Homeಮುಖಪುಟನೀರಜ್ ಚೋಪ್ರಾ ಗುರು ಕನ್ನಡಿಗ ಕಾಶೀನಾಥ್ ನಾಯ್ಕ್‌ರವರಿಗೆ ಹುಟ್ಟೂರಲ್ಲಿ ಸನ್ಮಾನ

ನೀರಜ್ ಚೋಪ್ರಾ ಗುರು ಕನ್ನಡಿಗ ಕಾಶೀನಾಥ್ ನಾಯ್ಕ್‌ರವರಿಗೆ ಹುಟ್ಟೂರಲ್ಲಿ ಸನ್ಮಾನ

ನಾನು ಸೇನೆಯಿಂದ ನಿವೃತ್ತಿಯಾದ ಬಳಿಕ ತವರೂರು ಶಿರಸಿಯಲ್ಲೊಂದು ಕ್ರೀಡಾ ಅಕಾಡಮಿ ಸ್ಥಾಪಿಸು ಉದ್ದೇಶ ಹೊಂದಿದೇನೆ. - ಕಾಶೀನಾಥ್ ನಾಯ್ಕ್‌

- Advertisement -
- Advertisement -

ಟೋಕಿಯೋ ಒಲಂಪಿಕ್ಸ್‌ನ ಜಾವಲಿನ್ ಎಸತ ಸ್ಪರ್ಧೆಯಲ್ಲಿ ಚಿನ್ನ ಗೆದ್ದು ಬಂದ ನೀರಜ್ ಚೋಪ್ರಾರ ಆರಂಭಿಕ ಗುರು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಬನವಾಸಿ ಬಳಿಯ ಬೆಂಗಳೆಯ ಕಾಶೀನಾಥ್ ನಾಯ್ಕ್‌ರವರಿಗೆ ಕ್ರೀಡಾ ದಿನದಂದು ತವರೂರಲ್ಲಿ ಸನ್ಮಾನಿಸಲಾಗಿದೆ.

ರಾಷ್ಟ್ರಕ್ಕೆ ಹೆಮ್ಮೆ ತಂದ ಬಂಗಾರದ ಹುಡುಗನಿಗೆ ತರಬೇತಿ ನೀಡಿದ ಸಾಧನೆಗಾಗಿ ತಾಲೂಕಾಡಳಿತ ಕಾಶೀನಾಥ್ ನಾಯ್ಕ್‌ರವರನ್ನು ಊರಿಗೆ ಕರೆಸಿ ಗೌರವಿಸಿದೆ. ಶಿರಸಿಯ ಶಾಸಕರು ಮತ್ತು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಮಾನದಿಂದ ಸನ್ಮಾನಿಸಿದ್ದಾರೆ.

2010ರಲ್ಲಿ ನಡೆದ ಕಾಮನ್ ವೆಲ್ತ್ ಗೇಮ್ಸ್‌ ಜಾವಲಿನ್ ಥ್ರೋನಲ್ಲಿ ಕಾಶೀನಾಥ ನಾಯ್ಕ್ 74.29 ಮೀಟರ್ ದೂರ ಎಸೆದು ಕಂಚಿನ ಪದಕ ಪಡೆದಿದ್ದರು. ಸೈನ್ಯದಲ್ಲಿ ಸುಭೇದಾರ್ ಆಗಿರುವ ಅವರನ್ನು ಪಟಿಯಾಲಾದಲ್ಲಿ ಜಾವಲಿನ್ ಕೋಚ್ ಎಂದು ನೇಮಿಸಲಾಗಿತ್ತು. ಅಲ್ಲಿ ಅವರು ನೀರಜ್‌ಗೆ 2015 ರಿಂದ 2017ರವರೆಗೆ ನೀರಜ್‌ಗೆ ತರಬೇತಿ ಕೊಟ್ಟಿದ್ದರು.

ನೀರಜ್ ಚೋಪ್ರಾ ಚಿನ್ನದ ಪದಕ ತಂದಾಗ ರಾಜ್ಯ ಸರ್ಕಾರ ಅವರ ಗುರು ಕಾಶೀನಾಥ್‌ ನಾಯ್ಕ್‌ರವರಿಗೆ 10 ಲಕ್ಷ ರೂ ಬಹುಮಾನ ಘೋಷಿಸಿತ್ತು. ಆಗ ಅಸೂಯೆಯಿಂದ ಚಡಪಡಿಸಿದ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷ ಅದಿಲ್ಲೆ ಸುಮರಿವಾಲಾ ಆಕ್ಷೇಪ ವ್ಯಕ್ತಪಡಿಸಿದ್ದರು. ನೀರಜ್ ಚೋಪ್ರಾಗೆ ಕಾಶೀನಾಥ್ ನಾಯ್ಕ್‌ ಎಂಬುವವರನ್ನು ಕೋಚ್ ಆಗಿ ನೇಮಿಸಿಲ್ಲ. ಕಾಶೀನಾಥ್ ಯಾರು ಎಂಬುದೇ ನಮಗೆ ಗೊತ್ತಿಲ್ಲ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಅನಾವಶ್ಯಕ ಮುಜುಗರಕ್ಕೀಡಾಗಿದ್ದ ಕಾಶೀನಾಥರ ಪುಣೆಯ ಮನೆಗೆ ಶಿಷ್ಯ ನೀರಜ್ ಚೋಪ್ರಾ ಖುದ್ದು ಭೇಟಿ ನೀಡಿ ಗುರುವಿಗೆ ಕೃತಜ್ಞತೆ ಅರ್ಪಿಸಿದಾಗ ಟೀಕಾಕಾರರ ಬಾಯಿ ಬಂದ್ ಆಗಿತ್ತು.

ಈಗ ಕಾಶೀನಾಥರಿಗೆ ಹುಟ್ಟೂರಲ್ಲಿ ಬಂಗಾರದಂತಹ ಶಿಷ್ಯನನನ್ನು ತರಬೇತುಗೊಳಿಸಿದ್ದಕ್ಕೆ ಸನ್ಮಾನ ಮಾಡಿರುವುದು ಅವರು ನೀರಜ್‌ಗೆ ತರಬೇತಿ ಕೊಟ್ಟಿರುವುದಕ್ಕೆ ಮತ್ತೊಂದು ಸಿಂಧುತ್ವ ಸಿಕ್ಕಾಂತಾಗಿದೆ.

ಶಿರಸಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತಾಡಿದ ಕಾಶೀನಾಥ ನಾಯ್ಕ್, “ಭಾರತದಲ್ಲಿ ವಿದೇಶಿ ಕೋಚ್‌ಗಳಿಗೆ ಕೊಡುವ ಸೌಲಭ್ಯಗಳು ದೇಶಿಯ ಕೋಚ್‌ಗಳಿಗೆ ಸಿಗುತ್ತಿಲ್ಲ. ಅಂತಹ ಸೌಲಭ್ಯ-ಸೌಕರ್ಯ-ಮಾನ್ಯತೆ-ಗೌರವ ನಮ್ಮ ತರಬೇತಿದಾರರಿಗೂ ಸಿಕ್ಕರೆ ದೇಶದ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಪತಾಕೆ ಹಾರಿಸುತ್ತಾರೆ. ದೇಶದ ಗೌರವ ಹೆಚ್ಚಿಸಲು ನಿಷ್ಠೆಯಿಂದ ಕೆಲಸಮಾಡುವ ತರಬೇತಿದಾರರಿಗೆ ಪ್ರೋತ್ಸಾಹ ಸಿಕ್ಕರೆ ಇನ್ನಷ್ಟು ಒಲಂಪಿಕ್ಸ್ ಮತ್ತಿತರ ಕ್ರೀಡಾಕೂಟದಲ್ಲಿ ದೇಶದ ಪ್ರತಿಭೆಗಳು ಪದಕ ಗೆಲ್ಲುವ ಸಾಮರ್ಥ್ಯ ತೋರಿಸುತ್ತಾರೆಂಬುದು ನನ್ನ ನಂಬಿಕೆ” ಎಂದರು.

ದೇಶದ ಕ್ರೀಡಾ ಕ್ಷೇತ್ರದ ವಾಸ್ತವ ಪರಿಸ್ಥಿತಿ ಕೆಟ್ಟದಾಗಿದ್ದರೂ ನಮ್ಮಲ್ಲಿನ ಕೋಚ್‌ಗಳು ದೇಶಾಭಿಮಾನದ ಬದ್ದತೆಯಿಂದ ತರಬೇತಿ ಕೊಡುತ್ತಿದ್ದಾರೆ. ಮುಂದಿನ ದಿನದಲ್ಲಾದರು ಕ್ರೀಡಾ ಕ್ಷೇತ್ರದತ್ತ ಸರ್ಕಾರ ಆಸಕ್ತಿ ವಹಿಸಿ ಪೂರಕ, ಪ್ರೋತ್ಸಾಹದಾಯಕ ವಾತವರಣ ಕಲ್ಪಿಸಬೇಕೆಂದು ನಾಯ್ಕ್ ಹೇಳಿದರು.

ಉತ್ತರ ಕನ್ನಡದಲ್ಲೂ ಬಹಳಷ್ಟು ಕ್ರೀಡಾ ಪ್ರತಿಭೆಗಳಿವೆ. ಅವರಿಗೆಲ್ಲ ಸರಿಯಾದ ಸೌಲಭ್ಯ ಒದಗಿಸಿ ಹರಿದುಂಬಿಸಬೇಕು. ಕೀಡಾ ಸಾಧಕನ ಹಿಂದಿರುವ ತರಬೇತಿದಾರನನ್ನು ತಾಯ್ನೆಲ ಗರುತಿಸಿರುವುದು ನನ್ನ ಬದುಕಲ್ಲಿ ಅಚ್ಚಳಿಯದ ನೆನಪಾಗಿ ಉಳಿಯಲಿದೆ. ನಾನು ಸೇನೆಯಿಂದ ನಿವೃತ್ತಿಯಾದ ಬಳಿಕ ತವರೂರು ಶಿರಸಿಯಲ್ಲೊಂದು ಕ್ರೀಡಾ ಅಕಾಡಮಿ ಸ್ಥಾಪಿಸು ಉದ್ದೇಶ ಹೊಂದಿದೇನೆ: ಖೇಲೋ ಇಂಡಿಯಾ ಇನ್ನಿತರ ಕ್ರೀಡಾ ಸೌಲಭ್ಯ- ಅವಕಾಶಗಳ ಕುರಿತು ತಿಳುವಳಿಕೆ, ಜಾಗೃತಿ ಮೂಡಿಸ ಬೇಕಾಗಿದೆ ಎಂದರು.

ಕಾಗೇರಿಯವರು ಮಾತನಾಡಿ, “ಶಿರಸಿ ಕ್ರೀಡಾಂಗಣದಲ್ಲಿ 3 ಕೋಟಿ ರೂ ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಮಾಡಿಸಬೇಕಿದೆ. ಕಾಶೀನಾಥ ನಾಯ್ಕ್‌ರವರ ಆಶಯದಂತೆ ದೇಶಿಯ ತರಬೇತಿದಾರರನ್ನೂ ಉತ್ತಮವಾಗಿ ಪರಿಗಣಿಸಲು ಸರ್ಕಾರದ ಗಮನ ಸೆಳೆಯುತ್ತೇನೆ” ಎಂದರು.


ಇದನ್ನೂ ಓದಿ: ಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...