Homeಮುಖಪುಟನೀರಜ್ ಚೋಪ್ರಾ ಗುರು ಕನ್ನಡಿಗ ಕಾಶೀನಾಥ್ ನಾಯ್ಕ್‌ರವರಿಗೆ ಹುಟ್ಟೂರಲ್ಲಿ ಸನ್ಮಾನ

ನೀರಜ್ ಚೋಪ್ರಾ ಗುರು ಕನ್ನಡಿಗ ಕಾಶೀನಾಥ್ ನಾಯ್ಕ್‌ರವರಿಗೆ ಹುಟ್ಟೂರಲ್ಲಿ ಸನ್ಮಾನ

ನಾನು ಸೇನೆಯಿಂದ ನಿವೃತ್ತಿಯಾದ ಬಳಿಕ ತವರೂರು ಶಿರಸಿಯಲ್ಲೊಂದು ಕ್ರೀಡಾ ಅಕಾಡಮಿ ಸ್ಥಾಪಿಸು ಉದ್ದೇಶ ಹೊಂದಿದೇನೆ. - ಕಾಶೀನಾಥ್ ನಾಯ್ಕ್‌

- Advertisement -
- Advertisement -

ಟೋಕಿಯೋ ಒಲಂಪಿಕ್ಸ್‌ನ ಜಾವಲಿನ್ ಎಸತ ಸ್ಪರ್ಧೆಯಲ್ಲಿ ಚಿನ್ನ ಗೆದ್ದು ಬಂದ ನೀರಜ್ ಚೋಪ್ರಾರ ಆರಂಭಿಕ ಗುರು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಬನವಾಸಿ ಬಳಿಯ ಬೆಂಗಳೆಯ ಕಾಶೀನಾಥ್ ನಾಯ್ಕ್‌ರವರಿಗೆ ಕ್ರೀಡಾ ದಿನದಂದು ತವರೂರಲ್ಲಿ ಸನ್ಮಾನಿಸಲಾಗಿದೆ.

ರಾಷ್ಟ್ರಕ್ಕೆ ಹೆಮ್ಮೆ ತಂದ ಬಂಗಾರದ ಹುಡುಗನಿಗೆ ತರಬೇತಿ ನೀಡಿದ ಸಾಧನೆಗಾಗಿ ತಾಲೂಕಾಡಳಿತ ಕಾಶೀನಾಥ್ ನಾಯ್ಕ್‌ರವರನ್ನು ಊರಿಗೆ ಕರೆಸಿ ಗೌರವಿಸಿದೆ. ಶಿರಸಿಯ ಶಾಸಕರು ಮತ್ತು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಮಾನದಿಂದ ಸನ್ಮಾನಿಸಿದ್ದಾರೆ.

2010ರಲ್ಲಿ ನಡೆದ ಕಾಮನ್ ವೆಲ್ತ್ ಗೇಮ್ಸ್‌ ಜಾವಲಿನ್ ಥ್ರೋನಲ್ಲಿ ಕಾಶೀನಾಥ ನಾಯ್ಕ್ 74.29 ಮೀಟರ್ ದೂರ ಎಸೆದು ಕಂಚಿನ ಪದಕ ಪಡೆದಿದ್ದರು. ಸೈನ್ಯದಲ್ಲಿ ಸುಭೇದಾರ್ ಆಗಿರುವ ಅವರನ್ನು ಪಟಿಯಾಲಾದಲ್ಲಿ ಜಾವಲಿನ್ ಕೋಚ್ ಎಂದು ನೇಮಿಸಲಾಗಿತ್ತು. ಅಲ್ಲಿ ಅವರು ನೀರಜ್‌ಗೆ 2015 ರಿಂದ 2017ರವರೆಗೆ ನೀರಜ್‌ಗೆ ತರಬೇತಿ ಕೊಟ್ಟಿದ್ದರು.

ನೀರಜ್ ಚೋಪ್ರಾ ಚಿನ್ನದ ಪದಕ ತಂದಾಗ ರಾಜ್ಯ ಸರ್ಕಾರ ಅವರ ಗುರು ಕಾಶೀನಾಥ್‌ ನಾಯ್ಕ್‌ರವರಿಗೆ 10 ಲಕ್ಷ ರೂ ಬಹುಮಾನ ಘೋಷಿಸಿತ್ತು. ಆಗ ಅಸೂಯೆಯಿಂದ ಚಡಪಡಿಸಿದ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷ ಅದಿಲ್ಲೆ ಸುಮರಿವಾಲಾ ಆಕ್ಷೇಪ ವ್ಯಕ್ತಪಡಿಸಿದ್ದರು. ನೀರಜ್ ಚೋಪ್ರಾಗೆ ಕಾಶೀನಾಥ್ ನಾಯ್ಕ್‌ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶೀನಾಥ್ ಯಾರು ಎಂಬುದೇ ನಮಗೆ ಗೊತ್ತಿಲ್ಲ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಅನಾವಶ್ಯಕ ಮುಜುಗರಕ್ಕೀಡಾಗಿದ್ದ ಕಾಶೀನಾಥರ ಪುಣೆಯ ಮನೆಗೆ ಶಿಷ್ಯ ನೀರಜ್ ಚೋಪ್ರಾ ಖುದ್ದು ಭೇಟಿ ನೀಡಿ ಗುರುವಿಗೆ ಕೃತಜ್ಞತೆ ಅರ್ಪಿಸಿದಾಗ ಟೀಕಾಕಾರರ ಬಾಯಿ ಬಂದ್ ಆಗಿತ್ತು.

ಈಗ ಕಾಶೀನಾಥರಿಗೆ ಹುಟ್ಟೂರಲ್ಲಿ ಬಂಗಾರದಂತಹ ಶಿಷ್ಯನನನ್ನು ತರಬೇತುಗೊಳಿಸಿದ್ದಕ್ಕೆ ಸನ್ಮಾನ ಮಾಡಿರುವುದು ಅವರು ನೀರಜ್‌ಗೆ ತರಬೇತಿ ಕೊಟ್ಟಿರುವುದಕ್ಕೆ ಮತ್ತೊಂದು ಸಿಂಧುತ್ವ ಸಿಕ್ಕಾಂತಾಗಿದೆ.

ಶಿರಸಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತಾಡಿದ ಕಾಶೀನಾಥ ನಾಯ್ಕ್, “ಭಾರತದಲ್ಲಿ ವಿದೇಶಿ ಕೋಚ್‌ಗಳಿಗೆ ಕೊಡುವ ಸೌಲಭ್ಯಗಳು ದೇಶಿಯ ಕೋಚ್‌ಗಳಿಗೆ ಸಿಗುತ್ತಿಲ್ಲ. ಅಂತಹ ಸೌಲಭ್ಯ-ಸೌಕರ್ಯ-ಮಾನ್ಯತೆ-ಗೌರವ ನಮ್ಮ ತರಬೇತಿದಾರರಿಗೂ ಸಿಕ್ಕರೆ ದೇಶದ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಪತಾಕೆ ಹಾರಿಸುತ್ತಾರೆ. ದೇಶದ ಗೌರವ ಹೆಚ್ಚಿಸಲು ನಿಷ್ಠೆಯಿಂದ ಕೆಲಸಮಾಡುವ ತರಬೇತಿದಾರರಿಗೆ ಪ್ರೋತ್ಸಾಹ ಸಿಕ್ಕರೆ ಇನ್ನಷ್ಟು ಒಲಂಪಿಕ್ಸ್ ಮತ್ತಿತರ ಕ್ರೀಡಾಕೂಟದಲ್ಲಿ ದೇಶದ ಪ್ರತಿಭೆಗಳು ಪದಕ ಗೆಲ್ಲುವ ಸಾಮರ್ಥ್ಯ ತೋರಿಸುತ್ತಾರೆಂಬುದು ನನ್ನ ನಂಬಿಕೆ” ಎಂದರು.

ದೇಶದ ಕ್ರೀಡಾ ಕ್ಷೇತ್ರದ ವಾಸ್ತವ ಪರಿಸ್ಥಿತಿ ಕೆಟ್ಟದಾಗಿದ್ದರೂ ನಮ್ಮಲ್ಲಿನ ಕೋಚ್‌ಗಳು ದೇಶಾಭಿಮಾನದ ಬದ್ದತೆಯಿಂದ ತರಬೇತಿ ಕೊಡುತ್ತಿದ್ದಾರೆ. ಮುಂದಿನ ದಿನದಲ್ಲಾದರು ಕ್ರೀಡಾ ಕ್ಷೇತ್ರದತ್ತ ಸರ್ಕಾರ ಆಸಕ್ತಿ ವಹಿಸಿ ಪೂರಕ, ಪ್ರೋತ್ಸಾಹದಾಯಕ ವಾತವರಣ ಕಲ್ಪಿಸಬೇಕೆಂದು ನಾಯ್ಕ್ ಹೇಳಿದರು.

ಉತ್ತರ ಕನ್ನಡದಲ್ಲೂ ಬಹಳಷ್ಟು ಕ್ರೀಡಾ ಪ್ರತಿಭೆಗಳಿವೆ. ಅವರಿಗೆಲ್ಲ ಸರಿಯಾದ ಸೌಲಭ್ಯ ಒದಗಿಸಿ ಹರಿದುಂಬಿಸಬೇಕು. ಕೀಡಾ ಸಾಧಕನ ಹಿಂದಿರುವ ತರಬೇತಿದಾರನನ್ನು ತಾಯ್ನೆಲ ಗರುತಿಸಿರುವುದು ನನ್ನ ಬದುಕಲ್ಲಿ ಅಚ್ಚಳಿಯದ ನೆನಪಾಗಿ ಉಳಿಯಲಿದೆ. ನಾನು ಸೇನೆಯಿಂದ ನಿವೃತ್ತಿಯಾದ ಬಳಿಕ ತವರೂರು ಶಿರಸಿಯಲ್ಲೊಂದು ಕ್ರೀಡಾ ಅಕಾಡಮಿ ಸ್ಥಾಪಿಸು ಉದ್ದೇಶ ಹೊಂದಿದೇನೆ: ಖೇಲೋ ಇಂಡಿಯಾ ಇನ್ನಿತರ ಕ್ರೀಡಾ ಸೌಲಭ್ಯ- ಅವಕಾಶಗಳ ಕುರಿತು ತಿಳುವಳಿಕೆ, ಜಾಗೃತಿ ಮೂಡಿಸ ಬೇಕಾಗಿದೆ ಎಂದರು.

ಕಾಗೇರಿಯವರು ಮಾತನಾಡಿ, “ಶಿರಸಿ ಕ್ರೀಡಾಂಗಣದಲ್ಲಿ 3 ಕೋಟಿ ರೂ ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಮಾಡಿಸಬೇಕಿದೆ. ಕಾಶೀನಾಥ ನಾಯ್ಕ್‌ರವರ ಆಶಯದಂತೆ ದೇಶಿಯ ತರಬೇತಿದಾರರನ್ನೂ ಉತ್ತಮವಾಗಿ ಪರಿಗಣಿಸಲು ಸರ್ಕಾರದ ಗಮನ ಸೆಳೆಯುತ್ತೇನೆ” ಎಂದರು.


ಇದನ್ನೂ ಓದಿ: ಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...