Homeಮುಖಪುಟಮುಂದುವರಿದ NEET ವಿದ್ಯಾರ್ಥಿಗಳ ಆತ್ಮಹತ್ಯೆ: ಸಾವಿನ ಸಂಖ್ಯೆ 25ಕ್ಕೆ ಏರಿಕೆ

ಮುಂದುವರಿದ NEET ವಿದ್ಯಾರ್ಥಿಗಳ ಆತ್ಮಹತ್ಯೆ: ಸಾವಿನ ಸಂಖ್ಯೆ 25ಕ್ಕೆ ಏರಿಕೆ

- Advertisement -
- Advertisement -

ರಾಜಸ್ಥಾನದ ಕೋಟಾದಲ್ಲಿ ನೀಟ್ ಆಕಾಂಕ್ಷಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ ದಿನೇ ದಿನೇ ಹೆಚ್ಚಳವಾಗುತ್ತಿದ್ದು, 20 ವರ್ಷದ ನೀಟ್ ಆಕಾಂಕ್ಷಿ ಪಶ್ಚಿಮ ಬಂಗಾಳ ಮೂಲದ ವಿದ್ಯಾರ್ಥಿಯೋರ್ವ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು ವರ್ಷದಲ್ಲಿ ನೀಟ್‌ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಆತ್ಮಹತ್ಯೆ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.

ಪಶ್ಚಿಮ ಬಂಗಾಳದ ಬಿರ್ಹಮ್ ಜಿಲ್ಲೆಯವರಾದ ಫೌರೀದ್ ಹುಸೇನ್ (20) ಆತ್ಮಹತ್ಯೆ ಮಾಡಿಕೊಂಡವರು. ಇವರು ಕೋಟಾದ ವೌಫ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕೋಟಾದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ವೈದ್ಯಕೀಯ ಕೋರ್ಸ್‌ ಪ್ರವೇಶಾತಿಗಾಗಿ ನೀಟ್‌ ಪರೀಕ್ಷೆಗೆ ಕಳೆದ ಒಂದು ವರ್ಷದಿಂದ  ಸಿದ್ಧತೆಯನ್ನು ನಡೆಸುತ್ತಿದ್ದರು.

ಸೋಮವಾರ ಮಧ್ಯಾಹ್ನ ಪೌರೀದ್‌ ಹುಸೇನ್ ರೂಂಗೆ ಹೋಗಿದ್ದರು. ರಾತ್ರಿ 8 ಗಂಟೆಯಾದರೂ ಕೊಠಡಿಯಿಂದ ಹೊರಗೆ ಬಾರದಿದ್ದಾಗ ಪರೀದ್‌ಗೆ ಸ್ನೇಹಿತರು ಕರೆ ಮಾಡಿದ್ದಾರೆ. ಆದರೆ ಅವರು ಯಾವುದೇ ಪ್ರತಿಕ್ರಿಯೆಯನ್ನು ನೀಡದಿದ್ದಾಗ ಮನೆ ಮಾಲಕರಿಗೆ ಮಾಹಿತಿಯನ್ನು ನೀಡಲಾಗಿದೆ. ಬಳಿಕ ಮನೆ ಮಾಲಕ ಪೊಲೀಸರ ಜೊತೆ ಬಂದು ಪರಿಶೀಲನೆ ನಡೆಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

ದಾದಾಬರಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ರಾಜೇಶ್ ಪಾಠಕ್ ಈ ಕುರಿತು ಪ್ರತಿಕ್ರಿಯಿಸಿದ್ದು, ಪೌರೀದ್‌ ಹುಸೇನ್ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಯಾವುದೆ ಆತ್ಮಹತ್ಯಾ ಟಿಪ್ಪಣಿ ಕಂಡುಬಂದಿಲ್ಲ. ಆತ್ಮಹತ್ಯೆಗೆ ನಿಖರ ಕಾರಣ ತನಿಖೆಯಿಂದಲೆ ತಿಳಿದು ಬರಬೇಕಿದೆ ಎಂದು ಹೇಳಿದ್ದಾರೆ.

ಇದೇ ಸೆ.18ರಂದು ಕೋಟಾದಲ್ಲಿ ನೀಟ್‌ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಉತ್ತರಪ್ರದೇಶದ 16 ವರ್ಷದ ಬಾಲಕಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸೆಪ್ಟಂಬರ್‌ನಲ್ಲಿ ಕೋಟಾದಲ್ಲಿ ನಡೆದ 2ನೇ ಆತ್ಮಹತ್ಯೆ ಪ್ರಕರಣ ಇದಾಗಿತ್ತು. ಆಗಸ್ಟ್‌ನಲ್ಲಿ 6 ಕೋಚಿಂಗ್ ವಿದ್ಯಾರ್ಥಿಗಳು ಕೋಟಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಜೆಇಇ,  ನೀಟ್, ಯುಪಿಎಸ್ಸಿಯಂತಹ  ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ವಾರ್ಷಿಕ  2.5 ಲಕ್ಷ ವಿದ್ಯಾರ್ಥಿಗಳು ಕೋಟಕ್ಕೆ  ಬಂದು  ತರಬೇತಿ  ಕೇಂದ್ರಗಳಿಗೆ ದಾಖಲಾಗುತ್ತಾರೆ. ಕಳೆದ ಕೆಲ ವರ್ಷಗಳಲ್ಲಿ ವಿದ್ಯಾರ್ಥಿಗಳು ಇದೇ ಪ್ರದೇಶಗಳಲ್ಲಿ ಹೆಚ್ಚು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

ಇನ್ನು ರಾಜಸ್ಥಾನದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ ಹೆಚ್ಚಳವಾಗುತ್ತಿದ್ದಂತೆ ವಿದ್ಯಾರ್ಥಿಗಳು ಖಿನ್ನತೆ, ಒತ್ತಡಕ್ಕೆ ಒಳಗಾಗಿದ್ದಾರೆಯೇ ಎಂಬುವುದನ್ನು ಪತ್ತೆ ಹಚ್ಚಲು ವಾರ್ಡನ್‌ಗಳು, ಮೆಸ್ ಕೆಲಸಗಾರರು ಮತ್ತು  ಆಹಾರ ಪೂರೈಕೆದಾರರನ್ನು ನಿಯೋಜಿಸಲಾಗಿತ್ತು. ವಿದ್ಯಾರ್ಥಿಗಳ ಮೇಲೆ ನಿಗಾವಹಿಸುವುದು, ಅವರ ಚಟುವಟಿಕೆಗಳನ್ನು ಗಮನಿಸುವುದು, ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್‌ಗೆ ವ್ಯವಸ್ಥೆ ಮಾಡಲಾಗಿತ್ತು. ಆದರೆ ಈ ಮಧ್ಯೆ ಆತ್ಮಹತ್ಯೆ ಪ್ರಕರಣಗಳ ಹೆಚ್ಚಳ ಆತಂಕಕ್ಕೆ ಕಾರಣವಾಗಿದೆ.

ತಮಿಳುನಾಡಿನಲ್ಲಿ ಇತ್ತೀಚೆಗೆ 19 ವರ್ಷದ ಮೆಡಿಕಲ್ ಸೀಟ್‌ಗಾಗಿ ನೀಟ್‌ ಆಕಾಂಕ್ಷಿ ವಿದ್ಯಾರ್ಥಿ ಜಗದೀಶ್ವರನ್ ನೀಟ್‌ನಲ್ಲಿ ಎರಡು ಬಾರಿ ಅನುತ್ತೀರ್ಣಗೊಂಡ ಬಳಿಕ ಚೆನ್ನೈನ ಕ್ರೋಮ್‌ಪೇಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಗನ ಆತ್ಮಹತ್ಯೆಯಿಂದ ನೊಂದು ಜಗದೀಶ್ವರನ್ ತಂದೆ ಸೆಲ್ವಶೇಖರ್ ನೀಟ್ ಕುರಿತು ಆಕ್ರೋಶವನ್ನು ವ್ಯಕ್ತಪಡಿಸಿ ಅವರು ಕೂಡ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದರು.

ಘಟನೆ ತಮಿಳುನಾಡಿನಲ್ಲಿ ಭಾರೀ ಸಂಚಲನವನ್ನು ಮೂಡಿಸಿತ್ತು. ತಮಿಳುನಾಡಿನಲ್ಲಿ ನೀಟ್‌ ರದ್ಧತಿಗೆ ಆಕ್ರೋಶ ಕೇಳಿ ಬಂದಿತ್ತು. ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್, ಇದು ಆತ್ಮಹತ್ಯೆಯಲ್ಲ, ಕೊಲೆ. ಇದಕ್ಕೆ ಕೇಂದ್ರ ಸರ್ಕಾರವೇ ಹೊಣೆ ಎಂದು ಆರೋಪಿಸಿದ್ದರು. ರಾಜ್ಯದಲ್ಲಿ ನೀಟ್ ಪರೀಕ್ಷೆಯನ್ನು ನಿಷೇಧಿಸಲು ನಿರಾಕರಿಸಿರುವ ರಾಜ್ಯಪಾಲ ಆರ್.ಎನ್.ರವಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದನ್ನು ಓದಿ: ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...