Homeಮುಖಪುಟಸಚಿವ ಸ್ಥಾನದ ಕಡೆಗಣನೆ: ಪಕ್ಷ ತೊರೆದ ಶಿವಸೇನೆಯ ಶಾಸಕ

ಸಚಿವ ಸ್ಥಾನದ ಕಡೆಗಣನೆ: ಪಕ್ಷ ತೊರೆದ ಶಿವಸೇನೆಯ ಶಾಸಕ

- Advertisement -
- Advertisement -

ಮುಂಬೈ: ಮಹಾರಾಷ್ಟ್ರದ ಮಹಾಯುತಿ ಸರಕಾರದಲ್ಲಿ ಸಚಿವ ಸಂಪುಟಕ್ಕೆ ಸೇರ್ಪಡೆಯಾಗದೇ ಇರುವುದಕ್ಕೆ ಬೇಸರ ವ್ಯಕ್ತಪಡಿಸಿ ಶಿವಸೇನೆ ಶಾಸಕ ನರೇಂದ್ರ ಭೋಂಡೇಕರ್ ಅವರು ಶಿವಸೇನೆಯ ಎಲ್ಲಾಹಂತದ ಸ್ಥಾನಗಳ  ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

ಭಾನುವಾರ ಭಂಡಾರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಸೇನೆಯ ಉಪ ನಾಯಕ ಮತ್ತು ಪೂರ್ವ ವಿದರ್ಭ ಜಿಲ್ಲೆಗಳ ಸಂಯೋಜಕನಾಗಿದ್ದ ನನಗೆ ಪಕ್ಷದ ಮುಖ್ಯಸ್ಥ ಮತ್ತು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸಚಿವ ಸಂಪುಟದಲ್ಲಿ ಸ್ಥಾನ ನೀಡುವ ಭರವಸೆ ನೀಡಿದ್ದರು ಎಂದು ಹೇಳಿದರು.

ಭಂಡಾರ ಜಿಲ್ಲೆಯ ಉಸ್ತುವಾರಿ ಸಚಿವರಾಗಲು ಮತ್ತು ಅದರ ಅಭಿವೃದ್ಧಿಗೆ ಕೆಲಸ ಮಾಡಲು ಸಚಿವ ಸ್ಥಾನ ಪಡೆಯಲು ನಾನು ಆಕಾಂಕ್ಷಿಯಾಗಿದ್ದೆ ಎಂದು ಭೋಂಡೆಕರ್ ತಿಳಿಸಿದರು.

ನವೆಂಬರ್ 20 ರಂದು ನಡೆದ ರಾಜ್ಯ ಚುನಾವಣೆಯಲ್ಲಿ ಅವರು ಭಂಡಾರಾ ಕ್ಷೇತ್ರದಿಂದ  ಕಾಂಗ್ರೆಸ್ ಪ್ರತಿಸ್ಪರ್ಧಿಯನ್ನು 38,000 ಕ್ಕೂ ಹೆಚ್ಚು ಮತಗಳಿಂದ ಸೋಲಿಸುವ ಮೂಲಕ ಗೆದಿದ್ದರು.

ದೇವೇಂದ್ರ ಫಡ್ನವೀಸ್ ನೇತೃತ್ವದ ಸಚಿವ ಸಂಪುಟದ ಮೊದಲ ಸಂಪುಟ ವಿಸ್ತರಣೆಯಲ್ಲಿ 16 ಹೊಸ ಮುಖಗಳು ಸೇರಿದಂತೆ ಮಹಾಯುತಿ ಮಿತ್ರಪಕ್ಷಗಳ ಒಟ್ಟು 39 ಶಾಸಕರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರೆ, 10 ಮಾಜಿ ಸಚಿವರನ್ನು ಹೊರಗಿಡಲಾಗಿದೆ. ಮಿತ್ರಪಕ್ಷಗಳ ಪೈಕಿ ಅತಿ ದೊಡ್ಡ ಪಕ್ಷ ಎಂಬ ಕಾರಣಕ್ಕೆ ಬಿಜೆಪಿ 19 ಸಚಿವ ಸ್ಥಾನಗಳನ್ನು ಪಡೆದುಕೊಂಡರೆ, ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷಕ್ಕೆ ಕ್ರಮವಾಗಿ 11 ಮತ್ತು 9 ಸ್ಥಾನಗಳನ್ನು ನೀಡಲಾಗಿದೆ.

ನನಗೆ ಕ್ಯಾಬಿನೆಟ್ ಸ್ಥಾನ ನೀಡಲಾಗುವುದು ಎಂಬ ಷರತ್ತಿನ ಮೇಲೆ ನಾನು ಶಿವಸೇನೆಗೆ ಸೇರಿದ್ದೇನೆ. ಶಿಂಧೆ ನನಗೆ ಅದೇ ಭರವಸೆ ನೀಡಿದ್ದರು. ಹಿಂದಿನ ಸರ್ಕಾರದಲ್ಲಿ ಶಿಂಧೆ ಮುಖ್ಯಮಂತ್ರಿಯಾದಾಗ ನಾನು ಸ್ವತಂತ್ರ ಶಾಸಕನಾಗಿದ್ದೆ ಮತ್ತು ಅವರಿಗೆ ಬೆಂಬಲ ನೀಡಿದ್ದೆ ಎಂದು ಭೋಂಡೆಕರ್ ತಿಳಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ತಮ್ಮ ಹೆಸರನ್ನು ಸಚಿವ ಸ್ಥಾನಕ್ಕೆ ಪರಿಗಣಿಸಲಾಗುವುದು ಎಂದು ಹೇಳಲಾಗಿತ್ತು, ನಾನು ಸಚಿವ ಸ್ಥಾನದ ಪಟ್ಟಿಯನ್ನು ಪರಿಶೀಲಿಸಿದಾಗ ಮತ್ತು ನನ್ನನ್ನು ಕೈಬಿಡಲಾಗಿದೆ ಎಂದು ಅರಿತುಕೊಂಡಾಗ, ನಾನು ಪಕ್ಷದ ಎಲ್ಲಾ ಸ್ಥಾನಗಳಿಂದ ಹೊರಬರಲು ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ.

ಭಂಡಾರಾ ಜಿಲ್ಲೆಯ ಉಸ್ತುವಾರಿ ಸಚಿವನಾಗಲು ಕ್ಯಾಬಿನೆಟ್ ಹುದ್ದೆಯನ್ನು ಪಡೆಯುವ ಉದ್ದೇಶ ಹೊಂದಿದ್ದೆ.  ಈಗ ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸಲಿದ್ದೇನೆ ಎಂದು ಭೋಂಡೆಕರ್ ತಿಳಿಸಿದ್ದಾರೆ.

ಭಂಡಾರ ಜಿಲ್ಲೆ ಸತತವಾಗಿ ಹಲವಾರು ವರ್ಷಗಳಿಂದ  ಹೊರಗಿನ ಮಂತ್ರಿಗಳನ್ನು ಹೊಂದಿದೆ. ಇಂತಹ ಪದ್ಧತಿ ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಅಡ್ಡಿಯಾಗಿದೆ ಎಂದು  ಅವರು ಆರೋಪಿಸಿದ್ದಾರೆ.

ನಾನು ಇನ್ನು ಮುಂದೆ ಯಾವುದೇ ಅಧಿಕೃತ ಸ್ಥಾನವನ್ನು ಹೊಂದುವ ಮನಸ್ಸು ಹೊಂದಿಲ್ಲ. ನಾನು ನನ್ನ ಪಕ್ಷದ ನಾಯಕರಿಗೆ ನನ್ನ ರಾಜೀನಾಮೆಯನ್ನು ಸಲ್ಲಿಸಿದ್ದೇನೆ ಮತ್ತು ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ ಎಂದು ಭೋಂಡೇಕರ್ ಹೇಳಿದರು.

…………………………..

ಮಹಾರಾಷ್ಟ್ರದಲ್ಲಿ ಮಹಾಯುತಿ ಸರಕಾರ ಸಂಪುಟ ವಿಸ್ತರಣೆ

-ಮಹಾರಾಷ್ಟ್ರದಲ್ಲಿ 39 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

-18 ಹೊಸ ಮುಖಗಳಿಗೆ ಮಣೆ, ನಾಲ್ವರು ಮಹಿಳೆಯರಿಗೆ ಮಾತ್ರ ಅವಕಾಶ

ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ನೇತೃತ್ವದ ಮಹಾಯುತಿ ಸರಕಾರದ ಸಚಿವ ಸಂಪುಟ ಭಾನುವಾರ ವಿಸ್ತರಣೆಯಾಗಿದೆ. ಮೊದಲ ವಿಸ್ತರಣೆಯಲ್ಲಿ ಮೂರೂ ಮೈತ್ರಿ ಪಕ್ಷಗಳ ಒಟ್ಟು 39 ಶಾಸಕರಿಗೆ ಮಂತ್ರಿಗಿರಿ ಲಭಿಸಿದೆ. ಆ ಪೈಕಿ 33 ಮಂದಿ ಸಂಪುಟ ಸಚಿವರಾಗಿ ಹಾಗೂ 6 ಮಂದಿ ಸಹಾಯಕ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ಸಂಪುಟ ಸದಸ್ಯರ ಸಂಖ್ಯೆ 42ಕ್ಕೆ ಏರಿದೆ. ಇನ್ನೂ ಒಂದು ಸಚಿವ ಸ್ಥಾನ ಖಾಲಿ ಉಳಿದಿದೆ.

ನಾಗಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಪಿ.ಸಿ. ರಾಧಾಕೃಷ್ಣನ್‌ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಡಿ. 16ರಿಂದ 21ರವರೆಗೆ ನಾಗಪುರದಲ್ಲಿ ನಡೆಯುವ ಹಿನ್ನೆಲೆಯಲ್ಲಿ ಇಲ್ಲಿಯೇ ಕಾರ್ಯಕ್ರಮ ಆಯೋಜಿಸಲಾಗಿತ್ತು.

4 ಮಹಿಳೆಯರು, ಹಿರಿಯರಿಗಿಲ್ಲ ಮಣೆ

ಸಚಿವ ಸಂಪುಟದಲ್ಲಿ ನಾಲ್ವರು ಮಹಿಳಾ ಶಾಸಕರು ಸ್ಥಾನ ಗಿಟ್ಟಿಸಿದ್ದಾರೆ. 39 ಸಚಿವರ ಪೈಕಿ ಬಿಜೆಪಿಯಿಂದ ಪಂಕಜಾ ಮುಂಡೆ, ಎನ್‌ಸಿಪಿ (ಅಜಿತ್‌ ಬಣ)ಯಿಂದ ಅದಿತಿ ತತ್ಕಾರೆ, ಪುಣೆಯಿಂದ ಮೊದಲ ಬಾರಿಗೆ ಸ್ಪರ್ಧಿಸಿದ್ದ ಬಿಜೆಪಿ ಶಾಸಕಿ ಮಾಧುರಿ ಮಿಸಳ್‌ ಮತ್ತು ಬಿಜೆಪಿ ನಾಯಕಿ ಮೇಘನಾ ಬೊರ್ಡಿಕರ್‌ ಅವರಿಗೆ ಸಚಿವ ಸ್ಥಾನ ದೊರೆತಿದೆ.

ಬಿಜೆಪಿಯ ಮಹಿಳಾ ಸಚಿವರ ಪೈಕಿ ಎರಡು ಹೊಸಮುಖಗಳಿಗೆ ಮಣೆ ಹಾಕಲಾಗಿರುವುದು ನಾಯಕತ್ವ ಬೆಳೆಸುವ ಪಕ್ಷದ ಯೋಜನೆಯ ಭಾಗವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಉದಯ್ ಸಾಮಂತ್, ಶಂಭುರಾಜ್ ದೇಸಾಯಿ, ದಾದಾಜಿ ಭುಸೆ, ಸಂಜಯ್ ರಾಥೋಡ್, ಗುಲಾಬ್‌ರಾವ್ ಪಾಟೀಲ್ ಮತ್ತು ಸಂಜಯ್ ಶಿರ್ಸಾತ್ ಪ್ರಮಾಣವಚನ ಸ್ವೀಕರಿಸಿದ ಶಿವಸೇನಾದ ಪ್ರಮುಖರು.

ಇದನ್ನೂ ಓದಿ…ಉತ್ತರ ಪ್ರದೇಶ: ದಲಿತ ಕಾನ್‌ಸ್ಟೆಬಲ್‌ ಮದುವೆ ಮೆರವಣಿಗೆ ಮೇಲೆ ಠಾಕೂರ್ ವ್ಯಕ್ತಿಗಳಿಂದ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...