Homeಕರ್ನಾಟಕಇಂದಿರಾ ಕ್ಯಾಂಟೀನ್ ಬಗ್ಗೆ ನಿರ್ಲಕ್ಷ್ಯತೆ; ಬಡವರ ಅನ್ನ ಕಸಿಯುತ್ತಿರುವ ಬಿಜೆಪಿ- ಆಮ್ ಆದ್ಮಿ ಪಕ್ಷ ಆಕ್ರೋಶ

ಇಂದಿರಾ ಕ್ಯಾಂಟೀನ್ ಬಗ್ಗೆ ನಿರ್ಲಕ್ಷ್ಯತೆ; ಬಡವರ ಅನ್ನ ಕಸಿಯುತ್ತಿರುವ ಬಿಜೆಪಿ- ಆಮ್ ಆದ್ಮಿ ಪಕ್ಷ ಆಕ್ರೋಶ

ಬೆಂಗಳೂರು ನಗರದಾದ್ಯಂತ ಇರುವ 174 ಕ್ಯಾಂಟೀನ್ ಹಾಗೂ 15 ಮೊಬೈಲ್ ಕ್ಯಾಂಟೀನ್‌ಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸದೆ, ಗುತ್ತಿಗೆದಾರರಿಗೆ ಹಣ ಪಾವತಿ ಮಾಡದೆ ನಿರ್ಲಕ್ಷ್ಯ, ತಿರಸ್ಕಾರ ಭಾವದಿಂದ ನೋಡಲಾಗುತ್ತಿದೆ

- Advertisement -
- Advertisement -

ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ಅಧಿಕಾರಕ್ಕೆ ಬಂದ ದಿನದಿಂದ ಇಂದಿರಾ ಕ್ಯಾಂಟೀನ್ ಮುಚ್ಚಲು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹವಣಿಸುತ್ತಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇದಕ್ಕೆ ಇಂಬು ನೀಡುತ್ತಿದ್ದು, ಬಡವರ ಪಾಲಿನ ಅನ್ನ ಕಸಿಯುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆರೋಪಿಸಿದರು.

ಇಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, “ಬೆಂಗಳೂರು ನಗರದಾದ್ಯಂತ ಇರುವ 174 ಕ್ಯಾಂಟೀನ್ ಹಾಗೂ 15 ಮೊಬೈಲ್ ಕ್ಯಾಂಟೀನ್‌ಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸದೆ, ಗುತ್ತಿಗೆದಾರರಿಗೆ ಹಣ ಪಾವತಿ ಮಾಡದೆ ನಿರ್ಲಕ್ಷ್ಯ, ತಿರಸ್ಕಾರ ಭಾವದಿಂದ ನೋಡಲಾಗುತ್ತಿದೆ” ಎಂದರು.

ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಡವರಿಗಾಗಿ ಎಲ್ಲಾ ಇಂದಿರಾ ಕ್ಯಾಂಟೀನ್ ಇಡೀ ದಿವಸ ಊಟ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದಿದ್ದರು.

ಇದನ್ನೂ ಓದಿ: ಲಾಕ್‌ಡೌನ್‌ನಿಂದ ತೊಂದರೆಗೊಳಗಾಗುವವರಿಗೆ ಆಹಾರ ಒದಗಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

“ಲಾಕ್‌ಡೌನ್ ಸಂದರ್ಭದಲ್ಲಿ ಬಡವರಿಗೆ, ವಲಸೆ ಕಾರ್ಮಿಕರಿಗೆ ಊಟ ನೀಡಿ ಎಂದು ಆಮ್ ಆದ್ಮಿ ಪಕ್ಷ ಎಷ್ಟೇ ಒತ್ತಾಯಿಸಿದರೂ ಉಚಿತವಾಗಿ ಊಟ ನೀಡಲಿಲ್ಲ. ದೆಹಲಿಯಲ್ಲಿ ಇಷ್ಟು ಸುಸಜ್ಜಿತವಾದ ವ್ಯವಸ್ಥೆ ಇಲ್ಲದಿದ್ದರೂ ಪ್ರತಿದಿನ 13 ಲಕ್ಷ ಜನರಿಗೆ ಊಟ ನೀಡಲಾಗುತ್ತಿತ್ತು. ಆದರೆ ನಮ್ಮ ರಾಜ್ಯದಲ್ಲಿ ವ್ಯವಸ್ಥಿತವಾಗಿ ಇರುವ ಯೋಜನೆಯನ್ನು ಉಪಯೋಗಿಸಿಕೊಳ್ಳದೆ ಬಡವರನ್ನು ಹಸಿವಿನಲ್ಲಿ ಮಲಗಿಸಿದ್ದೇ ಬಿಜೆಪಿ ಸರ್ಕಾರದ ಸಾಧನೆ. ಮುಖ್ಯಮಂತ್ರಿಗಳಿಗೆ, ಸಚಿವ ಸುರೇಶ್ ಕುಮಾರ್ ಅವರಿಗೆ ನಾಚಿಕೆ ಆಗಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂದಿರಾ ಕ್ಯಾಂಟಿನ್‍ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ. ಹಾಗಾಗಿ ತನಿಖೆ ನಡೆಸಲು ಆದೇಶ ನೀಡುವುದಾಗಿಯೂ, ಇಂದಿರಾ ಕ್ಯಾಂಟೀನ್ ಮುಚ್ಚುವುದಾಗಿಯೂ ಯಡಿಯೂರಪ್ಪನವರು ಪ್ರಸ್ತಾಪಿಸಿದ್ದರು

ಸಚಿವರಾದ ಸುರೇಶ್ ಕುಮಾರ್, ಅಶ್ವಥ್ ನಾರಾಯಣ ಅವರು ಮೊದಲಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಇಂದಿರಾ ಕ್ಯಾಂಟೀನ್ ಮುಚ್ಚಲು ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಾಮಮಾರ್ಗದ ಮೂಲಕ, ಮೂಲ ಸೌಕರ್ಯಗಳಿಗೆ ಕತ್ತರಿ ಹಾಕುವ ಮೂಲಕ ಹಾಗೂ ಸರಿಯಾಗಿ ಬಿಲ್‌ಗಳನ್ನು ಬಿಡುಗಡೆ ಮಾಡದೆ ಉಸಿರುಗಟ್ಟಿಸಲಾಗುತ್ತಿದೆ. ಬಡವರ ಅನ್ನ ಕಿತ್ತುಕೊಳ್ಳುವುದಕ್ಕೆ ನೇರ ಕಾರಣ ಸಚಿವ ಸುರೇಶ್ ಕುಮಾರ್ ಎಂದರು.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ನಲ್ಲಿ ಇಡೀ ದಿನ ಬಡವರಿಗೆ ಉಚಿತ ಊಟ – ಯಡಿಯೂರಪ್ಪ

ಇಂದಿರಾ ಕ್ಯಾಂಟೀನ್‌ ಊಟದ ಗುತ್ತಿಗೆ ಪಡೆದಿರುವ ಚೆಫ್ ಟಾಕ್ ಮತ್ತು ರಿವಾಡ್ರ್ಸ್ ಎಂಬ ಸಂಸ್ಥೆಗಳ ವಿರುದ್ದ, ಇಲ್ಲಿ ಅವ್ಯವಹಾರ ನಡೆದಿದೆ ಎಂದು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಹಣಕಾಸು ವಿಭಾಗದ ಜಂಟಿ ಆಯುಕ್ತ ವೆಂಕಟೇಶ್ ಅವರು ಸಾಕಷ್ಟು ಬಾರಿ ದೂರು ದಾಖಲಿಸಿದ್ದರು. ಈ ಬಗ್ಗೆಯೂ ತನಿಖೆ ನಡೆಸಿಲ್ಲ. ಗುತ್ತಿಗೆದಾರರನ್ನು ಬದಲಾಯಿಸಲಾಗುವುದು ಎಂದು ಹೇಳಿ ಆ ಕೆಲಸವನ್ನೂ ಮಾಡದೆ ಏಕೆ ವಿಳಂಬ ಮಾಡುತ್ತಿದ್ದೀರಿ? ಬಡವರ, ಕೂಲಿ ಕಾರ್ಮಿಕರ, ನಿರ್ಗತಿಕರ ಪಾಲಿನ ಅನ್ನಕ್ಕೂ ಕನ್ನ ಹಾಕುವ ಬಿಜೆಪಿಯ ಈ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ಯಾವುದೇ ಜನಪರ ಯೋಚನೆಯಲ್ಲಿ ಅಕ್ರಮಗಳು ಅಥವಾ ಹಗರಣಗಳು ನಡೆದರೆ ಹಗರಣ, ಅಕ್ರಮಗಳ ಬಗೆಗೆ ತನಿಖೆ ನಡೆಸಬೇಕೆ ಹೊರತು ಯೋಜನೆಯನ್ನೇ ರದ್ದುಗೊಳಿಸಬಾರದು ಎಂಬ ಸಾಮಾನ್ಯ ಜ್ಞಾನವೂ ಇಲ್ಲದಂತಾಗಿದೆ

ಈ ಕೂಡಲೇ ಇಂದಿರಾ ಕ್ಯಾಂಟೀನ್‌ಗೆ ಬಾಕಿ ಉಳಿಸಿಕೊಂಡಿರುವ ಎಲ್ಲಾ ಬಿಲ್‌ಗಳನ್ನು ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ಸರ್ಕಾರ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. ಗೋಷ್ಠಿಯಲ್ಲಿ ವಸಂತ ನಗರ ವಾರ್ಡ್ ಅಧ್ಯಕ್ಷೆ ಜನನಿ ಭರತ್ ಇದ್ದರು.


ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ದೊಳಗ ಊಟ ಮಾಡಿದಿವಿ ಅಂದರೆ ಕಮಲ ಪಕ್ಷಕ್ಕೆ ಆಗಿ ಬರೋದಿಲ್ಲ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...