Homeಕರೋನಾ ತಲ್ಲಣತಾಯಿ ಶವದ ಬಳಿ 2 ದಿನ ಹಸಿವಿನಲ್ಲೆ ಇದ್ದ ಕಂದಮ್ಮ: ಕೊರೊನಾ ಭೀತಿಗೆ ನೆರವಾಗದ ನೆರೆಹೊರೆ!

ತಾಯಿ ಶವದ ಬಳಿ 2 ದಿನ ಹಸಿವಿನಲ್ಲೆ ಇದ್ದ ಕಂದಮ್ಮ: ಕೊರೊನಾ ಭೀತಿಗೆ ನೆರವಾಗದ ನೆರೆಹೊರೆ!

- Advertisement -
- Advertisement -

ಜನರಲ್ಲಿರುವ ಕೊರೊನಾ ಆತಂಕ ಅವರೊಳಗಿನ ಮನುಷ್ಯತ್ವವನ್ನು ಕೊಲ್ಲುತ್ತಿರುವ ಕಾಲಘಟ್ಟವಿದು.
ತನ್ನ ತಾಯಿಯ ಮೃತದೇಹದ ಬಳಿ ಎರಡು ದಿನ ಕಳೆದ ಈ ಕಂದ ನೀರಡಿಕೆ, ಹಸಿವಿನಿಂದ ಬಳಲುತ್ತಿತ್ತು. ತಾಯಿ ಕೊರೊನಾನಿಂದ ಮರಣ ಹೊಂದಿರಬಹುದು ಎಂದು ಊಹಿಸಿದ ನೆರೆಹೊರೆಯವರು ಮಗುವಿನ ನೆರವಿಗೆ ಧಾವಿಸಲೇ ಇಲ್ಲ. ಕೊನೆಯಲ್ಲಿ ಇಬ್ಬರು ಮಹಿಳಾ ಪೊಲೀಸರು ಈ ಕಂದನಿಗೆ ತಾಯಿ ಪ್ರೀತಿ ತೋರಿಸಿ ಜೀವ ಕಾಪಾಡಿದ್ದಾರೆ.

ಎರಡನೇ ಅಲೆಯಲ್ಲಿ ತೀವ್ರ ಬಾಧೆಗೊಳಗಾದ ನಗರ ಎನಿಸಿರುವ ಮಹಾರಾಷ್ಟ್ರದ ಪುಣೆಯಲ್ಲಿ ಕಳೆದ ವಾರ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪುಣೆಯ ಸಮೀಪದ ಪಿಂಪ್ರಿ ಚಿಂಚ್‌ವಾಡ್‌ನ ಒಂದು ಮನೆಯೊಳಗೆ ಎರಡು ದಿನಗಳ ಕಾಲ, ಮೃತ ತಾಯಿಯ ದೇಹದ ಪಕ್ಕದಲ್ಲಿ ಈ ಮಗು ಕಾಲ ಕಳೆದಿದೆ.

ಇದನ್ನೂ ಓದಿ: ‘ಅದು ಹೃದಯವಲ್ಲ, ಕಲ್ಲು’- ಮೋದಿಗೆ ಪರೋಕ್ಷವಾಗಿ ಕುಟುಕಿದ ರಾಹುಲ್‌ ಗಾಂಧಿ

ಕೋವಿಡ್‌ಗೆ ಹೆದರಿ ಯಾರೂ ನೆರವಿಗೆ ಬರಲಿಲ್ಲ. ಶವದ ದುರ್ನಾತದಿಂದ ಬೇಸರಗೊಂಡ ಭೂಮಾಲೀಕನೊಬ್ಬ ಪೊಲೀಸರನ್ನು ಕರೆಸಿದ್ದಾನೆ.

ಸೋಮವಾರ, ಪೊಲೀಸರು ಮನೆಯೊಳಗೆ ಪ್ರವೇಶಿಸಿ ಮಹಿಳೆಯ ಶವ ಮತ್ತು ಆಕೆಯ ಪಕ್ಕದಲ್ಲಿರುವ ಶಿಶುವನ್ನು ಕಂಡುಕೊಂಡಿದ್ದಾರೆ. ಮಹಿಳೆ ಕಳೆದ ಶನಿವಾರ ಸಾವನ್ನಪ್ಪಿದ್ದಾಳೆ ಎಂದು ಶಂಕಿಸಲಾಗಿದೆ, ಅಂದರೆ 18 ತಿಂಗಳ ಮಗು ಆ ಸಮಯದಲ್ಲಿ ಎರಡು ದಿನ ಆಹಾರ ಅಥವಾ ನೀರಿಲ್ಲದೆ ಇತ್ತು.

ನೆರೆಹೊರೆಯವರು ಮಗುವನ್ನು ಮುಟ್ಟಲೂ ಹಿಂಜರಿದ ಸಂದರ್ಭವದು. ಆದರೆ ಪೊಲೀಸ್ ಕಾನ್‌ಸ್ಟೆಬಲ್‌ಗಳಾದ ಸುಶೀಲಾ ಗಭಾಲೆ ಮತ್ತು ರೇಖಾ ವೇಜ್ ಅವರು ಮಗುವನ್ನು ಎತ್ತಿಕೊಂಡು ನೀರು, ಹಾಲು ಕುಡಿಸಿದರು. ಬಳಲಿದ್ದ ಕಂದ ಚೇತರಿಸಿಕೊಂಡಿದೆ.

“ನನಗೆ ಇಬ್ಬರು ಮಕ್ಕಳಿದ್ದಾರೆ, ಎಂಟು ಮತ್ತು ಆರು ವರ್ಷದವರು. ಈ ಮಗು ನನ್ನ ಸ್ವಂತ ಮಗುವಿನಂತೆ ಭಾಸವಾಯಿತು, ಅವನು ತುಂಬಾ ಹಸಿದಿದ್ದರಿಂದ ಅವನು ಬೇಗನೆ ಹಾಲು ಕುಡಿದ” ಎಂದು ಸುಶೀಲಾ ಗಭಾಲೆ ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ಜ್ವರವನ್ನು ಹೊರತುಪಡಿಸಿದರೆ ಮಗು ಬೇರೆಲ್ಲ ರೀತಿಯಲ್ಲೂ ಚೆನ್ನಾಗಿತ್ತು ಎಂದು ಆಕೆಯ ಸಹೋದ್ಯೋಗಿ ರೇಖಾ ಹೇಳಿದ್ದಾರೆ.

“ನಾವು ವೈದ್ಯರಿಗೆ ತೋರಿಸಿದಾಗ ಮಗುವಿಗೆ ಸ್ವಲ್ಪ ಜ್ವರ ಇದ್ದುದು ತಿಳಿಯಿತು.. ಅವನಿಗೆ ಚೆನ್ನಾಗಿ ಆಹಾರವನ್ನು ಕೊಡುವಂತೆ ಅವರು ಹೇಳಿದರು, ಬೇಬಿ ಬಿಸ್ಕತ್, ನೀರು, ಹಾಲು ನೀಡಿದ ನಂತರ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಕೊರೊನಾ ಪರೀಕ್ಷೆಗೆ ಕರೆದೊಯ್ಯಿದೆವು” ಎಂದು ಹೇಳಿದರು.

ಮಗುವಿನ ಕೊರೊನಾ ಪರೀಕ್ಷೆಯು ನೆಗೆಟಿವ್‌ ಆಗಿದ್ದು, ಪೋಷಣೆಗಾಗಿ ಸರ್ಕಾರಿ ತಂಡಕ್ಕೆ ವರ್ಗಾಯಿಸಲಾಗಿದೆ.
ಮಗುವಿನ ತಾಯಿಯ ಶವಪರೀಕ್ಷೆ ವರದಿ ಬರಬೇಕಿದೆ. ಅವರು ಹೇಗೆ ಸತ್ತರು ಎಂಬುದು ಇನ್ನೂ ಬಹಿರಂಗಗೊಂಡಿಲ್ಲ, ಅವರಿಗೆ ಕೊರೊನಾ ಇತ್ತೇ ಎಂಬುದು ಇನ್ನೂ ತಿಳಿದು ಬಂದಿಲ್ಲ.

“ಮಹಿಳೆಯ ಪತಿ ಕೆಲಸಕ್ಕಾಗಿ ಉತ್ತರ ಪ್ರದೇಶಕ್ಕೆ ಹೋಗಿದ್ದಾರೆ ಎಂದು ವರದಿಯಾಗಿದೆ. ಆತ ಹಿಂತಿರುವುದನ್ನು ನಾವು ಕಾಯುತ್ತಿದ್ದೇವೆ” ಎಂದು ಪೊಲೀಸ್ ಇನ್ಸ್‌ಪೆಕ್ಟರ್ (ಅಪರಾಧ) ಪ್ರಕಾಶ್ ಜಾಧವ್ ಹೇಳಿದ್ದಾರೆ.

ಕೊರೊನಾ ಭೀತಿಯಲ್ಲಿರಬಹುದಾದ ನೆರೆಹೊರೆಯವರು ಕನಿಷ್ಠ ವಿಷಯ ಗೊತ್ತಾದ ಕೂಡಲೇ ಪೊಲಿಸರಿಗೆ ಫೋನ್ ಮಾಡುವ ಕಾಳಜಿಯನ್ನು ತೋರಿಲ್ಲ. ಎರಡು ದಿನ ಖಾಲಿ ಹೊಟ್ಟೆಯಲ್ಲಿ ಬದುಕಿದ ಮಗು ಈಗ ಸುರಕ್ಷಿತ ಕೈಗಳನ್ನು ತಲುಪಿದೆ.

ಇದನ್ನೂ ಓದಿ: ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ – ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...