Homeಮುಖಪುಟನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ | ಟೆಲಿಗ್ರಾಮ್, ಇನ್‌ಸ್ಟಾಗ್ರಾಮ್ ಚಾನೆಲ್‌ಗಳ ವಿರುದ್ಧ ಕ್ರಮಕ್ಕೆ ಮುಂದಾದ ಎನ್‌ಟಿಎ

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ | ಟೆಲಿಗ್ರಾಮ್, ಇನ್‌ಸ್ಟಾಗ್ರಾಮ್ ಚಾನೆಲ್‌ಗಳ ವಿರುದ್ಧ ಕ್ರಮಕ್ಕೆ ಮುಂದಾದ ಎನ್‌ಟಿಎ

- Advertisement -
- Advertisement -

ನೀಟ್-ಯುಜಿ ಬಗ್ಗೆ ನೀಡಲಾಗುತ್ತಿರುವ ನಕಲಿ ಹೇಳಿಕೆಗಳ ವಿರುದ್ಧ ನಡೆಸಲಾದ ಕಾರ್ಯಾಚರಣೆಯಲ್ಲಿ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯು ಗುರುವಾರ 106 ಟೆಲಿಗ್ರಾಮ್ ಮತ್ತು 16 ಇನ್‌ಸ್ಟಾಗ್ರಾಮ್ ಚಾನೆಲ್‌ಗಳು ಸುಳ್ಳು ಮಾಹಿತಿಯನ್ನು ಹರಡುವಲ್ಲಿ ಭಾಗಿಯಾಗಿವೆ ಎಂದು ಗುರುತಿಸಿದೆ ಎಂದು ಮೂಲಗಳು ತಿಳಿಸಿವೆ. ನೀಟ್-ಯುಜಿ ಪ್ರಶ್ನೆಪತ್ರಿಕೆ

ಮುಂಬರುವ ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪ ಇರುವ 1,500 ಕ್ಕೂ ಹೆಚ್ಚು ಪ್ರತಿಪಾದನೆಗಳನ್ನು ಹಕ್ಕುಗಳನ್ನು ಎನ್‌ಟಿಎಯ ಪೋರ್ಟಲ್ ಗುರುತಿಸಿದೆ ಎಂದು ವರದಿ ತಿಳಿಸಿವೆ.

ನೀಟ್ (ಯುಜಿ) 2025 ಪರೀಕ್ಷಾ ಪ್ರಕ್ರಿಯೆಯ ಸಮಗ್ರತೆಯನ್ನು ರಕ್ಷಿಸಲು ನಡೆಸಿರುವ ಈ ಕಾರ್ಯಾಚರಣೆಯಲ್ಲಿ, ನೀಟ್ (ಯುಜಿ) 2025 ಪ್ರಶ್ನೆ ಪತ್ರಿಕೆ ಲಭ್ಯವಿದೆ ಎಂದು ಪ್ರತಿಪಾದಿಸಿರುವ ಕೆಲವು ವಂಚನೆಯ ಟೆಲಿಗ್ರಾಮ್ ಮತ್ತು ಇನ್‌ಸ್ಟಾಗ್ರಾಮ್ ಚಾನೆಲ್‌ಗಳ ಮೇಲೆ ಸಂಸ್ಥೆ ಕ್ರಮ ಕೈಗೊಳ್ಳಲು ಪ್ರಾರಂಭಿಸಿದೆ ಎಂದು ವರದಿ ಹೇಳಿದೆ.

“ಅಕ್ರಮಗಳ ಬಗ್ಗೆ ವರದಿ ಮಾಡಲು ಇತ್ತೀಚೆಗೆ ಪ್ರಾರಂಭಿಸಲಾದ ಪೋರ್ಟಲ್‌ ಮೂಲಕ ಸ್ವೀಕರಿಸಲಾದ ಇನ್‌ಪುಟ್‌ಗಳ ಆಧಾರದ ಮೇಲೆ, ಎನ್‌ಟಿಎ ತಪ್ಪು ಮಾಹಿತಿಯನ್ನು ಹರಡುವಲ್ಲಿ ಮತ್ತು ವಿದ್ಯಾರ್ಥಿಗಳನ್ನು ದಾರಿ ತಪ್ಪಿಸಲು ಪ್ರಯತ್ನಿಸುವಲ್ಲಿ ತೊಡಗಿರುವ 106 ಟೆಲಿಗ್ರಾಮ್ ಮತ್ತು 16 ಇನ್‌ಸ್ಟಾಗ್ರಾಮ್ ಚಾನೆಲ್‌ಗಳನ್ನು ಗುರುತಿಸಿದೆ” ಎಂದು ಮೂಲಗಳು ತಿಳಿಸಿವೆ.

“ಈ ಪ್ರಕರಣಗಳನ್ನು ಹೆಚ್ಚಿನ ಕಾನೂನು ಮತ್ತು ತನಿಖಾ ಕ್ರಮಕ್ಕಾಗಿ ಗೃಹ ಸಚಿವಾಲಯದ ಅಡಿಯಲ್ಲಿರುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (I4C) ಗೆ ಔಪಚಾರಿಕವಾಗಿ ವರ್ಗಾಯಿಸಲಾಗಿದೆ” ಎಂದು ಮೂಲಗಳು ತಿಳಿಸಿವೆ. ಸುಳ್ಳು ಸುದ್ದಿಗಳು ಹರಡುವುದನ್ನು ಮತ್ತು ಅಭ್ಯರ್ಥಿಗಳಲ್ಲಿ ಅನಗತ್ಯ ಭೀತಿಯನ್ನು ತಡೆಗಟ್ಟಲು ಟೆಲಿಗ್ರಾಮ್ ಮತ್ತು ಇನ್‌ಸ್ಟಾಗ್ರಾಮ್‌ನ ಈ ಚಾನೆಲ್‌ಗಳನ್ನು ತಕ್ಷಣವೇ ತೆಗೆದುಹಾಕುವಂತೆ NTA ವಿನಂತಿಸಿದೆ.

“ಈ ಗುಂಪುಗಳ ನಿರ್ವಾಹಕರು ಮತ್ತು ರಚನೆ ಮಾಡಿರುವವರ ವಿವರಗಳನ್ನು ಕಾನೂನು ಜಾರಿ ಸಂಸ್ಥೆಗಳೊಂದಿಗೆ ಹಂಚಿಕೊಳ್ಳಲು ಟೆಲಿಗ್ರಾಮ್ ಮತ್ತು ಇನ್‌ಸ್ಟಾಗ್ರಾಮ್‌ಗೆ ಒತ್ತಾಯಿಸಲಾಗಿದೆ. ಇದರಿಂದಾಗಿ ಅವರ ವಿರುದ್ಧ ತ್ವರಿತ ತನಿಖೆ ಮತ್ತು ವಿಚಾರಣೆ ನಡೆಯಬಹುದು” ಎಂದು ಮೂಲಗಳು ತಿಳಿಸಿವೆ. ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಮೇ 4 ರಂದು ನಡೆಸಲು ನಿರ್ಧರಿಸಲಾಗಿದೆ.

ಮುಂಬರುವ NEET-UG ನಲ್ಲಿ ಯಾವುದೇ ಲೋಪಗಳಾಗದಂತೆ ನೋಡಿಕೊಳ್ಳಲು ಶಿಕ್ಷಣ ಸಚಿವಾಲಯ (MoE) ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಕಳೆದ ವರ್ಷದ ಅಕ್ರಮಗಳಿಗೆ ಪ್ರತಿಕ್ರಿಯೆಯಾಗಿ ಸಚಿವಾಲಯ ಸಮಗ್ರ ಯೋಜನೆಯನ್ನು ಜಾರಿಗೆ ತರುತ್ತಿದೆ, ಇದು ಪರೀಕ್ಷೆಯ ಸಮಗ್ರತೆಯ ಬಗ್ಗೆ ಕಳವಳವನ್ನುಂಟುಮಾಡಿದೆ. ನೀಟ್-ಯುಜಿ ಪ್ರಶ್ನೆಪತ್ರಿಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಹಾರ | ಬಿಸಿಯೂಟ ಸೇವಿಸಿ 100 ಮಕ್ಕಳು ಅಸ್ವಸ್ಥ; ಸತ್ತ ಹಾವನ್ನು ಹೊರತೆಗೆದು ಊಟ ಬಡಿಸಿರುವ ಆರೋಪ

ಬಿಹಾರ | ಬಿಸಿಯೂಟ ಸೇವಿಸಿ 100 ಮಕ್ಕಳು ಅಸ್ವಸ್ಥ; ಸತ್ತ ಹಾವನ್ನು ಹೊರತೆಗೆದು ಊಟ ಬಡಿಸಿರುವ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...