Homeಮುಖಪುಟಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಕೊಡುಗೆ ಅವಿಸ್ಮರಣೀಯ- ವೆಂಕಯ್ಯ ನಾಯ್ಡು

ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಕೊಡುಗೆ ಅವಿಸ್ಮರಣೀಯ- ವೆಂಕಯ್ಯ ನಾಯ್ಡು

ಬಿಜೆಪಿಯ ಪ್ರಮುಖ ನಾಯಕರಲ್ಲಿ ಒಬ್ಬರಾಗಿರುವ ವೆಂಕಯ್ಯ ನಾಯ್ಡು ನೆಹರೂ ಅವರನ್ನು ಹೊಗಳಿ ಟ್ವೀಟ್ ಮಾಡಿದ್ದಾರೆ. ಆದರೆ ಮೋದಿ-ಶಾ ಜೋಡಿ ಯಾವಾಗಲೂ ನೆಹರೂ ಅವರನ್ನು ತೆಗಳುತ್ತಲೇ ಇರುತ್ತದೆ...

- Advertisement -
- Advertisement -

ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಜನ್ಮದಿನಾಚರಣೆಯಂದು ಅವರಿಗೆ ಗೌರವ ಸಲ್ಲಿಸಿದ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, “ಆಧುನಿಕ ಭಾರತವನ್ನು ನಿರ್ಮಿಸುವಲ್ಲಿ ಅವರು ನೀಡಿದ ಕೊಡುಗೆಯನ್ನು ಸದಾ ಸ್ಮರಿಸಲಾಗುವುದು” ಎಂದು ಹೇಳಿದರು.

ವೆಂಕಯ್ಯ ನಾಯ್ಹು ಮಕ್ಕಳ ದಿನಾಚರಣೆಯಂದು ಶುಭಾಶಯಗಳನ್ನು ತಿಳಿಸಿ, “ಇಂದು ನೆಹರೂ ಅವರ ಜನ್ಮದಿನಾಚರಣೆಯಂದು ಆಚರಿಸಲಾಗುತ್ತದೆ. ಇದು ರಾಷ್ಟ್ರದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಮತ್ತು ಮಕ್ಕಳ ಮೇಲಿನ ಪ್ರೀತಿಯ ಪ್ರತೀಕವಾಗಿದೆ” ಎಂದು ಹೇಳಿದರು.

ನೆಹರೂ ನವೆಂಬರ್ 14 1889 ರಲ್ಲಿ ಜನಿಸಿದರು. ಬಿಜೆಪಿಯ ಪ್ರಮುಖ ನಾಯಕರಲ್ಲಿ ಒಬ್ಬರಾಗಿರುವ ವೆಂಕಯ್ಯ ನಾಯ್ಡು ನೆಹರೂ ಅವರನ್ನು ಹೊಗಳಿ ಟ್ವೀಟ್ ಮಾಡಿದ್ದಾರೆ. ಆದರೆ ಮೋದಿ-ಶಾ ಜೋಡಿ ಯಾವಾಗಲೂ ನೆಹರೂ ಅವರನ್ನು ತೆಗಳುತ್ತಲೇ ಇರುತ್ತದೆ.

ಇದನ್ನೂ ಓದಿ: ನೆಹರೂ-ಶಾಸ್ತ್ರಿಗೆ ಸಂಬಂಧಿಸಿದ ವಿಷಯಗಳನ್ನು ಪಠ್ಯಕ್ರಮದಿಂದ ಕೈಬಿಟ್ಟ ಯುಪಿ ಸರ್ಕಾರ

“ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮ ದಿನಾಚರಣೆಯಂದು ಅವರಿಗೆ ನನ್ನ ನಮನಗಳು. ಆಧುನಿಕ ಭಾರತವನ್ನು ನಿರ್ಮಿಸುವಲ್ಲಿ ಅವರು ನೀಡಿದ ಕೊಡುಗೆಗಾಗಿ ಅವರನ್ನು ಯಾವಾಗಲೂ ಸ್ಮರಿಸಲಾಗುವುದು” ಎಂದು ಉಪ ರಾಷ್ಟ್ರಪತಿಯವರ ಟ್ವಿಟರ್‌ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ: ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ವೆಂಕಯ್ಯ ನಾಯ್ಡು ಮತ್ತೊಂದು ಟ್ವೀಟ್‌ನಲ್ಲಿ, ಮಕ್ಕಳು ದೇಶದ ಭವಿಷ್ಯ. ಅವರನ್ನು ಪ್ರೀತಿ ಮತ್ತು ಕಾಳಜಿಯಿಂದ ಪೋಷಿಸಬೇಕು ಎಂದು ಹೇಳಿದ್ದಾರೆ.

“ಪ್ರಾಮಾಣಿಕತೆ, ಸಮಗ್ರತೆ, ಹಿರಿಯರನ್ನು ಗೌರವಿಸುವುದರ ಜೊತೆಗೆ ಭಾರತೀಯ ಸಂಸ್ಕೃತಿಯ ಪ್ರಾಮುಖ್ಯತೆ ಮತ್ತು ಪ್ರಕೃತಿಯೊಂದಿಗೆ ಸಾಮರಸ್ಯದ ಸಹಬಾಳ್ವೆ ಮೌಲ್ಯಗಳನ್ನು ಮೊದಲಿನಿಂದಲೂ ಮಕ್ಕಳಲ್ಲಿ ಬೆಳೆಸಬೇಕು” ಎಂದು ಅವರು ಹೇಳಿದರು.


ಇದನ್ನೂ ಓದಿ: ಯಾರದೋ ಹಂಬಲಕ್ಕೆ ದೇಶ ವಿಭಜನೆ; ನೆಹರೂ ಮೇಲೆ ಮತ್ತೆ ದಾಳಿ ಮಾಡಿದ ಮೋದಿ..

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...