Homeಮುಖಪುಟಸಚಿವ ಸ್ಥಾನದ ಕಡೆಗಣನೆ: ಪಕ್ಷ ತೊರೆದ ಶಿವಸೇನೆಯ ಶಾಸಕ

ಸಚಿವ ಸ್ಥಾನದ ಕಡೆಗಣನೆ: ಪಕ್ಷ ತೊರೆದ ಶಿವಸೇನೆಯ ಶಾಸಕ

- Advertisement -
- Advertisement -

ಮುಂಬೈ: ಮಹಾರಾಷ್ಟ್ರದ ಮಹಾಯುತಿ ಸರಕಾರದಲ್ಲಿ ಸಚಿವ ಸಂಪುಟಕ್ಕೆ ಸೇರ್ಪಡೆಯಾಗದೇ ಇರುವುದಕ್ಕೆ ಬೇಸರ ವ್ಯಕ್ತಪಡಿಸಿ ಶಿವಸೇನೆ ಶಾಸಕ ನರೇಂದ್ರ ಭೋಂಡೇಕರ್ ಅವರು ಶಿವಸೇನೆಯ ಎಲ್ಲಾಹಂತದ ಸ್ಥಾನಗಳ  ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

ಭಾನುವಾರ ಭಂಡಾರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಸೇನೆಯ ಉಪ ನಾಯಕ ಮತ್ತು ಪೂರ್ವ ವಿದರ್ಭ ಜಿಲ್ಲೆಗಳ ಸಂಯೋಜಕನಾಗಿದ್ದ ನನಗೆ ಪಕ್ಷದ ಮುಖ್ಯಸ್ಥ ಮತ್ತು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸಚಿವ ಸಂಪುಟದಲ್ಲಿ ಸ್ಥಾನ ನೀಡುವ ಭರವಸೆ ನೀಡಿದ್ದರು ಎಂದು ಹೇಳಿದರು.

ಭಂಡಾರ ಜಿಲ್ಲೆಯ ಉಸ್ತುವಾರಿ ಸಚಿವರಾಗಲು ಮತ್ತು ಅದರ ಅಭಿವೃದ್ಧಿಗೆ ಕೆಲಸ ಮಾಡಲು ಸಚಿವ ಸ್ಥಾನ ಪಡೆಯಲು ನಾನು ಆಕಾಂಕ್ಷಿಯಾಗಿದ್ದೆ ಎಂದು ಭೋಂಡೆಕರ್ ತಿಳಿಸಿದರು.

ನವೆಂಬರ್ 20 ರಂದು ನಡೆದ ರಾಜ್ಯ ಚುನಾವಣೆಯಲ್ಲಿ ಅವರು ಭಂಡಾರಾ ಕ್ಷೇತ್ರದಿಂದ  ಕಾಂಗ್ರೆಸ್ ಪ್ರತಿಸ್ಪರ್ಧಿಯನ್ನು 38,000 ಕ್ಕೂ ಹೆಚ್ಚು ಮತಗಳಿಂದ ಸೋಲಿಸುವ ಮೂಲಕ ಗೆದಿದ್ದರು.

ದೇವೇಂದ್ರ ಫಡ್ನವೀಸ್ ನೇತೃತ್ವದ ಸಚಿವ ಸಂಪುಟದ ಮೊದಲ ಸಂಪುಟ ವಿಸ್ತರಣೆಯಲ್ಲಿ 16 ಹೊಸ ಮುಖಗಳು ಸೇರಿದಂತೆ ಮಹಾಯುತಿ ಮಿತ್ರಪಕ್ಷಗಳ ಒಟ್ಟು 39 ಶಾಸಕರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರೆ, 10 ಮಾಜಿ ಸಚಿವರನ್ನು ಹೊರಗಿಡಲಾಗಿದೆ. ಮಿತ್ರಪಕ್ಷಗಳ ಪೈಕಿ ಅತಿ ದೊಡ್ಡ ಪಕ್ಷ ಎಂಬ ಕಾರಣಕ್ಕೆ ಬಿಜೆಪಿ 19 ಸಚಿವ ಸ್ಥಾನಗಳನ್ನು ಪಡೆದುಕೊಂಡರೆ, ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷಕ್ಕೆ ಕ್ರಮವಾಗಿ 11 ಮತ್ತು 9 ಸ್ಥಾನಗಳನ್ನು ನೀಡಲಾಗಿದೆ.

ನನಗೆ ಕ್ಯಾಬಿನೆಟ್ ಸ್ಥಾನ ನೀಡಲಾಗುವುದು ಎಂಬ ಷರತ್ತಿನ ಮೇಲೆ ನಾನು ಶಿವಸೇನೆಗೆ ಸೇರಿದ್ದೇನೆ. ಶಿಂಧೆ ನನಗೆ ಅದೇ ಭರವಸೆ ನೀಡಿದ್ದರು. ಹಿಂದಿನ ಸರ್ಕಾರದಲ್ಲಿ ಶಿಂಧೆ ಮುಖ್ಯಮಂತ್ರಿಯಾದಾಗ ನಾನು ಸ್ವತಂತ್ರ ಶಾಸಕನಾಗಿದ್ದೆ ಮತ್ತು ಅವರಿಗೆ ಬೆಂಬಲ ನೀಡಿದ್ದೆ ಎಂದು ಭೋಂಡೆಕರ್ ತಿಳಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ತಮ್ಮ ಹೆಸರನ್ನು ಸಚಿವ ಸ್ಥಾನಕ್ಕೆ ಪರಿಗಣಿಸಲಾಗುವುದು ಎಂದು ಹೇಳಲಾಗಿತ್ತು, ನಾನು ಸಚಿವ ಸ್ಥಾನದ ಪಟ್ಟಿಯನ್ನು ಪರಿಶೀಲಿಸಿದಾಗ ಮತ್ತು ನನ್ನನ್ನು ಕೈಬಿಡಲಾಗಿದೆ ಎಂದು ಅರಿತುಕೊಂಡಾಗ, ನಾನು ಪಕ್ಷದ ಎಲ್ಲಾ ಸ್ಥಾನಗಳಿಂದ ಹೊರಬರಲು ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ.

ಭಂಡಾರಾ ಜಿಲ್ಲೆಯ ಉಸ್ತುವಾರಿ ಸಚಿವನಾಗಲು ಕ್ಯಾಬಿನೆಟ್ ಹುದ್ದೆಯನ್ನು ಪಡೆಯುವ ಉದ್ದೇಶ ಹೊಂದಿದ್ದೆ.  ಈಗ ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸಲಿದ್ದೇನೆ ಎಂದು ಭೋಂಡೆಕರ್ ತಿಳಿಸಿದ್ದಾರೆ.

ಭಂಡಾರ ಜಿಲ್ಲೆ ಸತತವಾಗಿ ಹಲವಾರು ವರ್ಷಗಳಿಂದ  ಹೊರಗಿನ ಮಂತ್ರಿಗಳನ್ನು ಹೊಂದಿದೆ. ಇಂತಹ ಪದ್ಧತಿ ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಅಡ್ಡಿಯಾಗಿದೆ ಎಂದು  ಅವರು ಆರೋಪಿಸಿದ್ದಾರೆ.

ನಾನು ಇನ್ನು ಮುಂದೆ ಯಾವುದೇ ಅಧಿಕೃತ ಸ್ಥಾನವನ್ನು ಹೊಂದುವ ಮನಸ್ಸು ಹೊಂದಿಲ್ಲ. ನಾನು ನನ್ನ ಪಕ್ಷದ ನಾಯಕರಿಗೆ ನನ್ನ ರಾಜೀನಾಮೆಯನ್ನು ಸಲ್ಲಿಸಿದ್ದೇನೆ ಮತ್ತು ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ ಎಂದು ಭೋಂಡೇಕರ್ ಹೇಳಿದರು.

…………………………..

ಮಹಾರಾಷ್ಟ್ರದಲ್ಲಿ ಮಹಾಯುತಿ ಸರಕಾರ ಸಂಪುಟ ವಿಸ್ತರಣೆ

-ಮಹಾರಾಷ್ಟ್ರದಲ್ಲಿ 39 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

-18 ಹೊಸ ಮುಖಗಳಿಗೆ ಮಣೆ, ನಾಲ್ವರು ಮಹಿಳೆಯರಿಗೆ ಮಾತ್ರ ಅವಕಾಶ

ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ನೇತೃತ್ವದ ಮಹಾಯುತಿ ಸರಕಾರದ ಸಚಿವ ಸಂಪುಟ ಭಾನುವಾರ ವಿಸ್ತರಣೆಯಾಗಿದೆ. ಮೊದಲ ವಿಸ್ತರಣೆಯಲ್ಲಿ ಮೂರೂ ಮೈತ್ರಿ ಪಕ್ಷಗಳ ಒಟ್ಟು 39 ಶಾಸಕರಿಗೆ ಮಂತ್ರಿಗಿರಿ ಲಭಿಸಿದೆ. ಆ ಪೈಕಿ 33 ಮಂದಿ ಸಂಪುಟ ಸಚಿವರಾಗಿ ಹಾಗೂ 6 ಮಂದಿ ಸಹಾಯಕ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ಸಂಪುಟ ಸದಸ್ಯರ ಸಂಖ್ಯೆ 42ಕ್ಕೆ ಏರಿದೆ. ಇನ್ನೂ ಒಂದು ಸಚಿವ ಸ್ಥಾನ ಖಾಲಿ ಉಳಿದಿದೆ.

ನಾಗಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಪಿ.ಸಿ. ರಾಧಾಕೃಷ್ಣನ್‌ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಡಿ. 16ರಿಂದ 21ರವರೆಗೆ ನಾಗಪುರದಲ್ಲಿ ನಡೆಯುವ ಹಿನ್ನೆಲೆಯಲ್ಲಿ ಇಲ್ಲಿಯೇ ಕಾರ್ಯಕ್ರಮ ಆಯೋಜಿಸಲಾಗಿತ್ತು.

4 ಮಹಿಳೆಯರು, ಹಿರಿಯರಿಗಿಲ್ಲ ಮಣೆ

ಸಚಿವ ಸಂಪುಟದಲ್ಲಿ ನಾಲ್ವರು ಮಹಿಳಾ ಶಾಸಕರು ಸ್ಥಾನ ಗಿಟ್ಟಿಸಿದ್ದಾರೆ. 39 ಸಚಿವರ ಪೈಕಿ ಬಿಜೆಪಿಯಿಂದ ಪಂಕಜಾ ಮುಂಡೆ, ಎನ್‌ಸಿಪಿ (ಅಜಿತ್‌ ಬಣ)ಯಿಂದ ಅದಿತಿ ತತ್ಕಾರೆ, ಪುಣೆಯಿಂದ ಮೊದಲ ಬಾರಿಗೆ ಸ್ಪರ್ಧಿಸಿದ್ದ ಬಿಜೆಪಿ ಶಾಸಕಿ ಮಾಧುರಿ ಮಿಸಳ್‌ ಮತ್ತು ಬಿಜೆಪಿ ನಾಯಕಿ ಮೇಘನಾ ಬೊರ್ಡಿಕರ್‌ ಅವರಿಗೆ ಸಚಿವ ಸ್ಥಾನ ದೊರೆತಿದೆ.

ಬಿಜೆಪಿಯ ಮಹಿಳಾ ಸಚಿವರ ಪೈಕಿ ಎರಡು ಹೊಸಮುಖಗಳಿಗೆ ಮಣೆ ಹಾಕಲಾಗಿರುವುದು ನಾಯಕತ್ವ ಬೆಳೆಸುವ ಪಕ್ಷದ ಯೋಜನೆಯ ಭಾಗವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಉದಯ್ ಸಾಮಂತ್, ಶಂಭುರಾಜ್ ದೇಸಾಯಿ, ದಾದಾಜಿ ಭುಸೆ, ಸಂಜಯ್ ರಾಥೋಡ್, ಗುಲಾಬ್‌ರಾವ್ ಪಾಟೀಲ್ ಮತ್ತು ಸಂಜಯ್ ಶಿರ್ಸಾತ್ ಪ್ರಮಾಣವಚನ ಸ್ವೀಕರಿಸಿದ ಶಿವಸೇನಾದ ಪ್ರಮುಖರು.

ಇದನ್ನೂ ಓದಿ…ಉತ್ತರ ಪ್ರದೇಶ: ದಲಿತ ಕಾನ್‌ಸ್ಟೆಬಲ್‌ ಮದುವೆ ಮೆರವಣಿಗೆ ಮೇಲೆ ಠಾಕೂರ್ ವ್ಯಕ್ತಿಗಳಿಂದ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...