Homeಮುಖಪುಟನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ಕೋಚಿಂಗ್ ರಾಜಧಾನಿ ಕೋಟಾದಲ್ಲಿ 'ವಿದ್ಯಾರ್ಥಿಗಳ ಮಾರಣಹೋಮ'

- Advertisement -
- Advertisement -

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ.

ಜಾರ್ಖಂಡ್‌ನ ಹಜಾರಿಬಾಗ್ ಮತ್ತು ಬಿಹಾರದ ಪಾಟ್ನಾವನ್ನು ಗಮನದಲ್ಲಿಟ್ಟುಕೊಂಡು ಸಿಬಿಐ ತನಿಖೆಯನ್ನು ತೀವ್ರಗೊಳಿಸಿದೆ. ಹಜಾರಿಬಾಗ್‌ನ ಓಯಸಿಸ್ ಶಾಲೆಯಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಬಲವಾದ ಶಂಕೆಯ ಮೇಲೆ ಅಲ್ಲಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿಯನ್ನು ವಿಚಾರಣೆ ನಡೆಸಲಾಗುತ್ತಿದೆ.

ಈ ಪ್ರಕರಣದಲ್ಲಿ ಸಿಬಿಐ ಈವರೆಗೆ ಹಲವಾರು ಪ್ರಮುಖ ಆರೋಪಿಗಳನ್ನು ಬಂಧಿಸಿದೆ. ರಾಕಿ ಅಲಿಯಾಸ್ ರಾಕೇಶ್ ರಂಜನ್ ಪ್ರಮುಖ ಆರೋಪಿಯಾಗಿದ್ದಾನೆ. ಈತ ಈ ಹಗರಣದ ಮಾಸ್ಟರ್ ಮೈಂಡ್ ಎನ್ನಲಾಗಿದ್ದು, ಬಿಹಾರ ಮತ್ತು ಜಾರ್ಖಂಡ್‌ನ ಜಾಲವನ್ನು ನಿರ್ವಹಿಸುತ್ತಿದ್ದ ಎಂಬ ಆರೋಪವಿದೆ.

    ಮತ್ತೋರ್ವ ಆರೋಪಿ ಸಂಜೀವ್ ಮುಖಿಯಾ, ಈತನ ಗ್ಯಾಂಗ್ ಪೇಪರ್ ಸೋರಿಕೆ ಮಾಡುವಲ್ಲಿ ಕುಖ್ಯಾತಿ ಪಡೆದಿದ್ದು, ಈತನ ಹಲವು ಸಹಚರರನ್ನು ವಶಕ್ಕೆ ಪಡೆಯಲಾಗಿದೆ. ರಾಜಸ್ಥಾನ ಮತ್ತು ಗುಜರಾತ್‌ನಲ್ಲಿ ಪರೀಕ್ಷಾ ಕೇಂದ್ರಗಳೊಂದಿಗೆ ಶಾಮೀಲಾಗಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಏಜೆಂಟರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

    ಸಿಬಿಐ ಅಧಿಕಾರಿಗಳು ಆರೋಪಿಗಳ ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಪರೀಕ್ಷಾ ಕೇಂದ್ರದ ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಂಡಿದ್ದಾರೆ. ಸೋರಿಕೆಯಾದ ಪ್ರಶ್ನೆ ಪತ್ರಿಕೆಗಳನ್ನು ವಾಟ್ಸಾಪ್ ಮತ್ತು ಟೆಲಿಗ್ರಾಮ್ ಮೂಲಕ ಹಂಚಿಕೊಳ್ಳಲಾಗಿತ್ತು ಎಂಬ ಅಂಶವನ್ನು ಡಿಜಿಟಲ್ ಫೋರೆನ್ಸಿಕ್ ಮೂಲಕ ದೃಢಪಡಿಸಿಕೊಳ್ಳುತ್ತಿದ್ದಾರೆ.

    ರಾಜಸ್ಥಾನದಲ್ಲಿ ತೀವ್ರಗೊಂಡ ತನಿಖೆ

    ರಾಜಸ್ಥಾನದ ಜೈಪುರ, ಜೋಧ್‌ಪುರ ಮತ್ತು ಭರತ್‌ಪುರ ಭಾಗಗಳಲ್ಲಿ ಸಿಬಿಐ ದಾಳಿಗಳನ್ನು ತೀವ್ರಗೊಳಿಸಿದೆ. ಕೆಲವು ಖಾಸಗಿ ಕೋಚಿಂಗ್ ಸೆಂಟರ್‌ಗಳಿಗೂ ಈ ಹಗರಣದಲ್ಲಿ ಭಾಗಿಯಾಗಿರುವ ಸಂಶಯವಿದ್ದು, ಅವುಗಳ ಹಣಕಾಸು ವಹಿವಾಟನ್ನು ಪರಿಶೀಲಿಸಲಾಗುತ್ತಿದೆ.

    ಆರೋಪಿಗಳಿಗೆ ಬಿಜೆಪಿ ಲಿಂಕ್?

    ನೀಟ್ ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ಮತ್ತು ಇತರ ತನಿಖಾ ಸಂಸ್ಥೆಗಳು ಬಂಧಿಸಿರುವ ಆರೋಪಿಗಳ ರಾಜಕೀಯ ನಂಟುಗಳ ಕುರಿತು ಗಂಭೀರ ಆರೋಪ-ಪ್ರತ್ಯಾರೋಪಗಳು ಕೇಳಿಬರುತ್ತಿವೆ. ದಿನೇಶ್ ಬಿವಾಲ್ ಮತ್ತು ಮಂಗಿಲಾಲ್ ಬಿವಾಲ್ ಇಬ್ಬರೂ ಬಿಜೆಪಿ ನಾಯಕರಾಗಿದ್ದಾರೆ ಎಂಬ ಆರೋಪವಿದೆ. ಜೈಪುರದಲ್ಲಿ ಬಂಧಿತರಾದ ದಿನೇಶ್ ಬಿವಾಲ್ ಅವರು ಬಿಜೆಪಿ ನಾಯಕರೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ದಿನೇಶ್ ಅವರು ಪ್ರಭಾವಿ ಬಿಜೆಪಿ ಮುಖಂಡರು ಮತ್ತು ಸಚಿವರೊಂದಿಗೆ ಇರುವ ಫೋಟೋಗಳು ಹರಿದಾಡುತ್ತಿವೆ.

      ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಈ ಪ್ರಕರಣದಲ್ಲಿ ಬಿಜೆಪಿಗೆ ನೇರ ನಂಟು ಇದೆ ಎಂದು ನೇರ ದಾಳಿ ನಡೆಸಿವೆ. ಆದರೆ, ಬಿಜೆಪಿ ಈ ಆರೋಪಗಳನ್ನು ನಿರಾಕರಿಸಿದ್ದು, ತನಿಖೆಯಿಂದ ಸತ್ಯ ಹೊರಬರಲಿದೆ ಎಂದು ಹೇಳಿದೆ.

      ಆರ್‌ಜೆಡಿ ಮತ್ತು ಎಲ್‌ಜೆಪಿ ಮುಕಂಡರ ಹೆಸರು

      ಬಿಹಾರದ ಪ್ರಶ್ನೆ ಪತ್ರಿಕೆ ಸೋರಿಕೆ ಜಾಲದ ಪ್ರಮುಖ ಆರೋಪಿ ಎನ್ನಲಾದ ಸಂಜೀವ್ ಮುಖಿಯಾ ಅವರ ಪತ್ನಿ ಮಮತಾ ದೇವಿ ಅವರು 2020ರ ವಿಧಾನಸಭಾ ಚುನಾವಣೆಯಲ್ಲಿ ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

        ಬಿಹಾರದಲ್ಲಿ ಬಂಧಿತನಾಗಿದ್ದ ಸಿಕಂದರ್ ಯಾದವೇಂದು ಎಂಬ ಆರೋಪಿ ರಾಷ್ಟ್ರೀಯ ಜನತಾದಳದ (ಆರ್‌ಜೆಡಿ) ನಾಯಕರಿಗೆ ಅಥವಾ ಅವರ ಆಪ್ತರಿಗೆ ಸಂಬಂಧಿಸಿದ್ದಾನೆ ಎಂಬ ಆರೋಪವನ್ನು ಎನ್‌ಡಿಎ ನಾಯಕರು ಮಾಡಿದ್ದರು.

        ಜಾರ್ಖಂಡ್, ಮಹಾರಾಷ್ಟ್ರ ಮತ್ತು ಗುಜರಾತ್‌ಗಳಲ್ಲೂ ಬಂಧನಗಳಾಗಿದ್ದು, ಅಲ್ಲಿನ ಸ್ಥಳೀಯ ರಾಜಕೀಯದೊಂದಿಗೆ ಆರೋಪಿಗಳಿಗೆ ನಂಟಿದೆ ಎಂಬ ವದಂತಿಗಳಿವೆ.

        ಕೋಟಾದಲ್ಲಿ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

        ಒಂದು ಕಡೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಕ್ಕೆ ರಾಜಸ್ಥಾನ ಸುದ್ದಿಯಾಗುತ್ತಿದ್ದರೆ, ಮತ್ತೊಂದೆಡೆ ನೀಟ್ ಒತ್ತಡ ತಾಳಲಾರದೆ ವಿದ್ಯಾರ್ಥಿಳು ಸಹ ರಾಜಸ್ಥಾನದ ಕೋಟಾದಲ್ಲಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಇತ್ತೀಚಿನ ವರ್ಷಗಳಲ್ಲಿ ಗಂಭೀರ ಕಳವಳಕ್ಕೆ ಕಾರಣವಾಗಿವೆ.

        2026 (ಮೇ ವರೆಗೆ) ಈಗಾಗಲೇ ಸುಮಾರು 8 ರಿಂದ 10 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಗಳು ವರದಿಯಾಗಿವೆ. ನೀಟ್ ಪರೀಕ್ಷೆಯ ಹಿಂದಿನ ದಿನವೂ ಓರ್ವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

        2024ರಲ್ಲಿ 17 ಪ್ರಕರಣಗಳು ವರದಿಯಾಗಿದ್ದರೆ, 2023 ರಲ್ಲಿ 26 ರಿಂದ 29 ಪ್ರಕರಣಗಳು ವರದಿಯಾಗಿವೆ. ಇದು ಕೋಟಾದ ಇತಿಹಾಸದಲ್ಲೇ ಅತ್ಯಧಿಕ ಸಂಖ್ಯೆಯ ಮಕ್ಕಳ ಆತ್ಮಹತ್ಯೆಯಾಗಿದೆ. 2022 ರಲ್ಲಿ 15 ಪ್ರಕರಣಗಳು, 2019 ರಲ್ಲಿ 18 ಪ್ರಕರಣಗಳು ಮತ್ತು 2018 ರಲ್ಲಿ 20 ಪ್ರಕರಣಗಳಿ ವರದಿಯಾಗಿವೆ.

        ಮಕ್ಕಳ ಮೇಲೆ ಹೆಚ್ಚುತ್ತಿರುವ ಒತ್ತಡ:

        ಪ್ರತಿವರ್ಷ ಸುಮಾರು 2 ರಿಂದ 2.5 ಲಕ್ಷ ವಿದ್ಯಾರ್ಥಿಗಳು ಕೋಟಾಕ್ಕೆ ಕೋಚಿಂಗ್ ಪಡೆಯಲು ಬರುತ್ತಾರೆ. ಕಠಿಣ ಸ್ಪರ್ಧೆ, ಪೋಷಕರ ನಿರೀಕ್ಷೆ ಮತ್ತು ಏಕಾಂಗಿತನ ವಿದ್ಯಾರ್ಥಿಗಳ ಮೇಲೆ ತೀವ್ರ ಮಾನಸಿಕ ಒತ್ತಡ ಹೇರುತ್ತಿದೆ. 2026ರ ಮೇ ತಿಂಗಳಲ್ಲಿ ನಡೆದ ನೀಟ್ ಪರೀಕ್ಷೆಗಿಂತ ಕೇವಲ ಒಂದು ದಿನ ಮೊದಲು ಉತ್ತರಾಖಂಡದ 20 ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ. ಇದು ಪರೀಕ್ಷಾ ಭಯದ ತೀವ್ರತೆ ಮಕ್ಕಳ ಮೇಲೆ ಎಷ್ಟಿದೆ ಎಂಬುದನ್ನು ತೋರಿಸುತ್ತದೆ.

        ಹೆಚ್ಚುತ್ತಿರುವ ಸಾವುಗಳನ್ನು ತಡೆಯಲು ರಾಜಸ್ಥಾನ ಸರ್ಕಾರವು ಹಾಸ್ಟೆಲ್‌ಗಳಲ್ಲಿ ‘ಆಂಟಿ-ಹ್ಯಾಂಗಿಂಗ್ ಡಿವೈಸ್’ (ಫ್ಯಾನ್‌ಗೆ ಸ್ಪ್ರಿಂಗ್ ಅಳವಡಿಸುವುದು), ಸಮಾಲೋಚನಾ ಕೇಂದ್ರಗಳು ಮತ್ತು ವಾರಾಂತ್ಯದ ರಜೆಗಳನ್ನು ಕಡ್ಡಾಯಗೊಳಿಸಿದೆ. 2023ಕ್ಕೆ ಹೋಲಿಸಿದರೆ 2024ರಲ್ಲಿ ಪ್ರಕರಣಗಳ ಸಂಖ್ಯೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ, ಆದರೂ ಪ್ರತಿ ಸಾವೂ ಪೋಷಕರಿಗೆ ದೊಡ್ಡ ದುರಂತವೇ ಆಗಿದೆ.

        ಕೋಚಿಂಗ್ ರಾಜಧಾನಿ ಕೋಟಾ

        ಕೋಟಾವನ್ನು ಭಾರತದ “ಕೋಚಿಂಗ್ ರಾಜಧಾನಿ” ಎಂದು ಕರೆಯಲಾಗುತ್ತದೆ. ಅಲ್ಲಿ ಅತಿ ಹೆಚ್ಚು ಕೋಚಿಂಗ್ ಸೆಂಟರ್‌ಗಳು ಇರಲು ಹಲವು ಐತಿಹಾಸಿಕ ಮತ್ತು ವ್ಯವಸ್ಥಿತ ಕಾರಣಗಳಿವೆ. 1980ರ ದಶಕದ ಕೊನೆಯಲ್ಲಿ ವಿ.ಕೆ. ಬನ್ಸಲ್ ಎಂಬುವವರು ಜೆ.ಕೆ. ಸಿಂಥೆಟಿಕ್ಸ್ ಕಾರ್ಖಾನೆಯಲ್ಲಿ ಇಂಜಿನಿಯರ್ ಆಗಿದ್ದರು. ಅವರು ಮಕ್ಕಳಿಗೆ ಟ್ಯೂಷನ್ ನೀಡಲು ಪ್ರಾರಂಭಿಸಿದರು. ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಐಐಟಿ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಲು ಶುರುಮಾಡಿದರು. ಇದು ಕೋಟಾದಲ್ಲಿ ಕೋಚಿಂಗ್ ಸಂಸ್ಕೃತಿಗೆ ಭದ್ರ ಬುನಾದಿ ಹಾಕಿತು.

        ದೇಶದಾದ್ಯಂತ ಇರುವ ಟಾಪ್ ರ್ಯಾಂಕ್‌ಗಳಲ್ಲಿ ಕೋಟಾದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುತ್ತದೆ. ಈ ‘ಟ್ರಾಕ್ ರೆಕಾರ್ಡ್’ ನೋಡಿ ಪೋಷಕರು ಮತ್ತು ವಿದ್ಯಾರ್ಥಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಗೆ ಆಕರ್ಷಿತರಾಗುತ್ತಾರೆ. ಕೋಟಾ ನಗರವು ಸಂಪೂರ್ಣವಾಗಿ ವಿದ್ಯಾರ್ಥಿಗಳ ಸುತ್ತಲೇ ನಿರ್ಮಾಣವಾಗಿದೆ. ಸಾವಿರಾರು ಹಾಸ್ಟೆಲ್‌ಗಳು, ಮೆಸ್‌ಗಳು, ಲೈಬ್ರರಿಗಳು ಮತ್ತು ಬುಕ್ ಸ್ಟಾಲ್‌ಗಳು ಇಲ್ಲಿವೆ. ಓದಿಗೆ ಬೇಕಾದ ಎಲ್ಲಾ ಸೌಲಭ್ಯಗಳು ಒಂದೇ ಕಡೆ ಸಿಗುತ್ತವೆ.

        ಒಂದೇ ಕಡೆ ಲಕ್ಷಾಂತರ ವಿದ್ಯಾರ್ಥಿಗಳು ಓದುತ್ತಿರುವುದರಿಂದ, ವಿದ್ಯಾರ್ಥಿಗಳಲ್ಲಿ ಸಹಜವಾಗಿಯೇ ಆರೋಗ್ಯಕರ (ಮತ್ತು ಕೆಲವೊಮ್ಮೆ ತೀವ್ರವಾದ) ಸ್ಪರ್ಧೆ ಏರ್ಪಡುತ್ತದೆ. ದೇಶದ ಪ್ರಸಿದ್ಧ ಮತ್ತು ಅನುಭವಿ ಶಿಕ್ಷಕರು ಹೆಚ್ಚಿನ ಸಂಬಳ ಮತ್ತು ಸೌಲಭ್ಯಗಳಿಗಾಗಿ ಕೋಟಾಕ್ಕೆ ವಲಸೆ ಹೋಗುತ್ತಾರೆ.

        ಎಷ್ಟು ಕೋಚಿಂಗ್ ಸೆಂಟರ್‌ಗಳಿವೆ?

        ಕೋಟಾದಲ್ಲಿ ಸಣ್ಣ ಮತ್ತು ದೊಡ್ಡ ಮಟ್ಟದ ಕೋಚಿಂಗ್ ಸೆಂಟರ್‌ಗಳ ಸಂಖ್ಯೆ ಬಹಳಷ್ಟಿದೆ: ಆಲನ್ , ಆಕಾಶ್, ಫಿಜಿ ಮತ್ತು ರೆಸೋನೆನ್ಸ್ ನಂತಹ ಸುಮಾರು 10 ರಿಂದ 12 ದೊಡ್ಡ ಬ್ರಾಂಡ್‌ಗಳು ಅಲ್ಲಿವೆ. ಈ ಪ್ರತಿಯೊಂದು ಸಂಸ್ಥೆಗಳು ನಗರದಾದ್ಯಂತ ಹತ್ತಾರು ಶಾಖೆಗಳನ್ನು ಹೊಂದಿವೆ. ಜಿಲ್ಲಾಡಳಿತದ ಅಂಕಿಅಂಶಗಳ ಪ್ರಕಾರ, ನೋಂದಾಯಿತ ಮತ್ತು ಅನೋಂದಾಯಿತ ಸಣ್ಣ ಪುಟ್ಟ ಕೋಚಿಂಗ್ ಸೆಂಟರ್‌ಗಳ ಒಟ್ಟು ಸಂಖ್ಯೆ 300 ಕ್ಕೂ ಹೆಚ್ಚು ಇದೆ ಎಂದು ಅಂದಾಜಿಸಲಾಗಿದೆ.

        ಪ್ರತಿ ವರ್ಷ ಸುಮಾರು 2 ಲಕ್ಷದಿಂದ 2.5 ಲಕ್ಷದಷ್ಟು ವಿದ್ಯಾರ್ಥಿಗಳು ವಿವಿಧ ಕೋರ್ಸ್‌ಗಳಿಗಾಗಿ, ಮುಖ್ಯವಾಗಿ ನೀಟ್ ಮತ್ತು ಜೆಇಇ ತರಬೇತಿಗಾಗಿ ಕೋಟಾಕ್ಕೆ ಬರುತ್ತಾರೆ.

        ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

        LEAVE A REPLY

        Please enter your comment!
        Please enter your name here

        - Advertisment -

        ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

        ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

        ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

        ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

        ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

        ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

        ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

        ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

        ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

        SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

        ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

        ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

        ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

        ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

        ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

        ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

        ‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

        ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

        ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

        ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...