Homeಕರೋನಾ ತಲ್ಲಣಕೊರೊನಾ ಪ್ಯಾಕೇಜ್‌ನಲ್ಲಿ ಸ್ಲಂ ನಿವಾಸಿಗಳ ನಿರ್ಲಕ್ಷ್ಯ: ಪ್ರತಿಭಟನೆ

ಕೊರೊನಾ ಪ್ಯಾಕೇಜ್‌ನಲ್ಲಿ ಸ್ಲಂ ನಿವಾಸಿಗಳ ನಿರ್ಲಕ್ಷ್ಯ: ಪ್ರತಿಭಟನೆ

- Advertisement -
- Advertisement -

ಲಾಕ್‌ಡೌನ್ ಕಾರಣಕ್ಕೆ ರಾಜ್ಯ ಸರ್ಕಾರ ಘೋಷಿಸಿಲಾದ 1250 ಕೋಟಿ ಆರ್ಥಿಕ ಪ್ಯಾಕೇಜ್‌ನಲ್ಲಿ ಸ್ಲಂ ನಿವಾಸಿಗಳನ್ನು ಕಡೆಗಣಿಸಿರುವುದನ್ನು ಖಂಡಿಸಿ ಇಂದು ಸ್ಲಂ ಜನಾಂದೋಲನ ಕರ್ನಾಟಕದ ವತಿಯಿಂದ ರಾಜ್ಯಾದ್ಯಂತ ಮನೆ ಮನೆಯಿಂದಲೇ ಪ್ರತಿಭಟನೆ ನಡೆಯಿತು.

ನಗರದ ಜನಸಂಖ್ಯೆ ಶೇ 45% ಜನರು ಕೊಳಗೇರಿಗಳಲ್ಲಿ ವಾಸಿಸುತ್ತಿದ್ದಾರೆ. ನಗರ ವಂಚಿತ ಸಮುದಾಯಗಳಿಗೆ ಅಂದರೆ ಬಡತನ ರೇಖೆಯಿಂದ ಕೆಳಗಿರುವ ಬಿಪಿಎಲ್ ಕುಟುಂಬಗಳಿಗೆ ಪ್ರಾಧನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಲ್ಲಿ ಕೇಂದ್ರ ಸರ್ಕಾರದಿಂದ ಮೇ ಹಾಗೂ ಜೂನ್ ತಿಂಗಳಿಗೆ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ 5 ಕೆಜಿ ಅಕ್ಕಿ ಉಚಿತ ವಿಸ್ತರಣೆಯನ್ನು ಈಗಾಗಲೇ ಪ್ರಧಾನ ಮಂತ್ರಿಗಳ ಘೋಷಿಸಿರುವುದನ್ನೇ ಪುನರ್ ವ್ಯಾಖ್ಯಾನಿಸುವುದನ್ನು ಬಿಟ್ಟರೇ ಬೇರಾವುದೇ ವಿಶೇಷತೆಯನ್ನು ನೀಡಿಲ್ಲ ಎಂದು ಸ್ಲಂ ನಿವಾಸಿಗಳು ಕಿಡಿಕಾರಿದ್ದಾರೆ.

ರಾಯಚೂರಿನಲ್ಲಿ ಪ್ರತಿಭಟನೆ

ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯ ರಾಜ್ಯ ಸಂಚಾಲಕರಾದ ಎ.ನರಸಿಂಹಮೂರ್ತಿಯವರು ಮಾತನಾಡಿ “ಕೋವಿಡನ್ನು ರಾಷ್ಟ್ರೀಯಾ ವಿಪತ್ತು ಎಂದು ಘೋಷಿಸಿರುವ ಸರ್ಕಾರ ರಾಷ್ಟ್ರೀಯ ವಿಪತ್ತಿನ ಮಾನದಂಡಗಳ ಅನ್ವಯ ಪರಿಹಾರವನ್ನು ಘೋಷಿಸಬೇಕು. ಈ ಪ್ಯಾಕೇಜ್ ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವ ಘೋಷಣೆಯಾಗಿದೆ. ಇದರಿಂದ ನಗರ ವಂಚಿತ ಸಮುದಾಯಗಳಿಗೆ ಯಾವುದೇ ರೀತಿಯ ಪ್ರಯೋಜನ ದೊರಕುವುದಿಲ್ಲ” ಎಂದಿದ್ದಾರೆ.

1. ರಾಜ್ಯದ ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ಮತ್ತು ಸ್ಲಂ ನಿವಾಸಿಗಳಿಗೆ ಲಾಕ್‌ಡೌನ್ ಆರ್ಥಿಕ ಪರಿಹಾರವಾಗಿ ಮೂರು ತಿಂಗಳು ತಲಾ 10 ಸಾವಿರ ಭತ್ಯೆ ಘೋಷಿಸಬೇಕು.
2. ಸ್ಲಂ ನಿವಾಸಿಗಳಿಗೆ ರಾಷ್ಟ್ರೀಯಾ ವಿಪತ್ತು ಪರಿಹಾರದ ಮಾನದಂಡದಂತೆ ಮೂರು ತಿಂಗಳು (ಪಡಿತರ ವಿತರಣೆ ಹೊರತುಪಡಿಸಿ) ತಲಾ 10 ಕೆಜಿಯಂತೆ ಅಗತ್ಯ ವಸ್ತುಗಳನ್ನು ನೀಡಬೇಕು.
3. ರಾಜ್ಯ ಎಲ್ಲಾ ನಾಗರೀಕರಿಗೂ ಉಚಿತ ಲಸಿಕೆ ನೀಡಬೇಕು ಮತ್ತು ಮನೆ ಮನೆಗೆ ಲಸಿಕೆ ಅಭಿಯಾನ ಪ್ರಾರಂಭಿಸಬೇಕು.
4. ಕೋವಿಡ್ ಚಿಕಿತ್ಸೆ ಉಚಿತಗೊಳಿಸಿ ಮತ್ತು ಅದರ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಬೇಕು.
5. ಕೋವಿಡ್‌ನಿಂದ ಸಾವಿಗೀಡಾದ ಕುಟುಂಬಗಳಿಗೆ 25 ಲಕ್ಷ ಪರಿಹಾರ ನೀಡಬೇಕು ಎಂಬುದನ್ನು ಸೇರಿ ಹಲವು ಹಕ್ಕೊತ್ತಾಯಗಳನ್ನು ಸ್ಲಂ ಜನಾಂದೋಲನ ಸರ್ಕಾರ ಮುಂದಿಟ್ಟಿದೆ.


ಇದನ್ನೂ ಓದಿ: ಇದು ದುಡಿಯುವ ಜನರನ್ನು ಅವಮಾನಿಸುವ ಪ್ಯಾಕೇಜ್: ಜನಾಗ್ರಹ ಆಂದೋಲನ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....