Homeಮುಖಪುಟನೀರಜ್ ಚೋಪ್ರಾ ಗುರು ಕನ್ನಡಿಗ ಕಾಶೀನಾಥ್ ನಾಯ್ಕ್‌ರವರಿಗೆ ಹುಟ್ಟೂರಲ್ಲಿ ಸನ್ಮಾನ

ನೀರಜ್ ಚೋಪ್ರಾ ಗುರು ಕನ್ನಡಿಗ ಕಾಶೀನಾಥ್ ನಾಯ್ಕ್‌ರವರಿಗೆ ಹುಟ್ಟೂರಲ್ಲಿ ಸನ್ಮಾನ

ನಾನು ಸೇನೆಯಿಂದ ನಿವೃತ್ತಿಯಾದ ಬಳಿಕ ತವರೂರು ಶಿರಸಿಯಲ್ಲೊಂದು ಕ್ರೀಡಾ ಅಕಾಡಮಿ ಸ್ಥಾಪಿಸು ಉದ್ದೇಶ ಹೊಂದಿದೇನೆ. - ಕಾಶೀನಾಥ್ ನಾಯ್ಕ್‌

- Advertisement -
- Advertisement -

ಟೋಕಿಯೋ ಒಲಂಪಿಕ್ಸ್‌ನ ಜಾವಲಿನ್ ಎಸತ ಸ್ಪರ್ಧೆಯಲ್ಲಿ ಚಿನ್ನ ಗೆದ್ದು ಬಂದ ನೀರಜ್ ಚೋಪ್ರಾರ ಆರಂಭಿಕ ಗುರು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಬನವಾಸಿ ಬಳಿಯ ಬೆಂಗಳೆಯ ಕಾಶೀನಾಥ್ ನಾಯ್ಕ್‌ರವರಿಗೆ ಕ್ರೀಡಾ ದಿನದಂದು ತವರೂರಲ್ಲಿ ಸನ್ಮಾನಿಸಲಾಗಿದೆ.

ರಾಷ್ಟ್ರಕ್ಕೆ ಹೆಮ್ಮೆ ತಂದ ಬಂಗಾರದ ಹುಡುಗನಿಗೆ ತರಬೇತಿ ನೀಡಿದ ಸಾಧನೆಗಾಗಿ ತಾಲೂಕಾಡಳಿತ ಕಾಶೀನಾಥ್ ನಾಯ್ಕ್‌ರವರನ್ನು ಊರಿಗೆ ಕರೆಸಿ ಗೌರವಿಸಿದೆ. ಶಿರಸಿಯ ಶಾಸಕರು ಮತ್ತು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಮಾನದಿಂದ ಸನ್ಮಾನಿಸಿದ್ದಾರೆ.

2010ರಲ್ಲಿ ನಡೆದ ಕಾಮನ್ ವೆಲ್ತ್ ಗೇಮ್ಸ್‌ ಜಾವಲಿನ್ ಥ್ರೋನಲ್ಲಿ ಕಾಶೀನಾಥ ನಾಯ್ಕ್ 74.29 ಮೀಟರ್ ದೂರ ಎಸೆದು ಕಂಚಿನ ಪದಕ ಪಡೆದಿದ್ದರು. ಸೈನ್ಯದಲ್ಲಿ ಸುಭೇದಾರ್ ಆಗಿರುವ ಅವರನ್ನು ಪಟಿಯಾಲಾದಲ್ಲಿ ಜಾವಲಿನ್ ಕೋಚ್ ಎಂದು ನೇಮಿಸಲಾಗಿತ್ತು. ಅಲ್ಲಿ ಅವರು ನೀರಜ್‌ಗೆ 2015 ರಿಂದ 2017ರವರೆಗೆ ನೀರಜ್‌ಗೆ ತರಬೇತಿ ಕೊಟ್ಟಿದ್ದರು.

ನೀರಜ್ ಚೋಪ್ರಾ ಚಿನ್ನದ ಪದಕ ತಂದಾಗ ರಾಜ್ಯ ಸರ್ಕಾರ ಅವರ ಗುರು ಕಾಶೀನಾಥ್‌ ನಾಯ್ಕ್‌ರವರಿಗೆ 10 ಲಕ್ಷ ರೂ ಬಹುಮಾನ ಘೋಷಿಸಿತ್ತು. ಆಗ ಅಸೂಯೆಯಿಂದ ಚಡಪಡಿಸಿದ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷ ಅದಿಲ್ಲೆ ಸುಮರಿವಾಲಾ ಆಕ್ಷೇಪ ವ್ಯಕ್ತಪಡಿಸಿದ್ದರು. ನೀರಜ್ ಚೋಪ್ರಾಗೆ ಕಾಶೀನಾಥ್ ನಾಯ್ಕ್‌ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶೀನಾಥ್ ಯಾರು ಎಂಬುದೇ ನಮಗೆ ಗೊತ್ತಿಲ್ಲ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಅನಾವಶ್ಯಕ ಮುಜುಗರಕ್ಕೀಡಾಗಿದ್ದ ಕಾಶೀನಾಥರ ಪುಣೆಯ ಮನೆಗೆ ಶಿಷ್ಯ ನೀರಜ್ ಚೋಪ್ರಾ ಖುದ್ದು ಭೇಟಿ ನೀಡಿ ಗುರುವಿಗೆ ಕೃತಜ್ಞತೆ ಅರ್ಪಿಸಿದಾಗ ಟೀಕಾಕಾರರ ಬಾಯಿ ಬಂದ್ ಆಗಿತ್ತು.

ಈಗ ಕಾಶೀನಾಥರಿಗೆ ಹುಟ್ಟೂರಲ್ಲಿ ಬಂಗಾರದಂತಹ ಶಿಷ್ಯನನನ್ನು ತರಬೇತುಗೊಳಿಸಿದ್ದಕ್ಕೆ ಸನ್ಮಾನ ಮಾಡಿರುವುದು ಅವರು ನೀರಜ್‌ಗೆ ತರಬೇತಿ ಕೊಟ್ಟಿರುವುದಕ್ಕೆ ಮತ್ತೊಂದು ಸಿಂಧುತ್ವ ಸಿಕ್ಕಾಂತಾಗಿದೆ.

ಶಿರಸಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತಾಡಿದ ಕಾಶೀನಾಥ ನಾಯ್ಕ್, “ಭಾರತದಲ್ಲಿ ವಿದೇಶಿ ಕೋಚ್‌ಗಳಿಗೆ ಕೊಡುವ ಸೌಲಭ್ಯಗಳು ದೇಶಿಯ ಕೋಚ್‌ಗಳಿಗೆ ಸಿಗುತ್ತಿಲ್ಲ. ಅಂತಹ ಸೌಲಭ್ಯ-ಸೌಕರ್ಯ-ಮಾನ್ಯತೆ-ಗೌರವ ನಮ್ಮ ತರಬೇತಿದಾರರಿಗೂ ಸಿಕ್ಕರೆ ದೇಶದ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಪತಾಕೆ ಹಾರಿಸುತ್ತಾರೆ. ದೇಶದ ಗೌರವ ಹೆಚ್ಚಿಸಲು ನಿಷ್ಠೆಯಿಂದ ಕೆಲಸಮಾಡುವ ತರಬೇತಿದಾರರಿಗೆ ಪ್ರೋತ್ಸಾಹ ಸಿಕ್ಕರೆ ಇನ್ನಷ್ಟು ಒಲಂಪಿಕ್ಸ್ ಮತ್ತಿತರ ಕ್ರೀಡಾಕೂಟದಲ್ಲಿ ದೇಶದ ಪ್ರತಿಭೆಗಳು ಪದಕ ಗೆಲ್ಲುವ ಸಾಮರ್ಥ್ಯ ತೋರಿಸುತ್ತಾರೆಂಬುದು ನನ್ನ ನಂಬಿಕೆ” ಎಂದರು.

ದೇಶದ ಕ್ರೀಡಾ ಕ್ಷೇತ್ರದ ವಾಸ್ತವ ಪರಿಸ್ಥಿತಿ ಕೆಟ್ಟದಾಗಿದ್ದರೂ ನಮ್ಮಲ್ಲಿನ ಕೋಚ್‌ಗಳು ದೇಶಾಭಿಮಾನದ ಬದ್ದತೆಯಿಂದ ತರಬೇತಿ ಕೊಡುತ್ತಿದ್ದಾರೆ. ಮುಂದಿನ ದಿನದಲ್ಲಾದರು ಕ್ರೀಡಾ ಕ್ಷೇತ್ರದತ್ತ ಸರ್ಕಾರ ಆಸಕ್ತಿ ವಹಿಸಿ ಪೂರಕ, ಪ್ರೋತ್ಸಾಹದಾಯಕ ವಾತವರಣ ಕಲ್ಪಿಸಬೇಕೆಂದು ನಾಯ್ಕ್ ಹೇಳಿದರು.

ಉತ್ತರ ಕನ್ನಡದಲ್ಲೂ ಬಹಳಷ್ಟು ಕ್ರೀಡಾ ಪ್ರತಿಭೆಗಳಿವೆ. ಅವರಿಗೆಲ್ಲ ಸರಿಯಾದ ಸೌಲಭ್ಯ ಒದಗಿಸಿ ಹರಿದುಂಬಿಸಬೇಕು. ಕೀಡಾ ಸಾಧಕನ ಹಿಂದಿರುವ ತರಬೇತಿದಾರನನ್ನು ತಾಯ್ನೆಲ ಗರುತಿಸಿರುವುದು ನನ್ನ ಬದುಕಲ್ಲಿ ಅಚ್ಚಳಿಯದ ನೆನಪಾಗಿ ಉಳಿಯಲಿದೆ. ನಾನು ಸೇನೆಯಿಂದ ನಿವೃತ್ತಿಯಾದ ಬಳಿಕ ತವರೂರು ಶಿರಸಿಯಲ್ಲೊಂದು ಕ್ರೀಡಾ ಅಕಾಡಮಿ ಸ್ಥಾಪಿಸು ಉದ್ದೇಶ ಹೊಂದಿದೇನೆ: ಖೇಲೋ ಇಂಡಿಯಾ ಇನ್ನಿತರ ಕ್ರೀಡಾ ಸೌಲಭ್ಯ- ಅವಕಾಶಗಳ ಕುರಿತು ತಿಳುವಳಿಕೆ, ಜಾಗೃತಿ ಮೂಡಿಸ ಬೇಕಾಗಿದೆ ಎಂದರು.

ಕಾಗೇರಿಯವರು ಮಾತನಾಡಿ, “ಶಿರಸಿ ಕ್ರೀಡಾಂಗಣದಲ್ಲಿ 3 ಕೋಟಿ ರೂ ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಮಾಡಿಸಬೇಕಿದೆ. ಕಾಶೀನಾಥ ನಾಯ್ಕ್‌ರವರ ಆಶಯದಂತೆ ದೇಶಿಯ ತರಬೇತಿದಾರರನ್ನೂ ಉತ್ತಮವಾಗಿ ಪರಿಗಣಿಸಲು ಸರ್ಕಾರದ ಗಮನ ಸೆಳೆಯುತ್ತೇನೆ” ಎಂದರು.


ಇದನ್ನೂ ಓದಿ: ಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...