HomeಮುಖಪುಟNEET: ಒಬಿಸಿಗೆ ಶೇ. 27ರಷ್ಟು ಮೀಸಲಾತಿ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

NEET: ಒಬಿಸಿಗೆ ಶೇ. 27ರಷ್ಟು ಮೀಸಲಾತಿ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಮೆರಿಟ್ ಸಾಮಾಜಿಕವಾಗಿ ಸಂದರ್ಭೋಚಿತವಾಗಿರಬೇಕು. ಮೀಸಲಾತಿಯು ಮೆರಿಟ್‌ಗೆ ವಿರುದ್ಧವಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

- Advertisement -
- Advertisement -

ಹೊಸದಿಲ್ಲಿ: ರಾಜ್ಯ ಸರಕಾರದ ಅಧೀನದಲ್ಲಿರುವ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕಾಗಿ ವಿದ್ಯಾರ್ಥಿಗಳು ತೆಗೆದುಕೊಳ್ಳುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET) ಇತರ ಹಿಂದುಳಿದ ವರ್ಗಗಳಿಗೆ ಶೇ. 27ರಷ್ಟು ಮೀಸಲಾತಿ ನೀಡಬೇಕು ಎಂಬುದನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಈ ಕುರಿತು ‘ಬಾರ್ ಮತ್ತು ಬೆಂಚ್’ ವರದಿ ಮಾಡಿದ್ದು, “ಹಿಂದುಳಿದ ವರ್ಗಗಳಿಗೆ ನೀಡುವ ಮೀಸಲಾತಿಯು ಮೆರಿಟ್‌ಗೆ ವಿರುದ್ಧವಾಗಿಲ್ಲ. ಆದರೆ ಇದು ವಿತರಣಾ ಪರಿಣಾಮಗಳನ್ನು ಹೆಚ್ಚಿಸುತ್ತದೆ” ಎಂದು ಸರ್ವೋಚ್ಛ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎ.ಎಸ್.ಬೋಪಣ್ಣ ಅವರು ಜನವರಿ 7ರಂದು ಮಧ್ಯಂತರ ಆದೇಶ ನೀಡಿ, 2021-22ನೇ ಸಾಲಿನ NEET- ಸ್ನಾತಕೋತ್ತರ ಪ್ರವೇಶಕ್ಕಾಗಿ ವೈದ್ಯಕೀಯ ಕೌನ್ಸೆಲಿಂಗ್ ಪುನರಾರಂಭಿಸಲು ಅವಕಾಶ ಮಾಡಿಕೊಟ್ಟರು. ಒಬಿಸಿಗಳಿಗೆ ಶೇ. 27 ಮೀಸಲು ಮತ್ತು ಆರ್ಥಿಕವಾಗಿ ದುರ್ಬಲವಾದ ವರ್ಗಗಳಿಗೆ ಶೇ. 10ರಷ್ಟು ಕೋಟಾದ ಮಾನ್ಯತೆಯನ್ನು ಕೋರ್ಟ್ ಎತ್ತಿ ಹಿಡಿದಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ಬರುವ ರಾಷ್ಟ್ರೀಯ ಪರೀಕ್ಷಾ ಮಂಡಳಿಯು NEET-PGಯನ್ನು ಹಮ್ಮಿಕೊಳ್ಳುತ್ತದೆ. ದೊಡ್ಡ ಪ್ರಮಾಣದಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕೌನ್ಸೆಲಿಂಗ್ ಆರಂಭಿಸುವಂತೆ ಭಾರತದಾದ್ಯಂತ ವೈದ್ಯರು ಪ್ರತಿಭಟನೆ ನಡೆಸಿದ್ದರು.

NEET ಆಧಾರಿತ ಪ್ರವೇಶಗಳಲ್ಲಿ OBC ಮತ್ತು EWS (ಆರ್ಥಿಕವಾಗಿ ದುರ್ಬಲ ವರ್ಗ) ಮೀಸಲಾತಿಯನ್ನು ಪರಿಚಯಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡಿದ್ದ ನಿರ್ಧಾರದ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿರುವುದರಿಂದ ಕೌನ್ಸೆಲಿಂಗ್ ಪ್ರಕ್ರಿಯೆ ವಿಳಂಬವಾಗಿದೆ.

ಸುಪ್ರೀಂ ಕೋರ್ಟ್ ಪೀಠವು ಗುರುವಾರ ಪ್ರತಿಕ್ರಿಯಿಸಿದ್ದು, “ಸ್ಪರ್ಧಾತ್ಮಕ ಪರೀಕ್ಷೆಗಳು ಕೆಲವು ವರ್ಗಗಳಿಗೆ ಆರ್ಥಿಕ ಸಾಮಾಜಿಕ ಪ್ರಯೋಜನವನ್ನು ಪ್ರತಿಬಿಂಬಿಸುವುದಿಲ್ಲ” ಎಂದಿದೆ.

“ಸಂವಿಧಾನದ 15(4) ಮತ್ತು 15(5) ವಿಧಿಗಳು ವಸ್ತುನಿಷ್ಠ ಸಮಾನತೆಗೆ ಸಂಬಂಧಿಸಿವೆ. ಸ್ಪರ್ಧಾತ್ಮಕ ಪರೀಕ್ಷೆಯು ಕೆಲವು ವರ್ಗಗಳಿಗೆ ಸೇರಿರುವ ಆರ್ಥಿಕ ಸಾಮಾಜಿಕ ಪ್ರಯೋಜನವನ್ನು ಪ್ರತಿಬಿಂಬಿಸುವುದಿಲ್ಲ. ಮೆರಿಟ್‌‌ ಸಾಮಾಜಿಕವಾಗಿ ಸಂದರ್ಭೋಚಿತವಾಗಿರಬೇಕು. ಮೀಸಲಾತಿಯು ಮೆರಿಟ್‌ಗೆ ವಿರುದ್ಧವಾಗಿಲ್ಲ. ಆದರೆ ಅದು ವಿತರಣಾ ಪರಿಣಾಮವನ್ನು ಹೆಚ್ಚಿಸುತ್ತದೆ” ಎಂದು ನ್ಯಾಯಾಲಯ ಹೇಳಿದೆ.

ಸರ್ಕಾರಿ ವೈದ್ಯಕೀಯ ಕಾಲೇಜು ಸೀಟುಗಳಲ್ಲಿ ಮೀಸಲಾತಿಗಾಗಿ ಅಖಿಲ ಭಾರತ ಕೋಟಾ (ಎಐಕ್ಯೂ) ವ್ಯವಸ್ಥೆಯನ್ನು ಏಕೆ ಮೊದಲ ಸ್ಥಾನದಲ್ಲಿ ರೂಪಿಸಲಾಗಿದೆ ಎಂಬುದರ ಹಿಂದಿನ ತಾರ್ಕಿಕತೆಯನ್ನು ಪೀಠವು ಒತ್ತಿಹೇಳಿದೆ.

“AIQ ಸೀಟುಗಳಲ್ಲಿ ಮೀಸಲಾತಿ ನೀಡುವ ಮೊದಲು ಕೇಂದ್ರವು ಈ ನ್ಯಾಯಾಲಯದ ಅನುಮತಿಯನ್ನು ಪಡೆಯುವ ಅಗತ್ಯವಿಲ್ಲ. ಹೀಗಾಗಿ ಸರ್ಕಾರದ ನಿರ್ಧಾರ ಸರಿಯಾಗಿದೆ. ಪದವಿಪೂರ್ವ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಿಗೆ AIQನಲ್ಲಿ ಒಬಿಸಿಗೆ ಮೀಸಲಾತಿ ಸಾಂವಿಧಾನಿಕವಾಗಿ ಮಾನ್ಯವಾಗಿದೆ ಎಂದು ನಾವು ಭಾವಿಸುತ್ತೇವೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆರ್ಥಿಕವಾಗಿ ದುರ್ಬಲ ವರ್ಗದ ಕೋಟಾವನ್ನು ನಿರ್ಧರಿಸುವ ಮಾನದಂಡಗಳ ಸಿಂಧುತ್ವವನ್ನು ಈ ವರ್ಷದ ಮಾರ್ಚ್‌ನಲ್ಲಿ ಸುದೀರ್ಘವಾಗಿ ಆಲಿಸಬೇಕಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ. ಮೀಸಲಾತಿಯು ಮೆರಿಟ್‌ಗೆ ವಿರುದ್ಧವಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

“ಪರೀಕ್ಷೆಯಲ್ಲಿನ ಅಂಕಗಳ ಆಧಾರದ ಮೇಲಿನ ಮೆರಿಟ್‌‌ ಕಲ್ಪನೆಯ ಕುರಿತ ಆಳವಾದ ಪರಿಶೀಲನೆ ಅಗತ್ಯವಿದೆ. ಪರೀಕ್ಷೆಗಳು ಶೈಕ್ಷಣಿಕ ಅವಕಾಶಗಳನ್ನು ವಿತರಿಸಲು ಅಗತ್ಯವಾದ ಮತ್ತು ಅನುಕೂಲಕರ ವಿಧಾನವಾಗಿದ್ದರೂ, ಅಂಕಗಳು ಯಾವಾಗಲೂ ವೈಯಕ್ತಿಕ ಅರ್ಹತೆಯ ಮಾಪನ ಆಗಿರುವುದಿಲ್ಲ” ಆಗಿರುವುದಿಲ್ಲ” ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

“ನಾವು ಅರ್ಹತೆಯನ್ನು ಅರ್ಥಮಾಡಿಕೊಳ್ಳುವ ವಿಧಾನವು ವೈಯಕ್ತಿಕ ಸಂಸ್ಥೆ ಅಥವಾ ಸಾಮರ್ಥ್ಯಕ್ಕೆ ಸೀಮಿತವಾಗಿರಬಾರದು. ಆದರೆ ಅದು ಸಮಾನತೆಯನ್ನು ಮುನ್ನಡೆಸುವ ಸಾಮಾಜಿಕ ಒಳಿತಾಗಿ ರೂಪಿಸಬೇಕು. ಏಕೆಂದರೆ ಅದು ನಮ್ಮ ಸಂವಿಧಾನ ಪ್ರತಿಪಾದಿಸುವ ಮೌಲ್ಯವಾಗಿದೆ” ಎಂದು ಕೋರ್ಟ್ ಹೇಳಿರುವುದಾಗಿ ಲೈವ್‌ ಲಾ ವರದಿ ಟ್ವೀಟ್ ಮಾಡಿದೆ.


ಸುಪ್ರೀಂ ಕೋರ್ಟ್: ಇವಿಎಂ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...