Homeಮುಖಪುಟನೀರಜ್ ಚೋಪ್ರಾ ಗುರು ಕನ್ನಡಿಗ ಕಾಶೀನಾಥ್ ನಾಯ್ಕ್‌ರವರಿಗೆ ಹುಟ್ಟೂರಲ್ಲಿ ಸನ್ಮಾನ

ನೀರಜ್ ಚೋಪ್ರಾ ಗುರು ಕನ್ನಡಿಗ ಕಾಶೀನಾಥ್ ನಾಯ್ಕ್‌ರವರಿಗೆ ಹುಟ್ಟೂರಲ್ಲಿ ಸನ್ಮಾನ

ನಾನು ಸೇನೆಯಿಂದ ನಿವೃತ್ತಿಯಾದ ಬಳಿಕ ತವರೂರು ಶಿರಸಿಯಲ್ಲೊಂದು ಕ್ರೀಡಾ ಅಕಾಡಮಿ ಸ್ಥಾಪಿಸು ಉದ್ದೇಶ ಹೊಂದಿದೇನೆ. - ಕಾಶೀನಾಥ್ ನಾಯ್ಕ್‌

- Advertisement -
- Advertisement -

ಟೋಕಿಯೋ ಒಲಂಪಿಕ್ಸ್‌ನ ಜಾವಲಿನ್ ಎಸತ ಸ್ಪರ್ಧೆಯಲ್ಲಿ ಚಿನ್ನ ಗೆದ್ದು ಬಂದ ನೀರಜ್ ಚೋಪ್ರಾರ ಆರಂಭಿಕ ಗುರು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಬನವಾಸಿ ಬಳಿಯ ಬೆಂಗಳೆಯ ಕಾಶೀನಾಥ್ ನಾಯ್ಕ್‌ರವರಿಗೆ ಕ್ರೀಡಾ ದಿನದಂದು ತವರೂರಲ್ಲಿ ಸನ್ಮಾನಿಸಲಾಗಿದೆ.

ರಾಷ್ಟ್ರಕ್ಕೆ ಹೆಮ್ಮೆ ತಂದ ಬಂಗಾರದ ಹುಡುಗನಿಗೆ ತರಬೇತಿ ನೀಡಿದ ಸಾಧನೆಗಾಗಿ ತಾಲೂಕಾಡಳಿತ ಕಾಶೀನಾಥ್ ನಾಯ್ಕ್‌ರವರನ್ನು ಊರಿಗೆ ಕರೆಸಿ ಗೌರವಿಸಿದೆ. ಶಿರಸಿಯ ಶಾಸಕರು ಮತ್ತು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಮಾನದಿಂದ ಸನ್ಮಾನಿಸಿದ್ದಾರೆ.

2010ರಲ್ಲಿ ನಡೆದ ಕಾಮನ್ ವೆಲ್ತ್ ಗೇಮ್ಸ್‌ ಜಾವಲಿನ್ ಥ್ರೋನಲ್ಲಿ ಕಾಶೀನಾಥ ನಾಯ್ಕ್ 74.29 ಮೀಟರ್ ದೂರ ಎಸೆದು ಕಂಚಿನ ಪದಕ ಪಡೆದಿದ್ದರು. ಸೈನ್ಯದಲ್ಲಿ ಸುಭೇದಾರ್ ಆಗಿರುವ ಅವರನ್ನು ಪಟಿಯಾಲಾದಲ್ಲಿ ಜಾವಲಿನ್ ಕೋಚ್ ಎಂದು ನೇಮಿಸಲಾಗಿತ್ತು. ಅಲ್ಲಿ ಅವರು ನೀರಜ್‌ಗೆ 2015 ರಿಂದ 2017ರವರೆಗೆ ನೀರಜ್‌ಗೆ ತರಬೇತಿ ಕೊಟ್ಟಿದ್ದರು.

ನೀರಜ್ ಚೋಪ್ರಾ ಚಿನ್ನದ ಪದಕ ತಂದಾಗ ರಾಜ್ಯ ಸರ್ಕಾರ ಅವರ ಗುರು ಕಾಶೀನಾಥ್‌ ನಾಯ್ಕ್‌ರವರಿಗೆ 10 ಲಕ್ಷ ರೂ ಬಹುಮಾನ ಘೋಷಿಸಿತ್ತು. ಆಗ ಅಸೂಯೆಯಿಂದ ಚಡಪಡಿಸಿದ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷ ಅದಿಲ್ಲೆ ಸುಮರಿವಾಲಾ ಆಕ್ಷೇಪ ವ್ಯಕ್ತಪಡಿಸಿದ್ದರು. ನೀರಜ್ ಚೋಪ್ರಾಗೆ ಕಾಶೀನಾಥ್ ನಾಯ್ಕ್‌ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶೀನಾಥ್ ಯಾರು ಎಂಬುದೇ ನಮಗೆ ಗೊತ್ತಿಲ್ಲ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಅನಾವಶ್ಯಕ ಮುಜುಗರಕ್ಕೀಡಾಗಿದ್ದ ಕಾಶೀನಾಥರ ಪುಣೆಯ ಮನೆಗೆ ಶಿಷ್ಯ ನೀರಜ್ ಚೋಪ್ರಾ ಖುದ್ದು ಭೇಟಿ ನೀಡಿ ಗುರುವಿಗೆ ಕೃತಜ್ಞತೆ ಅರ್ಪಿಸಿದಾಗ ಟೀಕಾಕಾರರ ಬಾಯಿ ಬಂದ್ ಆಗಿತ್ತು.

ಈಗ ಕಾಶೀನಾಥರಿಗೆ ಹುಟ್ಟೂರಲ್ಲಿ ಬಂಗಾರದಂತಹ ಶಿಷ್ಯನನನ್ನು ತರಬೇತುಗೊಳಿಸಿದ್ದಕ್ಕೆ ಸನ್ಮಾನ ಮಾಡಿರುವುದು ಅವರು ನೀರಜ್‌ಗೆ ತರಬೇತಿ ಕೊಟ್ಟಿರುವುದಕ್ಕೆ ಮತ್ತೊಂದು ಸಿಂಧುತ್ವ ಸಿಕ್ಕಾಂತಾಗಿದೆ.

ಶಿರಸಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತಾಡಿದ ಕಾಶೀನಾಥ ನಾಯ್ಕ್, “ಭಾರತದಲ್ಲಿ ವಿದೇಶಿ ಕೋಚ್‌ಗಳಿಗೆ ಕೊಡುವ ಸೌಲಭ್ಯಗಳು ದೇಶಿಯ ಕೋಚ್‌ಗಳಿಗೆ ಸಿಗುತ್ತಿಲ್ಲ. ಅಂತಹ ಸೌಲಭ್ಯ-ಸೌಕರ್ಯ-ಮಾನ್ಯತೆ-ಗೌರವ ನಮ್ಮ ತರಬೇತಿದಾರರಿಗೂ ಸಿಕ್ಕರೆ ದೇಶದ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಪತಾಕೆ ಹಾರಿಸುತ್ತಾರೆ. ದೇಶದ ಗೌರವ ಹೆಚ್ಚಿಸಲು ನಿಷ್ಠೆಯಿಂದ ಕೆಲಸಮಾಡುವ ತರಬೇತಿದಾರರಿಗೆ ಪ್ರೋತ್ಸಾಹ ಸಿಕ್ಕರೆ ಇನ್ನಷ್ಟು ಒಲಂಪಿಕ್ಸ್ ಮತ್ತಿತರ ಕ್ರೀಡಾಕೂಟದಲ್ಲಿ ದೇಶದ ಪ್ರತಿಭೆಗಳು ಪದಕ ಗೆಲ್ಲುವ ಸಾಮರ್ಥ್ಯ ತೋರಿಸುತ್ತಾರೆಂಬುದು ನನ್ನ ನಂಬಿಕೆ” ಎಂದರು.

ದೇಶದ ಕ್ರೀಡಾ ಕ್ಷೇತ್ರದ ವಾಸ್ತವ ಪರಿಸ್ಥಿತಿ ಕೆಟ್ಟದಾಗಿದ್ದರೂ ನಮ್ಮಲ್ಲಿನ ಕೋಚ್‌ಗಳು ದೇಶಾಭಿಮಾನದ ಬದ್ದತೆಯಿಂದ ತರಬೇತಿ ಕೊಡುತ್ತಿದ್ದಾರೆ. ಮುಂದಿನ ದಿನದಲ್ಲಾದರು ಕ್ರೀಡಾ ಕ್ಷೇತ್ರದತ್ತ ಸರ್ಕಾರ ಆಸಕ್ತಿ ವಹಿಸಿ ಪೂರಕ, ಪ್ರೋತ್ಸಾಹದಾಯಕ ವಾತವರಣ ಕಲ್ಪಿಸಬೇಕೆಂದು ನಾಯ್ಕ್ ಹೇಳಿದರು.

ಉತ್ತರ ಕನ್ನಡದಲ್ಲೂ ಬಹಳಷ್ಟು ಕ್ರೀಡಾ ಪ್ರತಿಭೆಗಳಿವೆ. ಅವರಿಗೆಲ್ಲ ಸರಿಯಾದ ಸೌಲಭ್ಯ ಒದಗಿಸಿ ಹರಿದುಂಬಿಸಬೇಕು. ಕೀಡಾ ಸಾಧಕನ ಹಿಂದಿರುವ ತರಬೇತಿದಾರನನ್ನು ತಾಯ್ನೆಲ ಗರುತಿಸಿರುವುದು ನನ್ನ ಬದುಕಲ್ಲಿ ಅಚ್ಚಳಿಯದ ನೆನಪಾಗಿ ಉಳಿಯಲಿದೆ. ನಾನು ಸೇನೆಯಿಂದ ನಿವೃತ್ತಿಯಾದ ಬಳಿಕ ತವರೂರು ಶಿರಸಿಯಲ್ಲೊಂದು ಕ್ರೀಡಾ ಅಕಾಡಮಿ ಸ್ಥಾಪಿಸು ಉದ್ದೇಶ ಹೊಂದಿದೇನೆ: ಖೇಲೋ ಇಂಡಿಯಾ ಇನ್ನಿತರ ಕ್ರೀಡಾ ಸೌಲಭ್ಯ- ಅವಕಾಶಗಳ ಕುರಿತು ತಿಳುವಳಿಕೆ, ಜಾಗೃತಿ ಮೂಡಿಸ ಬೇಕಾಗಿದೆ ಎಂದರು.

ಕಾಗೇರಿಯವರು ಮಾತನಾಡಿ, “ಶಿರಸಿ ಕ್ರೀಡಾಂಗಣದಲ್ಲಿ 3 ಕೋಟಿ ರೂ ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಮಾಡಿಸಬೇಕಿದೆ. ಕಾಶೀನಾಥ ನಾಯ್ಕ್‌ರವರ ಆಶಯದಂತೆ ದೇಶಿಯ ತರಬೇತಿದಾರರನ್ನೂ ಉತ್ತಮವಾಗಿ ಪರಿಗಣಿಸಲು ಸರ್ಕಾರದ ಗಮನ ಸೆಳೆಯುತ್ತೇನೆ” ಎಂದರು.


ಇದನ್ನೂ ಓದಿ: ಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...