು. “ನೀರಜ್ ಚೋಪ್ರಾಗೆ ಕಾಶೀನಾಥ್ ನಾಯ್ಕ್‌ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶೀನಾಥ್ ಯಾರು ಎಂಬುದೇ ನಮಗೆ ಗೊತ್ತಿಲ್ಲ. ಅವರಿಗೆ ಕರ್ನಾಟಕ ಸರ್ಕಾರ 10 ರೂ ಲಕ್ಷ ರೂ ಬಹುಮಾನ ಘೋಷಿಸಿರುವುದು ತಿಳಿದುಬಂದಿದೆ. ಅಧಿಕೃತ ಪತ್ರ ತಲುಪಿದಾಗ ಅದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತೇವೆ” ಎಂದು  ಸುಮರಿವಾಲಾ ಹೇಳಿಕೆ ನೀಡಿದ್ದರು.

ಈ ಹೇಳಿಕೆ ಹೊರಬೀಳುತ್ತಿದ್ದಂತೆ ಕನ್ನಡದ ಬಹುತೇಕ ಮಾಧ್ಯಮಗಳು ಕಾಶೀನಾಥ್ ನಾಯ್ಕ್‌ ವಿರುದ್ಧ ಕಿಡಿಕಾರಿದ್ದವು. ಪತ್ರಕರ್ತರು ಸೇರಿದಂತೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಕಾಶಿನಾಥ್‌ರನ್ನು ಟೀಕಿಸಿದ್ದರು. ಆ ಸಂದರ್ಭದಲ್ಲಿ ನಾನುಗೌರಿ.ಕಾಂ ಕಾಶೀನಾಥ್ ನಾಯ್ಕ್‌ ರವರನ್ನು ಸಂಪರ್ಕಿಸಿ ಅವರ ಕ್ರೀಡಾಸಾಧನೆ, ಕೋಚ್ ಆಗಿ ಕೆಲಸ ಮಾಡಿದ್ದರ ಕುರಿತು ವಿವರವಾದ ವರದಿ ಪ್ರಕಟಿಸಿತ್ತು. ಅದನ್ನು ಇಲ್ಲಿ ಓದಬಹುದು.

2000 ದಲ್ಲಿ ದೇಶ ಸೇವೆಗೆ ಸೈನಿಕರಾಗಿ ಸೇರಿದ್ದ ಕಾಶಿನಾಥ್‌ ನಾಯ್ಕರವರು 2010ರಲ್ಲಿ ನವದೆಹಲಿಯಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಜಾವೆಲಿನ್ ಎಸೆತದಲ್ಲಿ ಕಂಚಿನ ಪದಕ ಪಡೆದು ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಇವರಿಗೆ ರಾಜ್ಯೋತ್ಸವ ಪ್ರಶಸ್ತಿ, ಏಕಲವ್ಯ ಪ್ರಶಸ್ತಿ ಸಂದಿವೆ. 2015 ರಿಂದ 2017ರವರೆಗೆ ನೀರಜ್ ಚೋಪ್ರಾಗೆ ಸಹಾಯಕ ಕೋಚ್ ಆಗಿ ಕೆಲಸ ಮಾಡಿದ್ದಾರೆ.

“ನಾನು ಯಾರು ಅಂತ ಗೊತ್ತಿಲ್ಲವೆಂದು ಅದಿಲ್ಲೆ ಸುಮರಿವಾಲಾ ಹೇಳಿದ್ದಾರೆ. ಹಾಗಾದರೆ ನಾನು ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆದ್ದಿದ್ದು ಸುಳ್ಳೇ? 2015 ರಿಂದ 2017ರ ವರೆಗೆ ಪಟಿಯಾಲದಲ್ಲಿ ನಾನು ಚೋಪ್ರಾಗೆ ಸಹಾಯಕ ಕೋಚ್ ಆಗಿ ಕೆಲಸ ಮಾಡಿದ್ದೇನೆ. ಈ ಮಧ್ಯೆ 2016ರಲ್ಲಿ ವಿದೇಶಿ ಕೋಚ್ ಗ್ಯಾರಿ ಕ್ಯಾಲ್ವರ್ಟ್ ನೇಮಕವಾದರು. ಆಗ ನಾವೆಲ್ಲರೂ ಪೋಲಾಂಡ್‌ಗೆ ತೆರಳಿ 20 ವರ್ಷದೊಳಗಿನ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ್ದಾಗ ನೀರಜ್ ಚಿನ್ನ ಗೆದ್ದಿದ್ದರು” ಎಂದು ಕಾಶಿನಾಥ್ ಹೇಳಿದ್ದರು.

ಇಂತಹ ಅಪ್ರತಿಮ ಸಾಧನೆಗೈದ ಕಾಶಿನಾಥ್‌ರವರ ಪುಣೆಯಲ್ಲಿನ ಮನೆಗೆ ನೀರಜ್ ಚೋಪ್ರಾ ಭೇಟಿ ನೀಡಿ ಗುರುಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಕಾಶಿನಾಥ್‌ರವರ ಮಕ್ಕಳನ್ನು ಎತ್ತಿಕೊಂಡು ಮುದ್ದಿಸಿದ್ದಾರೆ. ಕಾಶಿನಾಥ್ ಕುಟುಂಬದ ಜೊತೆ ಫೋಟೊ ತೆಗೆದುಕೊಂಡಿದ್ದಾರೆ. ಯಾವುದೇ ಅಹಂಭಾವವಿಲ್ಲದೇ ಗುರುಗಳ ಜೊತೆ ಪ್ರೀತಿಯಿಂದ ಬೆರೆತಿದ್ದಾರೆ. ಈ ಎಲ್ಲಾ ಫೋಟೊಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅಲ್ಲದೇ ಕಾಶಿನಾಥ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದವರ ಬಾಯಿ ಮುಚ್ಚಿಸಿವೆ.

ಆಗಸ್ಟ್ 24ರ ಮಧ್ಯಾಹ್ನ ನೀರಜ್ ಚೋಪ್ರಾ ಕಾಶೀನಾಥ್ ನಾಯ್ಕ್‌ರವರ ಮನೆಗೆ ಭೇಟಿ ನೀಡಿದಾಗ ಕಾಶಿನಾಥ್‌ರವರ ಪತ್ನಿ ಚೈತ್ರಾ ಆರತಿ ಬೆಳಗಿ, ಹಣೆಗೆ ತಿಲಕವಿಟ್ಟು ಸ್ವಾಗತಿಸಿದ್ದಾರೆ. ನೀರಜ್ ಅಂತೂ ಮನೆಯೊಳಗೆ ಬಂದ ಕೂಡಲೇ ಮನೆಯೊಳಗಿದ್ದ ಲ್ಯಾಬ್ರೊಡರ್ ನಾಯಿಯ ತಲೆ ಸವರಿ ಮುದ್ದು ಮಾಡಿದ್ದಾರೆ. ನಂತರ ಮಕ್ಕಳನ್ನು ಎತ್ತುಕೊಂಡಿದ್ದಾರೆ.

ಒಟ್ಟಿನಲ್ಲಿ ಕೆಲವರು ಸತ್ಯಾಸತ್ಯತೆ ಪರಿಶೀಲಿಸದೆ, ಅಥ್ಲೆಟಿಕ್ಸ್ ಅಧ್ಯಕ್ಷರ ಹೇಳಿಕೆ ಇಟ್ಟುಕೊಂಡು ಕಾಶಿನಾಥ್ ನಾಯ್ಕ್‌ರನ್ನು ಟೀಕಿಸಿದ್ದರು. ಅದಕ್ಕೆ ಸ್ವತಃ ನೀರಜ್ ಚೋಪ್ರಾ ಸ್ಪಷ್ಟ ಉತ್ತರ ಕೊಟ್ಟಿದ್ದಾರೆ. ಆ ಮೂಲಕ ಗುರುಗಳ ಗೌರವ ಹೆಚ್ಚಿಸಿದ್ದಾರೆ.


ಇದನ್ನೂ ಓದಿ: ನಾನು ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆದ್ದಿದ್ದು ಸುಳ್ಳೇ? ನೀರಜ್ ಚೋಪ್ರಾ ಮಾಜಿ ಕೋಚ್ ಕನ್ನಡಿಗ ಕಾಶಿನಾಥ್ ನಾಯ್ಕ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...