Homeಮುಖಪುಟನೀರಜ್ ಚೋಪ್ರಾ ಗುರು ಕನ್ನಡಿಗ ಕಾಶೀನಾಥ್ ನಾಯ್ಕ್‌ರವರಿಗೆ ಹುಟ್ಟೂರಲ್ಲಿ ಸನ್ಮಾನ

ನೀರಜ್ ಚೋಪ್ರಾ ಗುರು ಕನ್ನಡಿಗ ಕಾಶೀನಾಥ್ ನಾಯ್ಕ್‌ರವರಿಗೆ ಹುಟ್ಟೂರಲ್ಲಿ ಸನ್ಮಾನ

ನಾನು ಸೇನೆಯಿಂದ ನಿವೃತ್ತಿಯಾದ ಬಳಿಕ ತವರೂರು ಶಿರಸಿಯಲ್ಲೊಂದು ಕ್ರೀಡಾ ಅಕಾಡಮಿ ಸ್ಥಾಪಿಸು ಉದ್ದೇಶ ಹೊಂದಿದೇನೆ. - ಕಾಶೀನಾಥ್ ನಾಯ್ಕ್‌

- Advertisement -
- Advertisement -

ಟೋಕಿಯೋ ಒಲಂಪಿಕ್ಸ್‌ನ ಜಾವಲಿನ್ ಎಸತ ಸ್ಪರ್ಧೆಯಲ್ಲಿ ಚಿನ್ನ ಗೆದ್ದು ಬಂದ ನೀರಜ್ ಚೋಪ್ರಾರ ಆರಂಭಿಕ ಗುರು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಬನವಾಸಿ ಬಳಿಯ ಬೆಂಗಳೆಯ ಕಾಶೀನಾಥ್ ನಾಯ್ಕ್‌ರವರಿಗೆ ಕ್ರೀಡಾ ದಿನದಂದು ತವರೂರಲ್ಲಿ ಸನ್ಮಾನಿಸಲಾಗಿದೆ.

ರಾಷ್ಟ್ರಕ್ಕೆ ಹೆಮ್ಮೆ ತಂದ ಬಂಗಾರದ ಹುಡುಗನಿಗೆ ತರಬೇತಿ ನೀಡಿದ ಸಾಧನೆಗಾಗಿ ತಾಲೂಕಾಡಳಿತ ಕಾಶೀನಾಥ್ ನಾಯ್ಕ್‌ರವರನ್ನು ಊರಿಗೆ ಕರೆಸಿ ಗೌರವಿಸಿದೆ. ಶಿರಸಿಯ ಶಾಸಕರು ಮತ್ತು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಮಾನದಿಂದ ಸನ್ಮಾನಿಸಿದ್ದಾರೆ.

2010ರಲ್ಲಿ ನಡೆದ ಕಾಮನ್ ವೆಲ್ತ್ ಗೇಮ್ಸ್‌ ಜಾವಲಿನ್ ಥ್ರೋನಲ್ಲಿ ಕಾಶೀನಾಥ ನಾಯ್ಕ್ 74.29 ಮೀಟರ್ ದೂರ ಎಸೆದು ಕಂಚಿನ ಪದಕ ಪಡೆದಿದ್ದರು. ಸೈನ್ಯದಲ್ಲಿ ಸುಭೇದಾರ್ ಆಗಿರುವ ಅವರನ್ನು ಪಟಿಯಾಲಾದಲ್ಲಿ ಜಾವಲಿನ್ ಕೋಚ್ ಎಂದು ನೇಮಿಸಲಾಗಿತ್ತು. ಅಲ್ಲಿ ಅವರು ನೀರಜ್‌ಗೆ 2015 ರಿಂದ 2017ರವರೆಗೆ ನೀರಜ್‌ಗೆ ತರಬೇತಿ ಕೊಟ್ಟಿದ್ದರು.

ನೀರಜ್ ಚೋಪ್ರಾ ಚಿನ್ನದ ಪದಕ ತಂದಾಗ ರಾಜ್ಯ ಸರ್ಕಾರ ಅವರ ಗುರು ಕಾಶೀನಾಥ್‌ ನಾಯ್ಕ್‌ರವರಿಗೆ 10 ಲಕ್ಷ ರೂ ಬಹುಮಾನ ಘೋಷಿಸಿತ್ತು. ಆಗ ಅಸೂಯೆಯಿಂದ ಚಡಪಡಿಸಿದ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷ ಅದಿಲ್ಲೆ ಸುಮರಿವಾಲಾ ಆಕ್ಷೇಪ ವ್ಯಕ್ತಪಡಿಸಿದ್ದರು. ನೀರಜ್ ಚೋಪ್ರಾಗೆ ಕಾಶೀನಾಥ್ ನಾಯ್ಕ್‌ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶೀನಾಥ್ ಯಾರು ಎಂಬುದೇ ನಮಗೆ ಗೊತ್ತಿಲ್ಲ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಅನಾವಶ್ಯಕ ಮುಜುಗರಕ್ಕೀಡಾಗಿದ್ದ ಕಾಶೀನಾಥರ ಪುಣೆಯ ಮನೆಗೆ ಶಿಷ್ಯ ನೀರಜ್ ಚೋಪ್ರಾ ಖುದ್ದು ಭೇಟಿ ನೀಡಿ ಗುರುವಿಗೆ ಕೃತಜ್ಞತೆ ಅರ್ಪಿಸಿದಾಗ ಟೀಕಾಕಾರರ ಬಾಯಿ ಬಂದ್ ಆಗಿತ್ತು.

ಈಗ ಕಾಶೀನಾಥರಿಗೆ ಹುಟ್ಟೂರಲ್ಲಿ ಬಂಗಾರದಂತಹ ಶಿಷ್ಯನನನ್ನು ತರಬೇತುಗೊಳಿಸಿದ್ದಕ್ಕೆ ಸನ್ಮಾನ ಮಾಡಿರುವುದು ಅವರು ನೀರಜ್‌ಗೆ ತರಬೇತಿ ಕೊಟ್ಟಿರುವುದಕ್ಕೆ ಮತ್ತೊಂದು ಸಿಂಧುತ್ವ ಸಿಕ್ಕಾಂತಾಗಿದೆ.

ಶಿರಸಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತಾಡಿದ ಕಾಶೀನಾಥ ನಾಯ್ಕ್, “ಭಾರತದಲ್ಲಿ ವಿದೇಶಿ ಕೋಚ್‌ಗಳಿಗೆ ಕೊಡುವ ಸೌಲಭ್ಯಗಳು ದೇಶಿಯ ಕೋಚ್‌ಗಳಿಗೆ ಸಿಗುತ್ತಿಲ್ಲ. ಅಂತಹ ಸೌಲಭ್ಯ-ಸೌಕರ್ಯ-ಮಾನ್ಯತೆ-ಗೌರವ ನಮ್ಮ ತರಬೇತಿದಾರರಿಗೂ ಸಿಕ್ಕರೆ ದೇಶದ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಪತಾಕೆ ಹಾರಿಸುತ್ತಾರೆ. ದೇಶದ ಗೌರವ ಹೆಚ್ಚಿಸಲು ನಿಷ್ಠೆಯಿಂದ ಕೆಲಸಮಾಡುವ ತರಬೇತಿದಾರರಿಗೆ ಪ್ರೋತ್ಸಾಹ ಸಿಕ್ಕರೆ ಇನ್ನಷ್ಟು ಒಲಂಪಿಕ್ಸ್ ಮತ್ತಿತರ ಕ್ರೀಡಾಕೂಟದಲ್ಲಿ ದೇಶದ ಪ್ರತಿಭೆಗಳು ಪದಕ ಗೆಲ್ಲುವ ಸಾಮರ್ಥ್ಯ ತೋರಿಸುತ್ತಾರೆಂಬುದು ನನ್ನ ನಂಬಿಕೆ” ಎಂದರು.

ದೇಶದ ಕ್ರೀಡಾ ಕ್ಷೇತ್ರದ ವಾಸ್ತವ ಪರಿಸ್ಥಿತಿ ಕೆಟ್ಟದಾಗಿದ್ದರೂ ನಮ್ಮಲ್ಲಿನ ಕೋಚ್‌ಗಳು ದೇಶಾಭಿಮಾನದ ಬದ್ದತೆಯಿಂದ ತರಬೇತಿ ಕೊಡುತ್ತಿದ್ದಾರೆ. ಮುಂದಿನ ದಿನದಲ್ಲಾದರು ಕ್ರೀಡಾ ಕ್ಷೇತ್ರದತ್ತ ಸರ್ಕಾರ ಆಸಕ್ತಿ ವಹಿಸಿ ಪೂರಕ, ಪ್ರೋತ್ಸಾಹದಾಯಕ ವಾತವರಣ ಕಲ್ಪಿಸಬೇಕೆಂದು ನಾಯ್ಕ್ ಹೇಳಿದರು.

ಉತ್ತರ ಕನ್ನಡದಲ್ಲೂ ಬಹಳಷ್ಟು ಕ್ರೀಡಾ ಪ್ರತಿಭೆಗಳಿವೆ. ಅವರಿಗೆಲ್ಲ ಸರಿಯಾದ ಸೌಲಭ್ಯ ಒದಗಿಸಿ ಹರಿದುಂಬಿಸಬೇಕು. ಕೀಡಾ ಸಾಧಕನ ಹಿಂದಿರುವ ತರಬೇತಿದಾರನನ್ನು ತಾಯ್ನೆಲ ಗರುತಿಸಿರುವುದು ನನ್ನ ಬದುಕಲ್ಲಿ ಅಚ್ಚಳಿಯದ ನೆನಪಾಗಿ ಉಳಿಯಲಿದೆ. ನಾನು ಸೇನೆಯಿಂದ ನಿವೃತ್ತಿಯಾದ ಬಳಿಕ ತವರೂರು ಶಿರಸಿಯಲ್ಲೊಂದು ಕ್ರೀಡಾ ಅಕಾಡಮಿ ಸ್ಥಾಪಿಸು ಉದ್ದೇಶ ಹೊಂದಿದೇನೆ: ಖೇಲೋ ಇಂಡಿಯಾ ಇನ್ನಿತರ ಕ್ರೀಡಾ ಸೌಲಭ್ಯ- ಅವಕಾಶಗಳ ಕುರಿತು ತಿಳುವಳಿಕೆ, ಜಾಗೃತಿ ಮೂಡಿಸ ಬೇಕಾಗಿದೆ ಎಂದರು.

ಕಾಗೇರಿಯವರು ಮಾತನಾಡಿ, “ಶಿರಸಿ ಕ್ರೀಡಾಂಗಣದಲ್ಲಿ 3 ಕೋಟಿ ರೂ ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಮಾಡಿಸಬೇಕಿದೆ. ಕಾಶೀನಾಥ ನಾಯ್ಕ್‌ರವರ ಆಶಯದಂತೆ ದೇಶಿಯ ತರಬೇತಿದಾರರನ್ನೂ ಉತ್ತಮವಾಗಿ ಪರಿಗಣಿಸಲು ಸರ್ಕಾರದ ಗಮನ ಸೆಳೆಯುತ್ತೇನೆ” ಎಂದರು.


ಇದನ್ನೂ ಓದಿ: ಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....