Homeಕರೋನಾ ತಲ್ಲಣತಾಯಿ ಶವದ ಬಳಿ 2 ದಿನ ಹಸಿವಿನಲ್ಲೆ ಇದ್ದ ಕಂದಮ್ಮ: ಕೊರೊನಾ ಭೀತಿಗೆ ನೆರವಾಗದ ನೆರೆಹೊರೆ!

ತಾಯಿ ಶವದ ಬಳಿ 2 ದಿನ ಹಸಿವಿನಲ್ಲೆ ಇದ್ದ ಕಂದಮ್ಮ: ಕೊರೊನಾ ಭೀತಿಗೆ ನೆರವಾಗದ ನೆರೆಹೊರೆ!

- Advertisement -
- Advertisement -

ಜನರಲ್ಲಿರುವ ಕೊರೊನಾ ಆತಂಕ ಅವರೊಳಗಿನ ಮನುಷ್ಯತ್ವವನ್ನು ಕೊಲ್ಲುತ್ತಿರುವ ಕಾಲಘಟ್ಟವಿದು.
ತನ್ನ ತಾಯಿಯ ಮೃತದೇಹದ ಬಳಿ ಎರಡು ದಿನ ಕಳೆದ ಈ ಕಂದ ನೀರಡಿಕೆ, ಹಸಿವಿನಿಂದ ಬಳಲುತ್ತಿತ್ತು. ತಾಯಿ ಕೊರೊನಾನಿಂದ ಮರಣ ಹೊಂದಿರಬಹುದು ಎಂದು ಊಹಿಸಿದ ನೆರೆಹೊರೆಯವರು ಮಗುವಿನ ನೆರವಿಗೆ ಧಾವಿಸಲೇ ಇಲ್ಲ. ಕೊನೆಯಲ್ಲಿ ಇಬ್ಬರು ಮಹಿಳಾ ಪೊಲೀಸರು ಈ ಕಂದನಿಗೆ ತಾಯಿ ಪ್ರೀತಿ ತೋರಿಸಿ ಜೀವ ಕಾಪಾಡಿದ್ದಾರೆ.

ಎರಡನೇ ಅಲೆಯಲ್ಲಿ ತೀವ್ರ ಬಾಧೆಗೊಳಗಾದ ನಗರ ಎನಿಸಿರುವ ಮಹಾರಾಷ್ಟ್ರದ ಪುಣೆಯಲ್ಲಿ ಕಳೆದ ವಾರ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪುಣೆಯ ಸಮೀಪದ ಪಿಂಪ್ರಿ ಚಿಂಚ್‌ವಾಡ್‌ನ ಒಂದು ಮನೆಯೊಳಗೆ ಎರಡು ದಿನಗಳ ಕಾಲ, ಮೃತ ತಾಯಿಯ ದೇಹದ ಪಕ್ಕದಲ್ಲಿ ಈ ಮಗು ಕಾಲ ಕಳೆದಿದೆ.

ಇದನ್ನೂ ಓದಿ: ‘ಅದು ಹೃದಯವಲ್ಲ, ಕಲ್ಲು’- ಮೋದಿಗೆ ಪರೋಕ್ಷವಾಗಿ ಕುಟುಕಿದ ರಾಹುಲ್‌ ಗಾಂಧಿ

ಕೋವಿಡ್‌ಗೆ ಹೆದರಿ ಯಾರೂ ನೆರವಿಗೆ ಬರಲಿಲ್ಲ. ಶವದ ದುರ್ನಾತದಿಂದ ಬೇಸರಗೊಂಡ ಭೂಮಾಲೀಕನೊಬ್ಬ ಪೊಲೀಸರನ್ನು ಕರೆಸಿದ್ದಾನೆ.

ಸೋಮವಾರ, ಪೊಲೀಸರು ಮನೆಯೊಳಗೆ ಪ್ರವೇಶಿಸಿ ಮಹಿಳೆಯ ಶವ ಮತ್ತು ಆಕೆಯ ಪಕ್ಕದಲ್ಲಿರುವ ಶಿಶುವನ್ನು ಕಂಡುಕೊಂಡಿದ್ದಾರೆ. ಮಹಿಳೆ ಕಳೆದ ಶನಿವಾರ ಸಾವನ್ನಪ್ಪಿದ್ದಾಳೆ ಎಂದು ಶಂಕಿಸಲಾಗಿದೆ, ಅಂದರೆ 18 ತಿಂಗಳ ಮಗು ಆ ಸಮಯದಲ್ಲಿ ಎರಡು ದಿನ ಆಹಾರ ಅಥವಾ ನೀರಿಲ್ಲದೆ ಇತ್ತು.

ನೆರೆಹೊರೆಯವರು ಮಗುವನ್ನು ಮುಟ್ಟಲೂ ಹಿಂಜರಿದ ಸಂದರ್ಭವದು. ಆದರೆ ಪೊಲೀಸ್ ಕಾನ್‌ಸ್ಟೆಬಲ್‌ಗಳಾದ ಸುಶೀಲಾ ಗಭಾಲೆ ಮತ್ತು ರೇಖಾ ವೇಜ್ ಅವರು ಮಗುವನ್ನು ಎತ್ತಿಕೊಂಡು ನೀರು, ಹಾಲು ಕುಡಿಸಿದರು. ಬಳಲಿದ್ದ ಕಂದ ಚೇತರಿಸಿಕೊಂಡಿದೆ.

“ನನಗೆ ಇಬ್ಬರು ಮಕ್ಕಳಿದ್ದಾರೆ, ಎಂಟು ಮತ್ತು ಆರು ವರ್ಷದವರು. ಈ ಮಗು ನನ್ನ ಸ್ವಂತ ಮಗುವಿನಂತೆ ಭಾಸವಾಯಿತು, ಅವನು ತುಂಬಾ ಹಸಿದಿದ್ದರಿಂದ ಅವನು ಬೇಗನೆ ಹಾಲು ಕುಡಿದ” ಎಂದು ಸುಶೀಲಾ ಗಭಾಲೆ ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ಜ್ವರವನ್ನು ಹೊರತುಪಡಿಸಿದರೆ ಮಗು ಬೇರೆಲ್ಲ ರೀತಿಯಲ್ಲೂ ಚೆನ್ನಾಗಿತ್ತು ಎಂದು ಆಕೆಯ ಸಹೋದ್ಯೋಗಿ ರೇಖಾ ಹೇಳಿದ್ದಾರೆ.

“ನಾವು ವೈದ್ಯರಿಗೆ ತೋರಿಸಿದಾಗ ಮಗುವಿಗೆ ಸ್ವಲ್ಪ ಜ್ವರ ಇದ್ದುದು ತಿಳಿಯಿತು.. ಅವನಿಗೆ ಚೆನ್ನಾಗಿ ಆಹಾರವನ್ನು ಕೊಡುವಂತೆ ಅವರು ಹೇಳಿದರು, ಬೇಬಿ ಬಿಸ್ಕತ್, ನೀರು, ಹಾಲು ನೀಡಿದ ನಂತರ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಕೊರೊನಾ ಪರೀಕ್ಷೆಗೆ ಕರೆದೊಯ್ಯಿದೆವು” ಎಂದು ಹೇಳಿದರು.

ಮಗುವಿನ ಕೊರೊನಾ ಪರೀಕ್ಷೆಯು ನೆಗೆಟಿವ್‌ ಆಗಿದ್ದು, ಪೋಷಣೆಗಾಗಿ ಸರ್ಕಾರಿ ತಂಡಕ್ಕೆ ವರ್ಗಾಯಿಸಲಾಗಿದೆ.
ಮಗುವಿನ ತಾಯಿಯ ಶವಪರೀಕ್ಷೆ ವರದಿ ಬರಬೇಕಿದೆ. ಅವರು ಹೇಗೆ ಸತ್ತರು ಎಂಬುದು ಇನ್ನೂ ಬಹಿರಂಗಗೊಂಡಿಲ್ಲ, ಅವರಿಗೆ ಕೊರೊನಾ ಇತ್ತೇ ಎಂಬುದು ಇನ್ನೂ ತಿಳಿದು ಬಂದಿಲ್ಲ.

“ಮಹಿಳೆಯ ಪತಿ ಕೆಲಸಕ್ಕಾಗಿ ಉತ್ತರ ಪ್ರದೇಶಕ್ಕೆ ಹೋಗಿದ್ದಾರೆ ಎಂದು ವರದಿಯಾಗಿದೆ. ಆತ ಹಿಂತಿರುವುದನ್ನು ನಾವು ಕಾಯುತ್ತಿದ್ದೇವೆ” ಎಂದು ಪೊಲೀಸ್ ಇನ್ಸ್‌ಪೆಕ್ಟರ್ (ಅಪರಾಧ) ಪ್ರಕಾಶ್ ಜಾಧವ್ ಹೇಳಿದ್ದಾರೆ.

ಕೊರೊನಾ ಭೀತಿಯಲ್ಲಿರಬಹುದಾದ ನೆರೆಹೊರೆಯವರು ಕನಿಷ್ಠ ವಿಷಯ ಗೊತ್ತಾದ ಕೂಡಲೇ ಪೊಲಿಸರಿಗೆ ಫೋನ್ ಮಾಡುವ ಕಾಳಜಿಯನ್ನು ತೋರಿಲ್ಲ. ಎರಡು ದಿನ ಖಾಲಿ ಹೊಟ್ಟೆಯಲ್ಲಿ ಬದುಕಿದ ಮಗು ಈಗ ಸುರಕ್ಷಿತ ಕೈಗಳನ್ನು ತಲುಪಿದೆ.

ಇದನ್ನೂ ಓದಿ: ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ – ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...