HomeಮುಖಪುಟNEET: ಒಬಿಸಿಗೆ ಶೇ. 27ರಷ್ಟು ಮೀಸಲಾತಿ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

NEET: ಒಬಿಸಿಗೆ ಶೇ. 27ರಷ್ಟು ಮೀಸಲಾತಿ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಮೆರಿಟ್ ಸಾಮಾಜಿಕವಾಗಿ ಸಂದರ್ಭೋಚಿತವಾಗಿರಬೇಕು. ಮೀಸಲಾತಿಯು ಮೆರಿಟ್‌ಗೆ ವಿರುದ್ಧವಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

- Advertisement -
- Advertisement -

ಹೊಸದಿಲ್ಲಿ: ರಾಜ್ಯ ಸರಕಾರದ ಅಧೀನದಲ್ಲಿರುವ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕಾಗಿ ವಿದ್ಯಾರ್ಥಿಗಳು ತೆಗೆದುಕೊಳ್ಳುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET) ಇತರ ಹಿಂದುಳಿದ ವರ್ಗಗಳಿಗೆ ಶೇ. 27ರಷ್ಟು ಮೀಸಲಾತಿ ನೀಡಬೇಕು ಎಂಬುದನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಈ ಕುರಿತು ‘ಬಾರ್ ಮತ್ತು ಬೆಂಚ್’ ವರದಿ ಮಾಡಿದ್ದು, “ಹಿಂದುಳಿದ ವರ್ಗಗಳಿಗೆ ನೀಡುವ ಮೀಸಲಾತಿಯು ಮೆರಿಟ್‌ಗೆ ವಿರುದ್ಧವಾಗಿಲ್ಲ. ಆದರೆ ಇದು ವಿತರಣಾ ಪರಿಣಾಮಗಳನ್ನು ಹೆಚ್ಚಿಸುತ್ತದೆ” ಎಂದು ಸರ್ವೋಚ್ಛ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎ.ಎಸ್.ಬೋಪಣ್ಣ ಅವರು ಜನವರಿ 7ರಂದು ಮಧ್ಯಂತರ ಆದೇಶ ನೀಡಿ, 2021-22ನೇ ಸಾಲಿನ NEET- ಸ್ನಾತಕೋತ್ತರ ಪ್ರವೇಶಕ್ಕಾಗಿ ವೈದ್ಯಕೀಯ ಕೌನ್ಸೆಲಿಂಗ್ ಪುನರಾರಂಭಿಸಲು ಅವಕಾಶ ಮಾಡಿಕೊಟ್ಟರು. ಒಬಿಸಿಗಳಿಗೆ ಶೇ. 27 ಮೀಸಲು ಮತ್ತು ಆರ್ಥಿಕವಾಗಿ ದುರ್ಬಲವಾದ ವರ್ಗಗಳಿಗೆ ಶೇ. 10ರಷ್ಟು ಕೋಟಾದ ಮಾನ್ಯತೆಯನ್ನು ಕೋರ್ಟ್ ಎತ್ತಿ ಹಿಡಿದಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ಬರುವ ರಾಷ್ಟ್ರೀಯ ಪರೀಕ್ಷಾ ಮಂಡಳಿಯು NEET-PGಯನ್ನು ಹಮ್ಮಿಕೊಳ್ಳುತ್ತದೆ. ದೊಡ್ಡ ಪ್ರಮಾಣದಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕೌನ್ಸೆಲಿಂಗ್ ಆರಂಭಿಸುವಂತೆ ಭಾರತದಾದ್ಯಂತ ವೈದ್ಯರು ಪ್ರತಿಭಟನೆ ನಡೆಸಿದ್ದರು.

NEET ಆಧಾರಿತ ಪ್ರವೇಶಗಳಲ್ಲಿ OBC ಮತ್ತು EWS (ಆರ್ಥಿಕವಾಗಿ ದುರ್ಬಲ ವರ್ಗ) ಮೀಸಲಾತಿಯನ್ನು ಪರಿಚಯಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡಿದ್ದ ನಿರ್ಧಾರದ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿರುವುದರಿಂದ ಕೌನ್ಸೆಲಿಂಗ್ ಪ್ರಕ್ರಿಯೆ ವಿಳಂಬವಾಗಿದೆ.

ಸುಪ್ರೀಂ ಕೋರ್ಟ್ ಪೀಠವು ಗುರುವಾರ ಪ್ರತಿಕ್ರಿಯಿಸಿದ್ದು, “ಸ್ಪರ್ಧಾತ್ಮಕ ಪರೀಕ್ಷೆಗಳು ಕೆಲವು ವರ್ಗಗಳಿಗೆ ಆರ್ಥಿಕ ಸಾಮಾಜಿಕ ಪ್ರಯೋಜನವನ್ನು ಪ್ರತಿಬಿಂಬಿಸುವುದಿಲ್ಲ” ಎಂದಿದೆ.

“ಸಂವಿಧಾನದ 15(4) ಮತ್ತು 15(5) ವಿಧಿಗಳು ವಸ್ತುನಿಷ್ಠ ಸಮಾನತೆಗೆ ಸಂಬಂಧಿಸಿವೆ. ಸ್ಪರ್ಧಾತ್ಮಕ ಪರೀಕ್ಷೆಯು ಕೆಲವು ವರ್ಗಗಳಿಗೆ ಸೇರಿರುವ ಆರ್ಥಿಕ ಸಾಮಾಜಿಕ ಪ್ರಯೋಜನವನ್ನು ಪ್ರತಿಬಿಂಬಿಸುವುದಿಲ್ಲ. ಮೆರಿಟ್‌‌ ಸಾಮಾಜಿಕವಾಗಿ ಸಂದರ್ಭೋಚಿತವಾಗಿರಬೇಕು. ಮೀಸಲಾತಿಯು ಮೆರಿಟ್‌ಗೆ ವಿರುದ್ಧವಾಗಿಲ್ಲ. ಆದರೆ ಅದು ವಿತರಣಾ ಪರಿಣಾಮವನ್ನು ಹೆಚ್ಚಿಸುತ್ತದೆ” ಎಂದು ನ್ಯಾಯಾಲಯ ಹೇಳಿದೆ.

ಸರ್ಕಾರಿ ವೈದ್ಯಕೀಯ ಕಾಲೇಜು ಸೀಟುಗಳಲ್ಲಿ ಮೀಸಲಾತಿಗಾಗಿ ಅಖಿಲ ಭಾರತ ಕೋಟಾ (ಎಐಕ್ಯೂ) ವ್ಯವಸ್ಥೆಯನ್ನು ಏಕೆ ಮೊದಲ ಸ್ಥಾನದಲ್ಲಿ ರೂಪಿಸಲಾಗಿದೆ ಎಂಬುದರ ಹಿಂದಿನ ತಾರ್ಕಿಕತೆಯನ್ನು ಪೀಠವು ಒತ್ತಿಹೇಳಿದೆ.

“AIQ ಸೀಟುಗಳಲ್ಲಿ ಮೀಸಲಾತಿ ನೀಡುವ ಮೊದಲು ಕೇಂದ್ರವು ಈ ನ್ಯಾಯಾಲಯದ ಅನುಮತಿಯನ್ನು ಪಡೆಯುವ ಅಗತ್ಯವಿಲ್ಲ. ಹೀಗಾಗಿ ಸರ್ಕಾರದ ನಿರ್ಧಾರ ಸರಿಯಾಗಿದೆ. ಪದವಿಪೂರ್ವ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಿಗೆ AIQನಲ್ಲಿ ಒಬಿಸಿಗೆ ಮೀಸಲಾತಿ ಸಾಂವಿಧಾನಿಕವಾಗಿ ಮಾನ್ಯವಾಗಿದೆ ಎಂದು ನಾವು ಭಾವಿಸುತ್ತೇವೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆರ್ಥಿಕವಾಗಿ ದುರ್ಬಲ ವರ್ಗದ ಕೋಟಾವನ್ನು ನಿರ್ಧರಿಸುವ ಮಾನದಂಡಗಳ ಸಿಂಧುತ್ವವನ್ನು ಈ ವರ್ಷದ ಮಾರ್ಚ್‌ನಲ್ಲಿ ಸುದೀರ್ಘವಾಗಿ ಆಲಿಸಬೇಕಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ. ಮೀಸಲಾತಿಯು ಮೆರಿಟ್‌ಗೆ ವಿರುದ್ಧವಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

“ಪರೀಕ್ಷೆಯಲ್ಲಿನ ಅಂಕಗಳ ಆಧಾರದ ಮೇಲಿನ ಮೆರಿಟ್‌‌ ಕಲ್ಪನೆಯ ಕುರಿತ ಆಳವಾದ ಪರಿಶೀಲನೆ ಅಗತ್ಯವಿದೆ. ಪರೀಕ್ಷೆಗಳು ಶೈಕ್ಷಣಿಕ ಅವಕಾಶಗಳನ್ನು ವಿತರಿಸಲು ಅಗತ್ಯವಾದ ಮತ್ತು ಅನುಕೂಲಕರ ವಿಧಾನವಾಗಿದ್ದರೂ, ಅಂಕಗಳು ಯಾವಾಗಲೂ ವೈಯಕ್ತಿಕ ಅರ್ಹತೆಯ ಮಾಪನ ಆಗಿರುವುದಿಲ್ಲ” ಆಗಿರುವುದಿಲ್ಲ” ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

“ನಾವು ಅರ್ಹತೆಯನ್ನು ಅರ್ಥಮಾಡಿಕೊಳ್ಳುವ ವಿಧಾನವು ವೈಯಕ್ತಿಕ ಸಂಸ್ಥೆ ಅಥವಾ ಸಾಮರ್ಥ್ಯಕ್ಕೆ ಸೀಮಿತವಾಗಿರಬಾರದು. ಆದರೆ ಅದು ಸಮಾನತೆಯನ್ನು ಮುನ್ನಡೆಸುವ ಸಾಮಾಜಿಕ ಒಳಿತಾಗಿ ರೂಪಿಸಬೇಕು. ಏಕೆಂದರೆ ಅದು ನಮ್ಮ ಸಂವಿಧಾನ ಪ್ರತಿಪಾದಿಸುವ ಮೌಲ್ಯವಾಗಿದೆ” ಎಂದು ಕೋರ್ಟ್ ಹೇಳಿರುವುದಾಗಿ ಲೈವ್‌ ಲಾ ವರದಿ ಟ್ವೀಟ್ ಮಾಡಿದೆ.


ಸುಪ್ರೀಂ ಕೋರ್ಟ್: ಇವಿಎಂ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...