Homeಮುಖಪುಟಸಚಿವ ಸ್ಥಾನದ ಕಡೆಗಣನೆ: ಪಕ್ಷ ತೊರೆದ ಶಿವಸೇನೆಯ ಶಾಸಕ

ಸಚಿವ ಸ್ಥಾನದ ಕಡೆಗಣನೆ: ಪಕ್ಷ ತೊರೆದ ಶಿವಸೇನೆಯ ಶಾಸಕ

- Advertisement -
- Advertisement -

ಮುಂಬೈ: ಮಹಾರಾಷ್ಟ್ರದ ಮಹಾಯುತಿ ಸರಕಾರದಲ್ಲಿ ಸಚಿವ ಸಂಪುಟಕ್ಕೆ ಸೇರ್ಪಡೆಯಾಗದೇ ಇರುವುದಕ್ಕೆ ಬೇಸರ ವ್ಯಕ್ತಪಡಿಸಿ ಶಿವಸೇನೆ ಶಾಸಕ ನರೇಂದ್ರ ಭೋಂಡೇಕರ್ ಅವರು ಶಿವಸೇನೆಯ ಎಲ್ಲಾಹಂತದ ಸ್ಥಾನಗಳ  ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

ಭಾನುವಾರ ಭಂಡಾರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಸೇನೆಯ ಉಪ ನಾಯಕ ಮತ್ತು ಪೂರ್ವ ವಿದರ್ಭ ಜಿಲ್ಲೆಗಳ ಸಂಯೋಜಕನಾಗಿದ್ದ ನನಗೆ ಪಕ್ಷದ ಮುಖ್ಯಸ್ಥ ಮತ್ತು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸಚಿವ ಸಂಪುಟದಲ್ಲಿ ಸ್ಥಾನ ನೀಡುವ ಭರವಸೆ ನೀಡಿದ್ದರು ಎಂದು ಹೇಳಿದರು.

ಭಂಡಾರ ಜಿಲ್ಲೆಯ ಉಸ್ತುವಾರಿ ಸಚಿವರಾಗಲು ಮತ್ತು ಅದರ ಅಭಿವೃದ್ಧಿಗೆ ಕೆಲಸ ಮಾಡಲು ಸಚಿವ ಸ್ಥಾನ ಪಡೆಯಲು ನಾನು ಆಕಾಂಕ್ಷಿಯಾಗಿದ್ದೆ ಎಂದು ಭೋಂಡೆಕರ್ ತಿಳಿಸಿದರು.

ನವೆಂಬರ್ 20 ರಂದು ನಡೆದ ರಾಜ್ಯ ಚುನಾವಣೆಯಲ್ಲಿ ಅವರು ಭಂಡಾರಾ ಕ್ಷೇತ್ರದಿಂದ  ಕಾಂಗ್ರೆಸ್ ಪ್ರತಿಸ್ಪರ್ಧಿಯನ್ನು 38,000 ಕ್ಕೂ ಹೆಚ್ಚು ಮತಗಳಿಂದ ಸೋಲಿಸುವ ಮೂಲಕ ಗೆದಿದ್ದರು.

ದೇವೇಂದ್ರ ಫಡ್ನವೀಸ್ ನೇತೃತ್ವದ ಸಚಿವ ಸಂಪುಟದ ಮೊದಲ ಸಂಪುಟ ವಿಸ್ತರಣೆಯಲ್ಲಿ 16 ಹೊಸ ಮುಖಗಳು ಸೇರಿದಂತೆ ಮಹಾಯುತಿ ಮಿತ್ರಪಕ್ಷಗಳ ಒಟ್ಟು 39 ಶಾಸಕರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರೆ, 10 ಮಾಜಿ ಸಚಿವರನ್ನು ಹೊರಗಿಡಲಾಗಿದೆ. ಮಿತ್ರಪಕ್ಷಗಳ ಪೈಕಿ ಅತಿ ದೊಡ್ಡ ಪಕ್ಷ ಎಂಬ ಕಾರಣಕ್ಕೆ ಬಿಜೆಪಿ 19 ಸಚಿವ ಸ್ಥಾನಗಳನ್ನು ಪಡೆದುಕೊಂಡರೆ, ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷಕ್ಕೆ ಕ್ರಮವಾಗಿ 11 ಮತ್ತು 9 ಸ್ಥಾನಗಳನ್ನು ನೀಡಲಾಗಿದೆ.

ನನಗೆ ಕ್ಯಾಬಿನೆಟ್ ಸ್ಥಾನ ನೀಡಲಾಗುವುದು ಎಂಬ ಷರತ್ತಿನ ಮೇಲೆ ನಾನು ಶಿವಸೇನೆಗೆ ಸೇರಿದ್ದೇನೆ. ಶಿಂಧೆ ನನಗೆ ಅದೇ ಭರವಸೆ ನೀಡಿದ್ದರು. ಹಿಂದಿನ ಸರ್ಕಾರದಲ್ಲಿ ಶಿಂಧೆ ಮುಖ್ಯಮಂತ್ರಿಯಾದಾಗ ನಾನು ಸ್ವತಂತ್ರ ಶಾಸಕನಾಗಿದ್ದೆ ಮತ್ತು ಅವರಿಗೆ ಬೆಂಬಲ ನೀಡಿದ್ದೆ ಎಂದು ಭೋಂಡೆಕರ್ ತಿಳಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ತಮ್ಮ ಹೆಸರನ್ನು ಸಚಿವ ಸ್ಥಾನಕ್ಕೆ ಪರಿಗಣಿಸಲಾಗುವುದು ಎಂದು ಹೇಳಲಾಗಿತ್ತು, ನಾನು ಸಚಿವ ಸ್ಥಾನದ ಪಟ್ಟಿಯನ್ನು ಪರಿಶೀಲಿಸಿದಾಗ ಮತ್ತು ನನ್ನನ್ನು ಕೈಬಿಡಲಾಗಿದೆ ಎಂದು ಅರಿತುಕೊಂಡಾಗ, ನಾನು ಪಕ್ಷದ ಎಲ್ಲಾ ಸ್ಥಾನಗಳಿಂದ ಹೊರಬರಲು ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ.

ಭಂಡಾರಾ ಜಿಲ್ಲೆಯ ಉಸ್ತುವಾರಿ ಸಚಿವನಾಗಲು ಕ್ಯಾಬಿನೆಟ್ ಹುದ್ದೆಯನ್ನು ಪಡೆಯುವ ಉದ್ದೇಶ ಹೊಂದಿದ್ದೆ.  ಈಗ ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸಲಿದ್ದೇನೆ ಎಂದು ಭೋಂಡೆಕರ್ ತಿಳಿಸಿದ್ದಾರೆ.

ಭಂಡಾರ ಜಿಲ್ಲೆ ಸತತವಾಗಿ ಹಲವಾರು ವರ್ಷಗಳಿಂದ  ಹೊರಗಿನ ಮಂತ್ರಿಗಳನ್ನು ಹೊಂದಿದೆ. ಇಂತಹ ಪದ್ಧತಿ ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಅಡ್ಡಿಯಾಗಿದೆ ಎಂದು  ಅವರು ಆರೋಪಿಸಿದ್ದಾರೆ.

ನಾನು ಇನ್ನು ಮುಂದೆ ಯಾವುದೇ ಅಧಿಕೃತ ಸ್ಥಾನವನ್ನು ಹೊಂದುವ ಮನಸ್ಸು ಹೊಂದಿಲ್ಲ. ನಾನು ನನ್ನ ಪಕ್ಷದ ನಾಯಕರಿಗೆ ನನ್ನ ರಾಜೀನಾಮೆಯನ್ನು ಸಲ್ಲಿಸಿದ್ದೇನೆ ಮತ್ತು ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ ಎಂದು ಭೋಂಡೇಕರ್ ಹೇಳಿದರು.

…………………………..

ಮಹಾರಾಷ್ಟ್ರದಲ್ಲಿ ಮಹಾಯುತಿ ಸರಕಾರ ಸಂಪುಟ ವಿಸ್ತರಣೆ

-ಮಹಾರಾಷ್ಟ್ರದಲ್ಲಿ 39 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

-18 ಹೊಸ ಮುಖಗಳಿಗೆ ಮಣೆ, ನಾಲ್ವರು ಮಹಿಳೆಯರಿಗೆ ಮಾತ್ರ ಅವಕಾಶ

ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ನೇತೃತ್ವದ ಮಹಾಯುತಿ ಸರಕಾರದ ಸಚಿವ ಸಂಪುಟ ಭಾನುವಾರ ವಿಸ್ತರಣೆಯಾಗಿದೆ. ಮೊದಲ ವಿಸ್ತರಣೆಯಲ್ಲಿ ಮೂರೂ ಮೈತ್ರಿ ಪಕ್ಷಗಳ ಒಟ್ಟು 39 ಶಾಸಕರಿಗೆ ಮಂತ್ರಿಗಿರಿ ಲಭಿಸಿದೆ. ಆ ಪೈಕಿ 33 ಮಂದಿ ಸಂಪುಟ ಸಚಿವರಾಗಿ ಹಾಗೂ 6 ಮಂದಿ ಸಹಾಯಕ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ಸಂಪುಟ ಸದಸ್ಯರ ಸಂಖ್ಯೆ 42ಕ್ಕೆ ಏರಿದೆ. ಇನ್ನೂ ಒಂದು ಸಚಿವ ಸ್ಥಾನ ಖಾಲಿ ಉಳಿದಿದೆ.

ನಾಗಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಪಿ.ಸಿ. ರಾಧಾಕೃಷ್ಣನ್‌ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಡಿ. 16ರಿಂದ 21ರವರೆಗೆ ನಾಗಪುರದಲ್ಲಿ ನಡೆಯುವ ಹಿನ್ನೆಲೆಯಲ್ಲಿ ಇಲ್ಲಿಯೇ ಕಾರ್ಯಕ್ರಮ ಆಯೋಜಿಸಲಾಗಿತ್ತು.

4 ಮಹಿಳೆಯರು, ಹಿರಿಯರಿಗಿಲ್ಲ ಮಣೆ

ಸಚಿವ ಸಂಪುಟದಲ್ಲಿ ನಾಲ್ವರು ಮಹಿಳಾ ಶಾಸಕರು ಸ್ಥಾನ ಗಿಟ್ಟಿಸಿದ್ದಾರೆ. 39 ಸಚಿವರ ಪೈಕಿ ಬಿಜೆಪಿಯಿಂದ ಪಂಕಜಾ ಮುಂಡೆ, ಎನ್‌ಸಿಪಿ (ಅಜಿತ್‌ ಬಣ)ಯಿಂದ ಅದಿತಿ ತತ್ಕಾರೆ, ಪುಣೆಯಿಂದ ಮೊದಲ ಬಾರಿಗೆ ಸ್ಪರ್ಧಿಸಿದ್ದ ಬಿಜೆಪಿ ಶಾಸಕಿ ಮಾಧುರಿ ಮಿಸಳ್‌ ಮತ್ತು ಬಿಜೆಪಿ ನಾಯಕಿ ಮೇಘನಾ ಬೊರ್ಡಿಕರ್‌ ಅವರಿಗೆ ಸಚಿವ ಸ್ಥಾನ ದೊರೆತಿದೆ.

ಬಿಜೆಪಿಯ ಮಹಿಳಾ ಸಚಿವರ ಪೈಕಿ ಎರಡು ಹೊಸಮುಖಗಳಿಗೆ ಮಣೆ ಹಾಕಲಾಗಿರುವುದು ನಾಯಕತ್ವ ಬೆಳೆಸುವ ಪಕ್ಷದ ಯೋಜನೆಯ ಭಾಗವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಉದಯ್ ಸಾಮಂತ್, ಶಂಭುರಾಜ್ ದೇಸಾಯಿ, ದಾದಾಜಿ ಭುಸೆ, ಸಂಜಯ್ ರಾಥೋಡ್, ಗುಲಾಬ್‌ರಾವ್ ಪಾಟೀಲ್ ಮತ್ತು ಸಂಜಯ್ ಶಿರ್ಸಾತ್ ಪ್ರಮಾಣವಚನ ಸ್ವೀಕರಿಸಿದ ಶಿವಸೇನಾದ ಪ್ರಮುಖರು.

ಇದನ್ನೂ ಓದಿ…ಉತ್ತರ ಪ್ರದೇಶ: ದಲಿತ ಕಾನ್‌ಸ್ಟೆಬಲ್‌ ಮದುವೆ ಮೆರವಣಿಗೆ ಮೇಲೆ ಠಾಕೂರ್ ವ್ಯಕ್ತಿಗಳಿಂದ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...