Homeಕರ್ನಾಟಕಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನೆಹರೂ ಫೋಟೋ- ಪರಿಚಯ ಕಿತ್ತೆಸೆದ ಬಿಜೆಪಿ ಸರ್ಕಾರ; ಜನಾಕ್ರೋಶ

ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನೆಹರೂ ಫೋಟೋ- ಪರಿಚಯ ಕಿತ್ತೆಸೆದ ಬಿಜೆಪಿ ಸರ್ಕಾರ; ಜನಾಕ್ರೋಶ

ಭಾರತದ ಮೊದಲ ಪ್ರಧಾನಿ, ಸ್ವಾತಂತ್ರ್ಯ ಹೋರಾಟಗಾರ ನೆಹರೂ ಅವರ ಫೋಟೋ ಹಾಗೂ ಪರಿಚಯವನ್ನು ರಾಜ್ಯ ಸರ್ಕಾರ ತನ್ನ ಜಾಹೀರಾತಿನಲ್ಲಿ ಕೈಬಿಟ್ಟಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

- Advertisement -
- Advertisement -

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ದಿನಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ಪಂಡಿತ್ ಜವಹರಲಾಲ್‌ ನೆಹರೂ ಅವರ ಪರಿಚಯ ನೀಡದೆ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಬ್ರಿಟಿಷರಲ್ಲಿ ಹಲವು ಭಾರಿ ಕ್ಷಮಾಪಣೆಗಳನ್ನು ಕೇಳಿದ ವಿ.ಡಿ.ಸಾವರ್ಕರ್‌ ಫೋಟೋ ಜೊತೆಗೆ ವಿವರಣೆಗಳನ್ನು ನೀಡಲಾಗಿದೆ. ಆದರೆ ಸ್ವಾತಂತ್ರ್ಯ ಭಾರತದ ಮೊದಲ ಪ್ರಧಾನಿ, ಸ್ವಾತಂತ್ರ್ಯ ಹೋರಾಟದಲ್ಲಿ ಹಲವು ಭಾರಿ ಜೈಲು ಸೇರಿದ್ದ ನೆಹರೂ ಅವರ ಕುರಿತು ಯಾವುದೇ ವಿವರಣೆಗಳು ಇಲ್ಲವಾಗಿವೆ.

ರಾಷ್ಟ್ರನಾಯಕರಾದ ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರಬೋಸ್‌, ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಚಂದ್ರಶೇಖರ್‌ ಆಜಾದ್‌, ಲಾಲಾ ಲಜ್‌ಪತ್‌ ರಾಯ್‌, ಬಾಲ ಗಂಗಾಧರ್‌ ತಿಲಕ್‌, ಬಿಪಿನ್‌ ಚಂದ್ರ ಪಾಲ್‌, ಡಾ.ಬಿ.ಆರ್‌.ಅಂಬೇಡ್ಕರ್‌, ಲಾಲ್‌ ಬಹದ್ದೂರ್‌ ಶಾಸ್ತ್ರಿ, ಲಾಲ್‌ ಬಹುದ್ದೂರ್‌ ಶಾಸ್ತ್ರಿ, ಮೌಲಾನ ಅಬ್ದುಲ್‌ ಕಲಾಂ ಆಜಾದ್‌ ಫೋಟೋಗಳ ಜೊತೆಗೆ ಕಿರುಪರಿಚಯವನ್ನು ನೀಡಲಾಗಿದೆ. ಹಾಗೆಯೇ ಸಾವರ್ಕರ್‌ ಫೋಟೋವನ್ನು ಹಾಕಿ, ‘ಕ್ರಾಂತಿಕಾರಿ’ ಎಂಬ ಬಿರುದನ್ನು ನೀಡಿ ಪರಿಚಯ ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೇಖಾ ಚಿತ್ರದ ರೀತಿಯಲ್ಲಿ ರಾಷ್ಟ್ರನಾಯಕರ ಚಿತ್ರಗಳನ್ನು ಬಳಸಲಾಗಿದ್ದು, ಅಲ್ಲಿ ಮಾತ್ರ ನೆಹರೂ ಅವರ ಚಿತ್ರವನ್ನು ಕಿರುದಾಗಿ ಬಳಸಲಾಗಿದೆ. ಸರ್ಕಾರದ ಸಣ್ಣತನವನ್ನು ಗಮನಿಸಿರುವ ನಾಡಿನ ಜನತೆ ಬೇಸರ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಚಿಂತಕ ಶ್ರೀನಿವಾಸ್ ಕಾರ್ಕಳ ಅವರು, “ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡದ್ದಕ್ಕಾಗಿ ಜವಾಹರಲಾಲ್ ನೆಹರೂ ಅವರನ್ನು ಬ್ರಿಟಿಷ್ ಸರಕಾರ 9 ಬಾರಿ ಬಂಧಿಸಿತ್ತು. ಒಟ್ಟು 3259 ದಿನ (ಸುಮಾರು 9 ವರ್ಷ) ಜೈಲಿನಲ್ಲಿ ಇರಿಸಿತ್ತು”  ಎಂದು ಮಾರ್ಮಿಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಮತ್ತೊಂದು ಪೋಸ್ಟ್‌ ಮಾಡಿರುವ ಅವರು, “ನೆಹರೂವನ್ನು ಕಡೆಗಣಿಸುವುದರಿಂದ, ಅವಮಾನಿಸುವುದರಿಂದ ನೆಹರೂಗೆ ಏನೂ ಆಗುವುದಿಲ್ಲ. ಅವರಿಗೆ ಅದು ತಿಳಿಯುವುದೂ ಇಲ್ಲ. ಅವರು ತಮ್ಮ ಕರ್ತವ್ಯ ನಿಭಾಯಿಸಿ, ಬದುಕು ಸಾರ್ಥಕಪಡಿಸಿ, ಇತಿಹಾಸದ ಪುಟಗಳಲ್ಲಿ ತಮ್ಮ ಹೆಸರು ದಾಖಲಿಸಿ ಹೊರಟು ಹೋಗಿದ್ದಾರೆ. ಸಣ್ಣವರಾಗುವುದು ಬದುಕಿರುವ ನೀವು. ನೀವು ಹೆಸರಾಗುವುದು, ಇತಿಹಾಸದ ಪುಟಗಳಲ್ಲಿ ಉಳಿಯುವುದು ನಿಮ್ಮ ಸಣ್ಣತನಕ್ಕಾಗಿ” ಎಂದು ಟೀಕಿಸಿದ್ದಾರೆ.

ಇದನ್ನೂ ಓದಿರಿ: ಶಿವಮೊಗ್ಗ: ಸಾವರ್ಕರ್‌ ಫೋಟೋ ತೆರವು ಮಾಡಿಸಿದ ಜನತೆ; ವಿಡಿಯೊ ವೈರಲ್

ಚಿಂತಕ ರಾಜಾರಾಮ್‌ ತಲ್ಲೂರು ಪ್ರತಿಕ್ರಿಯೆ ನೀಡಿದ್ದು, “ಇಂದು ರಾಜ್ಯ ಸರ್ಕಾರದ ವತಿಯಿಂದ ಪ್ರಕಟಗೊಂಡಿರುವ (ರಾಜ್ಯ ವಾರ್ತಾ ಮತ್ತು ಪ್ರಚಾರ ಇಲಾಖೆಯ ಅಡಿ ಬರುವ ಕರ್ನಾಟಕವಾರ್ತೆ ಈ ಜಾಹೀರಾತು ಪ್ರಕಟಿಸಿದೆ) ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯು ದೇಶದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಒಬ್ಬರೂ, ಸ್ವತಂತ್ರ ಭಾರತದ ಪ್ರಥಮ ಪ್ರಧಾನಮಂತ್ರಿಗಳೂ ಆದ ಪಂಡಿತ್ ಜವಹರಲಾಲ್ ನೆಹರೂ ಅವರ (ಮತ್ತು ಅಲ್ಲಿ ಕಾಣಿಸಿಕೊಳ್ಳಲೇ ಬೇಕಾಗಿದ್ದ ಹಲವು ಮಂದಿ ಪ್ರಮುಖ ಹೋರಾಟಗಾರರ) ಚಿತ್ರವನ್ನು ಕೈಬಿಟ್ಟಿದೆ. ಇದು ಅಕಸ್ಮಾತ್ ಸಂಭವಿಸಿರುವ ಪ್ರಮಾದವೇ? ತಳಮಟ್ಟದಲ್ಲಿ ಸಂಭವಿಸಿರುವ ಕರ್ತವ್ಯ ಲೋಪವೇ? ಉದ್ದೇಶಪೂರ್ವಕ ಕೃತ್ಯವೇ? ಸೈದ್ಧಾಂತಿಕವಾದ ಕುತರ್ಕವೆ? ಅಥವಾ ನೆಹರೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡದ್ದೇ “ಫೇಕ್ ಸುದ್ದಿಯೆ?” ಕರ್ನಾಟಕ ಸರ್ಕಾರ ಈ ಬಗ್ಗೆ ಸ್ಪಷ್ಟೀಕರಣವನ್ನು ನೀಡುವುದು ತನ್ನ ನೈತಿಕ, ಸಾಮಾಜಿಕ, ರಾಷ್ಟ್ರೀಯ ಮತ್ತು ಸಾಂವಿಧಾನಿಕ ಜವಾಬ್ದಾರಿ ಎಂದು ಭಾವಿಸಬೇಕು. ದೇಶದ ಒಬ್ಬ ನಾಗರಿಕನಾಗಿ ನಾನು ಈ ಲೋಪಕ್ಕಾಗಿ ತಲೆತಗ್ಗಿಸುತ್ತೇನೆ” ಎಂದಿದ್ದಾರೆ.

ಬರಹಗಾರ್ತಿ ಪಲ್ಲವಿ ಇಡೂರು ಅವರು ಪ್ರತಿಕ್ರಿಯೆ ನೀಡಿ, “ಬಿಜೆಪಿ ಸರ್ಕಾರ ತನ್ನ ಪ್ರೊಪಗಂಡಾ ವಿಚಾರ ಬಂದಾಗ ಗಟಾರಕ್ಕಾದದೂ ಇಳಿಯಬಲ್ಲದು ಅನ್ನುವುದಕ್ಕೆ ನೆಹರೂ ಅವರನ್ನು ಹೊರತುಪಡಿಸಿ ಕೊಟ್ಟ ಈ ಜಾಹೀರಾತೇ ಸಾಕ್ಷಿ! ಕೀಲಿ ಬೊಂಬೆ ಬೊಮ್ಮಾಯಿಯವರೇ, ನೀವು ನಿಮ್ಮ ಗಟಾರದ ಪಕ್ಷ ತಿಪ್ಪರಲಾಗ ಹಾಕಿದರೂ ಇತಿಹಾಸ ಬದಲಿಸಲಾರಿರಿ. ಸ್ವಾತಂತ್ರ್ಯ ಹೋರಾಟ ಮಾಡಿದ ಪಕ್ಷ ಎನ್ನಿಸಿಕೊಳ್ಳಲಾರಿರಿ! ಅಂದಹಾಗೆ ಇಷ್ಟೊಂದು ಸುಳ್ಳು ಹೇಳಿ ಯಾವ ಘನಕಾರ್ಯ ಮಾಡಲಿದ್ದೀರಿ?” ಎಂದು ಪ್ರಶ್ನಿಸಿದ್ದಾರೆ.

ಹಿರಿಯ ಪತ್ರಕರ್ತ ಸನತ್‌ಕುಮಾರ್‌ ಬೆಳಗಲಿಯವರು, “ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮಾಧ್ಯಗಳಿಗೆ ನೀಡಿದ ಜಾಹೀರಾತಿನಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪಟ ಇಲ್ಲ. ಅಂದಿನ ಹೋರಾಟದಲ್ಲಿ ಹತ್ತು ವರ್ಷಕ್ಕಿಂತ ಹೆಚ್ಚು ಕಾಲ ಸೆರೆಮನೆ ವಾಸ ಅನುಭವಿಸಿದ ಅಪಾರ ತ್ಯಾಗ ಮಾಡಿದ ನೆಹರೂ ಅವರನ್ನು ಕಡೆಗಣಿಸುವಷ್ಟು ಸಣ್ಣತನ ಒಳ್ಳೆಯದಲ್ಲ. ಬ್ರಿಟಿಷ್ ಸರಕಾರಕ್ಕೆ ಕ್ಷಮಾಪಣೆ ಕೇಳಿ ಜೈಲಿನಿಂದ ಹೊರಗೆ ಬಂದವರ ಪಟ ಹಾಕುವ ಸಿ.ಎಂ.ಬಸವರಾಜ ಬೊಮ್ಮಾಯಿಯವರೇ ನಿಮ್ಮ ಅಧಿಕಾರಾವಧಿಯಲ್ಲಿ ಇಂಥ ಅಪಚಾರ ನಡೆಯಬಾರದಿತ್ತು” ಎಂದಿದ್ದಾರೆ.

ಪತ್ರಕರ್ತೆ ಹೇಮಾ ವೆಂಕಟ್‌ ಅವರು ಪ್ರತಿಕ್ರಿಯಿಸಿ, “ಸಂಘಿಗಳ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಸಾಲಿನಲ್ಲಿ ನೆಹರೂ ಅವರ ಫೋಟೋ ಇಲ್ಲದ ಮಾತ್ರಕ್ಕೆ ದೇಶದ ಮೊದಲ ಪ್ರಧಾನಿ ಎಂಬ ಸ್ಥಾನ, ಕಟ್ಟಿದ ಸಂಸ್ಥೆಗಳು, ಯೋಜನೆಗಳನ್ನು ಅಳಿಸಲು ಸಾಧ್ಯವಿಲ್ಲ. ಸಾವರ್ಕರ್ ಫೋಟೋ ಸ್ವಾತಂತ್ರ್ಯ ಹೋರಾಟಗಾರರ ಸಾಲಿನಲ್ಲಿ ಹಾಕಿದರೂ, ಆತ ಗಾಂಧಿ ಹತ್ಯೆಯ ಸಂಚುಗಾರ ಎಂಬುದು ಮನಸ್ಸಿಗೆ ಬಂದೇ ಬರುತ್ತದೆ. ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಾಮಾಜಿಕ ಕಾರ್ಯಕರ್ತೆ ಗುಲಾಬಿ ಬಿಳಿಮಲೆಯವರು ಪೋಸ್ಟ್ ಮಾಡಿದ್ದು, “ಬೊಮ್ಮಾಯಿಯವರೇ, ನೀವು ಈ ದೇಶವನ್ನು ಕಟ್ಟಿದ ಮಹಾ ಮುತ್ಸುದ್ದಿ ನೆಹರೂ ಅವರನ್ನು ನಿಮ್ಮ‌ ಸರಕಾರದ ಜಾಹೀರಾತಿನಲ್ಲಿ ಮರೆ ಮಾಡಿದ್ದೀರಿ. ಏನು ಸಾಧನೆಯಾಯ್ತು? ಕಾರ್ನಾಟಕದ ಜನತೆ ಇವತ್ತು ನೆಹರೂ ಅವರನ್ನು ಎಂದಿಲ್ಲದಷ್ಟು ನೆನಪು ಮಾಡಿಕೊಳ್ತಾ ಇದ್ದಾರೆ. ಸಾಮಾಜಿಕ ಜಾಲತಾಣಗಳು ಇಂದು ಅವರ ನೆನಪುಗಳೊಂದಿಗೇ ಬಣ್ಣ ಪಡೆದಿವೆ. ಜನರ ಮನಸಿನಲ್ಲಿ ಅತ್ಯುನ್ನತ ಸ್ಥಾನವನ್ನು ಗಳಿಸಿ ಸ್ಥಿರಸ್ಥಾಯಿಯಾಗಿರುವ ನೆಹರೂ ಅವರನ್ನು ಕೇವಲ ನಿಮ್ಮ ಜಾಹೀರಾತು ಅಳಿಸಿಹಾಕದು ನೆನಪಿರಲಿ. ನಿಮ್ಮ ಸರಕಾರಕ್ಕೆ ಇದು ನೆಗೆಟಿವ್ ಪ್ರಚಾರ, ಮುಖ್ಯಮಂತ್ರಿಯಾಗಿ ನಿಮಗೂ ಎಂದೂ ಅಳಿಸಲಾಗದ ಕಪ್ಪುಚುಕ್ಕೆ” ಎಂದು ಎಚ್ಚರಿಸಿದ್ದಾರೆ.

ದೂರವಾಣಿ ಚಳವಳಿ ನಡೆಸುವ ಕುರಿತು ಪೋಸ್ಟ್‌ಗಳನ್ನು ಹಾಕಲಾಗಿದೆ. ವಾರ್ತಾ ಇಲಾಖೆಯ ನಂಬರ್‌ (08022028001/2, 08022028048) ಪೋಸ್ಟ್ ಮಾಡಿ, ಅನಿಲ್ ಹೊಸಕೊಪ್ಪ ಅವರ ಟಿಪ್ಪಣಿಯನ್ನು ಬರಹಗಾರ ಕೆ.ಆರ್‌.ಪ್ರಗತ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿರಿ: ಸಚಿವ ಬಿಸಿ ನಾಗೇಶ್‌ ನೇತೃತ್ವದ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಾರಾಟ!

“ಸ್ನೇಹಿತರೆ ಇವತ್ತಿನ ದಿನ ಪತ್ರಿಕೆಗಳನ್ನ ಓದುವಾಗ ಸ್ವಾತಂತ್ರೋತ್ಸವದ ಬಗ್ಗೆ ಜಾಹೀರಾತು ನೀಡಿದ್ದನ್ನು ಗಮನಿಸಿದೆ. ಅದರಲ್ಲಿ ಹೋರಾಟದ ಪ್ರಮುಖರ ಸಾಲಿನಲ್ಲಿ ಬರುವ ಹೆಸರುಗಳಲ್ಲಿ ಹಲವು ವರ್ಷಗಳ ಸೆರೆವಾಸ ಅನುಭವಿಸಿ ಭಾರತದ ಮೊದಲ ಪ್ರಧಾನಿಯಾಗಿ ಸುಂದರ ಭಾರತ ಕಟ್ಟಿದ ಚೇತನ ನೆಹರೂ ಭಾವ ಚಿತ್ರ ಹಾಗೂ ವಿವರಣೆ ಇಲ್ಲದೆ ಇರುವುದು ನೆಹರೂರವರಿಗೆ ಅವಮಾನವಾಗಿದೆ. ಇದನ್ನು ಸರಿಪಡಿಸಿ ಎಂದು ಈಗಾಗಲೇ ಹೋರಾಟಗಾರ ಸುಧೀರ್ ಕುಮಾರ್ ಮುರೊಳ್ಳಿಯವರು ದೂರವಾಣಿ ಮೂಲಕ ವಾರ್ತಾ ಇಲಾಖೆಯ ಆಯುಕ್ತರಿಗೆ ಮಾತನಾಡಿದ್ದಾರೆ. ಚೆಕ್ ಮಾಡ್ತೀನಿ ಅಂತಲೂ ಹೇಳಿದ್ದಾರೆ. ಆದರೆ ಒಂದು ಇಲಾಖೆ ಹಾಗೂ ಸರ್ಕಾರ ದೇಶ ಕಂಡ ಮಹಾನ್ ನಾಯಕರಿಗೆ ಅವಮಾನ ಮಾಡುವುದು ಎಷ್ಟು ಸರಿ? ಹಾಗಾಗಿ ಈ ಕೆಳಗಿನ ದೂರವಾಣಿ ಸಂಖ್ಯೆಗೆ ಕರೆ ಮಾಡಿ ದೂರವಾಣಿ ಚಳುವಳಿ ಮಾಡಿ ಮುಂದೆ ಈ ತಪ್ಪುಗಳು ಆಗಬಾರದು. ಮುಂದೆ ಗಾಂಧೀ ಭಾವ ಚಿತ್ರ ತೆಗೆಯುವುದಕ್ಕೂ ಹೇಸುವುದಿಲ್ಲ” ಎಂದು ಅನಿಲ್‌ ಹೊಸಕೊಪ್ಪ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತದ ಮೊದಲ ಪ್ರಧಾನಿ ಜವಾಹರ ಲಾಲ್ ನೆಹರು ಅವರ ಭಾವಚಿತ್ರ ಇಲ್ಲದೆಯೇ ಪ್ರಕಟಿಸಿ ಕರ್ನಾಟಕ ಸರ್ಕಾರ ಜನರ ಮುಂದೆ ಬೆತ್ತಲೆಯಾಗಿದೆ. ನೆಹರು ಅವರ ಭಯದಲ್ಲಿ ಬಿ. ಜೆ. ಪಿ. ಯವರು ಇನ್ನೂ ನರಳುತ್ತಿದ್ದಾರೆ ಎಂಬುದನ್ನು ಇದು ತೋರಿಸುತ್ತದೆ. ತನ್ನ ನಿಜಾಸ್ವರೂಪವನ್ನು ತಾನಾಗಿಯೇ ಬಿ. ಜೆ. ಪಿ. ಅನಾವರಣಗೊಳಿಸಿಕೊಂಡಿರುವುದಕ್ಕೆ ಹಾಗೂ ಜನರನ್ನು ಜಾಗ್ರತೆಗೊಳಿಸಿರುವುದಕ್ಕೆ ಥ್ಯಾಂಕ್ಸ್.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...