HomeಮುಖಪುಟNEET ಗೇಟ್; ಮೆರಿಟ್ ಹೆಸರಿನಲ್ಲಿ ಹೊರದಬ್ಬುವುದೇ ಮುಖ್ಯ ಉದ್ದೇಶ

NEET ಗೇಟ್; ಮೆರಿಟ್ ಹೆಸರಿನಲ್ಲಿ ಹೊರದಬ್ಬುವುದೇ ಮುಖ್ಯ ಉದ್ದೇಶ

- Advertisement -
- Advertisement -

ಐದು ಮಕ್ಕಳ ಗುಂಪೊಂದು ನಾಟಕವಾಡೋಣ ಎಂದು ತೀರ್ಮಾನಿಸುತ್ತದೆ. ಅದರಲ್ಲಿದ್ದ ಪುಟಾಣಿ ಹುಡುಗಿ ನನಗೇನು ಪಾತ್ರವಿಲ್ಲ ಎಂದು ಅಳತೊಡಗಿದಾಗ ಸಭೆಯ ತೀರ್ಮಾನ ಹೀಗಾಗುತ್ತದೆ: ನಿನಗೂ ಒಂದು ಪಾತ್ರವಿದೆ, ಆದರೆ ನೀನು ಇನ್ನೂ ಹುಟ್ಟಿಲ್ಲದ ಮಗು! ಪಾತ್ರ ಕೊಟ್ಟಂತೂ ಆಗಬೇಕು, ನಾಟಕದಿಂದ ಹೊರದಬ್ಬಿದಂತೆಯೂ ಆಗಬೇಕು ಎನ್ನುವುದು ’ಸಭೆಯ ಉದ್ದೇಶ’. ಒಳಗೊಳ್ಳುವಿಕೆ ಅಥವಾ ಹೊರದಬ್ಬುವಿಕೆ, ಹೊರನೋಟಕ್ಕೆ ಎಲ್ಲವೂ ನಾಜೂಕಾಗಿ ಕಾಣಬಹುದು ಮತ್ತು ಒಳಗಿಂದೊಳಗೆ ಒಂದು ಕಾನೂನಿನ ಮೂಲಕವೋ ಅಥವಾ ಯಾವುದೋ ಒಂದು ವ್ಯವಸ್ಥೆಯ ಮೂಲಕವೋ, ಹೊರಗಿರುವವರನ್ನು ಹೊರಗೇ ಇಡುವಂತೆ ಮಾಡಬಹುದು.

ಇದಕ್ಕೆ ಹಣಕಾಸು, ಜಾತಿ, ಧರ್ಮ, ಭಾಷೆ – ಈ ರೀತಿ ಯಾವುದಾದರೊಂದನ್ನು ತಂತ್ರವಾಗಿ ಬಳಸಿ ವಾಸ್ತವ ಸ್ಥಿತಿಯನ್ನು ಕಾಪಾಡಿಕೊಳ್ಳುವಂತಾಗಬಹುದು. ಎರಡನೇ ಮಹಾಯುದ್ಧದ ನಂತರ ಅಮೆರಿಕದ ಅಧ್ಯಕ್ಷ ರೂಸ್ವೆಲ್ಟ್ ತನ್ನ ದೇಶಕ್ಕೆ ಹೊಸ ಶಿಕ್ಷಣ ನೀತಿಯೊಂದನ್ನು ರೂಪಿಸಿ ಇದು ಸಾಧಾರಣ ಮನುಷ್ಯನಿಗೆ ಅಸಾಧಾರಣ ಶಿಕ್ಷಣವನ್ನು ಒದಗಿಸುವ ವ್ಯವಸ್ಥೆ (uncommon education for common man) ಎಂದಿದ್ದ. ಅಮೇರಿಕದ ಶ್ರೇಷ್ಠ ತತ್ವಶಾಸ್ತ್ರಜ್ಞ ಜಾನ್ ರಾಲ್ಸ್ ’ನ್ಯಾಯವೆಂದರೆ ಕಟ್ಟಕಡೆಯ ಮನುಷ್ಯನ ಹಾದಿಯನ್ನು ಸುಗಮಗೊಳಿಸುವುದು’ (Advantage for most disadvantaged) ಎಂದಿದ್ದ.

ಇಂದು ಅನೇಕ ಸಾರ್ವಜನಿಕ ವ್ಯವಸ್ಥೆಗಳು ಖಾಸಗೀಕಣಗೊಂಡಿರುವ ಕಾಲ. ಅದು ಆರೋಗ್ಯವಿರಬಹುದು ಅಥವಾ ಶಿಕ್ಷಣವಿರಬಹುದು. ಪತ್ರಕರ್ತ ಶಂಕರ್‌ಅಯ್ಯರ್ ’ಗೇಟೆಡ್ ರಿಪಬ್ಲಿಕ್’ ಎನ್ನುವ ಪುಸ್ತಕವನ್ನು ಈ ವ್ಯವಸ್ಥೆಯನ್ನು ವಿವರಿಸುವುದಕ್ಕಾಗಿಯೇ ಬರೆದಿದ್ದಾರೆ. ಹಾಗೆಯೇ ಆನಂದ ತೇಲ್ತುಂಬ್ಡೆ ಅವರ ’ರಿಪಬ್ಲಿಕ್ ಆಫ್ ಕಾಸ್ಟ್’ ಎನ್ನುವ ಪುಸ್ತಕವನ್ನು ಗಮನಿಸಬಹುದು. ಇದೇ ನಿಟ್ಟಿನಲ್ಲಿ ಮೈಕಲ್ ಸ್ಯಾಂಡಲ್ ತನ್ನ ’ಟಿರನಿ ಆಫ್ ಮೆರಿಟ್’ ಎನ್ನುವ ಪುಸ್ತಕದಲ್ಲಿ ಈ ಅರ್ಹತೆಯ ಅಹಂಕಾರ ಮತ್ತು ದಬ್ಬಾಳಿಕೆಯನ್ನು ವಿವರಿಸುತ್ತಾನೆ. ಹೊರನೋಟಕ್ಕೆ ಅದು ಅರ್ಹತೆ ಎಂದು ಕಂಡುಬಂದರೂ ಅದರ ಹಿಂದೆ ಇರುವ ಕೈಚಳಕ ಪರಂಪರಾಗತವಾಗಿ ಬಂದ ಶ್ರೀಮಂತ ಕುಟುಂಬಗಳು ಮತ್ತು ಅವರ ಪರವಾಗಿ ನಿಲ್ಲುವ ವ್ಯವಸ್ಥೆ ಹೇಗೆ ಮೇಲಿರುವವರನ್ನು ಮೇಲಕ್ಕೆತ್ತುತ್ತಾ, ಕೆಳಗಿರುವವರನ್ನು ತುಳಿಯುತ್ತಾ ಬಂದಿದೆ ಎನ್ನುವುದನ್ನು ಆತ ವಿವರಿಸುತ್ತಾನೆ.

ಸೋತವನು ಅನರ್ಹ, ಅಯೋಗ್ಯ ಎಂದೆಲ್ಲ ಹಣೆಪಟ್ಟಿ ಕಟ್ಟಿ ಹೀಗಳೆಯುವಂತಾಗುತ್ತದೆ. ವಾಸ್ತವವಾಗಿ ಸೋಲಿಗೆ ವ್ಯವಸ್ಥೆಯಲ್ಲಿರುವ ಕಾರಣವನ್ನು ಗಮನಿಸುವುದಿಲ್ಲ. ಹೀಗಾಗಿ ನಮ್ಮ ದೇಶದಲ್ಲಿ ಉನ್ನತ ಶಿಕ್ಷಣಕ್ಕೆ ಕೆಳವರ್ಗದವರು ಶೇ.23ರಷ್ಟು ಮಾತ್ರ ಪಾಲ್ಗೊಳ್ಳುವುದಾದರೆ ಇತರರು ಶೇ.32ರಷ್ಟು ಸೇರುವುದಾಗಿದೆ. ಒಟ್ಟು ಉನ್ನತ ಶಿಕ್ಷಣಕ್ಕೆ ಹೋಗುವವರೇ ಶೇ.28ರಷ್ಟಿದ್ದು ಜಗತ್ತಿನ ಸರಾಸರಿ ಶೇ.38ಕ್ಕೆ ಹೋಲಿಸಿದರೆ ಅಥವಾ ಚೈನಾದ ಶೇ.53ಕ್ಕೆ ಹೋಲಿಸಿದರೆ ಭಾರತ ಕಳಪೆ ಸ್ಥಾನದಲ್ಲಿರುವುದನ್ನು ಗಮನಿಸಬಹುದು. ಅದರಲ್ಲೂ ದಲಿತರು ಮತ್ತು ಅಲ್ಪಸಂಖ್ಯಾತರಲ್ಲಿ ಈ ಅನುಪಾತ ಸುಮಾರು ಶೇ.20ರಷ್ಟಿದ್ದು, ಸಮಾಜ-ಆಡಳಿತ ವ್ಯವಸ್ಥೆ ಆ ಸಮುದಾಯ ಹಿಂದೆ ಬಿದ್ದಿರುವದನ್ನು ಸರಿಪಡಿಸಲು ಹೆಚ್ಚೇನೂ ಕೆಲಸ ಮಾಡಿಲ್ಲ ಎಂಬುದನ್ನು ಗಮನಿಸಬಹುದು.

ಇತ್ತೀಚೆಗೆ ತಮಿಳುನಾಡು ಸರ್ಕಾರ ವೈದ್ಯಕೀಯ ಶಿಕ್ಷಣಕ್ಕೆ ಕೇಂದ್ರ ಸರ್ಕಾರ ನಡೆಸುವ ಏಕರೂಪದ NEET ಪರೀಕ್ಷೆಯನ್ನು ರದ್ದುಗೊಳಿಸುವ ನಡಾವಳಿಯನ್ನು ವಿಧಾನಸಭೆಯಲ್ಲಿ ಮಂಡಿಸಿತು. ಕಾರಣ NEET ಪರೀಕ್ಷೆ ಆರಂಭಗೊಂಡ ನಂತರ ತಮಿಳು ಮಾಧ್ಯಮದ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳ ಸಂಖ್ಯೆ ಶೇ.15ರಿಂದ ಶೇ.2ಕ್ಕೆ ಇಳಿಯಲ್ಪಟ್ಟಿತು ಹಾಗೂ ರಾಜ್ಯ ಸರ್ಕಾರದ ಪಠ್ಯಕ್ರಮದಲ್ಲಿ ಕಲಿತ ವಿದ್ಯಾರ್ಥಿಗಳ ಸಂಖ್ಯೆ ಶೇ.98ರಿಂದ ಶೇ.60ಕ್ಕೆ ಇಳಿಯಲ್ಪಟ್ಟಿತು. ಹಾಗೆಯೇ ಗ್ರಾಮಾಂತರದ ವಿದ್ಯಾರ್ಥಿಗಳ ಸಂಖ್ಯೆ ಶೇ.65ರಿಂದ ಶೇ.50ಕ್ಕೆ ಇಳಿಯಲ್ಪಟ್ಟಿತು. ಅದೇ ಸಮಯದಲ್ಲಿ ಕೇಂದ್ರ ಪಠ್ಯಕ್ರಮದಲ್ಲಿ ಓದಿ ಕಲಿತ ವಿದ್ಯಾರ್ಥಿಗಳ ಸಂಖ್ಯೆ ಶೇ.1ರಿಂದ ಶೇ.39ಕ್ಕೆ ಏರಿಕೆಯಾಯಿತು. ಇಲ್ಲಿ ಸ್ಪಷ್ಟವಾಗಿ ಗಮನಿಸಬೇಕಾದದ್ದು ಗ್ರ್ರಾಮಾಂತರ ಮಕ್ಕಳ ಸಮಸ್ಯೆ. ಇಂಗ್ಲಿಷ್ ಭಾಷೆಯಲ್ಲಿ ಕಲಿಯದಿದ್ದುದು ಮತ್ತು ರಾಜ್ಯದ ಪಠ್ಯಕ್ರಮದಲ್ಲಿ ಕಲಿತದ್ದು, ಅವರ ವಿರುದ್ಧ ಕೆಲಸ ಮಾಡಿ, ಅವರನ್ನು ಹೊರದಬ್ಬುವಂತೆ ಮಾಡಿತು. ತಮಿಳಿನಲ್ಲಿ ಉತ್ತಮ ಅಂಕಗಳನ್ನು ಪಡೆದರೂ NEET ಗೇಟಿನಿಂದ ಹೊರಗುಳಿಯಬೇಕಾಯಿತು. ಇದು ಅರ್ಹತೆ ಅಥವಾ ಜ್ಞಾನದ ಆಧಾರದ ಮೇಲೆ ಎಂದು ಪರಿಗಣಿಸಲಾಗದು. ಗುರುತ್ವಾಕರ್ಷಣೆ ಎಂದು ಗೊತ್ತಿದೆ, ಆದರೆ ಗ್ರಾವಿಟಿ ಗೊತ್ತಿಲ್ಲವೆಂದರೆ ವಿಷಯ ಗೊತ್ತಿಲ್ಲವೆಂದಲ್ಲ. ಭಾಷೆಯ ತೊಡಕಷ್ಟೇ ಎನ್ನುವುದನ್ನು ಗಮನಿಸತಕ್ಕದ್ದು. ಭಾರತದಲ್ಲಿ ಅನೇಕರು ಹೇಳುವಂತೆ ಇಂಗ್ಲಿಷ್ ಬರುವವರೆಲ್ಲಾ ತತ್ವಶಾಸ್ತ್ರಜ್ಞರಾಗಿಬಿಡುತ್ತಾರೆ.

ಇದಲ್ಲದೆ ಒಕ್ಕೂಟ ವ್ಯವಸ್ಥೆಯಲ್ಲಿ ಶಿಕ್ಷಣ ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆಯಲ್ಲಿ ಇರತಕ್ಕದ್ದು. ಆದರೆ NEET ಪರೀಕ್ಷೆಯೆಂಬ ಕಾನೂನಿನಿಂದ ಕೇಂದ್ರ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಂತಾಯಿತು. ಇತ್ತೀಚೆಗೆ ಪಂಚಾಯತ್‌ರಾಜ್‌ನಿಂದ ಹಿಡಿದು ಸಹಕಾರಿ ಬ್ಯಾಂಕ್‌ಗಳನ್ನು ಹಲವು ಕಾನೂನುಗಳ ಮೂಲಕ ಕೇಂದ್ರ ತನ್ನ ಹಿಡಿತಕ್ಕೆ ತೆಗೆದುಕೊಳ್ಳುತ್ತಿದೆ.

ಇಂದು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಒಳ್ಳೆಯ ಅಂಕಗಳನ್ನು ಗಳಿಸಲು ಸಾವಿರಾರು ಕೋಟಿಯ ಕೋಚಿಂಗ್ ಉದ್ಯಮ ತಲೆಯೆತ್ತಿ ನಿಂತಿದೆ. ರಾಜಸ್ಥಾನದ ಕೋಟಾದಲ್ಲಿರುವ ಕೋಚಿಂಗ್ ಉದ್ಯಮ ಸುಮಾರು ಮೂರು ಸಾವಿರ ಕೋಟಿಯದು ಎನ್ನುತ್ತಾರೆ. ನಮ್ಮ ಆರ್ಥಿಕ ಮಾಪನಗಳ ವಿಪರ್ಯಾಸವೆಂದರೆ ಶಾಲಾ-ಕಾಲೇಜುಗಳಲ್ಲಿ ಸರಿಯಾಗಿ ಪಾಠಮಾಡದೆ ಖಾಸಗಿಯಾಗಿ ಟ್ಯೂಷನ್ ತೆಗೆದುಕೊಂಡರೆ ಜಿಡಿಪಿ ಬೆಳೆಯುತ್ತದೆ, ಅಭಿವೃದ್ಧಿ ಆಗುತ್ತದೆ ಎಂದು ತೋರಿಕೊಳ್ಳುತ್ತದೆ. ಇತ್ತೀಚೆಗೆ ಚೈನಾ ದೇಶ ಇಡೀ ಕೋಚಿಂಗ್ ಉದ್ಯಮವನ್ನು ಮಟ್ಟ ಹಾಕಿದೆ.

ನಮ್ಮ ದೇಶದಲ್ಲಿ, ವಂಚಿತ ಸಮುದಾಯಗಳು ತಮ್ಮ ಕೆಳಸ್ತರದಿಂದ ಶೈಕ್ಷಣಿಕವಾಗಿ ಆರ್ಥಿಕವಾಗಿ ಮುಂದೆಬರುವುದು ಅಷ್ಟು ಸುಲಭವಲ್ಲ. ’ವರ್ಲ್ಡ್ ಎಕನಾಮಿಕ್ ಫೋರಂ’ ಹೊರತರುವ ತನ್ನ ಸೋಷಿಯಲ್ ಮೊಬಿಲಿಟಿ ಇಂಡೆಕ್ಸ್ ಎನ್ನುವ ಮಾಪನದಲ್ಲಿ ಜಗತ್ತಿನ 84 ದೇಶಗಳಲ್ಲಿ ಭಾರತ 76ನೇ ಸ್ಥಾನದಲ್ಲಿದೆ. ಯಾವುದೇ ವ್ಯಕ್ತಿ ತನ್ನ ಸ್ಥಾನಮಾನವನ್ನು ಉತ್ತಮಪಡಿಸಿಕೊಂಡು ಮುಂದುವರಿಯಲು ಅತ್ಯಂತ ಹೆಚ್ಚು ತಡೆಗೋಡೆಗಳು ಭಾರತದಲ್ಲಿವೆ ಎನ್ನುವುದೇ ಇದರ ಅರ್ಥ.

ಕೆ.ಸಿ. ರಘು

ಕೆ.ಸಿ. ರಘು
ಕೆ.ಸಿ. ರಘು ಅವರು ನಾಡಿನ ಹೆಸರಾಂತ ಆಹಾರ ತಜ್ಞರು, ಅನೇಕ ವರ್ಷಗಳ ಕಾಲ ‘ಫುಡ್ ಅಂಡ್ ನ್ಯೂಟ್ರಿಷನ್ ವರ್ಲ್ಡ್’ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದರು. ಅನೇಕ ದಿನಪತ್ರಿಕೆಗಳಲ್ಲಿ ಆಹಾರ ಸಂಸ್ಕೃತಿಗಳ ಹಿಂದಿರುವ ರಾಜಕೀಯ, ಸಂಸ್ಕೃತಿ, ಸಾಮಾಜಿಕ ಆಯಾಮಗಳನ್ನು ಕುರಿತು ಅಂಕಣಗಳನ್ನು ಬರೆಯುತ್ತಿದ್ದಾರೆ.


ಇದನ್ನೂ ಓದಿ: NEET ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿಲುವಳಿ ಅಂಗೀಕಾರ; ಕಾರಣಗಳೇನು?

ಇದನ್ನೂ ಓದಿ: ಬಹುಪಾಲು ವಿದ್ಯಾರ್ಥಿಗಳಿಗೆ ‘ನೀಟ್‌‌’ ಬೇಡ: ನ್ಯಾಯಮೂರ್ತಿ ರಾಜನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...