Homeಮುಖಪುಟನೀರಜ್ ಚೋಪ್ರಾ ಗುರು ಕನ್ನಡಿಗ ಕಾಶೀನಾಥ್ ನಾಯ್ಕ್‌ರವರಿಗೆ ಹುಟ್ಟೂರಲ್ಲಿ ಸನ್ಮಾನ

ನೀರಜ್ ಚೋಪ್ರಾ ಗುರು ಕನ್ನಡಿಗ ಕಾಶೀನಾಥ್ ನಾಯ್ಕ್‌ರವರಿಗೆ ಹುಟ್ಟೂರಲ್ಲಿ ಸನ್ಮಾನ

ನಾನು ಸೇನೆಯಿಂದ ನಿವೃತ್ತಿಯಾದ ಬಳಿಕ ತವರೂರು ಶಿರಸಿಯಲ್ಲೊಂದು ಕ್ರೀಡಾ ಅಕಾಡಮಿ ಸ್ಥಾಪಿಸು ಉದ್ದೇಶ ಹೊಂದಿದೇನೆ. - ಕಾಶೀನಾಥ್ ನಾಯ್ಕ್‌

- Advertisement -
- Advertisement -

ಟೋಕಿಯೋ ಒಲಂಪಿಕ್ಸ್‌ನ ಜಾವಲಿನ್ ಎಸತ ಸ್ಪರ್ಧೆಯಲ್ಲಿ ಚಿನ್ನ ಗೆದ್ದು ಬಂದ ನೀರಜ್ ಚೋಪ್ರಾರ ಆರಂಭಿಕ ಗುರು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಬನವಾಸಿ ಬಳಿಯ ಬೆಂಗಳೆಯ ಕಾಶೀನಾಥ್ ನಾಯ್ಕ್‌ರವರಿಗೆ ಕ್ರೀಡಾ ದಿನದಂದು ತವರೂರಲ್ಲಿ ಸನ್ಮಾನಿಸಲಾಗಿದೆ.

ರಾಷ್ಟ್ರಕ್ಕೆ ಹೆಮ್ಮೆ ತಂದ ಬಂಗಾರದ ಹುಡುಗನಿಗೆ ತರಬೇತಿ ನೀಡಿದ ಸಾಧನೆಗಾಗಿ ತಾಲೂಕಾಡಳಿತ ಕಾಶೀನಾಥ್ ನಾಯ್ಕ್‌ರವರನ್ನು ಊರಿಗೆ ಕರೆಸಿ ಗೌರವಿಸಿದೆ. ಶಿರಸಿಯ ಶಾಸಕರು ಮತ್ತು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಮಾನದಿಂದ ಸನ್ಮಾನಿಸಿದ್ದಾರೆ.

2010ರಲ್ಲಿ ನಡೆದ ಕಾಮನ್ ವೆಲ್ತ್ ಗೇಮ್ಸ್‌ ಜಾವಲಿನ್ ಥ್ರೋನಲ್ಲಿ ಕಾಶೀನಾಥ ನಾಯ್ಕ್ 74.29 ಮೀಟರ್ ದೂರ ಎಸೆದು ಕಂಚಿನ ಪದಕ ಪಡೆದಿದ್ದರು. ಸೈನ್ಯದಲ್ಲಿ ಸುಭೇದಾರ್ ಆಗಿರುವ ಅವರನ್ನು ಪಟಿಯಾಲಾದಲ್ಲಿ ಜಾವಲಿನ್ ಕೋಚ್ ಎಂದು ನೇಮಿಸಲಾಗಿತ್ತು. ಅಲ್ಲಿ ಅವರು ನೀರಜ್‌ಗೆ 2015 ರಿಂದ 2017ರವರೆಗೆ ನೀರಜ್‌ಗೆ ತರಬೇತಿ ಕೊಟ್ಟಿದ್ದರು.

ನೀರಜ್ ಚೋಪ್ರಾ ಚಿನ್ನದ ಪದಕ ತಂದಾಗ ರಾಜ್ಯ ಸರ್ಕಾರ ಅವರ ಗುರು ಕಾಶೀನಾಥ್‌ ನಾಯ್ಕ್‌ರವರಿಗೆ 10 ಲಕ್ಷ ರೂ ಬಹುಮಾನ ಘೋಷಿಸಿತ್ತು. ಆಗ ಅಸೂಯೆಯಿಂದ ಚಡಪಡಿಸಿದ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷ ಅದಿಲ್ಲೆ ಸುಮರಿವಾಲಾ ಆಕ್ಷೇಪ ವ್ಯಕ್ತಪಡಿಸಿದ್ದರು. ನೀರಜ್ ಚೋಪ್ರಾಗೆ ಕಾಶೀನಾಥ್ ನಾಯ್ಕ್‌ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶೀನಾಥ್ ಯಾರು ಎಂಬುದೇ ನಮಗೆ ಗೊತ್ತಿಲ್ಲ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಅನಾವಶ್ಯಕ ಮುಜುಗರಕ್ಕೀಡಾಗಿದ್ದ ಕಾಶೀನಾಥರ ಪುಣೆಯ ಮನೆಗೆ ಶಿಷ್ಯ ನೀರಜ್ ಚೋಪ್ರಾ ಖುದ್ದು ಭೇಟಿ ನೀಡಿ ಗುರುವಿಗೆ ಕೃತಜ್ಞತೆ ಅರ್ಪಿಸಿದಾಗ ಟೀಕಾಕಾರರ ಬಾಯಿ ಬಂದ್ ಆಗಿತ್ತು.

ಈಗ ಕಾಶೀನಾಥರಿಗೆ ಹುಟ್ಟೂರಲ್ಲಿ ಬಂಗಾರದಂತಹ ಶಿಷ್ಯನನನ್ನು ತರಬೇತುಗೊಳಿಸಿದ್ದಕ್ಕೆ ಸನ್ಮಾನ ಮಾಡಿರುವುದು ಅವರು ನೀರಜ್‌ಗೆ ತರಬೇತಿ ಕೊಟ್ಟಿರುವುದಕ್ಕೆ ಮತ್ತೊಂದು ಸಿಂಧುತ್ವ ಸಿಕ್ಕಾಂತಾಗಿದೆ.

ಶಿರಸಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತಾಡಿದ ಕಾಶೀನಾಥ ನಾಯ್ಕ್, “ಭಾರತದಲ್ಲಿ ವಿದೇಶಿ ಕೋಚ್‌ಗಳಿಗೆ ಕೊಡುವ ಸೌಲಭ್ಯಗಳು ದೇಶಿಯ ಕೋಚ್‌ಗಳಿಗೆ ಸಿಗುತ್ತಿಲ್ಲ. ಅಂತಹ ಸೌಲಭ್ಯ-ಸೌಕರ್ಯ-ಮಾನ್ಯತೆ-ಗೌರವ ನಮ್ಮ ತರಬೇತಿದಾರರಿಗೂ ಸಿಕ್ಕರೆ ದೇಶದ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಪತಾಕೆ ಹಾರಿಸುತ್ತಾರೆ. ದೇಶದ ಗೌರವ ಹೆಚ್ಚಿಸಲು ನಿಷ್ಠೆಯಿಂದ ಕೆಲಸಮಾಡುವ ತರಬೇತಿದಾರರಿಗೆ ಪ್ರೋತ್ಸಾಹ ಸಿಕ್ಕರೆ ಇನ್ನಷ್ಟು ಒಲಂಪಿಕ್ಸ್ ಮತ್ತಿತರ ಕ್ರೀಡಾಕೂಟದಲ್ಲಿ ದೇಶದ ಪ್ರತಿಭೆಗಳು ಪದಕ ಗೆಲ್ಲುವ ಸಾಮರ್ಥ್ಯ ತೋರಿಸುತ್ತಾರೆಂಬುದು ನನ್ನ ನಂಬಿಕೆ” ಎಂದರು.

ದೇಶದ ಕ್ರೀಡಾ ಕ್ಷೇತ್ರದ ವಾಸ್ತವ ಪರಿಸ್ಥಿತಿ ಕೆಟ್ಟದಾಗಿದ್ದರೂ ನಮ್ಮಲ್ಲಿನ ಕೋಚ್‌ಗಳು ದೇಶಾಭಿಮಾನದ ಬದ್ದತೆಯಿಂದ ತರಬೇತಿ ಕೊಡುತ್ತಿದ್ದಾರೆ. ಮುಂದಿನ ದಿನದಲ್ಲಾದರು ಕ್ರೀಡಾ ಕ್ಷೇತ್ರದತ್ತ ಸರ್ಕಾರ ಆಸಕ್ತಿ ವಹಿಸಿ ಪೂರಕ, ಪ್ರೋತ್ಸಾಹದಾಯಕ ವಾತವರಣ ಕಲ್ಪಿಸಬೇಕೆಂದು ನಾಯ್ಕ್ ಹೇಳಿದರು.

ಉತ್ತರ ಕನ್ನಡದಲ್ಲೂ ಬಹಳಷ್ಟು ಕ್ರೀಡಾ ಪ್ರತಿಭೆಗಳಿವೆ. ಅವರಿಗೆಲ್ಲ ಸರಿಯಾದ ಸೌಲಭ್ಯ ಒದಗಿಸಿ ಹರಿದುಂಬಿಸಬೇಕು. ಕೀಡಾ ಸಾಧಕನ ಹಿಂದಿರುವ ತರಬೇತಿದಾರನನ್ನು ತಾಯ್ನೆಲ ಗರುತಿಸಿರುವುದು ನನ್ನ ಬದುಕಲ್ಲಿ ಅಚ್ಚಳಿಯದ ನೆನಪಾಗಿ ಉಳಿಯಲಿದೆ. ನಾನು ಸೇನೆಯಿಂದ ನಿವೃತ್ತಿಯಾದ ಬಳಿಕ ತವರೂರು ಶಿರಸಿಯಲ್ಲೊಂದು ಕ್ರೀಡಾ ಅಕಾಡಮಿ ಸ್ಥಾಪಿಸು ಉದ್ದೇಶ ಹೊಂದಿದೇನೆ: ಖೇಲೋ ಇಂಡಿಯಾ ಇನ್ನಿತರ ಕ್ರೀಡಾ ಸೌಲಭ್ಯ- ಅವಕಾಶಗಳ ಕುರಿತು ತಿಳುವಳಿಕೆ, ಜಾಗೃತಿ ಮೂಡಿಸ ಬೇಕಾಗಿದೆ ಎಂದರು.

ಕಾಗೇರಿಯವರು ಮಾತನಾಡಿ, “ಶಿರಸಿ ಕ್ರೀಡಾಂಗಣದಲ್ಲಿ 3 ಕೋಟಿ ರೂ ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಮಾಡಿಸಬೇಕಿದೆ. ಕಾಶೀನಾಥ ನಾಯ್ಕ್‌ರವರ ಆಶಯದಂತೆ ದೇಶಿಯ ತರಬೇತಿದಾರರನ್ನೂ ಉತ್ತಮವಾಗಿ ಪರಿಗಣಿಸಲು ಸರ್ಕಾರದ ಗಮನ ಸೆಳೆಯುತ್ತೇನೆ” ಎಂದರು.


ಇದನ್ನೂ ಓದಿ: ಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...