Homeಮುಖಪುಟಜುಲೈ 20ರಂದು ನೀಟ್-ಯುಜಿ ಫಲಿತಾಂಶ ಪ್ರಕಟಿಸಲು ಎನ್‌ಟಿಎಗೆ ಸುಪ್ರೀಂ ನಿರ್ದೇಶನ

ಜುಲೈ 20ರಂದು ನೀಟ್-ಯುಜಿ ಫಲಿತಾಂಶ ಪ್ರಕಟಿಸಲು ಎನ್‌ಟಿಎಗೆ ಸುಪ್ರೀಂ ನಿರ್ದೇಶನ

- Advertisement -
- Advertisement -

ನೀಟ್-ಯುಜಿ ಪರೀಕ್ಷೆ 2024ರ ಫಲಿತಾಂಶಗಳನ್ನು ಜುಲೈ 20ರ ಮಧ್ಯಾಹ್ನ 12 ಗಂಟೆಯೊಳಗೆ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಗೆ ಸುಪ್ರೀಂ ಕೋರ್ಟ್ ಇಂದು(ಜು 18) ನಿರ್ದೇಶನ ನೀಡಿದೆ.

ಅಭ್ಯರ್ಥಿಗಳ ಗುರುತನ್ನು ಬಹಿರಂಗಪಡಿಸಬಾರದು. ನಗರವಾರು ಮತ್ತು ಕೇಂದ್ರವಾರು ಫಲಿತಾಂಶಗಳನ್ನು ಪ್ರಕಟಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇತರ ಅವ್ಯವಹಾರಗಳ ಆರೋಪಗಳ ಹಿನ್ನೆಲೆ ನೀಟ್-ಯುಜಿ 2024 ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಈ ಆದೇಶ ನೀಡಿದೆ.

ಎನ್‌ಟಿಎ ಎಲ್ಲಾ ಅಭ್ಯರ್ಥಿಗಳ ಫಲಿತಾಂಶವನ್ನು ಪ್ರಕಟಿಸದ ಕಾರಣ ಕೇಂದ್ರವಾರು ಅಂಕಗಳ ಮಾದರಿಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅರ್ಜಿದಾರರು ದೂರಿರುವ ಹಿನ್ನೆಲೆ, ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ ನ್ಯಾಯಾಲಯ, ಫಲಿತಾಂಶಗಳನ್ನು ಪ್ರಕಟಿಸುವಂತೆ ಎನ್‌ಟಿಎಗೆ ಸೂಚಿಸಿದೆ.

ಅರ್ಜಿದಾರರ ಪರ ನ್ಯಾಯಾಲಯಕ್ಕೆ ಹಾಜರಾದ ಹಿರಿಯ ವಕೀಲ ನರೇಂದ್ರ ಹೂಡಾ, ಸಿಬಿಐ ಸ್ಥಿತಿ ವರದಿಯನ್ನು ಅವರೊಂದಿಗೆ ಹಂಚಿಕೊಳ್ಳದ ಕಾರಣ ಅಥವಾ ಸಂಪೂರ್ಣ ಫಲಿತಾಂಶಗಳನ್ನು ಪ್ರಕಟಿಸದ ಕಾರಣ ಅಭ್ಯರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ರೈತರ ದಿಲ್ಲಿ ಚಲೋ ತಡೆದಿದ್ದ ಪೊಲೀಸ್ ಅಧಿಕಾರಿಗಳನ್ನು ಶೌರ್ಯ ಪದಕಕ್ಕೆ ಶಿಫಾರಸು ಮಾಡಿದ ಹರಿಯಾಣ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...