HomeಮುಖಪುಟNEET ಗೇಟ್; ಮೆರಿಟ್ ಹೆಸರಿನಲ್ಲಿ ಹೊರದಬ್ಬುವುದೇ ಮುಖ್ಯ ಉದ್ದೇಶ

NEET ಗೇಟ್; ಮೆರಿಟ್ ಹೆಸರಿನಲ್ಲಿ ಹೊರದಬ್ಬುವುದೇ ಮುಖ್ಯ ಉದ್ದೇಶ

- Advertisement -
- Advertisement -

ಐದು ಮಕ್ಕಳ ಗುಂಪೊಂದು ನಾಟಕವಾಡೋಣ ಎಂದು ತೀರ್ಮಾನಿಸುತ್ತದೆ. ಅದರಲ್ಲಿದ್ದ ಪುಟಾಣಿ ಹುಡುಗಿ ನನಗೇನು ಪಾತ್ರವಿಲ್ಲ ಎಂದು ಅಳತೊಡಗಿದಾಗ ಸಭೆಯ ತೀರ್ಮಾನ ಹೀಗಾಗುತ್ತದೆ: ನಿನಗೂ ಒಂದು ಪಾತ್ರವಿದೆ, ಆದರೆ ನೀನು ಇನ್ನೂ ಹುಟ್ಟಿಲ್ಲದ ಮಗು! ಪಾತ್ರ ಕೊಟ್ಟಂತೂ ಆಗಬೇಕು, ನಾಟಕದಿಂದ ಹೊರದಬ್ಬಿದಂತೆಯೂ ಆಗಬೇಕು ಎನ್ನುವುದು ’ಸಭೆಯ ಉದ್ದೇಶ’. ಒಳಗೊಳ್ಳುವಿಕೆ ಅಥವಾ ಹೊರದಬ್ಬುವಿಕೆ, ಹೊರನೋಟಕ್ಕೆ ಎಲ್ಲವೂ ನಾಜೂಕಾಗಿ ಕಾಣಬಹುದು ಮತ್ತು ಒಳಗಿಂದೊಳಗೆ ಒಂದು ಕಾನೂನಿನ ಮೂಲಕವೋ ಅಥವಾ ಯಾವುದೋ ಒಂದು ವ್ಯವಸ್ಥೆಯ ಮೂಲಕವೋ, ಹೊರಗಿರುವವರನ್ನು ಹೊರಗೇ ಇಡುವಂತೆ ಮಾಡಬಹುದು.

ಇದಕ್ಕೆ ಹಣಕಾಸು, ಜಾತಿ, ಧರ್ಮ, ಭಾಷೆ – ಈ ರೀತಿ ಯಾವುದಾದರೊಂದನ್ನು ತಂತ್ರವಾಗಿ ಬಳಸಿ ವಾಸ್ತವ ಸ್ಥಿತಿಯನ್ನು ಕಾಪಾಡಿಕೊಳ್ಳುವಂತಾಗಬಹುದು. ಎರಡನೇ ಮಹಾಯುದ್ಧದ ನಂತರ ಅಮೆರಿಕದ ಅಧ್ಯಕ್ಷ ರೂಸ್ವೆಲ್ಟ್ ತನ್ನ ದೇಶಕ್ಕೆ ಹೊಸ ಶಿಕ್ಷಣ ನೀತಿಯೊಂದನ್ನು ರೂಪಿಸಿ ಇದು ಸಾಧಾರಣ ಮನುಷ್ಯನಿಗೆ ಅಸಾಧಾರಣ ಶಿಕ್ಷಣವನ್ನು ಒದಗಿಸುವ ವ್ಯವಸ್ಥೆ (uncommon education for common man) ಎಂದಿದ್ದ. ಅಮೇರಿಕದ ಶ್ರೇಷ್ಠ ತತ್ವಶಾಸ್ತ್ರಜ್ಞ ಜಾನ್ ರಾಲ್ಸ್ ’ನ್ಯಾಯವೆಂದರೆ ಕಟ್ಟಕಡೆಯ ಮನುಷ್ಯನ ಹಾದಿಯನ್ನು ಸುಗಮಗೊಳಿಸುವುದು’ (Advantage for most disadvantaged) ಎಂದಿದ್ದ.

ಇಂದು ಅನೇಕ ಸಾರ್ವಜನಿಕ ವ್ಯವಸ್ಥೆಗಳು ಖಾಸಗೀಕಣಗೊಂಡಿರುವ ಕಾಲ. ಅದು ಆರೋಗ್ಯವಿರಬಹುದು ಅಥವಾ ಶಿಕ್ಷಣವಿರಬಹುದು. ಪತ್ರಕರ್ತ ಶಂಕರ್‌ಅಯ್ಯರ್ ’ಗೇಟೆಡ್ ರಿಪಬ್ಲಿಕ್’ ಎನ್ನುವ ಪುಸ್ತಕವನ್ನು ಈ ವ್ಯವಸ್ಥೆಯನ್ನು ವಿವರಿಸುವುದಕ್ಕಾಗಿಯೇ ಬರೆದಿದ್ದಾರೆ. ಹಾಗೆಯೇ ಆನಂದ ತೇಲ್ತುಂಬ್ಡೆ ಅವರ ’ರಿಪಬ್ಲಿಕ್ ಆಫ್ ಕಾಸ್ಟ್’ ಎನ್ನುವ ಪುಸ್ತಕವನ್ನು ಗಮನಿಸಬಹುದು. ಇದೇ ನಿಟ್ಟಿನಲ್ಲಿ ಮೈಕಲ್ ಸ್ಯಾಂಡಲ್ ತನ್ನ ’ಟಿರನಿ ಆಫ್ ಮೆರಿಟ್’ ಎನ್ನುವ ಪುಸ್ತಕದಲ್ಲಿ ಈ ಅರ್ಹತೆಯ ಅಹಂಕಾರ ಮತ್ತು ದಬ್ಬಾಳಿಕೆಯನ್ನು ವಿವರಿಸುತ್ತಾನೆ. ಹೊರನೋಟಕ್ಕೆ ಅದು ಅರ್ಹತೆ ಎಂದು ಕಂಡುಬಂದರೂ ಅದರ ಹಿಂದೆ ಇರುವ ಕೈಚಳಕ ಪರಂಪರಾಗತವಾಗಿ ಬಂದ ಶ್ರೀಮಂತ ಕುಟುಂಬಗಳು ಮತ್ತು ಅವರ ಪರವಾಗಿ ನಿಲ್ಲುವ ವ್ಯವಸ್ಥೆ ಹೇಗೆ ಮೇಲಿರುವವರನ್ನು ಮೇಲಕ್ಕೆತ್ತುತ್ತಾ, ಕೆಳಗಿರುವವರನ್ನು ತುಳಿಯುತ್ತಾ ಬಂದಿದೆ ಎನ್ನುವುದನ್ನು ಆತ ವಿವರಿಸುತ್ತಾನೆ.

ಸೋತವನು ಅನರ್ಹ, ಅಯೋಗ್ಯ ಎಂದೆಲ್ಲ ಹಣೆಪಟ್ಟಿ ಕಟ್ಟಿ ಹೀಗಳೆಯುವಂತಾಗುತ್ತದೆ. ವಾಸ್ತವವಾಗಿ ಸೋಲಿಗೆ ವ್ಯವಸ್ಥೆಯಲ್ಲಿರುವ ಕಾರಣವನ್ನು ಗಮನಿಸುವುದಿಲ್ಲ. ಹೀಗಾಗಿ ನಮ್ಮ ದೇಶದಲ್ಲಿ ಉನ್ನತ ಶಿಕ್ಷಣಕ್ಕೆ ಕೆಳವರ್ಗದವರು ಶೇ.23ರಷ್ಟು ಮಾತ್ರ ಪಾಲ್ಗೊಳ್ಳುವುದಾದರೆ ಇತರರು ಶೇ.32ರಷ್ಟು ಸೇರುವುದಾಗಿದೆ. ಒಟ್ಟು ಉನ್ನತ ಶಿಕ್ಷಣಕ್ಕೆ ಹೋಗುವವರೇ ಶೇ.28ರಷ್ಟಿದ್ದು ಜಗತ್ತಿನ ಸರಾಸರಿ ಶೇ.38ಕ್ಕೆ ಹೋಲಿಸಿದರೆ ಅಥವಾ ಚೈನಾದ ಶೇ.53ಕ್ಕೆ ಹೋಲಿಸಿದರೆ ಭಾರತ ಕಳಪೆ ಸ್ಥಾನದಲ್ಲಿರುವುದನ್ನು ಗಮನಿಸಬಹುದು. ಅದರಲ್ಲೂ ದಲಿತರು ಮತ್ತು ಅಲ್ಪಸಂಖ್ಯಾತರಲ್ಲಿ ಈ ಅನುಪಾತ ಸುಮಾರು ಶೇ.20ರಷ್ಟಿದ್ದು, ಸಮಾಜ-ಆಡಳಿತ ವ್ಯವಸ್ಥೆ ಆ ಸಮುದಾಯ ಹಿಂದೆ ಬಿದ್ದಿರುವದನ್ನು ಸರಿಪಡಿಸಲು ಹೆಚ್ಚೇನೂ ಕೆಲಸ ಮಾಡಿಲ್ಲ ಎಂಬುದನ್ನು ಗಮನಿಸಬಹುದು.

ಇತ್ತೀಚೆಗೆ ತಮಿಳುನಾಡು ಸರ್ಕಾರ ವೈದ್ಯಕೀಯ ಶಿಕ್ಷಣಕ್ಕೆ ಕೇಂದ್ರ ಸರ್ಕಾರ ನಡೆಸುವ ಏಕರೂಪದ NEET ಪರೀಕ್ಷೆಯನ್ನು ರದ್ದುಗೊಳಿಸುವ ನಡಾವಳಿಯನ್ನು ವಿಧಾನಸಭೆಯಲ್ಲಿ ಮಂಡಿಸಿತು. ಕಾರಣ NEET ಪರೀಕ್ಷೆ ಆರಂಭಗೊಂಡ ನಂತರ ತಮಿಳು ಮಾಧ್ಯಮದ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳ ಸಂಖ್ಯೆ ಶೇ.15ರಿಂದ ಶೇ.2ಕ್ಕೆ ಇಳಿಯಲ್ಪಟ್ಟಿತು ಹಾಗೂ ರಾಜ್ಯ ಸರ್ಕಾರದ ಪಠ್ಯಕ್ರಮದಲ್ಲಿ ಕಲಿತ ವಿದ್ಯಾರ್ಥಿಗಳ ಸಂಖ್ಯೆ ಶೇ.98ರಿಂದ ಶೇ.60ಕ್ಕೆ ಇಳಿಯಲ್ಪಟ್ಟಿತು. ಹಾಗೆಯೇ ಗ್ರಾಮಾಂತರದ ವಿದ್ಯಾರ್ಥಿಗಳ ಸಂಖ್ಯೆ ಶೇ.65ರಿಂದ ಶೇ.50ಕ್ಕೆ ಇಳಿಯಲ್ಪಟ್ಟಿತು. ಅದೇ ಸಮಯದಲ್ಲಿ ಕೇಂದ್ರ ಪಠ್ಯಕ್ರಮದಲ್ಲಿ ಓದಿ ಕಲಿತ ವಿದ್ಯಾರ್ಥಿಗಳ ಸಂಖ್ಯೆ ಶೇ.1ರಿಂದ ಶೇ.39ಕ್ಕೆ ಏರಿಕೆಯಾಯಿತು. ಇಲ್ಲಿ ಸ್ಪಷ್ಟವಾಗಿ ಗಮನಿಸಬೇಕಾದದ್ದು ಗ್ರ್ರಾಮಾಂತರ ಮಕ್ಕಳ ಸಮಸ್ಯೆ. ಇಂಗ್ಲಿಷ್ ಭಾಷೆಯಲ್ಲಿ ಕಲಿಯದಿದ್ದುದು ಮತ್ತು ರಾಜ್ಯದ ಪಠ್ಯಕ್ರಮದಲ್ಲಿ ಕಲಿತದ್ದು, ಅವರ ವಿರುದ್ಧ ಕೆಲಸ ಮಾಡಿ, ಅವರನ್ನು ಹೊರದಬ್ಬುವಂತೆ ಮಾಡಿತು. ತಮಿಳಿನಲ್ಲಿ ಉತ್ತಮ ಅಂಕಗಳನ್ನು ಪಡೆದರೂ NEET ಗೇಟಿನಿಂದ ಹೊರಗುಳಿಯಬೇಕಾಯಿತು. ಇದು ಅರ್ಹತೆ ಅಥವಾ ಜ್ಞಾನದ ಆಧಾರದ ಮೇಲೆ ಎಂದು ಪರಿಗಣಿಸಲಾಗದು. ಗುರುತ್ವಾಕರ್ಷಣೆ ಎಂದು ಗೊತ್ತಿದೆ, ಆದರೆ ಗ್ರಾವಿಟಿ ಗೊತ್ತಿಲ್ಲವೆಂದರೆ ವಿಷಯ ಗೊತ್ತಿಲ್ಲವೆಂದಲ್ಲ. ಭಾಷೆಯ ತೊಡಕಷ್ಟೇ ಎನ್ನುವುದನ್ನು ಗಮನಿಸತಕ್ಕದ್ದು. ಭಾರತದಲ್ಲಿ ಅನೇಕರು ಹೇಳುವಂತೆ ಇಂಗ್ಲಿಷ್ ಬರುವವರೆಲ್ಲಾ ತತ್ವಶಾಸ್ತ್ರಜ್ಞರಾಗಿಬಿಡುತ್ತಾರೆ.

ಇದಲ್ಲದೆ ಒಕ್ಕೂಟ ವ್ಯವಸ್ಥೆಯಲ್ಲಿ ಶಿಕ್ಷಣ ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆಯಲ್ಲಿ ಇರತಕ್ಕದ್ದು. ಆದರೆ NEET ಪರೀಕ್ಷೆಯೆಂಬ ಕಾನೂನಿನಿಂದ ಕೇಂದ್ರ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಂತಾಯಿತು. ಇತ್ತೀಚೆಗೆ ಪಂಚಾಯತ್‌ರಾಜ್‌ನಿಂದ ಹಿಡಿದು ಸಹಕಾರಿ ಬ್ಯಾಂಕ್‌ಗಳನ್ನು ಹಲವು ಕಾನೂನುಗಳ ಮೂಲಕ ಕೇಂದ್ರ ತನ್ನ ಹಿಡಿತಕ್ಕೆ ತೆಗೆದುಕೊಳ್ಳುತ್ತಿದೆ.

ಇಂದು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಒಳ್ಳೆಯ ಅಂಕಗಳನ್ನು ಗಳಿಸಲು ಸಾವಿರಾರು ಕೋಟಿಯ ಕೋಚಿಂಗ್ ಉದ್ಯಮ ತಲೆಯೆತ್ತಿ ನಿಂತಿದೆ. ರಾಜಸ್ಥಾನದ ಕೋಟಾದಲ್ಲಿರುವ ಕೋಚಿಂಗ್ ಉದ್ಯಮ ಸುಮಾರು ಮೂರು ಸಾವಿರ ಕೋಟಿಯದು ಎನ್ನುತ್ತಾರೆ. ನಮ್ಮ ಆರ್ಥಿಕ ಮಾಪನಗಳ ವಿಪರ್ಯಾಸವೆಂದರೆ ಶಾಲಾ-ಕಾಲೇಜುಗಳಲ್ಲಿ ಸರಿಯಾಗಿ ಪಾಠಮಾಡದೆ ಖಾಸಗಿಯಾಗಿ ಟ್ಯೂಷನ್ ತೆಗೆದುಕೊಂಡರೆ ಜಿಡಿಪಿ ಬೆಳೆಯುತ್ತದೆ, ಅಭಿವೃದ್ಧಿ ಆಗುತ್ತದೆ ಎಂದು ತೋರಿಕೊಳ್ಳುತ್ತದೆ. ಇತ್ತೀಚೆಗೆ ಚೈನಾ ದೇಶ ಇಡೀ ಕೋಚಿಂಗ್ ಉದ್ಯಮವನ್ನು ಮಟ್ಟ ಹಾಕಿದೆ.

ನಮ್ಮ ದೇಶದಲ್ಲಿ, ವಂಚಿತ ಸಮುದಾಯಗಳು ತಮ್ಮ ಕೆಳಸ್ತರದಿಂದ ಶೈಕ್ಷಣಿಕವಾಗಿ ಆರ್ಥಿಕವಾಗಿ ಮುಂದೆಬರುವುದು ಅಷ್ಟು ಸುಲಭವಲ್ಲ. ’ವರ್ಲ್ಡ್ ಎಕನಾಮಿಕ್ ಫೋರಂ’ ಹೊರತರುವ ತನ್ನ ಸೋಷಿಯಲ್ ಮೊಬಿಲಿಟಿ ಇಂಡೆಕ್ಸ್ ಎನ್ನುವ ಮಾಪನದಲ್ಲಿ ಜಗತ್ತಿನ 84 ದೇಶಗಳಲ್ಲಿ ಭಾರತ 76ನೇ ಸ್ಥಾನದಲ್ಲಿದೆ. ಯಾವುದೇ ವ್ಯಕ್ತಿ ತನ್ನ ಸ್ಥಾನಮಾನವನ್ನು ಉತ್ತಮಪಡಿಸಿಕೊಂಡು ಮುಂದುವರಿಯಲು ಅತ್ಯಂತ ಹೆಚ್ಚು ತಡೆಗೋಡೆಗಳು ಭಾರತದಲ್ಲಿವೆ ಎನ್ನುವುದೇ ಇದರ ಅರ್ಥ.

ಕೆ.ಸಿ. ರಘು

ಕೆ.ಸಿ. ರಘು
ಕೆ.ಸಿ. ರಘು ಅವರು ನಾಡಿನ ಹೆಸರಾಂತ ಆಹಾರ ತಜ್ಞರು, ಅನೇಕ ವರ್ಷಗಳ ಕಾಲ ‘ಫುಡ್ ಅಂಡ್ ನ್ಯೂಟ್ರಿಷನ್ ವರ್ಲ್ಡ್’ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದರು. ಅನೇಕ ದಿನಪತ್ರಿಕೆಗಳಲ್ಲಿ ಆಹಾರ ಸಂಸ್ಕೃತಿಗಳ ಹಿಂದಿರುವ ರಾಜಕೀಯ, ಸಂಸ್ಕೃತಿ, ಸಾಮಾಜಿಕ ಆಯಾಮಗಳನ್ನು ಕುರಿತು ಅಂಕಣಗಳನ್ನು ಬರೆಯುತ್ತಿದ್ದಾರೆ.


ಇದನ್ನೂ ಓದಿ: NEET ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿಲುವಳಿ ಅಂಗೀಕಾರ; ಕಾರಣಗಳೇನು?

ಇದನ್ನೂ ಓದಿ: ಬಹುಪಾಲು ವಿದ್ಯಾರ್ಥಿಗಳಿಗೆ ‘ನೀಟ್‌‌’ ಬೇಡ: ನ್ಯಾಯಮೂರ್ತಿ ರಾಜನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...