Homeಕರ್ನಾಟಕಇಂದಿರಾ ಕ್ಯಾಂಟೀನ್ ಬಗ್ಗೆ ನಿರ್ಲಕ್ಷ್ಯತೆ; ಬಡವರ ಅನ್ನ ಕಸಿಯುತ್ತಿರುವ ಬಿಜೆಪಿ- ಆಮ್ ಆದ್ಮಿ ಪಕ್ಷ ಆಕ್ರೋಶ

ಇಂದಿರಾ ಕ್ಯಾಂಟೀನ್ ಬಗ್ಗೆ ನಿರ್ಲಕ್ಷ್ಯತೆ; ಬಡವರ ಅನ್ನ ಕಸಿಯುತ್ತಿರುವ ಬಿಜೆಪಿ- ಆಮ್ ಆದ್ಮಿ ಪಕ್ಷ ಆಕ್ರೋಶ

ಬೆಂಗಳೂರು ನಗರದಾದ್ಯಂತ ಇರುವ 174 ಕ್ಯಾಂಟೀನ್ ಹಾಗೂ 15 ಮೊಬೈಲ್ ಕ್ಯಾಂಟೀನ್‌ಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸದೆ, ಗುತ್ತಿಗೆದಾರರಿಗೆ ಹಣ ಪಾವತಿ ಮಾಡದೆ ನಿರ್ಲಕ್ಷ್ಯ, ತಿರಸ್ಕಾರ ಭಾವದಿಂದ ನೋಡಲಾಗುತ್ತಿದೆ

- Advertisement -
- Advertisement -

ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ಅಧಿಕಾರಕ್ಕೆ ಬಂದ ದಿನದಿಂದ ಇಂದಿರಾ ಕ್ಯಾಂಟೀನ್ ಮುಚ್ಚಲು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹವಣಿಸುತ್ತಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇದಕ್ಕೆ ಇಂಬು ನೀಡುತ್ತಿದ್ದು, ಬಡವರ ಪಾಲಿನ ಅನ್ನ ಕಸಿಯುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆರೋಪಿಸಿದರು.

ಇಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, “ಬೆಂಗಳೂರು ನಗರದಾದ್ಯಂತ ಇರುವ 174 ಕ್ಯಾಂಟೀನ್ ಹಾಗೂ 15 ಮೊಬೈಲ್ ಕ್ಯಾಂಟೀನ್‌ಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸದೆ, ಗುತ್ತಿಗೆದಾರರಿಗೆ ಹಣ ಪಾವತಿ ಮಾಡದೆ ನಿರ್ಲಕ್ಷ್ಯ, ತಿರಸ್ಕಾರ ಭಾವದಿಂದ ನೋಡಲಾಗುತ್ತಿದೆ” ಎಂದರು.

ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಡವರಿಗಾಗಿ ಎಲ್ಲಾ ಇಂದಿರಾ ಕ್ಯಾಂಟೀನ್ ಇಡೀ ದಿವಸ ಊಟ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದಿದ್ದರು.

ಇದನ್ನೂ ಓದಿ: ಲಾಕ್‌ಡೌನ್‌ನಿಂದ ತೊಂದರೆಗೊಳಗಾಗುವವರಿಗೆ ಆಹಾರ ಒದಗಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

“ಲಾಕ್‌ಡೌನ್ ಸಂದರ್ಭದಲ್ಲಿ ಬಡವರಿಗೆ, ವಲಸೆ ಕಾರ್ಮಿಕರಿಗೆ ಊಟ ನೀಡಿ ಎಂದು ಆಮ್ ಆದ್ಮಿ ಪಕ್ಷ ಎಷ್ಟೇ ಒತ್ತಾಯಿಸಿದರೂ ಉಚಿತವಾಗಿ ಊಟ ನೀಡಲಿಲ್ಲ. ದೆಹಲಿಯಲ್ಲಿ ಇಷ್ಟು ಸುಸಜ್ಜಿತವಾದ ವ್ಯವಸ್ಥೆ ಇಲ್ಲದಿದ್ದರೂ ಪ್ರತಿದಿನ 13 ಲಕ್ಷ ಜನರಿಗೆ ಊಟ ನೀಡಲಾಗುತ್ತಿತ್ತು. ಆದರೆ ನಮ್ಮ ರಾಜ್ಯದಲ್ಲಿ ವ್ಯವಸ್ಥಿತವಾಗಿ ಇರುವ ಯೋಜನೆಯನ್ನು ಉಪಯೋಗಿಸಿಕೊಳ್ಳದೆ ಬಡವರನ್ನು ಹಸಿವಿನಲ್ಲಿ ಮಲಗಿಸಿದ್ದೇ ಬಿಜೆಪಿ ಸರ್ಕಾರದ ಸಾಧನೆ. ಮುಖ್ಯಮಂತ್ರಿಗಳಿಗೆ, ಸಚಿವ ಸುರೇಶ್ ಕುಮಾರ್ ಅವರಿಗೆ ನಾಚಿಕೆ ಆಗಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂದಿರಾ ಕ್ಯಾಂಟಿನ್‍ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ. ಹಾಗಾಗಿ ತನಿಖೆ ನಡೆಸಲು ಆದೇಶ ನೀಡುವುದಾಗಿಯೂ, ಇಂದಿರಾ ಕ್ಯಾಂಟೀನ್ ಮುಚ್ಚುವುದಾಗಿಯೂ ಯಡಿಯೂರಪ್ಪನವರು ಪ್ರಸ್ತಾಪಿಸಿದ್ದರು

ಸಚಿವರಾದ ಸುರೇಶ್ ಕುಮಾರ್, ಅಶ್ವಥ್ ನಾರಾಯಣ ಅವರು ಮೊದಲಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಇಂದಿರಾ ಕ್ಯಾಂಟೀನ್ ಮುಚ್ಚಲು ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಾಮಮಾರ್ಗದ ಮೂಲಕ, ಮೂಲ ಸೌಕರ್ಯಗಳಿಗೆ ಕತ್ತರಿ ಹಾಕುವ ಮೂಲಕ ಹಾಗೂ ಸರಿಯಾಗಿ ಬಿಲ್‌ಗಳನ್ನು ಬಿಡುಗಡೆ ಮಾಡದೆ ಉಸಿರುಗಟ್ಟಿಸಲಾಗುತ್ತಿದೆ. ಬಡವರ ಅನ್ನ ಕಿತ್ತುಕೊಳ್ಳುವುದಕ್ಕೆ ನೇರ ಕಾರಣ ಸಚಿವ ಸುರೇಶ್ ಕುಮಾರ್ ಎಂದರು.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ನಲ್ಲಿ ಇಡೀ ದಿನ ಬಡವರಿಗೆ ಉಚಿತ ಊಟ – ಯಡಿಯೂರಪ್ಪ

ಇಂದಿರಾ ಕ್ಯಾಂಟೀನ್‌ ಊಟದ ಗುತ್ತಿಗೆ ಪಡೆದಿರುವ ಚೆಫ್ ಟಾಕ್ ಮತ್ತು ರಿವಾಡ್ರ್ಸ್ ಎಂಬ ಸಂಸ್ಥೆಗಳ ವಿರುದ್ದ, ಇಲ್ಲಿ ಅವ್ಯವಹಾರ ನಡೆದಿದೆ ಎಂದು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಹಣಕಾಸು ವಿಭಾಗದ ಜಂಟಿ ಆಯುಕ್ತ ವೆಂಕಟೇಶ್ ಅವರು ಸಾಕಷ್ಟು ಬಾರಿ ದೂರು ದಾಖಲಿಸಿದ್ದರು. ಈ ಬಗ್ಗೆಯೂ ತನಿಖೆ ನಡೆಸಿಲ್ಲ. ಗುತ್ತಿಗೆದಾರರನ್ನು ಬದಲಾಯಿಸಲಾಗುವುದು ಎಂದು ಹೇಳಿ ಆ ಕೆಲಸವನ್ನೂ ಮಾಡದೆ ಏಕೆ ವಿಳಂಬ ಮಾಡುತ್ತಿದ್ದೀರಿ? ಬಡವರ, ಕೂಲಿ ಕಾರ್ಮಿಕರ, ನಿರ್ಗತಿಕರ ಪಾಲಿನ ಅನ್ನಕ್ಕೂ ಕನ್ನ ಹಾಕುವ ಬಿಜೆಪಿಯ ಈ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ಯಾವುದೇ ಜನಪರ ಯೋಚನೆಯಲ್ಲಿ ಅಕ್ರಮಗಳು ಅಥವಾ ಹಗರಣಗಳು ನಡೆದರೆ ಹಗರಣ, ಅಕ್ರಮಗಳ ಬಗೆಗೆ ತನಿಖೆ ನಡೆಸಬೇಕೆ ಹೊರತು ಯೋಜನೆಯನ್ನೇ ರದ್ದುಗೊಳಿಸಬಾರದು ಎಂಬ ಸಾಮಾನ್ಯ ಜ್ಞಾನವೂ ಇಲ್ಲದಂತಾಗಿದೆ

ಈ ಕೂಡಲೇ ಇಂದಿರಾ ಕ್ಯಾಂಟೀನ್‌ಗೆ ಬಾಕಿ ಉಳಿಸಿಕೊಂಡಿರುವ ಎಲ್ಲಾ ಬಿಲ್‌ಗಳನ್ನು ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ಸರ್ಕಾರ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. ಗೋಷ್ಠಿಯಲ್ಲಿ ವಸಂತ ನಗರ ವಾರ್ಡ್ ಅಧ್ಯಕ್ಷೆ ಜನನಿ ಭರತ್ ಇದ್ದರು.


ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ದೊಳಗ ಊಟ ಮಾಡಿದಿವಿ ಅಂದರೆ ಕಮಲ ಪಕ್ಷಕ್ಕೆ ಆಗಿ ಬರೋದಿಲ್ಲ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...