Homeಮುಖಪುಟಪ್ರಸ್ತಾವನೆಗೂ ಮುನ್ನ ಸಂಸತ್ತಿನಲ್ಲಿ 'ನೀಟ್' ಬಗ್ಗೆ ಚರ್ಚಿಸಬೇಕು: ವಿಪಕ್ಷ ನಾಯಕ ರಾಹುಲ್ ಗಾಂಧಿ

ಪ್ರಸ್ತಾವನೆಗೂ ಮುನ್ನ ಸಂಸತ್ತಿನಲ್ಲಿ ‘ನೀಟ್’ ಬಗ್ಗೆ ಚರ್ಚಿಸಬೇಕು: ವಿಪಕ್ಷ ನಾಯಕ ರಾಹುಲ್ ಗಾಂಧಿ

- Advertisement -
- Advertisement -

ನೀಟ್ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಕುರಿತು ಸಂಸತ್ತಿನಲ್ಲಿ ಗೌರವಯುತ ಹಾಗೂ ಉತ್ತಮ ಚರ್ಚೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, “ಈ ಬಗ್ಗೆ ಪ್ರಸ್ತಾವನೆಗೂ ಮುನ್ನ ಚರ್ಚಿಸಬೇಕು” ಎಂದು ಹೇಳಿದರು.

“ಅಧ್ಯಕ್ಷರ ಭಾಷಣಕ್ಕೆ ಧನ್ಯವಾದಗಳು ಮತ್ತು ನೀಟ್ ವಿಷಯವು ದಿನದ ಪ್ರಮುಖ ವಿಷಯವಾಗಿದೆ. ವಿರೋಧ ಪಕ್ಷಗಳು ಎಲ್ಲಕ್ಕಿಂತ ಮೊದಲು ಅದನ್ನು ಚರ್ಚೆಗೆ ತೆಗೆದುಕೊಳ್ಳಬೇಕೆಂದು ಒಪ್ಪಿಕೊಂಡಿವೆ” ಎಂದು ರಾಹುಲ್ ಗಾಂಧಿ ಹೇಳಿದರು.

“ಯುವಕರು ಚಿಂತಿತರಾಗಿದ್ದಾರೆ ಮತ್ತು ಏನಾಗಲಿದೆ ಎಂದು ಅವರಿಗೆ ತಿಳಿದಿಲ್ಲ. ವಿದ್ಯಾರ್ಥಿಗಳ ಕಾಳಜಿಯನ್ನು ಎತ್ತುವಲ್ಲಿ ಕೇಂದ್ರ ಸರ್ಕಾರ ಮತ್ತು ಪ್ರತಿಪಕ್ಷಗಳು ಒಟ್ಟಾಗಿವೆ ಎಂಬ ಸಂದೇಶ, ಭರವಸೆ ಸಂಸತ್ತಿನಿಂದ ಯುವಜನರಿಗೆ ಹೋಗಬೇಕು” ಎಂದು ಅವರು ಹೇಳಿದರು.

“ಇದು ಯುವಜನತೆಗೆ ಸಂಬಂಧಿಸಿದ ಸಮಸ್ಯೆಯಾಗಿರುವುದರಿಂದ, ಯುವಜನತೆಗೆ ಸಂಬಂಧಿಸಿದ ವಿಷಯದ ಬಗ್ಗೆ ಉತ್ತಮ ಮತ್ತು ಗೌರವಯುತವಾದ ಚರ್ಚೆ ನಡೆಯಬೇಕು ಎಂದು ನಾನು ಪ್ರಧಾನ ಮಂತ್ರಿಯವರನ್ನು ವಿನಂತಿಸುತ್ತೇನೆ” ಎಂದು ಅವರು ಚರ್ಚೆಯಲ್ಲಿ ಪಾಲ್ಗೊಳ್ಳುವಂತೆ ಒತ್ತಾಯಿಸಿದರು.

ಗುರುವಾರ ನಡೆದ ತಮ್ಮ ಸಭೆಯಲ್ಲಿ, ಎಲ್ಲ ವಿರೋಧ ಪಕ್ಷದ ನಾಯಕರು ಸಂಸತ್ತಿನಲ್ಲಿ ನೀಟ್ ವಿಷಯದ ಬಗ್ಗೆ ಚರ್ಚೆಯಾಗಬೇಕು ಎಂದು ಸರ್ವಾನುಮತದಿಂದ ಭಾವಿಸಿದ್ದಾರೆ. ಇದು ಅವರ ಸಮಸ್ಯೆ ಎಂದು ನಾನು ದೇಶದ ವಿದ್ಯಾರ್ಥಿಗಳಿಗೆ ಹೇಳಲು ಬಯಸುತ್ತೇನೆ ಮತ್ತು ಇಂಡಿಯಾ ಬಣದಲ್ಲಿರುವ ನಾವೆಲ್ಲರೂ ನಿಮ್ಮ ಸಮಸ್ಯೆಯು ಅತ್ಯಂತ ಮುಖ್ಯವಾದುದು ಎಂದು ಭಾವಿಸುತ್ತೇವೆ. ಏಕೆಂದರೆ, ನೀವು ಭಾರತದ ಭವಿಷ್ಯ” ಎಂದು ಗಾಂಧಿ ಹೇಳಿದರು.

ಏನು ಸಮಸ್ಯೆ?

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ಪದವಿಪೂರ್ವ) ಅಥವಾ ನೀಟ್-ಯುಜಿ ಅನ್ನು ಮೇ 5 ರಂದು ಎನ್‌ಟಿಎ ನಡೆಸಿತು, ಇದರಲ್ಲಿ ಸುಮಾರು 24 ಲಕ್ಷ ಅಭ್ಯರ್ಥಿಗಳು ಭಾಗವಹಿಸಿದ್ದರು. ಜೂನ್ 4 ರಂದು ಫಲಿತಾಂಶಗಳನ್ನು ಪ್ರಕಟಿಸಲಾಯಿತು. ಆದರೆ, ಅದರ ನಂತರ ಬಿಹಾರದಂತಹ ರಾಜ್ಯಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ, ಇತರ ಅಕ್ರಮಗಳ ಆರೋಪಗಳು ಕೇಳಿಬಂದವು. ಶಿಕ್ಷಣ ಸಚಿವಾಲಯವು ವಿಶ್ವವಿದ್ಯಾಲಯ ಅನುದಾನ ಆಯೋಗ-ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್) ಮತ್ತು ನೀಟ್ (ಸ್ನಾತಕೋತ್ತರ) ಪರೀಕ್ಷೆಗಳ “ಸಮಗ್ರತೆಗೆ ಧಕ್ಕೆಯುಂಟಾಗಿರಬಹುದು” ಎಂಬುದು ಗೊತ್ತಾದ ನಂತರ ರದ್ದುಗೊಳಿಸಿತು.

ಇದನ್ನೂ ಓದಿ; ಸಂಸತ್ತಿನಲ್ಲಿ ನೀಟ್ ಅಕ್ರಮಗಳ ಕುರಿತು ಚರ್ಚೆಗೆ ಆಗ್ರಹಿಸಿದ ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...