HomeಮುಖಪುಟNEET ಗೇಟ್; ಮೆರಿಟ್ ಹೆಸರಿನಲ್ಲಿ ಹೊರದಬ್ಬುವುದೇ ಮುಖ್ಯ ಉದ್ದೇಶ

NEET ಗೇಟ್; ಮೆರಿಟ್ ಹೆಸರಿನಲ್ಲಿ ಹೊರದಬ್ಬುವುದೇ ಮುಖ್ಯ ಉದ್ದೇಶ

- Advertisement -
- Advertisement -

ಐದು ಮಕ್ಕಳ ಗುಂಪೊಂದು ನಾಟಕವಾಡೋಣ ಎಂದು ತೀರ್ಮಾನಿಸುತ್ತದೆ. ಅದರಲ್ಲಿದ್ದ ಪುಟಾಣಿ ಹುಡುಗಿ ನನಗೇನು ಪಾತ್ರವಿಲ್ಲ ಎಂದು ಅಳತೊಡಗಿದಾಗ ಸಭೆಯ ತೀರ್ಮಾನ ಹೀಗಾಗುತ್ತದೆ: ನಿನಗೂ ಒಂದು ಪಾತ್ರವಿದೆ, ಆದರೆ ನೀನು ಇನ್ನೂ ಹುಟ್ಟಿಲ್ಲದ ಮಗು! ಪಾತ್ರ ಕೊಟ್ಟಂತೂ ಆಗಬೇಕು, ನಾಟಕದಿಂದ ಹೊರದಬ್ಬಿದಂತೆಯೂ ಆಗಬೇಕು ಎನ್ನುವುದು ’ಸಭೆಯ ಉದ್ದೇಶ’. ಒಳಗೊಳ್ಳುವಿಕೆ ಅಥವಾ ಹೊರದಬ್ಬುವಿಕೆ, ಹೊರನೋಟಕ್ಕೆ ಎಲ್ಲವೂ ನಾಜೂಕಾಗಿ ಕಾಣಬಹುದು ಮತ್ತು ಒಳಗಿಂದೊಳಗೆ ಒಂದು ಕಾನೂನಿನ ಮೂಲಕವೋ ಅಥವಾ ಯಾವುದೋ ಒಂದು ವ್ಯವಸ್ಥೆಯ ಮೂಲಕವೋ, ಹೊರಗಿರುವವರನ್ನು ಹೊರಗೇ ಇಡುವಂತೆ ಮಾಡಬಹುದು.

ಇದಕ್ಕೆ ಹಣಕಾಸು, ಜಾತಿ, ಧರ್ಮ, ಭಾಷೆ – ಈ ರೀತಿ ಯಾವುದಾದರೊಂದನ್ನು ತಂತ್ರವಾಗಿ ಬಳಸಿ ವಾಸ್ತವ ಸ್ಥಿತಿಯನ್ನು ಕಾಪಾಡಿಕೊಳ್ಳುವಂತಾಗಬಹುದು. ಎರಡನೇ ಮಹಾಯುದ್ಧದ ನಂತರ ಅಮೆರಿಕದ ಅಧ್ಯಕ್ಷ ರೂಸ್ವೆಲ್ಟ್ ತನ್ನ ದೇಶಕ್ಕೆ ಹೊಸ ಶಿಕ್ಷಣ ನೀತಿಯೊಂದನ್ನು ರೂಪಿಸಿ ಇದು ಸಾಧಾರಣ ಮನುಷ್ಯನಿಗೆ ಅಸಾಧಾರಣ ಶಿಕ್ಷಣವನ್ನು ಒದಗಿಸುವ ವ್ಯವಸ್ಥೆ (uncommon education for common man) ಎಂದಿದ್ದ. ಅಮೇರಿಕದ ಶ್ರೇಷ್ಠ ತತ್ವಶಾಸ್ತ್ರಜ್ಞ ಜಾನ್ ರಾಲ್ಸ್ ’ನ್ಯಾಯವೆಂದರೆ ಕಟ್ಟಕಡೆಯ ಮನುಷ್ಯನ ಹಾದಿಯನ್ನು ಸುಗಮಗೊಳಿಸುವುದು’ (Advantage for most disadvantaged) ಎಂದಿದ್ದ.

ಇಂದು ಅನೇಕ ಸಾರ್ವಜನಿಕ ವ್ಯವಸ್ಥೆಗಳು ಖಾಸಗೀಕಣಗೊಂಡಿರುವ ಕಾಲ. ಅದು ಆರೋಗ್ಯವಿರಬಹುದು ಅಥವಾ ಶಿಕ್ಷಣವಿರಬಹುದು. ಪತ್ರಕರ್ತ ಶಂಕರ್‌ಅಯ್ಯರ್ ’ಗೇಟೆಡ್ ರಿಪಬ್ಲಿಕ್’ ಎನ್ನುವ ಪುಸ್ತಕವನ್ನು ಈ ವ್ಯವಸ್ಥೆಯನ್ನು ವಿವರಿಸುವುದಕ್ಕಾಗಿಯೇ ಬರೆದಿದ್ದಾರೆ. ಹಾಗೆಯೇ ಆನಂದ ತೇಲ್ತುಂಬ್ಡೆ ಅವರ ’ರಿಪಬ್ಲಿಕ್ ಆಫ್ ಕಾಸ್ಟ್’ ಎನ್ನುವ ಪುಸ್ತಕವನ್ನು ಗಮನಿಸಬಹುದು. ಇದೇ ನಿಟ್ಟಿನಲ್ಲಿ ಮೈಕಲ್ ಸ್ಯಾಂಡಲ್ ತನ್ನ ’ಟಿರನಿ ಆಫ್ ಮೆರಿಟ್’ ಎನ್ನುವ ಪುಸ್ತಕದಲ್ಲಿ ಈ ಅರ್ಹತೆಯ ಅಹಂಕಾರ ಮತ್ತು ದಬ್ಬಾಳಿಕೆಯನ್ನು ವಿವರಿಸುತ್ತಾನೆ. ಹೊರನೋಟಕ್ಕೆ ಅದು ಅರ್ಹತೆ ಎಂದು ಕಂಡುಬಂದರೂ ಅದರ ಹಿಂದೆ ಇರುವ ಕೈಚಳಕ ಪರಂಪರಾಗತವಾಗಿ ಬಂದ ಶ್ರೀಮಂತ ಕುಟುಂಬಗಳು ಮತ್ತು ಅವರ ಪರವಾಗಿ ನಿಲ್ಲುವ ವ್ಯವಸ್ಥೆ ಹೇಗೆ ಮೇಲಿರುವವರನ್ನು ಮೇಲಕ್ಕೆತ್ತುತ್ತಾ, ಕೆಳಗಿರುವವರನ್ನು ತುಳಿಯುತ್ತಾ ಬಂದಿದೆ ಎನ್ನುವುದನ್ನು ಆತ ವಿವರಿಸುತ್ತಾನೆ.

ಸೋತವನು ಅನರ್ಹ, ಅಯೋಗ್ಯ ಎಂದೆಲ್ಲ ಹಣೆಪಟ್ಟಿ ಕಟ್ಟಿ ಹೀಗಳೆಯುವಂತಾಗುತ್ತದೆ. ವಾಸ್ತವವಾಗಿ ಸೋಲಿಗೆ ವ್ಯವಸ್ಥೆಯಲ್ಲಿರುವ ಕಾರಣವನ್ನು ಗಮನಿಸುವುದಿಲ್ಲ. ಹೀಗಾಗಿ ನಮ್ಮ ದೇಶದಲ್ಲಿ ಉನ್ನತ ಶಿಕ್ಷಣಕ್ಕೆ ಕೆಳವರ್ಗದವರು ಶೇ.23ರಷ್ಟು ಮಾತ್ರ ಪಾಲ್ಗೊಳ್ಳುವುದಾದರೆ ಇತರರು ಶೇ.32ರಷ್ಟು ಸೇರುವುದಾಗಿದೆ. ಒಟ್ಟು ಉನ್ನತ ಶಿಕ್ಷಣಕ್ಕೆ ಹೋಗುವವರೇ ಶೇ.28ರಷ್ಟಿದ್ದು ಜಗತ್ತಿನ ಸರಾಸರಿ ಶೇ.38ಕ್ಕೆ ಹೋಲಿಸಿದರೆ ಅಥವಾ ಚೈನಾದ ಶೇ.53ಕ್ಕೆ ಹೋಲಿಸಿದರೆ ಭಾರತ ಕಳಪೆ ಸ್ಥಾನದಲ್ಲಿರುವುದನ್ನು ಗಮನಿಸಬಹುದು. ಅದರಲ್ಲೂ ದಲಿತರು ಮತ್ತು ಅಲ್ಪಸಂಖ್ಯಾತರಲ್ಲಿ ಈ ಅನುಪಾತ ಸುಮಾರು ಶೇ.20ರಷ್ಟಿದ್ದು, ಸಮಾಜ-ಆಡಳಿತ ವ್ಯವಸ್ಥೆ ಆ ಸಮುದಾಯ ಹಿಂದೆ ಬಿದ್ದಿರುವದನ್ನು ಸರಿಪಡಿಸಲು ಹೆಚ್ಚೇನೂ ಕೆಲಸ ಮಾಡಿಲ್ಲ ಎಂಬುದನ್ನು ಗಮನಿಸಬಹುದು.

ಇತ್ತೀಚೆಗೆ ತಮಿಳುನಾಡು ಸರ್ಕಾರ ವೈದ್ಯಕೀಯ ಶಿಕ್ಷಣಕ್ಕೆ ಕೇಂದ್ರ ಸರ್ಕಾರ ನಡೆಸುವ ಏಕರೂಪದ NEET ಪರೀಕ್ಷೆಯನ್ನು ರದ್ದುಗೊಳಿಸುವ ನಡಾವಳಿಯನ್ನು ವಿಧಾನಸಭೆಯಲ್ಲಿ ಮಂಡಿಸಿತು. ಕಾರಣ NEET ಪರೀಕ್ಷೆ ಆರಂಭಗೊಂಡ ನಂತರ ತಮಿಳು ಮಾಧ್ಯಮದ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳ ಸಂಖ್ಯೆ ಶೇ.15ರಿಂದ ಶೇ.2ಕ್ಕೆ ಇಳಿಯಲ್ಪಟ್ಟಿತು ಹಾಗೂ ರಾಜ್ಯ ಸರ್ಕಾರದ ಪಠ್ಯಕ್ರಮದಲ್ಲಿ ಕಲಿತ ವಿದ್ಯಾರ್ಥಿಗಳ ಸಂಖ್ಯೆ ಶೇ.98ರಿಂದ ಶೇ.60ಕ್ಕೆ ಇಳಿಯಲ್ಪಟ್ಟಿತು. ಹಾಗೆಯೇ ಗ್ರಾಮಾಂತರದ ವಿದ್ಯಾರ್ಥಿಗಳ ಸಂಖ್ಯೆ ಶೇ.65ರಿಂದ ಶೇ.50ಕ್ಕೆ ಇಳಿಯಲ್ಪಟ್ಟಿತು. ಅದೇ ಸಮಯದಲ್ಲಿ ಕೇಂದ್ರ ಪಠ್ಯಕ್ರಮದಲ್ಲಿ ಓದಿ ಕಲಿತ ವಿದ್ಯಾರ್ಥಿಗಳ ಸಂಖ್ಯೆ ಶೇ.1ರಿಂದ ಶೇ.39ಕ್ಕೆ ಏರಿಕೆಯಾಯಿತು. ಇಲ್ಲಿ ಸ್ಪಷ್ಟವಾಗಿ ಗಮನಿಸಬೇಕಾದದ್ದು ಗ್ರ್ರಾಮಾಂತರ ಮಕ್ಕಳ ಸಮಸ್ಯೆ. ಇಂಗ್ಲಿಷ್ ಭಾಷೆಯಲ್ಲಿ ಕಲಿಯದಿದ್ದುದು ಮತ್ತು ರಾಜ್ಯದ ಪಠ್ಯಕ್ರಮದಲ್ಲಿ ಕಲಿತದ್ದು, ಅವರ ವಿರುದ್ಧ ಕೆಲಸ ಮಾಡಿ, ಅವರನ್ನು ಹೊರದಬ್ಬುವಂತೆ ಮಾಡಿತು. ತಮಿಳಿನಲ್ಲಿ ಉತ್ತಮ ಅಂಕಗಳನ್ನು ಪಡೆದರೂ NEET ಗೇಟಿನಿಂದ ಹೊರಗುಳಿಯಬೇಕಾಯಿತು. ಇದು ಅರ್ಹತೆ ಅಥವಾ ಜ್ಞಾನದ ಆಧಾರದ ಮೇಲೆ ಎಂದು ಪರಿಗಣಿಸಲಾಗದು. ಗುರುತ್ವಾಕರ್ಷಣೆ ಎಂದು ಗೊತ್ತಿದೆ, ಆದರೆ ಗ್ರಾವಿಟಿ ಗೊತ್ತಿಲ್ಲವೆಂದರೆ ವಿಷಯ ಗೊತ್ತಿಲ್ಲವೆಂದಲ್ಲ. ಭಾಷೆಯ ತೊಡಕಷ್ಟೇ ಎನ್ನುವುದನ್ನು ಗಮನಿಸತಕ್ಕದ್ದು. ಭಾರತದಲ್ಲಿ ಅನೇಕರು ಹೇಳುವಂತೆ ಇಂಗ್ಲಿಷ್ ಬರುವವರೆಲ್ಲಾ ತತ್ವಶಾಸ್ತ್ರಜ್ಞರಾಗಿಬಿಡುತ್ತಾರೆ.

ಇದಲ್ಲದೆ ಒಕ್ಕೂಟ ವ್ಯವಸ್ಥೆಯಲ್ಲಿ ಶಿಕ್ಷಣ ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆಯಲ್ಲಿ ಇರತಕ್ಕದ್ದು. ಆದರೆ NEET ಪರೀಕ್ಷೆಯೆಂಬ ಕಾನೂನಿನಿಂದ ಕೇಂದ್ರ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಂತಾಯಿತು. ಇತ್ತೀಚೆಗೆ ಪಂಚಾಯತ್‌ರಾಜ್‌ನಿಂದ ಹಿಡಿದು ಸಹಕಾರಿ ಬ್ಯಾಂಕ್‌ಗಳನ್ನು ಹಲವು ಕಾನೂನುಗಳ ಮೂಲಕ ಕೇಂದ್ರ ತನ್ನ ಹಿಡಿತಕ್ಕೆ ತೆಗೆದುಕೊಳ್ಳುತ್ತಿದೆ.

ಇಂದು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಒಳ್ಳೆಯ ಅಂಕಗಳನ್ನು ಗಳಿಸಲು ಸಾವಿರಾರು ಕೋಟಿಯ ಕೋಚಿಂಗ್ ಉದ್ಯಮ ತಲೆಯೆತ್ತಿ ನಿಂತಿದೆ. ರಾಜಸ್ಥಾನದ ಕೋಟಾದಲ್ಲಿರುವ ಕೋಚಿಂಗ್ ಉದ್ಯಮ ಸುಮಾರು ಮೂರು ಸಾವಿರ ಕೋಟಿಯದು ಎನ್ನುತ್ತಾರೆ. ನಮ್ಮ ಆರ್ಥಿಕ ಮಾಪನಗಳ ವಿಪರ್ಯಾಸವೆಂದರೆ ಶಾಲಾ-ಕಾಲೇಜುಗಳಲ್ಲಿ ಸರಿಯಾಗಿ ಪಾಠಮಾಡದೆ ಖಾಸಗಿಯಾಗಿ ಟ್ಯೂಷನ್ ತೆಗೆದುಕೊಂಡರೆ ಜಿಡಿಪಿ ಬೆಳೆಯುತ್ತದೆ, ಅಭಿವೃದ್ಧಿ ಆಗುತ್ತದೆ ಎಂದು ತೋರಿಕೊಳ್ಳುತ್ತದೆ. ಇತ್ತೀಚೆಗೆ ಚೈನಾ ದೇಶ ಇಡೀ ಕೋಚಿಂಗ್ ಉದ್ಯಮವನ್ನು ಮಟ್ಟ ಹಾಕಿದೆ.

ನಮ್ಮ ದೇಶದಲ್ಲಿ, ವಂಚಿತ ಸಮುದಾಯಗಳು ತಮ್ಮ ಕೆಳಸ್ತರದಿಂದ ಶೈಕ್ಷಣಿಕವಾಗಿ ಆರ್ಥಿಕವಾಗಿ ಮುಂದೆಬರುವುದು ಅಷ್ಟು ಸುಲಭವಲ್ಲ. ’ವರ್ಲ್ಡ್ ಎಕನಾಮಿಕ್ ಫೋರಂ’ ಹೊರತರುವ ತನ್ನ ಸೋಷಿಯಲ್ ಮೊಬಿಲಿಟಿ ಇಂಡೆಕ್ಸ್ ಎನ್ನುವ ಮಾಪನದಲ್ಲಿ ಜಗತ್ತಿನ 84 ದೇಶಗಳಲ್ಲಿ ಭಾರತ 76ನೇ ಸ್ಥಾನದಲ್ಲಿದೆ. ಯಾವುದೇ ವ್ಯಕ್ತಿ ತನ್ನ ಸ್ಥಾನಮಾನವನ್ನು ಉತ್ತಮಪಡಿಸಿಕೊಂಡು ಮುಂದುವರಿಯಲು ಅತ್ಯಂತ ಹೆಚ್ಚು ತಡೆಗೋಡೆಗಳು ಭಾರತದಲ್ಲಿವೆ ಎನ್ನುವುದೇ ಇದರ ಅರ್ಥ.

ಕೆ.ಸಿ. ರಘು

ಕೆ.ಸಿ. ರಘು
ಕೆ.ಸಿ. ರಘು ಅವರು ನಾಡಿನ ಹೆಸರಾಂತ ಆಹಾರ ತಜ್ಞರು, ಅನೇಕ ವರ್ಷಗಳ ಕಾಲ ‘ಫುಡ್ ಅಂಡ್ ನ್ಯೂಟ್ರಿಷನ್ ವರ್ಲ್ಡ್’ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದರು. ಅನೇಕ ದಿನಪತ್ರಿಕೆಗಳಲ್ಲಿ ಆಹಾರ ಸಂಸ್ಕೃತಿಗಳ ಹಿಂದಿರುವ ರಾಜಕೀಯ, ಸಂಸ್ಕೃತಿ, ಸಾಮಾಜಿಕ ಆಯಾಮಗಳನ್ನು ಕುರಿತು ಅಂಕಣಗಳನ್ನು ಬರೆಯುತ್ತಿದ್ದಾರೆ.


ಇದನ್ನೂ ಓದಿ: NEET ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿಲುವಳಿ ಅಂಗೀಕಾರ; ಕಾರಣಗಳೇನು?

ಇದನ್ನೂ ಓದಿ: ಬಹುಪಾಲು ವಿದ್ಯಾರ್ಥಿಗಳಿಗೆ ‘ನೀಟ್‌‌’ ಬೇಡ: ನ್ಯಾಯಮೂರ್ತಿ ರಾಜನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...