HomeಮುಖಪುಟNEET ಗೇಟ್; ಮೆರಿಟ್ ಹೆಸರಿನಲ್ಲಿ ಹೊರದಬ್ಬುವುದೇ ಮುಖ್ಯ ಉದ್ದೇಶ

NEET ಗೇಟ್; ಮೆರಿಟ್ ಹೆಸರಿನಲ್ಲಿ ಹೊರದಬ್ಬುವುದೇ ಮುಖ್ಯ ಉದ್ದೇಶ

- Advertisement -
- Advertisement -

ಐದು ಮಕ್ಕಳ ಗುಂಪೊಂದು ನಾಟಕವಾಡೋಣ ಎಂದು ತೀರ್ಮಾನಿಸುತ್ತದೆ. ಅದರಲ್ಲಿದ್ದ ಪುಟಾಣಿ ಹುಡುಗಿ ನನಗೇನು ಪಾತ್ರವಿಲ್ಲ ಎಂದು ಅಳತೊಡಗಿದಾಗ ಸಭೆಯ ತೀರ್ಮಾನ ಹೀಗಾಗುತ್ತದೆ: ನಿನಗೂ ಒಂದು ಪಾತ್ರವಿದೆ, ಆದರೆ ನೀನು ಇನ್ನೂ ಹುಟ್ಟಿಲ್ಲದ ಮಗು! ಪಾತ್ರ ಕೊಟ್ಟಂತೂ ಆಗಬೇಕು, ನಾಟಕದಿಂದ ಹೊರದಬ್ಬಿದಂತೆಯೂ ಆಗಬೇಕು ಎನ್ನುವುದು ’ಸಭೆಯ ಉದ್ದೇಶ’. ಒಳಗೊಳ್ಳುವಿಕೆ ಅಥವಾ ಹೊರದಬ್ಬುವಿಕೆ, ಹೊರನೋಟಕ್ಕೆ ಎಲ್ಲವೂ ನಾಜೂಕಾಗಿ ಕಾಣಬಹುದು ಮತ್ತು ಒಳಗಿಂದೊಳಗೆ ಒಂದು ಕಾನೂನಿನ ಮೂಲಕವೋ ಅಥವಾ ಯಾವುದೋ ಒಂದು ವ್ಯವಸ್ಥೆಯ ಮೂಲಕವೋ, ಹೊರಗಿರುವವರನ್ನು ಹೊರಗೇ ಇಡುವಂತೆ ಮಾಡಬಹುದು.

ಇದಕ್ಕೆ ಹಣಕಾಸು, ಜಾತಿ, ಧರ್ಮ, ಭಾಷೆ – ಈ ರೀತಿ ಯಾವುದಾದರೊಂದನ್ನು ತಂತ್ರವಾಗಿ ಬಳಸಿ ವಾಸ್ತವ ಸ್ಥಿತಿಯನ್ನು ಕಾಪಾಡಿಕೊಳ್ಳುವಂತಾಗಬಹುದು. ಎರಡನೇ ಮಹಾಯುದ್ಧದ ನಂತರ ಅಮೆರಿಕದ ಅಧ್ಯಕ್ಷ ರೂಸ್ವೆಲ್ಟ್ ತನ್ನ ದೇಶಕ್ಕೆ ಹೊಸ ಶಿಕ್ಷಣ ನೀತಿಯೊಂದನ್ನು ರೂಪಿಸಿ ಇದು ಸಾಧಾರಣ ಮನುಷ್ಯನಿಗೆ ಅಸಾಧಾರಣ ಶಿಕ್ಷಣವನ್ನು ಒದಗಿಸುವ ವ್ಯವಸ್ಥೆ (uncommon education for common man) ಎಂದಿದ್ದ. ಅಮೇರಿಕದ ಶ್ರೇಷ್ಠ ತತ್ವಶಾಸ್ತ್ರಜ್ಞ ಜಾನ್ ರಾಲ್ಸ್ ’ನ್ಯಾಯವೆಂದರೆ ಕಟ್ಟಕಡೆಯ ಮನುಷ್ಯನ ಹಾದಿಯನ್ನು ಸುಗಮಗೊಳಿಸುವುದು’ (Advantage for most disadvantaged) ಎಂದಿದ್ದ.

ಇಂದು ಅನೇಕ ಸಾರ್ವಜನಿಕ ವ್ಯವಸ್ಥೆಗಳು ಖಾಸಗೀಕಣಗೊಂಡಿರುವ ಕಾಲ. ಅದು ಆರೋಗ್ಯವಿರಬಹುದು ಅಥವಾ ಶಿಕ್ಷಣವಿರಬಹುದು. ಪತ್ರಕರ್ತ ಶಂಕರ್‌ಅಯ್ಯರ್ ’ಗೇಟೆಡ್ ರಿಪಬ್ಲಿಕ್’ ಎನ್ನುವ ಪುಸ್ತಕವನ್ನು ಈ ವ್ಯವಸ್ಥೆಯನ್ನು ವಿವರಿಸುವುದಕ್ಕಾಗಿಯೇ ಬರೆದಿದ್ದಾರೆ. ಹಾಗೆಯೇ ಆನಂದ ತೇಲ್ತುಂಬ್ಡೆ ಅವರ ’ರಿಪಬ್ಲಿಕ್ ಆಫ್ ಕಾಸ್ಟ್’ ಎನ್ನುವ ಪುಸ್ತಕವನ್ನು ಗಮನಿಸಬಹುದು. ಇದೇ ನಿಟ್ಟಿನಲ್ಲಿ ಮೈಕಲ್ ಸ್ಯಾಂಡಲ್ ತನ್ನ ’ಟಿರನಿ ಆಫ್ ಮೆರಿಟ್’ ಎನ್ನುವ ಪುಸ್ತಕದಲ್ಲಿ ಈ ಅರ್ಹತೆಯ ಅಹಂಕಾರ ಮತ್ತು ದಬ್ಬಾಳಿಕೆಯನ್ನು ವಿವರಿಸುತ್ತಾನೆ. ಹೊರನೋಟಕ್ಕೆ ಅದು ಅರ್ಹತೆ ಎಂದು ಕಂಡುಬಂದರೂ ಅದರ ಹಿಂದೆ ಇರುವ ಕೈಚಳಕ ಪರಂಪರಾಗತವಾಗಿ ಬಂದ ಶ್ರೀಮಂತ ಕುಟುಂಬಗಳು ಮತ್ತು ಅವರ ಪರವಾಗಿ ನಿಲ್ಲುವ ವ್ಯವಸ್ಥೆ ಹೇಗೆ ಮೇಲಿರುವವರನ್ನು ಮೇಲಕ್ಕೆತ್ತುತ್ತಾ, ಕೆಳಗಿರುವವರನ್ನು ತುಳಿಯುತ್ತಾ ಬಂದಿದೆ ಎನ್ನುವುದನ್ನು ಆತ ವಿವರಿಸುತ್ತಾನೆ.

ಸೋತವನು ಅನರ್ಹ, ಅಯೋಗ್ಯ ಎಂದೆಲ್ಲ ಹಣೆಪಟ್ಟಿ ಕಟ್ಟಿ ಹೀಗಳೆಯುವಂತಾಗುತ್ತದೆ. ವಾಸ್ತವವಾಗಿ ಸೋಲಿಗೆ ವ್ಯವಸ್ಥೆಯಲ್ಲಿರುವ ಕಾರಣವನ್ನು ಗಮನಿಸುವುದಿಲ್ಲ. ಹೀಗಾಗಿ ನಮ್ಮ ದೇಶದಲ್ಲಿ ಉನ್ನತ ಶಿಕ್ಷಣಕ್ಕೆ ಕೆಳವರ್ಗದವರು ಶೇ.23ರಷ್ಟು ಮಾತ್ರ ಪಾಲ್ಗೊಳ್ಳುವುದಾದರೆ ಇತರರು ಶೇ.32ರಷ್ಟು ಸೇರುವುದಾಗಿದೆ. ಒಟ್ಟು ಉನ್ನತ ಶಿಕ್ಷಣಕ್ಕೆ ಹೋಗುವವರೇ ಶೇ.28ರಷ್ಟಿದ್ದು ಜಗತ್ತಿನ ಸರಾಸರಿ ಶೇ.38ಕ್ಕೆ ಹೋಲಿಸಿದರೆ ಅಥವಾ ಚೈನಾದ ಶೇ.53ಕ್ಕೆ ಹೋಲಿಸಿದರೆ ಭಾರತ ಕಳಪೆ ಸ್ಥಾನದಲ್ಲಿರುವುದನ್ನು ಗಮನಿಸಬಹುದು. ಅದರಲ್ಲೂ ದಲಿತರು ಮತ್ತು ಅಲ್ಪಸಂಖ್ಯಾತರಲ್ಲಿ ಈ ಅನುಪಾತ ಸುಮಾರು ಶೇ.20ರಷ್ಟಿದ್ದು, ಸಮಾಜ-ಆಡಳಿತ ವ್ಯವಸ್ಥೆ ಆ ಸಮುದಾಯ ಹಿಂದೆ ಬಿದ್ದಿರುವದನ್ನು ಸರಿಪಡಿಸಲು ಹೆಚ್ಚೇನೂ ಕೆಲಸ ಮಾಡಿಲ್ಲ ಎಂಬುದನ್ನು ಗಮನಿಸಬಹುದು.

ಇತ್ತೀಚೆಗೆ ತಮಿಳುನಾಡು ಸರ್ಕಾರ ವೈದ್ಯಕೀಯ ಶಿಕ್ಷಣಕ್ಕೆ ಕೇಂದ್ರ ಸರ್ಕಾರ ನಡೆಸುವ ಏಕರೂಪದ NEET ಪರೀಕ್ಷೆಯನ್ನು ರದ್ದುಗೊಳಿಸುವ ನಡಾವಳಿಯನ್ನು ವಿಧಾನಸಭೆಯಲ್ಲಿ ಮಂಡಿಸಿತು. ಕಾರಣ NEET ಪರೀಕ್ಷೆ ಆರಂಭಗೊಂಡ ನಂತರ ತಮಿಳು ಮಾಧ್ಯಮದ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳ ಸಂಖ್ಯೆ ಶೇ.15ರಿಂದ ಶೇ.2ಕ್ಕೆ ಇಳಿಯಲ್ಪಟ್ಟಿತು ಹಾಗೂ ರಾಜ್ಯ ಸರ್ಕಾರದ ಪಠ್ಯಕ್ರಮದಲ್ಲಿ ಕಲಿತ ವಿದ್ಯಾರ್ಥಿಗಳ ಸಂಖ್ಯೆ ಶೇ.98ರಿಂದ ಶೇ.60ಕ್ಕೆ ಇಳಿಯಲ್ಪಟ್ಟಿತು. ಹಾಗೆಯೇ ಗ್ರಾಮಾಂತರದ ವಿದ್ಯಾರ್ಥಿಗಳ ಸಂಖ್ಯೆ ಶೇ.65ರಿಂದ ಶೇ.50ಕ್ಕೆ ಇಳಿಯಲ್ಪಟ್ಟಿತು. ಅದೇ ಸಮಯದಲ್ಲಿ ಕೇಂದ್ರ ಪಠ್ಯಕ್ರಮದಲ್ಲಿ ಓದಿ ಕಲಿತ ವಿದ್ಯಾರ್ಥಿಗಳ ಸಂಖ್ಯೆ ಶೇ.1ರಿಂದ ಶೇ.39ಕ್ಕೆ ಏರಿಕೆಯಾಯಿತು. ಇಲ್ಲಿ ಸ್ಪಷ್ಟವಾಗಿ ಗಮನಿಸಬೇಕಾದದ್ದು ಗ್ರ್ರಾಮಾಂತರ ಮಕ್ಕಳ ಸಮಸ್ಯೆ. ಇಂಗ್ಲಿಷ್ ಭಾಷೆಯಲ್ಲಿ ಕಲಿಯದಿದ್ದುದು ಮತ್ತು ರಾಜ್ಯದ ಪಠ್ಯಕ್ರಮದಲ್ಲಿ ಕಲಿತದ್ದು, ಅವರ ವಿರುದ್ಧ ಕೆಲಸ ಮಾಡಿ, ಅವರನ್ನು ಹೊರದಬ್ಬುವಂತೆ ಮಾಡಿತು. ತಮಿಳಿನಲ್ಲಿ ಉತ್ತಮ ಅಂಕಗಳನ್ನು ಪಡೆದರೂ NEET ಗೇಟಿನಿಂದ ಹೊರಗುಳಿಯಬೇಕಾಯಿತು. ಇದು ಅರ್ಹತೆ ಅಥವಾ ಜ್ಞಾನದ ಆಧಾರದ ಮೇಲೆ ಎಂದು ಪರಿಗಣಿಸಲಾಗದು. ಗುರುತ್ವಾಕರ್ಷಣೆ ಎಂದು ಗೊತ್ತಿದೆ, ಆದರೆ ಗ್ರಾವಿಟಿ ಗೊತ್ತಿಲ್ಲವೆಂದರೆ ವಿಷಯ ಗೊತ್ತಿಲ್ಲವೆಂದಲ್ಲ. ಭಾಷೆಯ ತೊಡಕಷ್ಟೇ ಎನ್ನುವುದನ್ನು ಗಮನಿಸತಕ್ಕದ್ದು. ಭಾರತದಲ್ಲಿ ಅನೇಕರು ಹೇಳುವಂತೆ ಇಂಗ್ಲಿಷ್ ಬರುವವರೆಲ್ಲಾ ತತ್ವಶಾಸ್ತ್ರಜ್ಞರಾಗಿಬಿಡುತ್ತಾರೆ.

ಇದಲ್ಲದೆ ಒಕ್ಕೂಟ ವ್ಯವಸ್ಥೆಯಲ್ಲಿ ಶಿಕ್ಷಣ ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆಯಲ್ಲಿ ಇರತಕ್ಕದ್ದು. ಆದರೆ NEET ಪರೀಕ್ಷೆಯೆಂಬ ಕಾನೂನಿನಿಂದ ಕೇಂದ್ರ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಂತಾಯಿತು. ಇತ್ತೀಚೆಗೆ ಪಂಚಾಯತ್‌ರಾಜ್‌ನಿಂದ ಹಿಡಿದು ಸಹಕಾರಿ ಬ್ಯಾಂಕ್‌ಗಳನ್ನು ಹಲವು ಕಾನೂನುಗಳ ಮೂಲಕ ಕೇಂದ್ರ ತನ್ನ ಹಿಡಿತಕ್ಕೆ ತೆಗೆದುಕೊಳ್ಳುತ್ತಿದೆ.

ಇಂದು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಒಳ್ಳೆಯ ಅಂಕಗಳನ್ನು ಗಳಿಸಲು ಸಾವಿರಾರು ಕೋಟಿಯ ಕೋಚಿಂಗ್ ಉದ್ಯಮ ತಲೆಯೆತ್ತಿ ನಿಂತಿದೆ. ರಾಜಸ್ಥಾನದ ಕೋಟಾದಲ್ಲಿರುವ ಕೋಚಿಂಗ್ ಉದ್ಯಮ ಸುಮಾರು ಮೂರು ಸಾವಿರ ಕೋಟಿಯದು ಎನ್ನುತ್ತಾರೆ. ನಮ್ಮ ಆರ್ಥಿಕ ಮಾಪನಗಳ ವಿಪರ್ಯಾಸವೆಂದರೆ ಶಾಲಾ-ಕಾಲೇಜುಗಳಲ್ಲಿ ಸರಿಯಾಗಿ ಪಾಠಮಾಡದೆ ಖಾಸಗಿಯಾಗಿ ಟ್ಯೂಷನ್ ತೆಗೆದುಕೊಂಡರೆ ಜಿಡಿಪಿ ಬೆಳೆಯುತ್ತದೆ, ಅಭಿವೃದ್ಧಿ ಆಗುತ್ತದೆ ಎಂದು ತೋರಿಕೊಳ್ಳುತ್ತದೆ. ಇತ್ತೀಚೆಗೆ ಚೈನಾ ದೇಶ ಇಡೀ ಕೋಚಿಂಗ್ ಉದ್ಯಮವನ್ನು ಮಟ್ಟ ಹಾಕಿದೆ.

ನಮ್ಮ ದೇಶದಲ್ಲಿ, ವಂಚಿತ ಸಮುದಾಯಗಳು ತಮ್ಮ ಕೆಳಸ್ತರದಿಂದ ಶೈಕ್ಷಣಿಕವಾಗಿ ಆರ್ಥಿಕವಾಗಿ ಮುಂದೆಬರುವುದು ಅಷ್ಟು ಸುಲಭವಲ್ಲ. ’ವರ್ಲ್ಡ್ ಎಕನಾಮಿಕ್ ಫೋರಂ’ ಹೊರತರುವ ತನ್ನ ಸೋಷಿಯಲ್ ಮೊಬಿಲಿಟಿ ಇಂಡೆಕ್ಸ್ ಎನ್ನುವ ಮಾಪನದಲ್ಲಿ ಜಗತ್ತಿನ 84 ದೇಶಗಳಲ್ಲಿ ಭಾರತ 76ನೇ ಸ್ಥಾನದಲ್ಲಿದೆ. ಯಾವುದೇ ವ್ಯಕ್ತಿ ತನ್ನ ಸ್ಥಾನಮಾನವನ್ನು ಉತ್ತಮಪಡಿಸಿಕೊಂಡು ಮುಂದುವರಿಯಲು ಅತ್ಯಂತ ಹೆಚ್ಚು ತಡೆಗೋಡೆಗಳು ಭಾರತದಲ್ಲಿವೆ ಎನ್ನುವುದೇ ಇದರ ಅರ್ಥ.

ಕೆ.ಸಿ. ರಘು

ಕೆ.ಸಿ. ರಘು
ಕೆ.ಸಿ. ರಘು ಅವರು ನಾಡಿನ ಹೆಸರಾಂತ ಆಹಾರ ತಜ್ಞರು, ಅನೇಕ ವರ್ಷಗಳ ಕಾಲ ‘ಫುಡ್ ಅಂಡ್ ನ್ಯೂಟ್ರಿಷನ್ ವರ್ಲ್ಡ್’ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದರು. ಅನೇಕ ದಿನಪತ್ರಿಕೆಗಳಲ್ಲಿ ಆಹಾರ ಸಂಸ್ಕೃತಿಗಳ ಹಿಂದಿರುವ ರಾಜಕೀಯ, ಸಂಸ್ಕೃತಿ, ಸಾಮಾಜಿಕ ಆಯಾಮಗಳನ್ನು ಕುರಿತು ಅಂಕಣಗಳನ್ನು ಬರೆಯುತ್ತಿದ್ದಾರೆ.


ಇದನ್ನೂ ಓದಿ: NEET ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿಲುವಳಿ ಅಂಗೀಕಾರ; ಕಾರಣಗಳೇನು?

ಇದನ್ನೂ ಓದಿ: ಬಹುಪಾಲು ವಿದ್ಯಾರ್ಥಿಗಳಿಗೆ ‘ನೀಟ್‌‌’ ಬೇಡ: ನ್ಯಾಯಮೂರ್ತಿ ರಾಜನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಯಲು ಸರ್ಕಾರ ಮಧ್ಯಪ್ರವೇಶಿಸಬೇಕು; ಮುಖ್ಯಮಂತ್ರಿಗಳಿಗೆ ನಾಗರಿಕ ಸಂಘಟನೆಗಳ ಮನವಿ

"ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದ್ದು, ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು" ಎಂದು ನಾಗರಿಕ ಸಂಘಟನೆಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ...

SIR: ಕೊಪ್ಪಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ‘ಛತ್ರಪ್ಪ’ ಅವರ ಹೆಸರನ್ನೆ ಕೈಬಿಟ್ಟ ಚುನಾವಣಾ ಆಯೋಗ

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳು ದಿಢೀರ್ ನಾಪತ್ತೆಯಾಗುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ 50ಕ್ಕೂ ಹೆಚ್ಚು ವರ್ಷಗಳಿಂದ ಗಂಗಾವತಿಯಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಚಿರಪರಿಚಿತರಾಗಿರುವ, ಗಂಗಾವತಿ ಬಸವ ಕೇಂದ್ರದ...

ಮಹಾರಾಷ್ಟ್ರದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ವಿಚಿತ್ರ ವರ್ತನೆ, ಗೆಜ್ಜೆ ಸದ್ದು: ದೆವ್ವದ ಕಾಟವೆಂದು ಹಾಸ್ಟೆಲ್ ತೊರೆದ 600 ಬುಡಕಟ್ಟು ವಿದ್ಯಾರ್ಥಿಗಳು

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ದೂರದ ಮೆಲ್ಘಾಟ್ ಬುಡಕಟ್ಟು ಪ್ರದೇಶದಲ್ಲಿ ಮೂಢನಂಬಿಕೆ ಮತ್ತು ಮಾನಸಿಕ ಭಯದ ವಾತಾವರಣವು ಗಂಭೀರ ಶೈಕ್ಷಣಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಚಿಕಲ್ದಾರಾ ತಾಲ್ಲೂಕಿನ ಡೋಮಾ ಗ್ರಾಮದಲ್ಲಿರುವ ಸರ್ಕಾರಿ ಬುಡಕಟ್ಟು ವಸತಿ ಶಾಲೆಯ...

ಉತ್ತರ ಪ್ರದೇಶ| ಕನ್ವಾರಿ ಯಾತ್ರಿಕರ ಹಲ್ಲೆಯಿಂದ ಮುಸ್ಲಿಂ ಯುವಕ ಸಾವು; ಐವರ ಬಂಧನ

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಕನ್ವಾರಿ ಯಾತ್ರಿಕರ ಗುಂಪಿನಿಂದ ಹಲ್ಲೆಗೊಳಗಾದ ಮುಸ್ಲಿಂ ಯುವಕ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಕನ್ವಾರಿಗಳನ್ನು ಬಂಧಿಸಲಾಗಿದೆ. ಬ್ರಿಜ್‌ಘಾಟ್ ಟೋಲ್ ಪ್ಲಾಜಾ ಬಳಿ ನಡೆದ ರಸ್ತೆ ಅಪಘಾತದ ನಂತರ ಮೊರಾದಾಬಾದ್...

ಜಾರ್ಖಂಡ್‌ ಸಿಎಂಗೆ ರಾಹುಲ್ ಗಾಂಧಿ ಪತ್ರ, ಉದ್ಯೋಗಾಕಾಂಕ್ಷಿಗಳ ಬೆಂಬಲಕ್ಕೆ ಆಗ್ರಹ

ಜಾರ್ಖಂಡ್‌ನಲ್ಲಿ ರಾಜ್ಯ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ವಿರುದ್ಧ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಹೋರಾಟದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಹೇಮಂತ್ ಸೋರೆನ್...

“NTA ಮಾಡಿದ ತಪ್ಪಿಗೆ ವಿದ್ಯಾರ್ಥಿಗಳಿಗೆ ಶಿಕ್ಷೆ”: UGC-NET ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ ಪತ್ರಿಕೆಗಳ ಮರುಪರೀಕ್ಷೆ ನಿರ್ಧಾರಕ್ಕೆ ದೇಶಾದ್ಯಂತ ಆಕ್ರೋಶ

ನವದೆಹಲಿ: ಕಳೆದ ಜೂನ್ ತಿಂಗಳಿನಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ್ದ ಯುಜಿಸಿ-ನೆಟ್ (UGC-NET) ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಸಾಲು ಸಾಲು ಗಂಭೀರ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ, ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ...

ಬಿಹಾರದ ಅಶೋಕಧಾಮ ದೇಗುಲದಲ್ಲಿ ಕಾಲ್ತುಳಿತ: ಶ್ರಾವಣ ಸೋಮವಾರದ ಪೂಜೆ ವೇಳೆ 7 ಮಹಿಳೆಯರು ಸಾವು, 12 ಕ್ಕೂ ಹೆಚ್ಚು ಜನರಿಗೆ ಗಾಯ

ಪಾಟ್ನಾ/ಲಖಿಸರಾಯ್: ಶ್ರಾವಣ ಮಾಸದ ಪವಿತ್ರ ಸೋಮವಾರದಂದು ಧಾರ್ಮಿಕ ಕೇಂದ್ರವೊಂದರಲ್ಲಿ ಸಂಭವಿಸಿದ ಭೀಕರ ಅಪಘಾತ ಇಡೀ ರಾಜ್ಯವನ್ನೇ ದಿಗ್ಭ್ರಮೆಗೊಳಿಸಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿರುವ ಐತಿಹಾಸಿಕ ಅಶೋಕಧಾಮ ದೇವಾಲಯದ ಆವರಣದ ಬಳಿ ಮುಂಜಾನೆ ನಡೆದ ಭೀಕರ...

ಎಲ್ಲಾ ಯೋಜನೆಗಳೂ ಗುಜರಾತ್‌ಗೇ ಏಕೆ?: ಬಿಜೆಪಿ ಕೇಂದ್ರ ನಾಯಕತ್ವ ವಿರುದ್ಧವೇ ಬಹಿರಂಗವಾಗಿ ತಿರುಗಿಬಿದ್ದ ಅಣ್ಣಾಮಲೈ!

BJP ನಾಯಕತ್ವದ ನಿರ್ಧಾರಗಳು ‘ದೆಹಲಿ ಕೇಂದ್ರಿತ’ ಹಾಗೂ ದೇಶದ ಅಭಿವೃದ್ಧಿ ಮಾದರಿಯು ‘ಗುಜರಾತ್‌ ಕೇಂದ್ರಿತ’ವಾಗುತ್ತಿದೆ ಎಂದು ತಮಿಳುನಾಡು ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ ಹಾಗೂ ‘ವಿ ದಿ ಲೀಡರ್ಸ್’ ಸಂಘಟನೆಯ ಸಂಸ್ಥಾಪಕ ಕೆ. ಅಣ್ಣಾಮಲೈ...

ಜಾರ್ಖಂಡ್ ವಿದ್ಯಾರ್ಥಿಗಳ ಹೋರಾಟ; ಹೇಮಂತ್ ಸೊರೇನ್ – ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿದ ಪ್ರತಿಭಟನಾಕಾರರು

ಜಾರ್ಖಂಡ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಆಗಸ್ಟ್ 16 ರಂದು (ಭಾನುವಾರ) ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್, ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ...

BJP ರಾಷ್ಟ್ರೀಯ ವಕ್ತಾರ ಹುದ್ದೆಗೆ ಮತ್ತೆ ರಾಜೀನಾಮೆ! ಕಾರಣ ಬಿಚ್ಚಿಟ್ಟ ಶೆಹಝಾದ್ ಪೂನಾವಾಲಾ

BJP ರಾಷ್ಟ್ರೀಯ ವಕ್ತಾರ ಶೆಹಝಾದ್ ಪೂನಾವಾಲಾ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ತಮ್ಮ ಹುದ್ದೆಗೆ ಮತ್ತೊಮ್ಮೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ತಕ್ಷಣವೇ ಅಂಗೀಕರಿಸುವಂತೆ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...