HomeಮುಖಪುಟNEET: ಒಬಿಸಿಗೆ ಶೇ. 27ರಷ್ಟು ಮೀಸಲಾತಿ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

NEET: ಒಬಿಸಿಗೆ ಶೇ. 27ರಷ್ಟು ಮೀಸಲಾತಿ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಮೆರಿಟ್ ಸಾಮಾಜಿಕವಾಗಿ ಸಂದರ್ಭೋಚಿತವಾಗಿರಬೇಕು. ಮೀಸಲಾತಿಯು ಮೆರಿಟ್‌ಗೆ ವಿರುದ್ಧವಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

- Advertisement -
- Advertisement -

ಹೊಸದಿಲ್ಲಿ: ರಾಜ್ಯ ಸರಕಾರದ ಅಧೀನದಲ್ಲಿರುವ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕಾಗಿ ವಿದ್ಯಾರ್ಥಿಗಳು ತೆಗೆದುಕೊಳ್ಳುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET) ಇತರ ಹಿಂದುಳಿದ ವರ್ಗಗಳಿಗೆ ಶೇ. 27ರಷ್ಟು ಮೀಸಲಾತಿ ನೀಡಬೇಕು ಎಂಬುದನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಈ ಕುರಿತು ‘ಬಾರ್ ಮತ್ತು ಬೆಂಚ್’ ವರದಿ ಮಾಡಿದ್ದು, “ಹಿಂದುಳಿದ ವರ್ಗಗಳಿಗೆ ನೀಡುವ ಮೀಸಲಾತಿಯು ಮೆರಿಟ್‌ಗೆ ವಿರುದ್ಧವಾಗಿಲ್ಲ. ಆದರೆ ಇದು ವಿತರಣಾ ಪರಿಣಾಮಗಳನ್ನು ಹೆಚ್ಚಿಸುತ್ತದೆ” ಎಂದು ಸರ್ವೋಚ್ಛ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎ.ಎಸ್.ಬೋಪಣ್ಣ ಅವರು ಜನವರಿ 7ರಂದು ಮಧ್ಯಂತರ ಆದೇಶ ನೀಡಿ, 2021-22ನೇ ಸಾಲಿನ NEET- ಸ್ನಾತಕೋತ್ತರ ಪ್ರವೇಶಕ್ಕಾಗಿ ವೈದ್ಯಕೀಯ ಕೌನ್ಸೆಲಿಂಗ್ ಪುನರಾರಂಭಿಸಲು ಅವಕಾಶ ಮಾಡಿಕೊಟ್ಟರು. ಒಬಿಸಿಗಳಿಗೆ ಶೇ. 27 ಮೀಸಲು ಮತ್ತು ಆರ್ಥಿಕವಾಗಿ ದುರ್ಬಲವಾದ ವರ್ಗಗಳಿಗೆ ಶೇ. 10ರಷ್ಟು ಕೋಟಾದ ಮಾನ್ಯತೆಯನ್ನು ಕೋರ್ಟ್ ಎತ್ತಿ ಹಿಡಿದಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ಬರುವ ರಾಷ್ಟ್ರೀಯ ಪರೀಕ್ಷಾ ಮಂಡಳಿಯು NEET-PGಯನ್ನು ಹಮ್ಮಿಕೊಳ್ಳುತ್ತದೆ. ದೊಡ್ಡ ಪ್ರಮಾಣದಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕೌನ್ಸೆಲಿಂಗ್ ಆರಂಭಿಸುವಂತೆ ಭಾರತದಾದ್ಯಂತ ವೈದ್ಯರು ಪ್ರತಿಭಟನೆ ನಡೆಸಿದ್ದರು.

NEET ಆಧಾರಿತ ಪ್ರವೇಶಗಳಲ್ಲಿ OBC ಮತ್ತು EWS (ಆರ್ಥಿಕವಾಗಿ ದುರ್ಬಲ ವರ್ಗ) ಮೀಸಲಾತಿಯನ್ನು ಪರಿಚಯಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡಿದ್ದ ನಿರ್ಧಾರದ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿರುವುದರಿಂದ ಕೌನ್ಸೆಲಿಂಗ್ ಪ್ರಕ್ರಿಯೆ ವಿಳಂಬವಾಗಿದೆ.

ಸುಪ್ರೀಂ ಕೋರ್ಟ್ ಪೀಠವು ಗುರುವಾರ ಪ್ರತಿಕ್ರಿಯಿಸಿದ್ದು, “ಸ್ಪರ್ಧಾತ್ಮಕ ಪರೀಕ್ಷೆಗಳು ಕೆಲವು ವರ್ಗಗಳಿಗೆ ಆರ್ಥಿಕ ಸಾಮಾಜಿಕ ಪ್ರಯೋಜನವನ್ನು ಪ್ರತಿಬಿಂಬಿಸುವುದಿಲ್ಲ” ಎಂದಿದೆ.

“ಸಂವಿಧಾನದ 15(4) ಮತ್ತು 15(5) ವಿಧಿಗಳು ವಸ್ತುನಿಷ್ಠ ಸಮಾನತೆಗೆ ಸಂಬಂಧಿಸಿವೆ. ಸ್ಪರ್ಧಾತ್ಮಕ ಪರೀಕ್ಷೆಯು ಕೆಲವು ವರ್ಗಗಳಿಗೆ ಸೇರಿರುವ ಆರ್ಥಿಕ ಸಾಮಾಜಿಕ ಪ್ರಯೋಜನವನ್ನು ಪ್ರತಿಬಿಂಬಿಸುವುದಿಲ್ಲ. ಮೆರಿಟ್‌‌ ಸಾಮಾಜಿಕವಾಗಿ ಸಂದರ್ಭೋಚಿತವಾಗಿರಬೇಕು. ಮೀಸಲಾತಿಯು ಮೆರಿಟ್‌ಗೆ ವಿರುದ್ಧವಾಗಿಲ್ಲ. ಆದರೆ ಅದು ವಿತರಣಾ ಪರಿಣಾಮವನ್ನು ಹೆಚ್ಚಿಸುತ್ತದೆ” ಎಂದು ನ್ಯಾಯಾಲಯ ಹೇಳಿದೆ.

ಸರ್ಕಾರಿ ವೈದ್ಯಕೀಯ ಕಾಲೇಜು ಸೀಟುಗಳಲ್ಲಿ ಮೀಸಲಾತಿಗಾಗಿ ಅಖಿಲ ಭಾರತ ಕೋಟಾ (ಎಐಕ್ಯೂ) ವ್ಯವಸ್ಥೆಯನ್ನು ಏಕೆ ಮೊದಲ ಸ್ಥಾನದಲ್ಲಿ ರೂಪಿಸಲಾಗಿದೆ ಎಂಬುದರ ಹಿಂದಿನ ತಾರ್ಕಿಕತೆಯನ್ನು ಪೀಠವು ಒತ್ತಿಹೇಳಿದೆ.

“AIQ ಸೀಟುಗಳಲ್ಲಿ ಮೀಸಲಾತಿ ನೀಡುವ ಮೊದಲು ಕೇಂದ್ರವು ಈ ನ್ಯಾಯಾಲಯದ ಅನುಮತಿಯನ್ನು ಪಡೆಯುವ ಅಗತ್ಯವಿಲ್ಲ. ಹೀಗಾಗಿ ಸರ್ಕಾರದ ನಿರ್ಧಾರ ಸರಿಯಾಗಿದೆ. ಪದವಿಪೂರ್ವ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಿಗೆ AIQನಲ್ಲಿ ಒಬಿಸಿಗೆ ಮೀಸಲಾತಿ ಸಾಂವಿಧಾನಿಕವಾಗಿ ಮಾನ್ಯವಾಗಿದೆ ಎಂದು ನಾವು ಭಾವಿಸುತ್ತೇವೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆರ್ಥಿಕವಾಗಿ ದುರ್ಬಲ ವರ್ಗದ ಕೋಟಾವನ್ನು ನಿರ್ಧರಿಸುವ ಮಾನದಂಡಗಳ ಸಿಂಧುತ್ವವನ್ನು ಈ ವರ್ಷದ ಮಾರ್ಚ್‌ನಲ್ಲಿ ಸುದೀರ್ಘವಾಗಿ ಆಲಿಸಬೇಕಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ. ಮೀಸಲಾತಿಯು ಮೆರಿಟ್‌ಗೆ ವಿರುದ್ಧವಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

“ಪರೀಕ್ಷೆಯಲ್ಲಿನ ಅಂಕಗಳ ಆಧಾರದ ಮೇಲಿನ ಮೆರಿಟ್‌‌ ಕಲ್ಪನೆಯ ಕುರಿತ ಆಳವಾದ ಪರಿಶೀಲನೆ ಅಗತ್ಯವಿದೆ. ಪರೀಕ್ಷೆಗಳು ಶೈಕ್ಷಣಿಕ ಅವಕಾಶಗಳನ್ನು ವಿತರಿಸಲು ಅಗತ್ಯವಾದ ಮತ್ತು ಅನುಕೂಲಕರ ವಿಧಾನವಾಗಿದ್ದರೂ, ಅಂಕಗಳು ಯಾವಾಗಲೂ ವೈಯಕ್ತಿಕ ಅರ್ಹತೆಯ ಮಾಪನ ಆಗಿರುವುದಿಲ್ಲ” ಆಗಿರುವುದಿಲ್ಲ” ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

“ನಾವು ಅರ್ಹತೆಯನ್ನು ಅರ್ಥಮಾಡಿಕೊಳ್ಳುವ ವಿಧಾನವು ವೈಯಕ್ತಿಕ ಸಂಸ್ಥೆ ಅಥವಾ ಸಾಮರ್ಥ್ಯಕ್ಕೆ ಸೀಮಿತವಾಗಿರಬಾರದು. ಆದರೆ ಅದು ಸಮಾನತೆಯನ್ನು ಮುನ್ನಡೆಸುವ ಸಾಮಾಜಿಕ ಒಳಿತಾಗಿ ರೂಪಿಸಬೇಕು. ಏಕೆಂದರೆ ಅದು ನಮ್ಮ ಸಂವಿಧಾನ ಪ್ರತಿಪಾದಿಸುವ ಮೌಲ್ಯವಾಗಿದೆ” ಎಂದು ಕೋರ್ಟ್ ಹೇಳಿರುವುದಾಗಿ ಲೈವ್‌ ಲಾ ವರದಿ ಟ್ವೀಟ್ ಮಾಡಿದೆ.


ಸುಪ್ರೀಂ ಕೋರ್ಟ್: ಇವಿಎಂ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...