Homeಕರ್ನಾಟಕಬೆಂಗಳೂರಿಗರ ತ್ಯಾಜ್ಯದ ದುರ್ವಾಸನೆ ನೆರೆಯ ಹಳ್ಳಿಗರು ಸಹಿಸಬೇಕು

ಬೆಂಗಳೂರಿಗರ ತ್ಯಾಜ್ಯದ ದುರ್ವಾಸನೆ ನೆರೆಯ ಹಳ್ಳಿಗರು ಸಹಿಸಬೇಕು

2017 ರ ವರೆಗೂ ಅತ್ಯಂತ ಸುಂದರವಾಗಿದ್ದ ಗ್ರಾಮವೂ ಬಿಬಿಎಂಪಿ ತ್ಯಾಜ್ಯ ತುಂಬಿಸುವ ತಾಣವಾಗಿ ಆಯ್ಕೆ ಮಾಡಿದ ನಂತರ ದುರ್ವಾಸನೆಯ ಊರಾಗಿದೆ ಎನ್ನುತ್ತಾರೆ ಗ್ರಾಮಸ್ಥರು.

- Advertisement -
- Advertisement -

ಒಂದು ಕೋಟಿಗೂ ಹೆಚ್ಚು ಜನಸಂಖ್ಯೆಯಿರುವ ಬೆಂಗಳೂರಿಗರ 6,000 ಟನ್‌ಗಿಂತಲೂ ಹೆಚ್ಚಿರುವ ದೈನದಿಂನ ತ್ಯಾಜ್ಯದ ದುರ್ವಾಸನೆಯನ್ನು ನೆರೆಯ ಹಳ್ಳಿಗಳಾದ ಮಂಡೂರು, ಮಾವಲ್ಲಿಪುರ, ಬೆಲ್ಲಹಳ್ಳಿ ಮುಂತಾದ ಹಳ್ಳಿಯ ನಿವಾಸಿಗಳು ಅನಿವಾರ್ಯವಾಗಿ ಸಹಿಸುವಂತಾಗಿದೆ.

2017 ರವರೆಗೂ ಅತ್ಯಂತ ಸುಂದರವಾಗಿದ್ದ ಮಂಡೂರು ಗ್ರಾಮವೂ ಬಿಬಿಎಂಪಿ ಇದನ್ನು ತ್ಯಾಜ್ಯ ತುಂಬಿಸುವ ತಾಣವಾಗಿ ಆಯ್ಕೆ ಮಾಡಿದ ನಂತರ ದುರ್ವಾಸನೆಯ ಊರಾಗಿದೆ ಎಂದು ಹೇಳುವ ಸಿಲ್ಲಾವಲಿ, ಪ್ರತಿದಿನ ನೂರಾರು ಟ್ರಕ್‌ಗಳು ​​ಈ ಪ್ರದೇಶದಲ್ಲಿ ತ್ಯಾಜ್ಯವನ್ನು ಎಸೆಯುತ್ತಿರುವುದರಿಂದ ರೋಗಗಳು ಬರುತ್ತಿದೆ ಎಂದು ಹೇಳುತ್ತಾರೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಯಾರೂ ಇಲ್ಲದ ಬಂಜರು ಭೂಮಿಯಲ್ಲಿ ತ್ಯಾಜ್ಯವನ್ನು ಹಾಕಬೇಕು ಎಂದು ಹೇಳುತ್ತದೆ. ತ್ಯಾಜ್ಯ ಹಾಕಲು ದೊಡ್ಡ ಜಾಗ ಅಗತ್ಯವಿದೆಯಲ್ಲದೆ, ರೋಗಕಾರಕಗಳು, ನೊಣಗಳು ಅಲ್ಲಿ ಉತ್ಪತ್ತಿಯಾಗುವುದಲ್ಲದೆ, ಅದು ಹಸಿರುಮನೆ ಅನಿಲಗಳ ಉತ್ಪಾದನೆಗೆ ಸಹಕಾರಿಯಾಗುತ್ತದೆ ಹಾಗೂ ಬೆಂಕಿಯ ಅಪಾಯ ಕೂಡಾ ಉಂಟು ಮಾಡುತ್ತದೆ.

ತ್ಯಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ಮಾರ್ಗಸೂಚಿಗಳ ಪ್ರಕಾರ, ತ್ಯಾಜ್ಯ ವಿಲೇವಾರಿ ತಾಣವು ಅಧಿಸೂಚಿತ ಜನವಸತಿ ಪ್ರದೇಶದಿಂದ ಕನಿಷ್ಠ 500 ಮೀಟರ್ ದೂರದಲ್ಲಿರಬೇಕು ಮತ್ತು ತಮ್ಮ ಗಡಿಯ ಸುತ್ತ 500 ಮೀಟರ್ ವಲಯವನ್ನು ‘ಅಭಿವೃದ್ಧಿಯಿಲ್ಲದ ಬಫರ್ ವಲಯ’ ಎಂದು ಘೋಷಿಸಬೇಕು ಎಂದು ಹೇಳುತ್ತದೆ.

2014 ರಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ತೀರ್ಮಾನಿಸಿದ್ದ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ತಾಣಗಳು ಬೆಂಗಳೂರಿನ ಬಫರ್ ವಲಯಗಳ ಒಳಗೆ ಇವೆ ಮತ್ತು ಆ ಪ್ರದೇಶಗಳ ಜನರು ಎದುರಿಸುತ್ತಿರುವ ದುರ್ವಸನೆಯ ರಗಳೆಯ ಬಗ್ಗೆ ದೂರುಗಳಿವೆ.

ಅಸ್ತಿತ್ವದಲ್ಲಿರುವ ಮತ್ತು ಭವಿಷ್ಯದ ತ್ಯಾಜ್ಯ ವಿಲೇವಾರಿ ತಾಣಗಳು ಬಫರ್ ವಲಯದೊಳಗೆ ಇರಬಾರದು ಎಂದು ಕೆಎಸ್‌ಪಿಸಿಬಿ ಬಿಬಿಎಂಪಿಗೆ ನಿರ್ದೇಶನ ನೀಡಿತ್ತು ಆದರೆ ಬಿಬಿಎಂಪಿ ಇದಕ್ಕಾಗಿ ಯಾವುದೇ ಕ್ರಮಗಳನ್ನು ಇದುವರೆಗೂ ತೆಗೆದುಕೊಂಡಿಲ್ಲ.

ವಿಶ್ವಬ್ಯಾಂಕ್ ಅಧ್ಯಯನವೊಂದರ ಪ್ರಕಾರ, 90% ಕ್ಕಿಂತಲೂ ಹೆಚ್ಚು ತ್ಯಾಜ್ಯವನ್ನು ಅನಿಯಂತ್ರಿತ ಡಂಪ್‌ಗಳಲ್ಲಿ ವಿಲೇವಾರಿ ಮಾಡಲಾಗುತ್ತದೆ ಅಥವಾ ಭಾರತದಂತಹ ದೇಶಗಳಲ್ಲಿ ಬಹಿರಂಗವಾಗಿ ಸುಡಲಾಗುತ್ತದೆ.

ಬೆಂಗಳೂರು ವಿಶ್ವವಿದ್ಯಾಲಯದ ಪರಿಸರ ವಿಜ್ಞಾನ ವಿಭಾಗದ ಅಧ್ಯಕ್ಷೆ ಮತ್ತು ಪ್ರಾಧ್ಯಾಪಕಿಯಾದ ಪ್ರೊ.ನಂದಿನಿ ಎನ್ ಅವರು ಹೇಳುವ ಪ್ರಕಾರ, ಈ ತ್ಯಾಜ್ಯದ ತಾಣಗಳು ಇ. ಕೋಲಿ ಹಾಗೂ ಫೆಕಲ್ ಸ್ಟ್ರೆಪ್ಟೋಕೊಕಿ (ಬಯೋ-ಏರೋಸಾಲ್) ನಂತಹ ಸೂಕ್ಷ್ಮಜೀವಿಗಳನ್ನು ಹೆಚ್ಚಿಸುತ್ತವೆ. ಇದು ಗಾಳಿಯಿಂದ ಹತ್ತಿರದಲ್ಲಿ ವಾಸಿಸುತ್ತಿರುವ ಪ್ರದೇಶಕ್ಕೆ ಹರಡುತ್ತದೆ. ಈ ಬಯೋಎರೋಸೋಲ್‌ಗಳು ಒಡ್ಡಿಕೊಳ್ಳುವುದರಿಂದ ವೈರಸ್‌ಗಳು, ಬ್ಯಾಕ್ಟೀರಿಯಾ, ಶಿಲೀಂಧ್ರಗಳು, ಆಸ್ತಮಾ, ಅಲರ್ಜಿಕ್ ರಿನಿಟಿಸ್ ಮತ್ತು ಕ್ಯಾನ್ಸರ್ ನಂತಹ ಸಾಂಕ್ರಾಮಿಕ ಕಾಯಿಲೆಗಳಿಗೆ ಕಾರಣವಾಗುತ್ತದೆ ಎಂದು ಅವರು ಹೇಳುತ್ತಾರೆ.

ಮೆಡಿಕಲ್ ತ್ಯಾಜ್ಯದ ಕಳಪೆ ನಿರ್ವಹಣೆಯು ಆರೋಗ್ಯ ಕಾರ್ಯಕರ್ತರು, ತ್ಯಾಜ್ಯ ನಿರ್ವಹಿಸುವವರು, ರೋಗಿಗಳು ಮತ್ತು ಸಮುದಾಯವನ್ನು ಸೋಂಕಿಗೆ ಒಡ್ಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೇಳುತ್ತದೆ.

ಲೇಕ್‌ಸೈಡ್ ಸೆಂಟರ್ ಫಾರ್ ಹೆಲ್ತ್ ಪ್ರಮೋಷನ್‌ನ ಮಕ್ಕಳ ಶ್ವಾಸಕೋಶಶಾಸ್ತ್ರಜ್ಞ ಡಾ.ಎಚ್. ​​ಪರಮೇಶ್ ಅವರ ಪ್ರಕಾರ, ಮಾಲಿನ್ಯಕಾರಕಗಳಾದ ಮೀಥೇನ್, ಸಾರಜನಕ, ಇಂಗಾಲ ಮತ್ತು ಡಯಾಕ್ಸಿನ್‌ಗಳು ಆಸ್ತಮಾ, ಚರ್ಮರೋಗ ಮತ್ತು ಬ್ಲಡ್ಡ‍ರ್‌ ಕ್ಯಾನ್ಸರ್ ನಂತಹ ಉಸಿರಾಟದ ತೊಂದರೆ ಹಾಗೂ ಸಂತಾನೋತ್ಪತ್ತಿ ಮತ್ತು ಬೆಳವಣಿಗೆಯ ಸಮಸ್ಯೆಗಳನ್ನು ಉಂಟುಮಾಡುತ್ತದೆ  ಎಂದು ಹೇಳುತ್ತಾರೆ.

ನಗರ ತ್ಯಾಜ್ಯದ ಸುಧಾರಿತ ಸಂಗ್ರಹಣೆ, ನಿರ್ವಹಣೆ ಮತ್ತು ವಿಲೇವಾರಿಯು ಹವಾಮಾನ ಮತ್ತು ಆರೋಗ್ಯ ಎರಡಕ್ಕೂ ಉಪಯುಕ್ತವಾದ ಪ್ರಮುಖ ತಂತ್ರವಾಗಿದೆ. ಮೀಥೇನ್ ಹೊರಸೂಸುವಿಕೆಯನ್ನು ಒಳಚರಂಡಿ, ಜಾನುವಾರು ಗೊಬ್ಬರ ಮತ್ತು ಘನತ್ಯಾಜ್ಯದಿಂದ ಪಡೆದು ಜೈವಿಕ ಅನಿಲವಾಗಿ ಬಳಸಬಹುದು ಎಂದು ಅಧ್ಯಯನ ಹೇಳಿದೆ.

ಭಾರತದ ಪರಿಸರ ಭದ್ರತಾ ಪ್ರತಿಷ್ಠಾನದ ಆಡಳಿತ ಮಂಡಳಿ ಸದಸ್ಯ ಡಾ.ಯೆಲ್ಲಪ ರೆಡ್ಡಿ, ತ್ಯಾಜ್ಯ ಉತ್ಪಾದನೆಯೇ ಪ್ರಮುಖ ಸಮಸ್ಯೆ ಎಂದು ಪ್ರಸ್ತಾಪಿಸಿದ ಅವರು ತ್ಯಾಜ್ಯವನ್ನು ಹೆಚ್ಚಿಸುವ ಪ್ಲಾಸ್ಟಿಕನು ಕಡಿಮೆ ಬಳಸುವಂತೆ ಹಾಗೂ ಜೈವಿಕ ವಿಘಟನೀಯ ವಸ್ತುಗಳನ್ನು ಬಳಸುವಂತೆ ಅವರು ಸಲಹೆ ನೀಡಿದರು. ವಿತರಣಾ ಕಂಪನಿಗಳು ಸಹ ತಮ್ಮ ಪ್ಯಾಕೇಜಿಂಗ್ ಅನ್ನು ಜೈವಿಕ ವಿಘಟನೀಯವಾಗಿಸಬೇಕು ಎಂದರು.

ಕೃಪೆ: ಡೆಕ್ಕನ್ ಹೆರಾಲ್ಡ್


ಓದಿ: ಸಿಲಿಕಾನ್ ಸಿಟಿಯಲ್ಲಿ ಡಿಜಿಟಲ್ ಡಿವೈಡ್; ಬೆಂಗಳೂರು ಭೇಲ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...