Homeಕರೋನಾ ತಲ್ಲಣಕೊರೊನಾ ಪ್ಯಾಕೇಜ್‌ನಲ್ಲಿ ಸ್ಲಂ ನಿವಾಸಿಗಳ ನಿರ್ಲಕ್ಷ್ಯ: ಪ್ರತಿಭಟನೆ

ಕೊರೊನಾ ಪ್ಯಾಕೇಜ್‌ನಲ್ಲಿ ಸ್ಲಂ ನಿವಾಸಿಗಳ ನಿರ್ಲಕ್ಷ್ಯ: ಪ್ರತಿಭಟನೆ

- Advertisement -
- Advertisement -

ಲಾಕ್‌ಡೌನ್ ಕಾರಣಕ್ಕೆ ರಾಜ್ಯ ಸರ್ಕಾರ ಘೋಷಿಸಿಲಾದ 1250 ಕೋಟಿ ಆರ್ಥಿಕ ಪ್ಯಾಕೇಜ್‌ನಲ್ಲಿ ಸ್ಲಂ ನಿವಾಸಿಗಳನ್ನು ಕಡೆಗಣಿಸಿರುವುದನ್ನು ಖಂಡಿಸಿ ಇಂದು ಸ್ಲಂ ಜನಾಂದೋಲನ ಕರ್ನಾಟಕದ ವತಿಯಿಂದ ರಾಜ್ಯಾದ್ಯಂತ ಮನೆ ಮನೆಯಿಂದಲೇ ಪ್ರತಿಭಟನೆ ನಡೆಯಿತು.

ನಗರದ ಜನಸಂಖ್ಯೆ ಶೇ 45% ಜನರು ಕೊಳಗೇರಿಗಳಲ್ಲಿ ವಾಸಿಸುತ್ತಿದ್ದಾರೆ. ನಗರ ವಂಚಿತ ಸಮುದಾಯಗಳಿಗೆ ಅಂದರೆ ಬಡತನ ರೇಖೆಯಿಂದ ಕೆಳಗಿರುವ ಬಿಪಿಎಲ್ ಕುಟುಂಬಗಳಿಗೆ ಪ್ರಾಧನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಲ್ಲಿ ಕೇಂದ್ರ ಸರ್ಕಾರದಿಂದ ಮೇ ಹಾಗೂ ಜೂನ್ ತಿಂಗಳಿಗೆ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ 5 ಕೆಜಿ ಅಕ್ಕಿ ಉಚಿತ ವಿಸ್ತರಣೆಯನ್ನು ಈಗಾಗಲೇ ಪ್ರಧಾನ ಮಂತ್ರಿಗಳ ಘೋಷಿಸಿರುವುದನ್ನೇ ಪುನರ್ ವ್ಯಾಖ್ಯಾನಿಸುವುದನ್ನು ಬಿಟ್ಟರೇ ಬೇರಾವುದೇ ವಿಶೇಷತೆಯನ್ನು ನೀಡಿಲ್ಲ ಎಂದು ಸ್ಲಂ ನಿವಾಸಿಗಳು ಕಿಡಿಕಾರಿದ್ದಾರೆ.

ರಾಯಚೂರಿನಲ್ಲಿ ಪ್ರತಿಭಟನೆ

ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯ ರಾಜ್ಯ ಸಂಚಾಲಕರಾದ ಎ.ನರಸಿಂಹಮೂರ್ತಿಯವರು ಮಾತನಾಡಿ “ಕೋವಿಡನ್ನು ರಾಷ್ಟ್ರೀಯಾ ವಿಪತ್ತು ಎಂದು ಘೋಷಿಸಿರುವ ಸರ್ಕಾರ ರಾಷ್ಟ್ರೀಯ ವಿಪತ್ತಿನ ಮಾನದಂಡಗಳ ಅನ್ವಯ ಪರಿಹಾರವನ್ನು ಘೋಷಿಸಬೇಕು. ಈ ಪ್ಯಾಕೇಜ್ ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವ ಘೋಷಣೆಯಾಗಿದೆ. ಇದರಿಂದ ನಗರ ವಂಚಿತ ಸಮುದಾಯಗಳಿಗೆ ಯಾವುದೇ ರೀತಿಯ ಪ್ರಯೋಜನ ದೊರಕುವುದಿಲ್ಲ” ಎಂದಿದ್ದಾರೆ.

1. ರಾಜ್ಯದ ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ಮತ್ತು ಸ್ಲಂ ನಿವಾಸಿಗಳಿಗೆ ಲಾಕ್‌ಡೌನ್ ಆರ್ಥಿಕ ಪರಿಹಾರವಾಗಿ ಮೂರು ತಿಂಗಳು ತಲಾ 10 ಸಾವಿರ ಭತ್ಯೆ ಘೋಷಿಸಬೇಕು.
2. ಸ್ಲಂ ನಿವಾಸಿಗಳಿಗೆ ರಾಷ್ಟ್ರೀಯಾ ವಿಪತ್ತು ಪರಿಹಾರದ ಮಾನದಂಡದಂತೆ ಮೂರು ತಿಂಗಳು (ಪಡಿತರ ವಿತರಣೆ ಹೊರತುಪಡಿಸಿ) ತಲಾ 10 ಕೆಜಿಯಂತೆ ಅಗತ್ಯ ವಸ್ತುಗಳನ್ನು ನೀಡಬೇಕು.
3. ರಾಜ್ಯ ಎಲ್ಲಾ ನಾಗರೀಕರಿಗೂ ಉಚಿತ ಲಸಿಕೆ ನೀಡಬೇಕು ಮತ್ತು ಮನೆ ಮನೆಗೆ ಲಸಿಕೆ ಅಭಿಯಾನ ಪ್ರಾರಂಭಿಸಬೇಕು.
4. ಕೋವಿಡ್ ಚಿಕಿತ್ಸೆ ಉಚಿತಗೊಳಿಸಿ ಮತ್ತು ಅದರ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಬೇಕು.
5. ಕೋವಿಡ್‌ನಿಂದ ಸಾವಿಗೀಡಾದ ಕುಟುಂಬಗಳಿಗೆ 25 ಲಕ್ಷ ಪರಿಹಾರ ನೀಡಬೇಕು ಎಂಬುದನ್ನು ಸೇರಿ ಹಲವು ಹಕ್ಕೊತ್ತಾಯಗಳನ್ನು ಸ್ಲಂ ಜನಾಂದೋಲನ ಸರ್ಕಾರ ಮುಂದಿಟ್ಟಿದೆ.


ಇದನ್ನೂ ಓದಿ: ಇದು ದುಡಿಯುವ ಜನರನ್ನು ಅವಮಾನಿಸುವ ಪ್ಯಾಕೇಜ್: ಜನಾಗ್ರಹ ಆಂದೋಲನ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...