Homeಮುಖಪುಟನೀರಜ್ ಚೋಪ್ರಾ ಗುರು ಕನ್ನಡಿಗ ಕಾಶೀನಾಥ್ ನಾಯ್ಕ್‌ರವರಿಗೆ ಹುಟ್ಟೂರಲ್ಲಿ ಸನ್ಮಾನ

ನೀರಜ್ ಚೋಪ್ರಾ ಗುರು ಕನ್ನಡಿಗ ಕಾಶೀನಾಥ್ ನಾಯ್ಕ್‌ರವರಿಗೆ ಹುಟ್ಟೂರಲ್ಲಿ ಸನ್ಮಾನ

ನಾನು ಸೇನೆಯಿಂದ ನಿವೃತ್ತಿಯಾದ ಬಳಿಕ ತವರೂರು ಶಿರಸಿಯಲ್ಲೊಂದು ಕ್ರೀಡಾ ಅಕಾಡಮಿ ಸ್ಥಾಪಿಸು ಉದ್ದೇಶ ಹೊಂದಿದೇನೆ. - ಕಾಶೀನಾಥ್ ನಾಯ್ಕ್‌

- Advertisement -
- Advertisement -

ಟೋಕಿಯೋ ಒಲಂಪಿಕ್ಸ್‌ನ ಜಾವಲಿನ್ ಎಸತ ಸ್ಪರ್ಧೆಯಲ್ಲಿ ಚಿನ್ನ ಗೆದ್ದು ಬಂದ ನೀರಜ್ ಚೋಪ್ರಾರ ಆರಂಭಿಕ ಗುರು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಬನವಾಸಿ ಬಳಿಯ ಬೆಂಗಳೆಯ ಕಾಶೀನಾಥ್ ನಾಯ್ಕ್‌ರವರಿಗೆ ಕ್ರೀಡಾ ದಿನದಂದು ತವರೂರಲ್ಲಿ ಸನ್ಮಾನಿಸಲಾಗಿದೆ.

ರಾಷ್ಟ್ರಕ್ಕೆ ಹೆಮ್ಮೆ ತಂದ ಬಂಗಾರದ ಹುಡುಗನಿಗೆ ತರಬೇತಿ ನೀಡಿದ ಸಾಧನೆಗಾಗಿ ತಾಲೂಕಾಡಳಿತ ಕಾಶೀನಾಥ್ ನಾಯ್ಕ್‌ರವರನ್ನು ಊರಿಗೆ ಕರೆಸಿ ಗೌರವಿಸಿದೆ. ಶಿರಸಿಯ ಶಾಸಕರು ಮತ್ತು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಮಾನದಿಂದ ಸನ್ಮಾನಿಸಿದ್ದಾರೆ.

2010ರಲ್ಲಿ ನಡೆದ ಕಾಮನ್ ವೆಲ್ತ್ ಗೇಮ್ಸ್‌ ಜಾವಲಿನ್ ಥ್ರೋನಲ್ಲಿ ಕಾಶೀನಾಥ ನಾಯ್ಕ್ 74.29 ಮೀಟರ್ ದೂರ ಎಸೆದು ಕಂಚಿನ ಪದಕ ಪಡೆದಿದ್ದರು. ಸೈನ್ಯದಲ್ಲಿ ಸುಭೇದಾರ್ ಆಗಿರುವ ಅವರನ್ನು ಪಟಿಯಾಲಾದಲ್ಲಿ ಜಾವಲಿನ್ ಕೋಚ್ ಎಂದು ನೇಮಿಸಲಾಗಿತ್ತು. ಅಲ್ಲಿ ಅವರು ನೀರಜ್‌ಗೆ 2015 ರಿಂದ 2017ರವರೆಗೆ ನೀರಜ್‌ಗೆ ತರಬೇತಿ ಕೊಟ್ಟಿದ್ದರು.

ನೀರಜ್ ಚೋಪ್ರಾ ಚಿನ್ನದ ಪದಕ ತಂದಾಗ ರಾಜ್ಯ ಸರ್ಕಾರ ಅವರ ಗುರು ಕಾಶೀನಾಥ್‌ ನಾಯ್ಕ್‌ರವರಿಗೆ 10 ಲಕ್ಷ ರೂ ಬಹುಮಾನ ಘೋಷಿಸಿತ್ತು. ಆಗ ಅಸೂಯೆಯಿಂದ ಚಡಪಡಿಸಿದ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷ ಅದಿಲ್ಲೆ ಸುಮರಿವಾಲಾ ಆಕ್ಷೇಪ ವ್ಯಕ್ತಪಡಿಸಿದ್ದರು. ನೀರಜ್ ಚೋಪ್ರಾಗೆ ಕಾಶೀನಾಥ್ ನಾಯ್ಕ್‌ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶೀನಾಥ್ ಯಾರು ಎಂಬುದೇ ನಮಗೆ ಗೊತ್ತಿಲ್ಲ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಅನಾವಶ್ಯಕ ಮುಜುಗರಕ್ಕೀಡಾಗಿದ್ದ ಕಾಶೀನಾಥರ ಪುಣೆಯ ಮನೆಗೆ ಶಿಷ್ಯ ನೀರಜ್ ಚೋಪ್ರಾ ಖುದ್ದು ಭೇಟಿ ನೀಡಿ ಗುರುವಿಗೆ ಕೃತಜ್ಞತೆ ಅರ್ಪಿಸಿದಾಗ ಟೀಕಾಕಾರರ ಬಾಯಿ ಬಂದ್ ಆಗಿತ್ತು.

ಈಗ ಕಾಶೀನಾಥರಿಗೆ ಹುಟ್ಟೂರಲ್ಲಿ ಬಂಗಾರದಂತಹ ಶಿಷ್ಯನನನ್ನು ತರಬೇತುಗೊಳಿಸಿದ್ದಕ್ಕೆ ಸನ್ಮಾನ ಮಾಡಿರುವುದು ಅವರು ನೀರಜ್‌ಗೆ ತರಬೇತಿ ಕೊಟ್ಟಿರುವುದಕ್ಕೆ ಮತ್ತೊಂದು ಸಿಂಧುತ್ವ ಸಿಕ್ಕಾಂತಾಗಿದೆ.

ಶಿರಸಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತಾಡಿದ ಕಾಶೀನಾಥ ನಾಯ್ಕ್, “ಭಾರತದಲ್ಲಿ ವಿದೇಶಿ ಕೋಚ್‌ಗಳಿಗೆ ಕೊಡುವ ಸೌಲಭ್ಯಗಳು ದೇಶಿಯ ಕೋಚ್‌ಗಳಿಗೆ ಸಿಗುತ್ತಿಲ್ಲ. ಅಂತಹ ಸೌಲಭ್ಯ-ಸೌಕರ್ಯ-ಮಾನ್ಯತೆ-ಗೌರವ ನಮ್ಮ ತರಬೇತಿದಾರರಿಗೂ ಸಿಕ್ಕರೆ ದೇಶದ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಪತಾಕೆ ಹಾರಿಸುತ್ತಾರೆ. ದೇಶದ ಗೌರವ ಹೆಚ್ಚಿಸಲು ನಿಷ್ಠೆಯಿಂದ ಕೆಲಸಮಾಡುವ ತರಬೇತಿದಾರರಿಗೆ ಪ್ರೋತ್ಸಾಹ ಸಿಕ್ಕರೆ ಇನ್ನಷ್ಟು ಒಲಂಪಿಕ್ಸ್ ಮತ್ತಿತರ ಕ್ರೀಡಾಕೂಟದಲ್ಲಿ ದೇಶದ ಪ್ರತಿಭೆಗಳು ಪದಕ ಗೆಲ್ಲುವ ಸಾಮರ್ಥ್ಯ ತೋರಿಸುತ್ತಾರೆಂಬುದು ನನ್ನ ನಂಬಿಕೆ” ಎಂದರು.

ದೇಶದ ಕ್ರೀಡಾ ಕ್ಷೇತ್ರದ ವಾಸ್ತವ ಪರಿಸ್ಥಿತಿ ಕೆಟ್ಟದಾಗಿದ್ದರೂ ನಮ್ಮಲ್ಲಿನ ಕೋಚ್‌ಗಳು ದೇಶಾಭಿಮಾನದ ಬದ್ದತೆಯಿಂದ ತರಬೇತಿ ಕೊಡುತ್ತಿದ್ದಾರೆ. ಮುಂದಿನ ದಿನದಲ್ಲಾದರು ಕ್ರೀಡಾ ಕ್ಷೇತ್ರದತ್ತ ಸರ್ಕಾರ ಆಸಕ್ತಿ ವಹಿಸಿ ಪೂರಕ, ಪ್ರೋತ್ಸಾಹದಾಯಕ ವಾತವರಣ ಕಲ್ಪಿಸಬೇಕೆಂದು ನಾಯ್ಕ್ ಹೇಳಿದರು.

ಉತ್ತರ ಕನ್ನಡದಲ್ಲೂ ಬಹಳಷ್ಟು ಕ್ರೀಡಾ ಪ್ರತಿಭೆಗಳಿವೆ. ಅವರಿಗೆಲ್ಲ ಸರಿಯಾದ ಸೌಲಭ್ಯ ಒದಗಿಸಿ ಹರಿದುಂಬಿಸಬೇಕು. ಕೀಡಾ ಸಾಧಕನ ಹಿಂದಿರುವ ತರಬೇತಿದಾರನನ್ನು ತಾಯ್ನೆಲ ಗರುತಿಸಿರುವುದು ನನ್ನ ಬದುಕಲ್ಲಿ ಅಚ್ಚಳಿಯದ ನೆನಪಾಗಿ ಉಳಿಯಲಿದೆ. ನಾನು ಸೇನೆಯಿಂದ ನಿವೃತ್ತಿಯಾದ ಬಳಿಕ ತವರೂರು ಶಿರಸಿಯಲ್ಲೊಂದು ಕ್ರೀಡಾ ಅಕಾಡಮಿ ಸ್ಥಾಪಿಸು ಉದ್ದೇಶ ಹೊಂದಿದೇನೆ: ಖೇಲೋ ಇಂಡಿಯಾ ಇನ್ನಿತರ ಕ್ರೀಡಾ ಸೌಲಭ್ಯ- ಅವಕಾಶಗಳ ಕುರಿತು ತಿಳುವಳಿಕೆ, ಜಾಗೃತಿ ಮೂಡಿಸ ಬೇಕಾಗಿದೆ ಎಂದರು.

ಕಾಗೇರಿಯವರು ಮಾತನಾಡಿ, “ಶಿರಸಿ ಕ್ರೀಡಾಂಗಣದಲ್ಲಿ 3 ಕೋಟಿ ರೂ ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಮಾಡಿಸಬೇಕಿದೆ. ಕಾಶೀನಾಥ ನಾಯ್ಕ್‌ರವರ ಆಶಯದಂತೆ ದೇಶಿಯ ತರಬೇತಿದಾರರನ್ನೂ ಉತ್ತಮವಾಗಿ ಪರಿಗಣಿಸಲು ಸರ್ಕಾರದ ಗಮನ ಸೆಳೆಯುತ್ತೇನೆ” ಎಂದರು.


ಇದನ್ನೂ ಓದಿ: ಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...