Homeಕರ್ನಾಟಕಇಂದಿರಾ ಕ್ಯಾಂಟೀನ್ ಬಗ್ಗೆ ನಿರ್ಲಕ್ಷ್ಯತೆ; ಬಡವರ ಅನ್ನ ಕಸಿಯುತ್ತಿರುವ ಬಿಜೆಪಿ- ಆಮ್ ಆದ್ಮಿ ಪಕ್ಷ ಆಕ್ರೋಶ

ಇಂದಿರಾ ಕ್ಯಾಂಟೀನ್ ಬಗ್ಗೆ ನಿರ್ಲಕ್ಷ್ಯತೆ; ಬಡವರ ಅನ್ನ ಕಸಿಯುತ್ತಿರುವ ಬಿಜೆಪಿ- ಆಮ್ ಆದ್ಮಿ ಪಕ್ಷ ಆಕ್ರೋಶ

ಬೆಂಗಳೂರು ನಗರದಾದ್ಯಂತ ಇರುವ 174 ಕ್ಯಾಂಟೀನ್ ಹಾಗೂ 15 ಮೊಬೈಲ್ ಕ್ಯಾಂಟೀನ್‌ಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸದೆ, ಗುತ್ತಿಗೆದಾರರಿಗೆ ಹಣ ಪಾವತಿ ಮಾಡದೆ ನಿರ್ಲಕ್ಷ್ಯ, ತಿರಸ್ಕಾರ ಭಾವದಿಂದ ನೋಡಲಾಗುತ್ತಿದೆ

- Advertisement -
- Advertisement -

ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ಅಧಿಕಾರಕ್ಕೆ ಬಂದ ದಿನದಿಂದ ಇಂದಿರಾ ಕ್ಯಾಂಟೀನ್ ಮುಚ್ಚಲು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹವಣಿಸುತ್ತಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇದಕ್ಕೆ ಇಂಬು ನೀಡುತ್ತಿದ್ದು, ಬಡವರ ಪಾಲಿನ ಅನ್ನ ಕಸಿಯುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆರೋಪಿಸಿದರು.

ಇಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, “ಬೆಂಗಳೂರು ನಗರದಾದ್ಯಂತ ಇರುವ 174 ಕ್ಯಾಂಟೀನ್ ಹಾಗೂ 15 ಮೊಬೈಲ್ ಕ್ಯಾಂಟೀನ್‌ಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸದೆ, ಗುತ್ತಿಗೆದಾರರಿಗೆ ಹಣ ಪಾವತಿ ಮಾಡದೆ ನಿರ್ಲಕ್ಷ್ಯ, ತಿರಸ್ಕಾರ ಭಾವದಿಂದ ನೋಡಲಾಗುತ್ತಿದೆ” ಎಂದರು.

ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಡವರಿಗಾಗಿ ಎಲ್ಲಾ ಇಂದಿರಾ ಕ್ಯಾಂಟೀನ್ ಇಡೀ ದಿವಸ ಊಟ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದಿದ್ದರು.

ಇದನ್ನೂ ಓದಿ: ಲಾಕ್‌ಡೌನ್‌ನಿಂದ ತೊಂದರೆಗೊಳಗಾಗುವವರಿಗೆ ಆಹಾರ ಒದಗಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

“ಲಾಕ್‌ಡೌನ್ ಸಂದರ್ಭದಲ್ಲಿ ಬಡವರಿಗೆ, ವಲಸೆ ಕಾರ್ಮಿಕರಿಗೆ ಊಟ ನೀಡಿ ಎಂದು ಆಮ್ ಆದ್ಮಿ ಪಕ್ಷ ಎಷ್ಟೇ ಒತ್ತಾಯಿಸಿದರೂ ಉಚಿತವಾಗಿ ಊಟ ನೀಡಲಿಲ್ಲ. ದೆಹಲಿಯಲ್ಲಿ ಇಷ್ಟು ಸುಸಜ್ಜಿತವಾದ ವ್ಯವಸ್ಥೆ ಇಲ್ಲದಿದ್ದರೂ ಪ್ರತಿದಿನ 13 ಲಕ್ಷ ಜನರಿಗೆ ಊಟ ನೀಡಲಾಗುತ್ತಿತ್ತು. ಆದರೆ ನಮ್ಮ ರಾಜ್ಯದಲ್ಲಿ ವ್ಯವಸ್ಥಿತವಾಗಿ ಇರುವ ಯೋಜನೆಯನ್ನು ಉಪಯೋಗಿಸಿಕೊಳ್ಳದೆ ಬಡವರನ್ನು ಹಸಿವಿನಲ್ಲಿ ಮಲಗಿಸಿದ್ದೇ ಬಿಜೆಪಿ ಸರ್ಕಾರದ ಸಾಧನೆ. ಮುಖ್ಯಮಂತ್ರಿಗಳಿಗೆ, ಸಚಿವ ಸುರೇಶ್ ಕುಮಾರ್ ಅವರಿಗೆ ನಾಚಿಕೆ ಆಗಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂದಿರಾ ಕ್ಯಾಂಟಿನ್‍ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ. ಹಾಗಾಗಿ ತನಿಖೆ ನಡೆಸಲು ಆದೇಶ ನೀಡುವುದಾಗಿಯೂ, ಇಂದಿರಾ ಕ್ಯಾಂಟೀನ್ ಮುಚ್ಚುವುದಾಗಿಯೂ ಯಡಿಯೂರಪ್ಪನವರು ಪ್ರಸ್ತಾಪಿಸಿದ್ದರು

ಸಚಿವರಾದ ಸುರೇಶ್ ಕುಮಾರ್, ಅಶ್ವಥ್ ನಾರಾಯಣ ಅವರು ಮೊದಲಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಇಂದಿರಾ ಕ್ಯಾಂಟೀನ್ ಮುಚ್ಚಲು ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಾಮಮಾರ್ಗದ ಮೂಲಕ, ಮೂಲ ಸೌಕರ್ಯಗಳಿಗೆ ಕತ್ತರಿ ಹಾಕುವ ಮೂಲಕ ಹಾಗೂ ಸರಿಯಾಗಿ ಬಿಲ್‌ಗಳನ್ನು ಬಿಡುಗಡೆ ಮಾಡದೆ ಉಸಿರುಗಟ್ಟಿಸಲಾಗುತ್ತಿದೆ. ಬಡವರ ಅನ್ನ ಕಿತ್ತುಕೊಳ್ಳುವುದಕ್ಕೆ ನೇರ ಕಾರಣ ಸಚಿವ ಸುರೇಶ್ ಕುಮಾರ್ ಎಂದರು.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ನಲ್ಲಿ ಇಡೀ ದಿನ ಬಡವರಿಗೆ ಉಚಿತ ಊಟ – ಯಡಿಯೂರಪ್ಪ

ಇಂದಿರಾ ಕ್ಯಾಂಟೀನ್‌ ಊಟದ ಗುತ್ತಿಗೆ ಪಡೆದಿರುವ ಚೆಫ್ ಟಾಕ್ ಮತ್ತು ರಿವಾಡ್ರ್ಸ್ ಎಂಬ ಸಂಸ್ಥೆಗಳ ವಿರುದ್ದ, ಇಲ್ಲಿ ಅವ್ಯವಹಾರ ನಡೆದಿದೆ ಎಂದು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಹಣಕಾಸು ವಿಭಾಗದ ಜಂಟಿ ಆಯುಕ್ತ ವೆಂಕಟೇಶ್ ಅವರು ಸಾಕಷ್ಟು ಬಾರಿ ದೂರು ದಾಖಲಿಸಿದ್ದರು. ಈ ಬಗ್ಗೆಯೂ ತನಿಖೆ ನಡೆಸಿಲ್ಲ. ಗುತ್ತಿಗೆದಾರರನ್ನು ಬದಲಾಯಿಸಲಾಗುವುದು ಎಂದು ಹೇಳಿ ಆ ಕೆಲಸವನ್ನೂ ಮಾಡದೆ ಏಕೆ ವಿಳಂಬ ಮಾಡುತ್ತಿದ್ದೀರಿ? ಬಡವರ, ಕೂಲಿ ಕಾರ್ಮಿಕರ, ನಿರ್ಗತಿಕರ ಪಾಲಿನ ಅನ್ನಕ್ಕೂ ಕನ್ನ ಹಾಕುವ ಬಿಜೆಪಿಯ ಈ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ಯಾವುದೇ ಜನಪರ ಯೋಚನೆಯಲ್ಲಿ ಅಕ್ರಮಗಳು ಅಥವಾ ಹಗರಣಗಳು ನಡೆದರೆ ಹಗರಣ, ಅಕ್ರಮಗಳ ಬಗೆಗೆ ತನಿಖೆ ನಡೆಸಬೇಕೆ ಹೊರತು ಯೋಜನೆಯನ್ನೇ ರದ್ದುಗೊಳಿಸಬಾರದು ಎಂಬ ಸಾಮಾನ್ಯ ಜ್ಞಾನವೂ ಇಲ್ಲದಂತಾಗಿದೆ

ಈ ಕೂಡಲೇ ಇಂದಿರಾ ಕ್ಯಾಂಟೀನ್‌ಗೆ ಬಾಕಿ ಉಳಿಸಿಕೊಂಡಿರುವ ಎಲ್ಲಾ ಬಿಲ್‌ಗಳನ್ನು ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ಸರ್ಕಾರ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. ಗೋಷ್ಠಿಯಲ್ಲಿ ವಸಂತ ನಗರ ವಾರ್ಡ್ ಅಧ್ಯಕ್ಷೆ ಜನನಿ ಭರತ್ ಇದ್ದರು.


ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ದೊಳಗ ಊಟ ಮಾಡಿದಿವಿ ಅಂದರೆ ಕಮಲ ಪಕ್ಷಕ್ಕೆ ಆಗಿ ಬರೋದಿಲ್ಲ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...