Homeಕರೋನಾ ತಲ್ಲಣತಾಯಿ ಶವದ ಬಳಿ 2 ದಿನ ಹಸಿವಿನಲ್ಲೆ ಇದ್ದ ಕಂದಮ್ಮ: ಕೊರೊನಾ ಭೀತಿಗೆ ನೆರವಾಗದ ನೆರೆಹೊರೆ!

ತಾಯಿ ಶವದ ಬಳಿ 2 ದಿನ ಹಸಿವಿನಲ್ಲೆ ಇದ್ದ ಕಂದಮ್ಮ: ಕೊರೊನಾ ಭೀತಿಗೆ ನೆರವಾಗದ ನೆರೆಹೊರೆ!

- Advertisement -
- Advertisement -

ಜನರಲ್ಲಿರುವ ಕೊರೊನಾ ಆತಂಕ ಅವರೊಳಗಿನ ಮನುಷ್ಯತ್ವವನ್ನು ಕೊಲ್ಲುತ್ತಿರುವ ಕಾಲಘಟ್ಟವಿದು.
ತನ್ನ ತಾಯಿಯ ಮೃತದೇಹದ ಬಳಿ ಎರಡು ದಿನ ಕಳೆದ ಈ ಕಂದ ನೀರಡಿಕೆ, ಹಸಿವಿನಿಂದ ಬಳಲುತ್ತಿತ್ತು. ತಾಯಿ ಕೊರೊನಾನಿಂದ ಮರಣ ಹೊಂದಿರಬಹುದು ಎಂದು ಊಹಿಸಿದ ನೆರೆಹೊರೆಯವರು ಮಗುವಿನ ನೆರವಿಗೆ ಧಾವಿಸಲೇ ಇಲ್ಲ. ಕೊನೆಯಲ್ಲಿ ಇಬ್ಬರು ಮಹಿಳಾ ಪೊಲೀಸರು ಈ ಕಂದನಿಗೆ ತಾಯಿ ಪ್ರೀತಿ ತೋರಿಸಿ ಜೀವ ಕಾಪಾಡಿದ್ದಾರೆ.

ಎರಡನೇ ಅಲೆಯಲ್ಲಿ ತೀವ್ರ ಬಾಧೆಗೊಳಗಾದ ನಗರ ಎನಿಸಿರುವ ಮಹಾರಾಷ್ಟ್ರದ ಪುಣೆಯಲ್ಲಿ ಕಳೆದ ವಾರ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪುಣೆಯ ಸಮೀಪದ ಪಿಂಪ್ರಿ ಚಿಂಚ್‌ವಾಡ್‌ನ ಒಂದು ಮನೆಯೊಳಗೆ ಎರಡು ದಿನಗಳ ಕಾಲ, ಮೃತ ತಾಯಿಯ ದೇಹದ ಪಕ್ಕದಲ್ಲಿ ಈ ಮಗು ಕಾಲ ಕಳೆದಿದೆ.

ಇದನ್ನೂ ಓದಿ: ‘ಅದು ಹೃದಯವಲ್ಲ, ಕಲ್ಲು’- ಮೋದಿಗೆ ಪರೋಕ್ಷವಾಗಿ ಕುಟುಕಿದ ರಾಹುಲ್‌ ಗಾಂಧಿ

ಕೋವಿಡ್‌ಗೆ ಹೆದರಿ ಯಾರೂ ನೆರವಿಗೆ ಬರಲಿಲ್ಲ. ಶವದ ದುರ್ನಾತದಿಂದ ಬೇಸರಗೊಂಡ ಭೂಮಾಲೀಕನೊಬ್ಬ ಪೊಲೀಸರನ್ನು ಕರೆಸಿದ್ದಾನೆ.

ಸೋಮವಾರ, ಪೊಲೀಸರು ಮನೆಯೊಳಗೆ ಪ್ರವೇಶಿಸಿ ಮಹಿಳೆಯ ಶವ ಮತ್ತು ಆಕೆಯ ಪಕ್ಕದಲ್ಲಿರುವ ಶಿಶುವನ್ನು ಕಂಡುಕೊಂಡಿದ್ದಾರೆ. ಮಹಿಳೆ ಕಳೆದ ಶನಿವಾರ ಸಾವನ್ನಪ್ಪಿದ್ದಾಳೆ ಎಂದು ಶಂಕಿಸಲಾಗಿದೆ, ಅಂದರೆ 18 ತಿಂಗಳ ಮಗು ಆ ಸಮಯದಲ್ಲಿ ಎರಡು ದಿನ ಆಹಾರ ಅಥವಾ ನೀರಿಲ್ಲದೆ ಇತ್ತು.

ನೆರೆಹೊರೆಯವರು ಮಗುವನ್ನು ಮುಟ್ಟಲೂ ಹಿಂಜರಿದ ಸಂದರ್ಭವದು. ಆದರೆ ಪೊಲೀಸ್ ಕಾನ್‌ಸ್ಟೆಬಲ್‌ಗಳಾದ ಸುಶೀಲಾ ಗಭಾಲೆ ಮತ್ತು ರೇಖಾ ವೇಜ್ ಅವರು ಮಗುವನ್ನು ಎತ್ತಿಕೊಂಡು ನೀರು, ಹಾಲು ಕುಡಿಸಿದರು. ಬಳಲಿದ್ದ ಕಂದ ಚೇತರಿಸಿಕೊಂಡಿದೆ.

“ನನಗೆ ಇಬ್ಬರು ಮಕ್ಕಳಿದ್ದಾರೆ, ಎಂಟು ಮತ್ತು ಆರು ವರ್ಷದವರು. ಈ ಮಗು ನನ್ನ ಸ್ವಂತ ಮಗುವಿನಂತೆ ಭಾಸವಾಯಿತು, ಅವನು ತುಂಬಾ ಹಸಿದಿದ್ದರಿಂದ ಅವನು ಬೇಗನೆ ಹಾಲು ಕುಡಿದ” ಎಂದು ಸುಶೀಲಾ ಗಭಾಲೆ ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ಜ್ವರವನ್ನು ಹೊರತುಪಡಿಸಿದರೆ ಮಗು ಬೇರೆಲ್ಲ ರೀತಿಯಲ್ಲೂ ಚೆನ್ನಾಗಿತ್ತು ಎಂದು ಆಕೆಯ ಸಹೋದ್ಯೋಗಿ ರೇಖಾ ಹೇಳಿದ್ದಾರೆ.

“ನಾವು ವೈದ್ಯರಿಗೆ ತೋರಿಸಿದಾಗ ಮಗುವಿಗೆ ಸ್ವಲ್ಪ ಜ್ವರ ಇದ್ದುದು ತಿಳಿಯಿತು.. ಅವನಿಗೆ ಚೆನ್ನಾಗಿ ಆಹಾರವನ್ನು ಕೊಡುವಂತೆ ಅವರು ಹೇಳಿದರು, ಬೇಬಿ ಬಿಸ್ಕತ್, ನೀರು, ಹಾಲು ನೀಡಿದ ನಂತರ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಕೊರೊನಾ ಪರೀಕ್ಷೆಗೆ ಕರೆದೊಯ್ಯಿದೆವು” ಎಂದು ಹೇಳಿದರು.

ಮಗುವಿನ ಕೊರೊನಾ ಪರೀಕ್ಷೆಯು ನೆಗೆಟಿವ್‌ ಆಗಿದ್ದು, ಪೋಷಣೆಗಾಗಿ ಸರ್ಕಾರಿ ತಂಡಕ್ಕೆ ವರ್ಗಾಯಿಸಲಾಗಿದೆ.
ಮಗುವಿನ ತಾಯಿಯ ಶವಪರೀಕ್ಷೆ ವರದಿ ಬರಬೇಕಿದೆ. ಅವರು ಹೇಗೆ ಸತ್ತರು ಎಂಬುದು ಇನ್ನೂ ಬಹಿರಂಗಗೊಂಡಿಲ್ಲ, ಅವರಿಗೆ ಕೊರೊನಾ ಇತ್ತೇ ಎಂಬುದು ಇನ್ನೂ ತಿಳಿದು ಬಂದಿಲ್ಲ.

“ಮಹಿಳೆಯ ಪತಿ ಕೆಲಸಕ್ಕಾಗಿ ಉತ್ತರ ಪ್ರದೇಶಕ್ಕೆ ಹೋಗಿದ್ದಾರೆ ಎಂದು ವರದಿಯಾಗಿದೆ. ಆತ ಹಿಂತಿರುವುದನ್ನು ನಾವು ಕಾಯುತ್ತಿದ್ದೇವೆ” ಎಂದು ಪೊಲೀಸ್ ಇನ್ಸ್‌ಪೆಕ್ಟರ್ (ಅಪರಾಧ) ಪ್ರಕಾಶ್ ಜಾಧವ್ ಹೇಳಿದ್ದಾರೆ.

ಕೊರೊನಾ ಭೀತಿಯಲ್ಲಿರಬಹುದಾದ ನೆರೆಹೊರೆಯವರು ಕನಿಷ್ಠ ವಿಷಯ ಗೊತ್ತಾದ ಕೂಡಲೇ ಪೊಲಿಸರಿಗೆ ಫೋನ್ ಮಾಡುವ ಕಾಳಜಿಯನ್ನು ತೋರಿಲ್ಲ. ಎರಡು ದಿನ ಖಾಲಿ ಹೊಟ್ಟೆಯಲ್ಲಿ ಬದುಕಿದ ಮಗು ಈಗ ಸುರಕ್ಷಿತ ಕೈಗಳನ್ನು ತಲುಪಿದೆ.

ಇದನ್ನೂ ಓದಿ: ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ – ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...