Homeಕರೋನಾ ತಲ್ಲಣತಾಯಿ ಶವದ ಬಳಿ 2 ದಿನ ಹಸಿವಿನಲ್ಲೆ ಇದ್ದ ಕಂದಮ್ಮ: ಕೊರೊನಾ ಭೀತಿಗೆ ನೆರವಾಗದ ನೆರೆಹೊರೆ!

ತಾಯಿ ಶವದ ಬಳಿ 2 ದಿನ ಹಸಿವಿನಲ್ಲೆ ಇದ್ದ ಕಂದಮ್ಮ: ಕೊರೊನಾ ಭೀತಿಗೆ ನೆರವಾಗದ ನೆರೆಹೊರೆ!

- Advertisement -
- Advertisement -

ಜನರಲ್ಲಿರುವ ಕೊರೊನಾ ಆತಂಕ ಅವರೊಳಗಿನ ಮನುಷ್ಯತ್ವವನ್ನು ಕೊಲ್ಲುತ್ತಿರುವ ಕಾಲಘಟ್ಟವಿದು.
ತನ್ನ ತಾಯಿಯ ಮೃತದೇಹದ ಬಳಿ ಎರಡು ದಿನ ಕಳೆದ ಈ ಕಂದ ನೀರಡಿಕೆ, ಹಸಿವಿನಿಂದ ಬಳಲುತ್ತಿತ್ತು. ತಾಯಿ ಕೊರೊನಾನಿಂದ ಮರಣ ಹೊಂದಿರಬಹುದು ಎಂದು ಊಹಿಸಿದ ನೆರೆಹೊರೆಯವರು ಮಗುವಿನ ನೆರವಿಗೆ ಧಾವಿಸಲೇ ಇಲ್ಲ. ಕೊನೆಯಲ್ಲಿ ಇಬ್ಬರು ಮಹಿಳಾ ಪೊಲೀಸರು ಈ ಕಂದನಿಗೆ ತಾಯಿ ಪ್ರೀತಿ ತೋರಿಸಿ ಜೀವ ಕಾಪಾಡಿದ್ದಾರೆ.

ಎರಡನೇ ಅಲೆಯಲ್ಲಿ ತೀವ್ರ ಬಾಧೆಗೊಳಗಾದ ನಗರ ಎನಿಸಿರುವ ಮಹಾರಾಷ್ಟ್ರದ ಪುಣೆಯಲ್ಲಿ ಕಳೆದ ವಾರ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪುಣೆಯ ಸಮೀಪದ ಪಿಂಪ್ರಿ ಚಿಂಚ್‌ವಾಡ್‌ನ ಒಂದು ಮನೆಯೊಳಗೆ ಎರಡು ದಿನಗಳ ಕಾಲ, ಮೃತ ತಾಯಿಯ ದೇಹದ ಪಕ್ಕದಲ್ಲಿ ಈ ಮಗು ಕಾಲ ಕಳೆದಿದೆ.

ಇದನ್ನೂ ಓದಿ: ‘ಅದು ಹೃದಯವಲ್ಲ, ಕಲ್ಲು’- ಮೋದಿಗೆ ಪರೋಕ್ಷವಾಗಿ ಕುಟುಕಿದ ರಾಹುಲ್‌ ಗಾಂಧಿ

ಕೋವಿಡ್‌ಗೆ ಹೆದರಿ ಯಾರೂ ನೆರವಿಗೆ ಬರಲಿಲ್ಲ. ಶವದ ದುರ್ನಾತದಿಂದ ಬೇಸರಗೊಂಡ ಭೂಮಾಲೀಕನೊಬ್ಬ ಪೊಲೀಸರನ್ನು ಕರೆಸಿದ್ದಾನೆ.

ಸೋಮವಾರ, ಪೊಲೀಸರು ಮನೆಯೊಳಗೆ ಪ್ರವೇಶಿಸಿ ಮಹಿಳೆಯ ಶವ ಮತ್ತು ಆಕೆಯ ಪಕ್ಕದಲ್ಲಿರುವ ಶಿಶುವನ್ನು ಕಂಡುಕೊಂಡಿದ್ದಾರೆ. ಮಹಿಳೆ ಕಳೆದ ಶನಿವಾರ ಸಾವನ್ನಪ್ಪಿದ್ದಾಳೆ ಎಂದು ಶಂಕಿಸಲಾಗಿದೆ, ಅಂದರೆ 18 ತಿಂಗಳ ಮಗು ಆ ಸಮಯದಲ್ಲಿ ಎರಡು ದಿನ ಆಹಾರ ಅಥವಾ ನೀರಿಲ್ಲದೆ ಇತ್ತು.

ನೆರೆಹೊರೆಯವರು ಮಗುವನ್ನು ಮುಟ್ಟಲೂ ಹಿಂಜರಿದ ಸಂದರ್ಭವದು. ಆದರೆ ಪೊಲೀಸ್ ಕಾನ್‌ಸ್ಟೆಬಲ್‌ಗಳಾದ ಸುಶೀಲಾ ಗಭಾಲೆ ಮತ್ತು ರೇಖಾ ವೇಜ್ ಅವರು ಮಗುವನ್ನು ಎತ್ತಿಕೊಂಡು ನೀರು, ಹಾಲು ಕುಡಿಸಿದರು. ಬಳಲಿದ್ದ ಕಂದ ಚೇತರಿಸಿಕೊಂಡಿದೆ.

“ನನಗೆ ಇಬ್ಬರು ಮಕ್ಕಳಿದ್ದಾರೆ, ಎಂಟು ಮತ್ತು ಆರು ವರ್ಷದವರು. ಈ ಮಗು ನನ್ನ ಸ್ವಂತ ಮಗುವಿನಂತೆ ಭಾಸವಾಯಿತು, ಅವನು ತುಂಬಾ ಹಸಿದಿದ್ದರಿಂದ ಅವನು ಬೇಗನೆ ಹಾಲು ಕುಡಿದ” ಎಂದು ಸುಶೀಲಾ ಗಭಾಲೆ ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ಜ್ವರವನ್ನು ಹೊರತುಪಡಿಸಿದರೆ ಮಗು ಬೇರೆಲ್ಲ ರೀತಿಯಲ್ಲೂ ಚೆನ್ನಾಗಿತ್ತು ಎಂದು ಆಕೆಯ ಸಹೋದ್ಯೋಗಿ ರೇಖಾ ಹೇಳಿದ್ದಾರೆ.

“ನಾವು ವೈದ್ಯರಿಗೆ ತೋರಿಸಿದಾಗ ಮಗುವಿಗೆ ಸ್ವಲ್ಪ ಜ್ವರ ಇದ್ದುದು ತಿಳಿಯಿತು.. ಅವನಿಗೆ ಚೆನ್ನಾಗಿ ಆಹಾರವನ್ನು ಕೊಡುವಂತೆ ಅವರು ಹೇಳಿದರು, ಬೇಬಿ ಬಿಸ್ಕತ್, ನೀರು, ಹಾಲು ನೀಡಿದ ನಂತರ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಕೊರೊನಾ ಪರೀಕ್ಷೆಗೆ ಕರೆದೊಯ್ಯಿದೆವು” ಎಂದು ಹೇಳಿದರು.

ಮಗುವಿನ ಕೊರೊನಾ ಪರೀಕ್ಷೆಯು ನೆಗೆಟಿವ್‌ ಆಗಿದ್ದು, ಪೋಷಣೆಗಾಗಿ ಸರ್ಕಾರಿ ತಂಡಕ್ಕೆ ವರ್ಗಾಯಿಸಲಾಗಿದೆ.
ಮಗುವಿನ ತಾಯಿಯ ಶವಪರೀಕ್ಷೆ ವರದಿ ಬರಬೇಕಿದೆ. ಅವರು ಹೇಗೆ ಸತ್ತರು ಎಂಬುದು ಇನ್ನೂ ಬಹಿರಂಗಗೊಂಡಿಲ್ಲ, ಅವರಿಗೆ ಕೊರೊನಾ ಇತ್ತೇ ಎಂಬುದು ಇನ್ನೂ ತಿಳಿದು ಬಂದಿಲ್ಲ.

“ಮಹಿಳೆಯ ಪತಿ ಕೆಲಸಕ್ಕಾಗಿ ಉತ್ತರ ಪ್ರದೇಶಕ್ಕೆ ಹೋಗಿದ್ದಾರೆ ಎಂದು ವರದಿಯಾಗಿದೆ. ಆತ ಹಿಂತಿರುವುದನ್ನು ನಾವು ಕಾಯುತ್ತಿದ್ದೇವೆ” ಎಂದು ಪೊಲೀಸ್ ಇನ್ಸ್‌ಪೆಕ್ಟರ್ (ಅಪರಾಧ) ಪ್ರಕಾಶ್ ಜಾಧವ್ ಹೇಳಿದ್ದಾರೆ.

ಕೊರೊನಾ ಭೀತಿಯಲ್ಲಿರಬಹುದಾದ ನೆರೆಹೊರೆಯವರು ಕನಿಷ್ಠ ವಿಷಯ ಗೊತ್ತಾದ ಕೂಡಲೇ ಪೊಲಿಸರಿಗೆ ಫೋನ್ ಮಾಡುವ ಕಾಳಜಿಯನ್ನು ತೋರಿಲ್ಲ. ಎರಡು ದಿನ ಖಾಲಿ ಹೊಟ್ಟೆಯಲ್ಲಿ ಬದುಕಿದ ಮಗು ಈಗ ಸುರಕ್ಷಿತ ಕೈಗಳನ್ನು ತಲುಪಿದೆ.

ಇದನ್ನೂ ಓದಿ: ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ – ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...