Homeಮುಖಪುಟಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ಕೆಲವರು ಸತ್ಯಾಸತ್ಯತೆ ಪರಿಶೀಲಿಸದೆ, ಅಥ್ಲೆಟಿಕ್ಸ್ ಅಧ್ಯಕ್ಷರ ಹೇಳಿಕೆ ಇಟ್ಟುಕೊಂಡು ಕಾಶಿನಾಥ್ ನಾಯ್ಕ್‌ರನ್ನು ಟೀಕಿಸಿದ್ದರು. ಅದಕ್ಕೆ ಸ್ವತಃ ನೀರಜ್ ಚೋಪ್ರಾ ಸ್ಪಷ್ಟ ಉತ್ತರ ಕೊಟ್ಟಿದ್ದಾರೆ.

- Advertisement -
- Advertisement -

ಒಲಿಂಪಿಕ್ಸ್‌ನಲ್ಲಿ ಚಿನ್ನಗೆದ್ದ ನೀರಜ್ ಚೋಪ್ರಾಗೆ ಕಾಶೀನಾಥ್ ನಾಯ್ಕ್‌ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶೀನಾಥ್ ನಾಯ್ಕ್‌ ಯಾರು ಎಂಬುದೇ ನಮಗೆ ಗೊತ್ತಿಲ್ಲ ಎಂಬ ಅಥ್ಲೆಟಿಕ್ಸ್ ಫೆಡರೇಷನ್ ಅಧ್ಯಕ್ಷ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆ ಮೂಲಕ ಎರಡು ವರ್ಷಗಳ ಕಾಲ ನೀರಜ್‌ ಚೋಪ್ರಾಗೆ ಕೋಚ್ ಆಗಿ ತರಬೇತಿ ನೀಡಿದ್ದ ಕನ್ನಡಿಗ ಕಾಶೀನಾಥ್‌ರನ್ನು ಅವಮಾನಿಸಲಾಗಿತ್ತು. ಈಗ ಕಾಶಿನಾಥ್ ಮನೆಗೆ ಚಿನ್ನದ ಹುಡುಗ ನೀರಜ್ ಚೋಪ್ರಾ ಭೇಟಿ ನೀಡುವ ಮೂಲಕ ವಿವಾದಗಳಿಗೆ ತೆರೆ ಎಳೆದಿದ್ದಾರೆ ಮತ್ತು ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.

ಅತ್ತ ಟೋಕಿಯೋದಲ್ಲಿ ಜಾವಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಚಿನ್ನ ಗೆಲ್ಲುತ್ತಿದ್ದಂತೆ ಇತ್ತ ಅವರಿಗೆ ಕೋಚ್ ಆಗಿ ಕೆಲಸ ಮಾಡಿದ್ದ ಎಲ್ಲರನ್ನು ಶ್ಲಾಘಿಸಲಾಗಿತ್ತು. 2015 ರಿಂದ 2017ರವರೆಗೆ ನೀರಜ್‌ಗೆ ಕೋಚ್ ಆಗಿದ್ದ ಕನ್ನಡಿಗ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಬೆಂಗಳೆ ಗ್ರಾಮದ ಕಾಶೀನಾಥ್ ನಾಯ್ಕ್‌ರವರನ್ನು ಸ್ಮರಿಸಲಾಗಿತ್ತು. ಅವರ ಸಾಧನೆ ಗುರುತಿಸಿ ಅವರಿಗೆ ರಾಜ್ಯದ ಕ್ರೀಡಾ ಸಚಿವರು 10 ಲಕ್ಷ ರೂ ಗಳ ಬಹುಮಾನ ಘೋಷಿಸಿದ್ದರು.

ಆದರೆ ಅವರ ವಿರುದ್ದ ಅಪಪ್ರಚಾರ ಸಹ ಅದೇ ಸಮಯದಲ್ಲಿ ಶುರುವಾಗಿತ್ತು. ಅವರಿಗೆ 10 ಲಕ್ಷ ಬಹುಮಾನ ಘೋಷಿಸಿದ್ದಕ್ಕೆ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷ ಅದಿಲ್ಲೆ ಸುಮರಿವಾಲಾ ಆಕ್ಷೇಪ ವ್ಯಕ್ತಪಡಿಸಿದ್ದರು. “ನೀರಜ್ ಚೋಪ್ರಾಗೆ ಕಾಶೀನಾಥ್ ನಾಯ್ಕ್‌ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶೀನಾಥ್ ಯಾರು ಎಂಬುದೇ ನಮಗೆ ಗೊತ್ತಿಲ್ಲ. ಅವರಿಗೆ ಕರ್ನಾಟಕ ಸರ್ಕಾರ 10 ರೂ ಲಕ್ಷ ರೂ ಬಹುಮಾನ ಘೋಷಿಸಿರುವುದು ತಿಳಿದುಬಂದಿದೆ. ಅಧಿಕೃತ ಪತ್ರ ತಲುಪಿದಾಗ ಅದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತೇವೆ” ಎಂದು  ಸುಮರಿವಾಲಾ ಹೇಳಿಕೆ ನೀಡಿದ್ದರು.

ಈ ಹೇಳಿಕೆ ಹೊರಬೀಳುತ್ತಿದ್ದಂತೆ ಕನ್ನಡದ ಬಹುತೇಕ ಮಾಧ್ಯಮಗಳು ಕಾಶೀನಾಥ್ ನಾಯ್ಕ್‌ ವಿರುದ್ಧ ಕಿಡಿಕಾರಿದ್ದವು. ಪತ್ರಕರ್ತರು ಸೇರಿದಂತೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಕಾಶಿನಾಥ್‌ರನ್ನು ಟೀಕಿಸಿದ್ದರು. ಆ ಸಂದರ್ಭದಲ್ಲಿ ನಾನುಗೌರಿ.ಕಾಂ ಕಾಶೀನಾಥ್ ನಾಯ್ಕ್‌ ರವರನ್ನು ಸಂಪರ್ಕಿಸಿ ಅವರ ಕ್ರೀಡಾಸಾಧನೆ, ಕೋಚ್ ಆಗಿ ಕೆಲಸ ಮಾಡಿದ್ದರ ಕುರಿತು ವಿವರವಾದ ವರದಿ ಪ್ರಕಟಿಸಿತ್ತು. ಅದನ್ನು ಇಲ್ಲಿ ಓದಬಹುದು.

2000 ದಲ್ಲಿ ದೇಶ ಸೇವೆಗೆ ಸೈನಿಕರಾಗಿ ಸೇರಿದ್ದ ಕಾಶಿನಾಥ್‌ ನಾಯ್ಕರವರು 2010ರಲ್ಲಿ ನವದೆಹಲಿಯಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಜಾವೆಲಿನ್ ಎಸೆತದಲ್ಲಿ ಕಂಚಿನ ಪದಕ ಪಡೆದು ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಇವರಿಗೆ ರಾಜ್ಯೋತ್ಸವ ಪ್ರಶಸ್ತಿ, ಏಕಲವ್ಯ ಪ್ರಶಸ್ತಿ ಸಂದಿವೆ. 2015 ರಿಂದ 2017ರವರೆಗೆ ನೀರಜ್ ಚೋಪ್ರಾಗೆ ಸಹಾಯಕ ಕೋಚ್ ಆಗಿ ಕೆಲಸ ಮಾಡಿದ್ದಾರೆ.

“ನಾನು ಯಾರು ಅಂತ ಗೊತ್ತಿಲ್ಲವೆಂದು ಅದಿಲ್ಲೆ ಸುಮರಿವಾಲಾ ಹೇಳಿದ್ದಾರೆ. ಹಾಗಾದರೆ ನಾನು ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆದ್ದಿದ್ದು ಸುಳ್ಳೇ? 2015 ರಿಂದ 2017ರ ವರೆಗೆ ಪಟಿಯಾಲದಲ್ಲಿ ನಾನು ಚೋಪ್ರಾಗೆ ಸಹಾಯಕ ಕೋಚ್ ಆಗಿ ಕೆಲಸ ಮಾಡಿದ್ದೇನೆ. ಈ ಮಧ್ಯೆ 2016ರಲ್ಲಿ ವಿದೇಶಿ ಕೋಚ್ ಗ್ಯಾರಿ ಕ್ಯಾಲ್ವರ್ಟ್ ನೇಮಕವಾದರು. ಆಗ ನಾವೆಲ್ಲರೂ ಪೋಲಾಂಡ್‌ಗೆ ತೆರಳಿ 20 ವರ್ಷದೊಳಗಿನ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ್ದಾಗ ನೀರಜ್ ಚಿನ್ನ ಗೆದ್ದಿದ್ದರು” ಎಂದು ಕಾಶಿನಾಥ್ ಹೇಳಿದ್ದರು.

ಇಂತಹ ಅಪ್ರತಿಮ ಸಾಧನೆಗೈದ ಕಾಶಿನಾಥ್‌ರವರ ಪುಣೆಯಲ್ಲಿನ ಮನೆಗೆ ನೀರಜ್ ಚೋಪ್ರಾ ಭೇಟಿ ನೀಡಿ ಗುರುಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಕಾಶಿನಾಥ್‌ರವರ ಮಕ್ಕಳನ್ನು ಎತ್ತಿಕೊಂಡು ಮುದ್ದಿಸಿದ್ದಾರೆ. ಕಾಶಿನಾಥ್ ಕುಟುಂಬದ ಜೊತೆ ಫೋಟೊ ತೆಗೆದುಕೊಂಡಿದ್ದಾರೆ. ಯಾವುದೇ ಅಹಂಭಾವವಿಲ್ಲದೇ ಗುರುಗಳ ಜೊತೆ ಪ್ರೀತಿಯಿಂದ ಬೆರೆತಿದ್ದಾರೆ. ಈ ಎಲ್ಲಾ ಫೋಟೊಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅಲ್ಲದೇ ಕಾಶಿನಾಥ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದವರ ಬಾಯಿ ಮುಚ್ಚಿಸಿವೆ.

ಆಗಸ್ಟ್ 24ರ ಮಧ್ಯಾಹ್ನ ನೀರಜ್ ಚೋಪ್ರಾ ಕಾಶೀನಾಥ್ ನಾಯ್ಕ್‌ರವರ ಮನೆಗೆ ಭೇಟಿ ನೀಡಿದಾಗ ಕಾಶಿನಾಥ್‌ರವರ ಪತ್ನಿ ಚೈತ್ರಾ ಆರತಿ ಬೆಳಗಿ, ಹಣೆಗೆ ತಿಲಕವಿಟ್ಟು ಸ್ವಾಗತಿಸಿದ್ದಾರೆ. ನೀರಜ್ ಅಂತೂ ಮನೆಯೊಳಗೆ ಬಂದ ಕೂಡಲೇ ಮನೆಯೊಳಗಿದ್ದ ಲ್ಯಾಬ್ರೊಡರ್ ನಾಯಿಯ ತಲೆ ಸವರಿ ಮುದ್ದು ಮಾಡಿದ್ದಾರೆ. ನಂತರ ಮಕ್ಕಳನ್ನು ಎತ್ತುಕೊಂಡಿದ್ದಾರೆ.

ಒಟ್ಟಿನಲ್ಲಿ ಕೆಲವರು ಸತ್ಯಾಸತ್ಯತೆ ಪರಿಶೀಲಿಸದೆ, ಅಥ್ಲೆಟಿಕ್ಸ್ ಅಧ್ಯಕ್ಷರ ಹೇಳಿಕೆ ಇಟ್ಟುಕೊಂಡು ಕಾಶಿನಾಥ್ ನಾಯ್ಕ್‌ರನ್ನು ಟೀಕಿಸಿದ್ದರು. ಅದಕ್ಕೆ ಸ್ವತಃ ನೀರಜ್ ಚೋಪ್ರಾ ಸ್ಪಷ್ಟ ಉತ್ತರ ಕೊಟ್ಟಿದ್ದಾರೆ. ಆ ಮೂಲಕ ಗುರುಗಳ ಗೌರವ ಹೆಚ್ಚಿಸಿದ್ದಾರೆ.


ಇದನ್ನೂ ಓದಿ: ನಾನು ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆದ್ದಿದ್ದು ಸುಳ್ಳೇ? ನೀರಜ್ ಚೋಪ್ರಾ ಮಾಜಿ ಕೋಚ್ ಕನ್ನಡಿಗ ಕಾಶಿನಾಥ್ ನಾಯ್ಕ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...