HomeಮುಖಪುಟNEET ಗೇಟ್; ಮೆರಿಟ್ ಹೆಸರಿನಲ್ಲಿ ಹೊರದಬ್ಬುವುದೇ ಮುಖ್ಯ ಉದ್ದೇಶ

NEET ಗೇಟ್; ಮೆರಿಟ್ ಹೆಸರಿನಲ್ಲಿ ಹೊರದಬ್ಬುವುದೇ ಮುಖ್ಯ ಉದ್ದೇಶ

- Advertisement -
- Advertisement -

ಐದು ಮಕ್ಕಳ ಗುಂಪೊಂದು ನಾಟಕವಾಡೋಣ ಎಂದು ತೀರ್ಮಾನಿಸುತ್ತದೆ. ಅದರಲ್ಲಿದ್ದ ಪುಟಾಣಿ ಹುಡುಗಿ ನನಗೇನು ಪಾತ್ರವಿಲ್ಲ ಎಂದು ಅಳತೊಡಗಿದಾಗ ಸಭೆಯ ತೀರ್ಮಾನ ಹೀಗಾಗುತ್ತದೆ: ನಿನಗೂ ಒಂದು ಪಾತ್ರವಿದೆ, ಆದರೆ ನೀನು ಇನ್ನೂ ಹುಟ್ಟಿಲ್ಲದ ಮಗು! ಪಾತ್ರ ಕೊಟ್ಟಂತೂ ಆಗಬೇಕು, ನಾಟಕದಿಂದ ಹೊರದಬ್ಬಿದಂತೆಯೂ ಆಗಬೇಕು ಎನ್ನುವುದು ’ಸಭೆಯ ಉದ್ದೇಶ’. ಒಳಗೊಳ್ಳುವಿಕೆ ಅಥವಾ ಹೊರದಬ್ಬುವಿಕೆ, ಹೊರನೋಟಕ್ಕೆ ಎಲ್ಲವೂ ನಾಜೂಕಾಗಿ ಕಾಣಬಹುದು ಮತ್ತು ಒಳಗಿಂದೊಳಗೆ ಒಂದು ಕಾನೂನಿನ ಮೂಲಕವೋ ಅಥವಾ ಯಾವುದೋ ಒಂದು ವ್ಯವಸ್ಥೆಯ ಮೂಲಕವೋ, ಹೊರಗಿರುವವರನ್ನು ಹೊರಗೇ ಇಡುವಂತೆ ಮಾಡಬಹುದು.

ಇದಕ್ಕೆ ಹಣಕಾಸು, ಜಾತಿ, ಧರ್ಮ, ಭಾಷೆ – ಈ ರೀತಿ ಯಾವುದಾದರೊಂದನ್ನು ತಂತ್ರವಾಗಿ ಬಳಸಿ ವಾಸ್ತವ ಸ್ಥಿತಿಯನ್ನು ಕಾಪಾಡಿಕೊಳ್ಳುವಂತಾಗಬಹುದು. ಎರಡನೇ ಮಹಾಯುದ್ಧದ ನಂತರ ಅಮೆರಿಕದ ಅಧ್ಯಕ್ಷ ರೂಸ್ವೆಲ್ಟ್ ತನ್ನ ದೇಶಕ್ಕೆ ಹೊಸ ಶಿಕ್ಷಣ ನೀತಿಯೊಂದನ್ನು ರೂಪಿಸಿ ಇದು ಸಾಧಾರಣ ಮನುಷ್ಯನಿಗೆ ಅಸಾಧಾರಣ ಶಿಕ್ಷಣವನ್ನು ಒದಗಿಸುವ ವ್ಯವಸ್ಥೆ (uncommon education for common man) ಎಂದಿದ್ದ. ಅಮೇರಿಕದ ಶ್ರೇಷ್ಠ ತತ್ವಶಾಸ್ತ್ರಜ್ಞ ಜಾನ್ ರಾಲ್ಸ್ ’ನ್ಯಾಯವೆಂದರೆ ಕಟ್ಟಕಡೆಯ ಮನುಷ್ಯನ ಹಾದಿಯನ್ನು ಸುಗಮಗೊಳಿಸುವುದು’ (Advantage for most disadvantaged) ಎಂದಿದ್ದ.

ಇಂದು ಅನೇಕ ಸಾರ್ವಜನಿಕ ವ್ಯವಸ್ಥೆಗಳು ಖಾಸಗೀಕಣಗೊಂಡಿರುವ ಕಾಲ. ಅದು ಆರೋಗ್ಯವಿರಬಹುದು ಅಥವಾ ಶಿಕ್ಷಣವಿರಬಹುದು. ಪತ್ರಕರ್ತ ಶಂಕರ್‌ಅಯ್ಯರ್ ’ಗೇಟೆಡ್ ರಿಪಬ್ಲಿಕ್’ ಎನ್ನುವ ಪುಸ್ತಕವನ್ನು ಈ ವ್ಯವಸ್ಥೆಯನ್ನು ವಿವರಿಸುವುದಕ್ಕಾಗಿಯೇ ಬರೆದಿದ್ದಾರೆ. ಹಾಗೆಯೇ ಆನಂದ ತೇಲ್ತುಂಬ್ಡೆ ಅವರ ’ರಿಪಬ್ಲಿಕ್ ಆಫ್ ಕಾಸ್ಟ್’ ಎನ್ನುವ ಪುಸ್ತಕವನ್ನು ಗಮನಿಸಬಹುದು. ಇದೇ ನಿಟ್ಟಿನಲ್ಲಿ ಮೈಕಲ್ ಸ್ಯಾಂಡಲ್ ತನ್ನ ’ಟಿರನಿ ಆಫ್ ಮೆರಿಟ್’ ಎನ್ನುವ ಪುಸ್ತಕದಲ್ಲಿ ಈ ಅರ್ಹತೆಯ ಅಹಂಕಾರ ಮತ್ತು ದಬ್ಬಾಳಿಕೆಯನ್ನು ವಿವರಿಸುತ್ತಾನೆ. ಹೊರನೋಟಕ್ಕೆ ಅದು ಅರ್ಹತೆ ಎಂದು ಕಂಡುಬಂದರೂ ಅದರ ಹಿಂದೆ ಇರುವ ಕೈಚಳಕ ಪರಂಪರಾಗತವಾಗಿ ಬಂದ ಶ್ರೀಮಂತ ಕುಟುಂಬಗಳು ಮತ್ತು ಅವರ ಪರವಾಗಿ ನಿಲ್ಲುವ ವ್ಯವಸ್ಥೆ ಹೇಗೆ ಮೇಲಿರುವವರನ್ನು ಮೇಲಕ್ಕೆತ್ತುತ್ತಾ, ಕೆಳಗಿರುವವರನ್ನು ತುಳಿಯುತ್ತಾ ಬಂದಿದೆ ಎನ್ನುವುದನ್ನು ಆತ ವಿವರಿಸುತ್ತಾನೆ.

ಸೋತವನು ಅನರ್ಹ, ಅಯೋಗ್ಯ ಎಂದೆಲ್ಲ ಹಣೆಪಟ್ಟಿ ಕಟ್ಟಿ ಹೀಗಳೆಯುವಂತಾಗುತ್ತದೆ. ವಾಸ್ತವವಾಗಿ ಸೋಲಿಗೆ ವ್ಯವಸ್ಥೆಯಲ್ಲಿರುವ ಕಾರಣವನ್ನು ಗಮನಿಸುವುದಿಲ್ಲ. ಹೀಗಾಗಿ ನಮ್ಮ ದೇಶದಲ್ಲಿ ಉನ್ನತ ಶಿಕ್ಷಣಕ್ಕೆ ಕೆಳವರ್ಗದವರು ಶೇ.23ರಷ್ಟು ಮಾತ್ರ ಪಾಲ್ಗೊಳ್ಳುವುದಾದರೆ ಇತರರು ಶೇ.32ರಷ್ಟು ಸೇರುವುದಾಗಿದೆ. ಒಟ್ಟು ಉನ್ನತ ಶಿಕ್ಷಣಕ್ಕೆ ಹೋಗುವವರೇ ಶೇ.28ರಷ್ಟಿದ್ದು ಜಗತ್ತಿನ ಸರಾಸರಿ ಶೇ.38ಕ್ಕೆ ಹೋಲಿಸಿದರೆ ಅಥವಾ ಚೈನಾದ ಶೇ.53ಕ್ಕೆ ಹೋಲಿಸಿದರೆ ಭಾರತ ಕಳಪೆ ಸ್ಥಾನದಲ್ಲಿರುವುದನ್ನು ಗಮನಿಸಬಹುದು. ಅದರಲ್ಲೂ ದಲಿತರು ಮತ್ತು ಅಲ್ಪಸಂಖ್ಯಾತರಲ್ಲಿ ಈ ಅನುಪಾತ ಸುಮಾರು ಶೇ.20ರಷ್ಟಿದ್ದು, ಸಮಾಜ-ಆಡಳಿತ ವ್ಯವಸ್ಥೆ ಆ ಸಮುದಾಯ ಹಿಂದೆ ಬಿದ್ದಿರುವದನ್ನು ಸರಿಪಡಿಸಲು ಹೆಚ್ಚೇನೂ ಕೆಲಸ ಮಾಡಿಲ್ಲ ಎಂಬುದನ್ನು ಗಮನಿಸಬಹುದು.

ಇತ್ತೀಚೆಗೆ ತಮಿಳುನಾಡು ಸರ್ಕಾರ ವೈದ್ಯಕೀಯ ಶಿಕ್ಷಣಕ್ಕೆ ಕೇಂದ್ರ ಸರ್ಕಾರ ನಡೆಸುವ ಏಕರೂಪದ NEET ಪರೀಕ್ಷೆಯನ್ನು ರದ್ದುಗೊಳಿಸುವ ನಡಾವಳಿಯನ್ನು ವಿಧಾನಸಭೆಯಲ್ಲಿ ಮಂಡಿಸಿತು. ಕಾರಣ NEET ಪರೀಕ್ಷೆ ಆರಂಭಗೊಂಡ ನಂತರ ತಮಿಳು ಮಾಧ್ಯಮದ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳ ಸಂಖ್ಯೆ ಶೇ.15ರಿಂದ ಶೇ.2ಕ್ಕೆ ಇಳಿಯಲ್ಪಟ್ಟಿತು ಹಾಗೂ ರಾಜ್ಯ ಸರ್ಕಾರದ ಪಠ್ಯಕ್ರಮದಲ್ಲಿ ಕಲಿತ ವಿದ್ಯಾರ್ಥಿಗಳ ಸಂಖ್ಯೆ ಶೇ.98ರಿಂದ ಶೇ.60ಕ್ಕೆ ಇಳಿಯಲ್ಪಟ್ಟಿತು. ಹಾಗೆಯೇ ಗ್ರಾಮಾಂತರದ ವಿದ್ಯಾರ್ಥಿಗಳ ಸಂಖ್ಯೆ ಶೇ.65ರಿಂದ ಶೇ.50ಕ್ಕೆ ಇಳಿಯಲ್ಪಟ್ಟಿತು. ಅದೇ ಸಮಯದಲ್ಲಿ ಕೇಂದ್ರ ಪಠ್ಯಕ್ರಮದಲ್ಲಿ ಓದಿ ಕಲಿತ ವಿದ್ಯಾರ್ಥಿಗಳ ಸಂಖ್ಯೆ ಶೇ.1ರಿಂದ ಶೇ.39ಕ್ಕೆ ಏರಿಕೆಯಾಯಿತು. ಇಲ್ಲಿ ಸ್ಪಷ್ಟವಾಗಿ ಗಮನಿಸಬೇಕಾದದ್ದು ಗ್ರ್ರಾಮಾಂತರ ಮಕ್ಕಳ ಸಮಸ್ಯೆ. ಇಂಗ್ಲಿಷ್ ಭಾಷೆಯಲ್ಲಿ ಕಲಿಯದಿದ್ದುದು ಮತ್ತು ರಾಜ್ಯದ ಪಠ್ಯಕ್ರಮದಲ್ಲಿ ಕಲಿತದ್ದು, ಅವರ ವಿರುದ್ಧ ಕೆಲಸ ಮಾಡಿ, ಅವರನ್ನು ಹೊರದಬ್ಬುವಂತೆ ಮಾಡಿತು. ತಮಿಳಿನಲ್ಲಿ ಉತ್ತಮ ಅಂಕಗಳನ್ನು ಪಡೆದರೂ NEET ಗೇಟಿನಿಂದ ಹೊರಗುಳಿಯಬೇಕಾಯಿತು. ಇದು ಅರ್ಹತೆ ಅಥವಾ ಜ್ಞಾನದ ಆಧಾರದ ಮೇಲೆ ಎಂದು ಪರಿಗಣಿಸಲಾಗದು. ಗುರುತ್ವಾಕರ್ಷಣೆ ಎಂದು ಗೊತ್ತಿದೆ, ಆದರೆ ಗ್ರಾವಿಟಿ ಗೊತ್ತಿಲ್ಲವೆಂದರೆ ವಿಷಯ ಗೊತ್ತಿಲ್ಲವೆಂದಲ್ಲ. ಭಾಷೆಯ ತೊಡಕಷ್ಟೇ ಎನ್ನುವುದನ್ನು ಗಮನಿಸತಕ್ಕದ್ದು. ಭಾರತದಲ್ಲಿ ಅನೇಕರು ಹೇಳುವಂತೆ ಇಂಗ್ಲಿಷ್ ಬರುವವರೆಲ್ಲಾ ತತ್ವಶಾಸ್ತ್ರಜ್ಞರಾಗಿಬಿಡುತ್ತಾರೆ.

ಇದಲ್ಲದೆ ಒಕ್ಕೂಟ ವ್ಯವಸ್ಥೆಯಲ್ಲಿ ಶಿಕ್ಷಣ ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆಯಲ್ಲಿ ಇರತಕ್ಕದ್ದು. ಆದರೆ NEET ಪರೀಕ್ಷೆಯೆಂಬ ಕಾನೂನಿನಿಂದ ಕೇಂದ್ರ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಂತಾಯಿತು. ಇತ್ತೀಚೆಗೆ ಪಂಚಾಯತ್‌ರಾಜ್‌ನಿಂದ ಹಿಡಿದು ಸಹಕಾರಿ ಬ್ಯಾಂಕ್‌ಗಳನ್ನು ಹಲವು ಕಾನೂನುಗಳ ಮೂಲಕ ಕೇಂದ್ರ ತನ್ನ ಹಿಡಿತಕ್ಕೆ ತೆಗೆದುಕೊಳ್ಳುತ್ತಿದೆ.

ಇಂದು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಒಳ್ಳೆಯ ಅಂಕಗಳನ್ನು ಗಳಿಸಲು ಸಾವಿರಾರು ಕೋಟಿಯ ಕೋಚಿಂಗ್ ಉದ್ಯಮ ತಲೆಯೆತ್ತಿ ನಿಂತಿದೆ. ರಾಜಸ್ಥಾನದ ಕೋಟಾದಲ್ಲಿರುವ ಕೋಚಿಂಗ್ ಉದ್ಯಮ ಸುಮಾರು ಮೂರು ಸಾವಿರ ಕೋಟಿಯದು ಎನ್ನುತ್ತಾರೆ. ನಮ್ಮ ಆರ್ಥಿಕ ಮಾಪನಗಳ ವಿಪರ್ಯಾಸವೆಂದರೆ ಶಾಲಾ-ಕಾಲೇಜುಗಳಲ್ಲಿ ಸರಿಯಾಗಿ ಪಾಠಮಾಡದೆ ಖಾಸಗಿಯಾಗಿ ಟ್ಯೂಷನ್ ತೆಗೆದುಕೊಂಡರೆ ಜಿಡಿಪಿ ಬೆಳೆಯುತ್ತದೆ, ಅಭಿವೃದ್ಧಿ ಆಗುತ್ತದೆ ಎಂದು ತೋರಿಕೊಳ್ಳುತ್ತದೆ. ಇತ್ತೀಚೆಗೆ ಚೈನಾ ದೇಶ ಇಡೀ ಕೋಚಿಂಗ್ ಉದ್ಯಮವನ್ನು ಮಟ್ಟ ಹಾಕಿದೆ.

ನಮ್ಮ ದೇಶದಲ್ಲಿ, ವಂಚಿತ ಸಮುದಾಯಗಳು ತಮ್ಮ ಕೆಳಸ್ತರದಿಂದ ಶೈಕ್ಷಣಿಕವಾಗಿ ಆರ್ಥಿಕವಾಗಿ ಮುಂದೆಬರುವುದು ಅಷ್ಟು ಸುಲಭವಲ್ಲ. ’ವರ್ಲ್ಡ್ ಎಕನಾಮಿಕ್ ಫೋರಂ’ ಹೊರತರುವ ತನ್ನ ಸೋಷಿಯಲ್ ಮೊಬಿಲಿಟಿ ಇಂಡೆಕ್ಸ್ ಎನ್ನುವ ಮಾಪನದಲ್ಲಿ ಜಗತ್ತಿನ 84 ದೇಶಗಳಲ್ಲಿ ಭಾರತ 76ನೇ ಸ್ಥಾನದಲ್ಲಿದೆ. ಯಾವುದೇ ವ್ಯಕ್ತಿ ತನ್ನ ಸ್ಥಾನಮಾನವನ್ನು ಉತ್ತಮಪಡಿಸಿಕೊಂಡು ಮುಂದುವರಿಯಲು ಅತ್ಯಂತ ಹೆಚ್ಚು ತಡೆಗೋಡೆಗಳು ಭಾರತದಲ್ಲಿವೆ ಎನ್ನುವುದೇ ಇದರ ಅರ್ಥ.

ಕೆ.ಸಿ. ರಘು

ಕೆ.ಸಿ. ರಘು
ಕೆ.ಸಿ. ರಘು ಅವರು ನಾಡಿನ ಹೆಸರಾಂತ ಆಹಾರ ತಜ್ಞರು, ಅನೇಕ ವರ್ಷಗಳ ಕಾಲ ‘ಫುಡ್ ಅಂಡ್ ನ್ಯೂಟ್ರಿಷನ್ ವರ್ಲ್ಡ್’ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದರು. ಅನೇಕ ದಿನಪತ್ರಿಕೆಗಳಲ್ಲಿ ಆಹಾರ ಸಂಸ್ಕೃತಿಗಳ ಹಿಂದಿರುವ ರಾಜಕೀಯ, ಸಂಸ್ಕೃತಿ, ಸಾಮಾಜಿಕ ಆಯಾಮಗಳನ್ನು ಕುರಿತು ಅಂಕಣಗಳನ್ನು ಬರೆಯುತ್ತಿದ್ದಾರೆ.


ಇದನ್ನೂ ಓದಿ: NEET ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿಲುವಳಿ ಅಂಗೀಕಾರ; ಕಾರಣಗಳೇನು?

ಇದನ್ನೂ ಓದಿ: ಬಹುಪಾಲು ವಿದ್ಯಾರ್ಥಿಗಳಿಗೆ ‘ನೀಟ್‌‌’ ಬೇಡ: ನ್ಯಾಯಮೂರ್ತಿ ರಾಜನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...