Homeಕರ್ನಾಟಕಇಂದಿರಾ ಕ್ಯಾಂಟೀನ್ ಬಗ್ಗೆ ನಿರ್ಲಕ್ಷ್ಯತೆ; ಬಡವರ ಅನ್ನ ಕಸಿಯುತ್ತಿರುವ ಬಿಜೆಪಿ- ಆಮ್ ಆದ್ಮಿ ಪಕ್ಷ ಆಕ್ರೋಶ

ಇಂದಿರಾ ಕ್ಯಾಂಟೀನ್ ಬಗ್ಗೆ ನಿರ್ಲಕ್ಷ್ಯತೆ; ಬಡವರ ಅನ್ನ ಕಸಿಯುತ್ತಿರುವ ಬಿಜೆಪಿ- ಆಮ್ ಆದ್ಮಿ ಪಕ್ಷ ಆಕ್ರೋಶ

ಬೆಂಗಳೂರು ನಗರದಾದ್ಯಂತ ಇರುವ 174 ಕ್ಯಾಂಟೀನ್ ಹಾಗೂ 15 ಮೊಬೈಲ್ ಕ್ಯಾಂಟೀನ್‌ಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸದೆ, ಗುತ್ತಿಗೆದಾರರಿಗೆ ಹಣ ಪಾವತಿ ಮಾಡದೆ ನಿರ್ಲಕ್ಷ್ಯ, ತಿರಸ್ಕಾರ ಭಾವದಿಂದ ನೋಡಲಾಗುತ್ತಿದೆ

- Advertisement -
- Advertisement -

ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ಅಧಿಕಾರಕ್ಕೆ ಬಂದ ದಿನದಿಂದ ಇಂದಿರಾ ಕ್ಯಾಂಟೀನ್ ಮುಚ್ಚಲು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹವಣಿಸುತ್ತಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇದಕ್ಕೆ ಇಂಬು ನೀಡುತ್ತಿದ್ದು, ಬಡವರ ಪಾಲಿನ ಅನ್ನ ಕಸಿಯುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆರೋಪಿಸಿದರು.

ಇಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, “ಬೆಂಗಳೂರು ನಗರದಾದ್ಯಂತ ಇರುವ 174 ಕ್ಯಾಂಟೀನ್ ಹಾಗೂ 15 ಮೊಬೈಲ್ ಕ್ಯಾಂಟೀನ್‌ಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸದೆ, ಗುತ್ತಿಗೆದಾರರಿಗೆ ಹಣ ಪಾವತಿ ಮಾಡದೆ ನಿರ್ಲಕ್ಷ್ಯ, ತಿರಸ್ಕಾರ ಭಾವದಿಂದ ನೋಡಲಾಗುತ್ತಿದೆ” ಎಂದರು.

ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಡವರಿಗಾಗಿ ಎಲ್ಲಾ ಇಂದಿರಾ ಕ್ಯಾಂಟೀನ್ ಇಡೀ ದಿವಸ ಊಟ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದಿದ್ದರು.

ಇದನ್ನೂ ಓದಿ: ಲಾಕ್‌ಡೌನ್‌ನಿಂದ ತೊಂದರೆಗೊಳಗಾಗುವವರಿಗೆ ಆಹಾರ ಒದಗಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

“ಲಾಕ್‌ಡೌನ್ ಸಂದರ್ಭದಲ್ಲಿ ಬಡವರಿಗೆ, ವಲಸೆ ಕಾರ್ಮಿಕರಿಗೆ ಊಟ ನೀಡಿ ಎಂದು ಆಮ್ ಆದ್ಮಿ ಪಕ್ಷ ಎಷ್ಟೇ ಒತ್ತಾಯಿಸಿದರೂ ಉಚಿತವಾಗಿ ಊಟ ನೀಡಲಿಲ್ಲ. ದೆಹಲಿಯಲ್ಲಿ ಇಷ್ಟು ಸುಸಜ್ಜಿತವಾದ ವ್ಯವಸ್ಥೆ ಇಲ್ಲದಿದ್ದರೂ ಪ್ರತಿದಿನ 13 ಲಕ್ಷ ಜನರಿಗೆ ಊಟ ನೀಡಲಾಗುತ್ತಿತ್ತು. ಆದರೆ ನಮ್ಮ ರಾಜ್ಯದಲ್ಲಿ ವ್ಯವಸ್ಥಿತವಾಗಿ ಇರುವ ಯೋಜನೆಯನ್ನು ಉಪಯೋಗಿಸಿಕೊಳ್ಳದೆ ಬಡವರನ್ನು ಹಸಿವಿನಲ್ಲಿ ಮಲಗಿಸಿದ್ದೇ ಬಿಜೆಪಿ ಸರ್ಕಾರದ ಸಾಧನೆ. ಮುಖ್ಯಮಂತ್ರಿಗಳಿಗೆ, ಸಚಿವ ಸುರೇಶ್ ಕುಮಾರ್ ಅವರಿಗೆ ನಾಚಿಕೆ ಆಗಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂದಿರಾ ಕ್ಯಾಂಟಿನ್‍ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ. ಹಾಗಾಗಿ ತನಿಖೆ ನಡೆಸಲು ಆದೇಶ ನೀಡುವುದಾಗಿಯೂ, ಇಂದಿರಾ ಕ್ಯಾಂಟೀನ್ ಮುಚ್ಚುವುದಾಗಿಯೂ ಯಡಿಯೂರಪ್ಪನವರು ಪ್ರಸ್ತಾಪಿಸಿದ್ದರು

ಸಚಿವರಾದ ಸುರೇಶ್ ಕುಮಾರ್, ಅಶ್ವಥ್ ನಾರಾಯಣ ಅವರು ಮೊದಲಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಇಂದಿರಾ ಕ್ಯಾಂಟೀನ್ ಮುಚ್ಚಲು ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಾಮಮಾರ್ಗದ ಮೂಲಕ, ಮೂಲ ಸೌಕರ್ಯಗಳಿಗೆ ಕತ್ತರಿ ಹಾಕುವ ಮೂಲಕ ಹಾಗೂ ಸರಿಯಾಗಿ ಬಿಲ್‌ಗಳನ್ನು ಬಿಡುಗಡೆ ಮಾಡದೆ ಉಸಿರುಗಟ್ಟಿಸಲಾಗುತ್ತಿದೆ. ಬಡವರ ಅನ್ನ ಕಿತ್ತುಕೊಳ್ಳುವುದಕ್ಕೆ ನೇರ ಕಾರಣ ಸಚಿವ ಸುರೇಶ್ ಕುಮಾರ್ ಎಂದರು.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ನಲ್ಲಿ ಇಡೀ ದಿನ ಬಡವರಿಗೆ ಉಚಿತ ಊಟ – ಯಡಿಯೂರಪ್ಪ

ಇಂದಿರಾ ಕ್ಯಾಂಟೀನ್‌ ಊಟದ ಗುತ್ತಿಗೆ ಪಡೆದಿರುವ ಚೆಫ್ ಟಾಕ್ ಮತ್ತು ರಿವಾಡ್ರ್ಸ್ ಎಂಬ ಸಂಸ್ಥೆಗಳ ವಿರುದ್ದ, ಇಲ್ಲಿ ಅವ್ಯವಹಾರ ನಡೆದಿದೆ ಎಂದು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಹಣಕಾಸು ವಿಭಾಗದ ಜಂಟಿ ಆಯುಕ್ತ ವೆಂಕಟೇಶ್ ಅವರು ಸಾಕಷ್ಟು ಬಾರಿ ದೂರು ದಾಖಲಿಸಿದ್ದರು. ಈ ಬಗ್ಗೆಯೂ ತನಿಖೆ ನಡೆಸಿಲ್ಲ. ಗುತ್ತಿಗೆದಾರರನ್ನು ಬದಲಾಯಿಸಲಾಗುವುದು ಎಂದು ಹೇಳಿ ಆ ಕೆಲಸವನ್ನೂ ಮಾಡದೆ ಏಕೆ ವಿಳಂಬ ಮಾಡುತ್ತಿದ್ದೀರಿ? ಬಡವರ, ಕೂಲಿ ಕಾರ್ಮಿಕರ, ನಿರ್ಗತಿಕರ ಪಾಲಿನ ಅನ್ನಕ್ಕೂ ಕನ್ನ ಹಾಕುವ ಬಿಜೆಪಿಯ ಈ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ಯಾವುದೇ ಜನಪರ ಯೋಚನೆಯಲ್ಲಿ ಅಕ್ರಮಗಳು ಅಥವಾ ಹಗರಣಗಳು ನಡೆದರೆ ಹಗರಣ, ಅಕ್ರಮಗಳ ಬಗೆಗೆ ತನಿಖೆ ನಡೆಸಬೇಕೆ ಹೊರತು ಯೋಜನೆಯನ್ನೇ ರದ್ದುಗೊಳಿಸಬಾರದು ಎಂಬ ಸಾಮಾನ್ಯ ಜ್ಞಾನವೂ ಇಲ್ಲದಂತಾಗಿದೆ

ಈ ಕೂಡಲೇ ಇಂದಿರಾ ಕ್ಯಾಂಟೀನ್‌ಗೆ ಬಾಕಿ ಉಳಿಸಿಕೊಂಡಿರುವ ಎಲ್ಲಾ ಬಿಲ್‌ಗಳನ್ನು ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ಸರ್ಕಾರ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. ಗೋಷ್ಠಿಯಲ್ಲಿ ವಸಂತ ನಗರ ವಾರ್ಡ್ ಅಧ್ಯಕ್ಷೆ ಜನನಿ ಭರತ್ ಇದ್ದರು.


ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ದೊಳಗ ಊಟ ಮಾಡಿದಿವಿ ಅಂದರೆ ಕಮಲ ಪಕ್ಷಕ್ಕೆ ಆಗಿ ಬರೋದಿಲ್ಲ…!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ಸರ್ಕಾರ 5ಜಿ ಮೆಗಾ ಹಗರಣವನ್ನು ರೂಪಿಸುತ್ತಿದೆ: ಎಎಪಿ ಮುಖಂಡ ಸಂಜಯ್ ಸಿಂಗ್

0
2ಜಿ ಸ್ಪೆಕ್ಟ್ರಮ್ ಪ್ರಕರಣದಲ್ಲಿ 2012ರ ತೀರ್ಪನ್ನು ಮಾರ್ಪಾಡು ಮಾಡುವಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ಅವರು ಪ್ರಧಾನಿ ನರೇಂದ್ರ...